Muda case CM Siddaramaiah vs BY Vijayendra

Muda case: ಭಂಡತನ ಬಿಟ್ಟು ರಾಜೀನಾಮೆ ಕೊಡಿ: ಸಿ‌ಎಂ‌ ಸಿದ್ದುಗೆ ವಿಜಯೇಂದ್ರ ಆಗ್ರಹ

Muda case: ಭಂಡತನ ಬಿಟ್ಟು ರಾಜೀನಾಮೆ ಕೊಡಿ: ಸಿ‌ಎಂ‌ ಸಿದ್ದುಗೆ ವಿಜಯೇಂದ್ರ ಆಗ್ರಹ

ಬೆಂಗಳೂರು: ಮೈಸೂರು ಮುಡಾ (Muda case) ನಿವೇಶನ ಹಗರಣದ ದೂರಿನ ಸಂಬಂಧ ಗೌರವಾನ್ವಿತ ರಾಜ್ಯಪಾಲರು ತಮ್ಮ ಸಂವಿಧಾನದತ್ತ ಅಧಿಕಾರ ಚಲಾಯಿಸಿ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡಿದ್ದಾರೆ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ಭಂಡತನ ಬಿಟ್ಟು ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (BY Vijayendra) ಅವರು ಆಗ್ರಹಿಸಿದ್ದಾರೆ.

Join Our Telegram: https://t.me/dcgkannada

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ವಿಜಯೇಂದ್ರ ಅವರು ಪೋಸ್ಟ್ ಮಾಡಿದ್ದು, “ಗೌರವಾನ್ವಿತ ರಾಜ್ಯಪಾಲರು ತಮ್ಮ ಸಂವಿಧಾನ ದತ್ತ ಅಧಿಕಾರ ಚಲಾಯಿಸಿ ಮುಖ್ಯಮಂತ್ರಿಗಳ ಮುಡಾ ಹಗರಣದ ದೂರಿಗೆ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡಿದ್ದಾರೆ” ಎಂದು ಗಮನ ಸೆಳೆದಿದ್ದಾರೆ.

ಸಾಕಷ್ಟು ದಾಖಲೆ, ಪುರಾವೆಗಳನ್ನು ಇಟ್ಟುಕೊಂಡು ಕಾಂಗ್ರೆಸ್ ಸರ್ಕಾರದ ಭ್ರಷ್ಟ ಹಗರಣಗಳ ವಿರುದ್ಧ ಹಾಗೂ ಮುಖ್ಯಮಂತ್ರಿಗಳ ಸ್ವಜನ ಪಕ್ಷಪಾತ ಹಾಗೂ ಭ್ರಷ್ಟಾಚಾರ ದಲ್ಲಿ ಭಾಗಿಯಾಗಿರುವುದರ ವಿರುದ್ಧ ಎಷ್ಟೇ ಹೋರಾಟ ನಡೆಸಿದರೂ ತಮ್ಮನ್ನು ಜಗ್ಗಿಸುವವರಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭಂಡತನ ಪ್ರದರ್ಶಿಸುತ್ತಿದ್ದರು.

ಇದನ್ನೂ ಓದಿ: Cubbon park: ವೃದ್ಧನಿಂದ ಹೀನ ಕೃತ್ಯ.. ಕಬ್ಬನ್ ಪಾರ್ಕ್‌ ನಲ್ಲಿ ಮಹಿಳೆಯರ ಎದುರೇ ಹಸ್ತಮೈಥುನ.. (ವೈರಲ್ ವಿಡಿಯೋ ನೋಡಿ)

ಪ್ರಕರಣದ ತನಿಖೆ ಪಾರದರ್ಶಕವಾಗಿ ನಡೆಯಲು ಅನುವಾಗುವಂತೆ ಈಗಲಾದರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ಮುಖ್ಯಮಂತ್ರಿ ಸ್ಥಾನದ ಘನತೆ ಉಳಿಸಲಿ ಎಂದು ಅವರು ಒತ್ತಾಯಿಸಿದ್ದಾರೆ.

Muda case: ಕರ್ನಾಟಕಕ್ಕೆ ಬಂದ AICC ಅಧ್ಯಕ್ಷ ಖರ್ಗೆ.. ಸಿಎಂ ಸಿದ್ದು ಬೆನ್ನಿಗೆ ನಿಲ್ಲುತ್ತಾರಾ?

ಬೆಂಗಳೂರು: ಬೃಹತ್ ರಾಜಕೀಯ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡುವ ಕಡತಕ್ಕೆ (Muda case) ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಹಿ ಹಾಕಿದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಸಿಎಂ ಸಿದ್ದರಾಮಯ್ಯ‌ ಅವರ ಬೆನ್ನಿಗೆ ನಿಂತಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (Muda case) ಅಡಿಯಲ್ಲಿ ಅವರ ಪತ್ನಿಗೆ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ನಡುವೆ ಹೈಕಮಾಂಡ್ ಸಿಎಂ ಸಿದ್ದರಾಮಯ್ಯಗೆ ಅಭಯ ನೀಡಿದ್ದು, ಎಐಸಿಸಿ ನಾಯಕರಾದ ರಣದೀಪ್ ಸುರ್ಜೆವಾಲಾ ಹಾಗೂ ಕೆ.ಸಿ. ವೇಣುಗೋಪಾಲ್ ಕರೆ ಮಾಡಿ ಸಿಎಂ ಸಿದ್ದರಾಮಯ್ಯಗೆ ಧೈರ್ಯ ತುಂಬಿದ್ದಾರೆ.

ನಿಮ್ಮ ಜೊತೆಗೆ ನಾವು ಇದ್ದೇವೆ ನೀವು ಧೈರ್ಯವಾಗಿರಿ, ಏನೇ ಆದರೂ ಕಾನೂನು ಹೋರಾಟ ಮಾಡೋಣ ಎಂದಿದ್ದಾರೆ. ರಾಜ್ಯಾದ್ಯಂತ ಹೋರಾಟಕ್ಕೆ ಕರೆ ನೀಡಲೂ ಸೂಚಿಸಿದ್ದಾರೆ ಎನ್ನಲಾಗಿದೆ.

ಸ್ವತಃ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿಗೆ ಆಗಮಿಸಿದ್ದು, ಪ್ರಸ್ತುತ ರಾಜ್ಯ ರಾಜಕೀಯ ಬೆಳವಣಿಗೆ ಹಾಗೂ ಮುಂದಿನ ಹೋರಾಟಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ವರದಿಯಾಗಿದೆ.

ದೂರದಾರ ಟಿ.ಜೆ. ಅಬ್ರಾಹಂಗೆ ರಾಜ್ಯಪಾಲರ ಕಚೇರಿಗೆ ಆಗಮಿಸಿ ದಾಖಲೆ ಸಲ್ಲಿಸುವಂತೆ ಸೂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಟಿ.ಜೆ. ಅಬ್ರಾಹಂ ಮತ್ತಷ್ಟು ದಾಖಲೆಗಳನ್ನು ತೆಗೆದುಕೊಂಡು ರಾಜ್ಯಪಾಲರ ಕಚೇರಿ ತಲುಪಲಿದ್ದಾರೆ ಎಂದು ತಿಳಿದು ಬಂದಿದೆ.

Latest News

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಧಾರವಾಡ, ಜುಲೈ 1: ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆ,

ಆರ್.ಎಂ.ಎಸ್.ಎ ಶಾಲೆಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಆರ್.ಎಂ.ಎಸ್.ಎ ಶಾಲೆಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ತಾಲ್ಲೂಕಿನ ಬಿದರಕುಂದಿ ಗ್ರಾಮದ ಸರ್ಕಾರಿ ಆದರ್ಶ ವಿದ್ಯಾಲಯ (ಆರ್.ಎಂ.ಎಸ್.ಎ) ಶಾಲೆಯ ಸನ್

ಜೆಡಿಎಸ್ ಪಕ್ಷದಿಂದ ಬೃಹತ್ ಪ್ರತಿಭಟನೆ : ಕಾಂಗ್ರೆಸ್ ಸರ್ಕಾರ ವಜಾಗೊಳಿಸಲು ರಾಜ್ಯಪಾಲರಿಗೆ ಮನವಿ

ಜೆಡಿಎಸ್ ಪಕ್ಷದಿಂದ ಬೃಹತ್ ಪ್ರತಿಭಟನೆ : ಕಾಂಗ್ರೆಸ್ ಸರ್ಕಾರ ವಜಾಗೊಳಿಸಲು ರಾಜ್ಯಪಾಲರಿಗೆ ಮನವಿ

ಮುದ್ದೇಬಿಹಾಳ : ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದು ಕೂಡಲೇ ಸರ್ಕಾರವನ್ನು ರಾಜ್ಯಪಾಲರು ವಜಾಗೊಳಿಸಬೇಕೆಂದು ಆಗ್ರಹಿಸಿ

ರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವರದಿಗಾರರಾದ ಅಮರೇಶ ನಾಗೂರ ಆಯ್ಕೆ

ರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವರದಿಗಾರರಾದ ಅಮರೇಶ ನಾಗೂರ ಆಯ್ಕೆ

ಹುನಗುಂದ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಅಮರೇಶ ನಾಗೂರ ಹಾಗೂ ಪ್ರಧಾನ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಶ್ವಾಸಯೋಗ ಸಂಸ್ಥೆ ಹಾಗೂ ಸಂತೋಷ್ ಲಾಡ್ ಫೌಂಡೇಶನ್ ಸಹಯೋಗದಲ್ಲಿ ಇದೇ 29 ನೇ ಭಾನುವಾರ ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ಅರಮನೆ ಮೈದಾನದ ದಿ ಗ್ರಾಂಡ್‌ ಕ್ಯಾಸಲ್‌, ಗೇಟ್‌ ಸಂಖ್ಯೆ 6 ರಲ್ಲಿ ಸಂಜೆ 5 ರಿಂದ ಈ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಯೋಗದಲ್ಲಿ ಉತ್ಕೃಷ್ಟ ಸಾಧನೆ ಮಾಡಿದ ವಿಶ್ವದ ಐವರು ಶ್ರೇಷ್ಠ ಯೋಗ ಸಾಧಕರಿಗೆ ಪ್ರಶಸ್ತಿ

ನಾರಾಯಣಪುರ ಅಣೆಕಟ್ಟೆ ನಿಂದ 1,10,000 ಕ್ಯೂಸೆಕ್ ನೀರು ಬಿಡುವ ಸಾಧ್ಯತೆ

ನಾರಾಯಣಪುರ ಅಣೆಕಟ್ಟೆ ನಿಂದ 1,10,000 ಕ್ಯೂಸೆಕ್ ನೀರು ಬಿಡುವ ಸಾಧ್ಯತೆ

ನಾರಾಯಣಪುರ : ಅಣೆಕಟ್ಟಿನ ಪ್ರಸ್ತುತ ನೀರಿನ ಸಂಗ್ರಹವು 80.27% ಇರುತ್ತದೆ. ಕೃಷ್ಣಾ ನದಿಗೆ ಹೊರಹರಿವು 84,445 ಕ್ಯೂಸೆಕ್ ಇರುವದರಿಂದ ಆಣೆಕಟ್ಟಿನ ಮೇಲ್ಭಾಗದ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಳೆಯಿಂದಾಗಿ ಆಲಮಟ್ಟಿ ಅಣೆಕಟ್ಟೆಯ ಹೊರಹರಿವು ಹೆಚ್ಚಾಗಲಿದೆ ಎಂದು ಪರಿಗಣಿಸಲಾಗಿದೆ. ನಾರಾಯಣಪುರ ಆಣೆಕಟ್ಟೆಗೆ ಸುಮಾರು 1,10,000 ಕ್ಯೂಸೆಕ್ ಒಳಹರಿವು ಬರುವ ಸಾಧ್ಯತೆಯಿದೆ. ಮದ್ಯಾಹ್ನ 3 ಗಂಟೆ ನಂತರ, ಪ್ರಸ್ತುತ ಇರುವ ಹೊರಹರಿವನ್ನು 84,445 ಕ್ಯೂಸೆಕ್ ರಿಂದ 1,10,000 ಕ್ಯೂಸೆಕ್ ಗೆ ಹಂತ ಹಂತವಾಗಿ ಹೆಚ್ಚಿಸಲಾಗುವುದು