Muda case Kumarswamy back side budda icon

Muda Case: ಯೂಟರ್ನ್ ಹೊಡೆದ ಕೇಂದ್ರ ಸಚಿವ HD ಕುಮಾರಸ್ವಾಮಿ?

Muda Case: ಯೂಟರ್ನ್ ಹೊಡೆದ ಕೇಂದ್ರ ಸಚಿವ HD ಕುಮಾರಸ್ವಾಮಿ?

ಬೆಂಗಳೂರು:‌ ಮುಡಾ ಹಗರಣಕ್ಕೆ (Muda Case) ಸಂಬಂಧಿಸಿದಂತೆ ರಾಜೀನಾಮೆ ಕೊಡಿ ಅಂತ ಸಿಎಂ ಸಿದ್ದರಾಮಯ್ಯ (Siddaramaiah)ಗೆ ಹೇಳಲ್ಲ ಕೊಡ್ತಾರೆ ಅಂತ ನಿರೀಕ್ಷೆಯನ್ನೂ ಮಾಡಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಸ್ಫೋಟಕ ಹೇಳಿಕೆ ನೀಡಿದ್ದಾರೆ.

Join Our Telegram: https://t.me/dcgkannada

ಹೆಚ್‌ಡಿಕೆ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿಲ್ಲ ಎಂಬ ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯಿಸಿರುವ ಅವರು, ನನ್ನ ಕೇಸಲ್ಲಿ ಯಾಕೆ ಪ್ರಾಸಿಕ್ಯೂಷನ್ ಬೇಕು? ಇವರು ಯಾಕೆ ಸುಪ್ರಿಂಕೋರ್ಟ್ ಮುಂದೆ ಹೋಗಿಲ್ಲ. ಕೋರ್ಟ್ ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ ತನ್ನಿ ಅಂತ ಹೇಳಿದೆಯಾ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: Heart attack: ಬೈಕ್‌ನಲ್ಲಿ ಹೋಗುತ್ತಿದ್ದಾಗ ಹೃದಯಾಘಾತ! ಯೋಧ ದುರ್ಮರಣ

ಇನ್ನು, “ನಾನು ರಾಜೀನಾಮೆ ಕೊಡಿ ಅಂತ ಹೇಳಿಲ್ಲ, ಕೊಡ್ತಾರೆ ಅಂತ ನಿರೀಕ್ಷಿಸಿಲ್ಲ. ನಮ್ಮ ಪಾದಯಾತ್ರೆಗೂ ಪ್ರಾಸಿಕ್ಯೂಷನ್‌ಗೂ ಸಂಬಂಧವಿಲ್ಲ. ಜನತೆಗೆ ಸಂದೇಶ ಕೊಡಲು ಪಾದಯಾತ್ರೆ ಮಾಡಿದ್ದೇವೆ” ಎಂದರು.

ಈ ಮೂಲಕ ಹೆಚ್‌ಡಿಕೆ ಯೂಟರ್ನ್ ಹೊಡೆದ್ರಾ (Muda case) ಎಂಬ ಪ್ರಶ್ನೆ ರಾಜ್ಯ ರಾಜಕಾರಣದಲ್ಲಿ ಮುನ್ನೆಗೆ ಬಂದಿದೆ.

ನನ್ನನ್ನು ಹೆದರಿಸಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ.. HDK ಗಂಭೀರ ಆರೋಪ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಮಂತ್ರಿಗಳು ನನ್ನ ಹೆದರಿಸುವ ಕೆಲಸ ಮಾಡುತ್ತಿದ್ದಾರೆ. ಅದಕ್ಕೆಲ್ಲ ಜಗ್ಗುವ ಜಾಯಮಾನ ನನ್ನದಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಭಾನುವಾರ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವರು, ಯಾವುದೋ ಹಳೆಯ ಪ್ರಕರಣವನ್ನು ಕೆದಕಿ, ಸುಪ್ರೀಂ ಕೋರ್ಟ್ ನಲ್ಲಿರುವ ಪ್ರಕರಣ ಇಟ್ಟುಕೊಂಡು ರಾಜ್ಯಪಾಲರನ್ನು ಅಪಮಾನಿಸುವ, ನನ್ನನ್ನು ಬ್ಲಾಕ್ ಮೇಲ್ ಮಾಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಇದಕ್ಕೆಲ್ಲಾ ಕೇರ್ ಮಾಡುವ ಪೈಕಿ ನಾನಲ್ಲ, ಈ ಸರ್ಕಾರಕ್ಕೂ ಅದು ಗೊತ್ತಿದೆ ಎಂದು ಕಿಡಿಕಾರಿದರು.

ರಾಜ್ಯಪಾಲರಿಗೆ ಸರ್ಕಾರದಿಂದ ಧಮ್ಕಿ:

ರಾಜ್ಯಪಾಲರು ಮೂಡಾ ಹಗರಣ ವಿಚಾರಣೆಗೆ ಅನುಮತಿ ನೀಡಿದಾಕ್ಷಣ ಇಡೀ ಸಚಿವರು, ಶಾಸಕರನ್ನು ಇಟ್ಟುಕೊಂಡು ರಾಜ್ಯಪಾಲರಿಗೆ ಧಮ್ಕಿ ಹಾಕುವ, ಜನರನ್ನು ಎತ್ತಿ ಕಟ್ಟುವ ಕೆಲಸವನ್ನು ಸಿದ್ದರಾಮಯ್ಯ ಅವರು ಮಾಡುತ್ತಿದ್ದಾರೆ. ನಾನು ಹೀಗೆಲ್ಲಾ ಮಾಡಿಲ್ಲ, ನನ್ನ ವಿರುದ್ಧ ಆರೋಪ ಕೇಳಿಬಂದಾಗ ಒಬ್ಬನೇ ಎದುರಿಸುತ್ತೇನೆ ಎಂದು ಹೇಳಿದ್ದೆ. ವಿಧಾನಸಭೆ ಕಲಾಪದಲ್ಲಿಯೂ ಹೇಳಿದ್ದೇನೆ. ಬೇಕಾದರೆ ಕಡತ ತೆಗೆದು ನೋಡಬಹುದು ಎಂದು ಹೇಳಿದರು ಕೇಂದ್ರ ಸಚಿವರು.

ನನ್ನ ವಿರುದ್ಧ 2006ರಲ್ಲಿ ಗಣಿ ಆರೋಪ ಮಾಡಿದಾಗ ನಾನೊಬ್ಬನೇ ಎದುರಿಸಿದೆ. ಶಾಸಕರು, ಸಚಿವರನ್ನು ಅಡ್ಡ ಇಟ್ಟುಕೊಂಡು ರಕ್ಷಣೆ ಪಡೆಯುವ ಕೆಲಸ ಮಾಡಲಿಲ್ಲ. ಹೇಡಿತನ ಪ್ರದರ್ಶಿಸಲಿಲ್ಲ, ಧೈರ್ಯವಾಗಿ ಒಬ್ಬನೇ ಎದುರಿಸಿದೆ ಎಂದರು

Latest News

ಬರಪೀಡಿತ ಪಟ್ಟಿಯಿಂದ ಮುದ್ದೇಬಿಹಾಳ ಮತಕ್ಷೇತ್ರ ಔಟ್: ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ವಿರುದ್ಧ ಶಾಸಕ ನಾಡಗೌಡರ ತೀವ್ರ ವಾಗ್ದಾಳಿ

ಬರಪೀಡಿತ ಪಟ್ಟಿಯಿಂದ ಮುದ್ದೇಬಿಹಾಳ ಮತಕ್ಷೇತ್ರ ಔಟ್: ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ವಿರುದ್ಧ ಶಾಸಕ ನಾಡಗೌಡರ ತೀವ್ರ ವಾಗ್ದಾಳಿ

ಮುದ್ದೇಬಿಹಾಳ : ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದೇ ರೈತರು ಸಂಕಷ್ಟಕ್ಕೆ ಸಿಲುಕಿದ್ದರೂ

ಎರಡು ಅಂಬ್ಯುಲೆನ್ಸ್ ಜನಸೇವೆಗೆ ಲೋಕಾರ್ಪಣೆ:                     70 ಸಾವಿರ ಹುದ್ದೆಗಳ ಭರ್ತಿಗೆ ಕಾನೂನು ತೊಡಕು-ಶಾಸಕ ನಾಡಗೌಡ

ಎರಡು ಅಂಬ್ಯುಲೆನ್ಸ್ ಜನಸೇವೆಗೆ ಲೋಕಾರ್ಪಣೆ: 70 ಸಾವಿರ ಹುದ್ದೆಗಳ ಭರ್ತಿಗೆ ಕಾನೂನು ತೊಡಕು-ಶಾಸಕ ನಾಡಗೌಡ

ಮುದ್ದೇಬಿಹಾಳ : ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಸಿಎಸ್‌ಆರ್ ಅನುದಾನದಲ್ಲಿ ಮುದ್ದೇಬಿಹಾಳ ಹಾಗೂ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಮುದ್ದೇಬಿಹಾಳ : ಹೆಚ್ಚುತ್ತಿರುವ ಜನಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆ ಮತ್ತಷ್ಟು ದಕ್ಷತೆಯಿಂದ

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಮುದ್ದೇಬಿಹಾಳ : ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಕುಟುಂಬದವರು ಪರಿಶ್ರಮದಿಂದ ಗಳಿಸಿದ ಆಸ್ತಿಯನ್ನು ದಾನ ಮಾಡುವ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ ವಕ್ಭ್ ನಿಯಮಗಳು 2017ರ ನಿಯಮ 25ರ ಅನ್ವಯ ವಿಜಯಪುರ ಜಿಲ್ಲಾ ವಕ್ಭ್ ಅಧಿಕಾರಿಗಳು ಅಂಜುಮನ್ ಕಮೀಟಿಯ ನೂತನ ಆಡಳಿತ ಮಂಡಳಿಯ ಅಧ್ಯಕ್ಷರು,ಉಪಾಧ್ಯಕ್ಷರು,ಕಾರ್ಯದರ್ಶಿಗಳು ಹಾಗೂ ಖಜಾಂಚಿಯ ಆಯ್ಕೆಗೆ ಹೊರಡಿಸಿರುವ ನೋಟಿಸ್ ಇದೀಗ ವಿವಾದಕ್ಕೆ ಕಾರಣವಾಗಿದೆ. ಆಯ್ಕೆಯಾದ ಸದಸ್ಯರಿಗೆ ಅದ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ನಡೆಸುವ ಸಭೆಯನ್ನು ನಡೆಸಲು ನೋಟಿಸ್‌ನ್ನು ನೋಂದಾಯಿತ ಅಂಚೆ ಮೂಲಕ ಒಂದು ವಾರದ ಕಾಲಾವಕಾಶದಲ್ಲಿ ಕಳಿಸಬೇಕು

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ;                                      ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ; ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ವಿಜಯಪುರ : ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ಸೇರಿದಂತೆ ಗುತ್ತಿಗೆದಾರರ ಬೇಡಿಕೆಗಳನ್ನು ಆದ್ಯತೆ ಮೇರೆಗೆ ಈಡೇರಿಸುವುದಾಗಿ ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಭರವಸೆ ನೀಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ತಿಳಿಸಿದ್ದಾರೆ. ವಿಜಯಪುರ ನಗರದ ಜಿಲ್ಲಾ ಗುತ್ತಿಗೆದಾರರ ಸಂಘದ ನೂತನ ಕಟ್ಟಡ ಭೂಮಿ ಪೂಜೆ ಸಮಾರಂಭಕ್ಕೆ ಆಗಮಿಸಿದ ಸಂದರ್ಭದಲ್ಲಿ ಅವರನ್ನು ಭೇಟಿಯಾದ ವೇಳೆ ಮುದ್ದೇಬಿಹಾಳ ಮತಕ್ಷೇತ್ರದ ಕೊಣ್ಣೂರ ಗ್ರಾಮದ ಸಿಸಿ ರಸ್ತೆ ಹಾಗೂ ಚರಂಡಿ ಅಭಿವೃದ್ಧಿಗಾಗಿ ಸುಮಾರು ೨ಕೋಟಿ