Muda case Kumarswamy back side budda icon

Muda Case: ಯೂಟರ್ನ್ ಹೊಡೆದ ಕೇಂದ್ರ ಸಚಿವ HD ಕುಮಾರಸ್ವಾಮಿ?

Muda Case: ಯೂಟರ್ನ್ ಹೊಡೆದ ಕೇಂದ್ರ ಸಚಿವ HD ಕುಮಾರಸ್ವಾಮಿ?

ಬೆಂಗಳೂರು:‌ ಮುಡಾ ಹಗರಣಕ್ಕೆ (Muda Case) ಸಂಬಂಧಿಸಿದಂತೆ ರಾಜೀನಾಮೆ ಕೊಡಿ ಅಂತ ಸಿಎಂ ಸಿದ್ದರಾಮಯ್ಯ (Siddaramaiah)ಗೆ ಹೇಳಲ್ಲ ಕೊಡ್ತಾರೆ ಅಂತ ನಿರೀಕ್ಷೆಯನ್ನೂ ಮಾಡಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಸ್ಫೋಟಕ ಹೇಳಿಕೆ ನೀಡಿದ್ದಾರೆ.

Join Our Telegram: https://t.me/dcgkannada

ಹೆಚ್‌ಡಿಕೆ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿಲ್ಲ ಎಂಬ ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯಿಸಿರುವ ಅವರು, ನನ್ನ ಕೇಸಲ್ಲಿ ಯಾಕೆ ಪ್ರಾಸಿಕ್ಯೂಷನ್ ಬೇಕು? ಇವರು ಯಾಕೆ ಸುಪ್ರಿಂಕೋರ್ಟ್ ಮುಂದೆ ಹೋಗಿಲ್ಲ. ಕೋರ್ಟ್ ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ ತನ್ನಿ ಅಂತ ಹೇಳಿದೆಯಾ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: Heart attack: ಬೈಕ್‌ನಲ್ಲಿ ಹೋಗುತ್ತಿದ್ದಾಗ ಹೃದಯಾಘಾತ! ಯೋಧ ದುರ್ಮರಣ

ಇನ್ನು, “ನಾನು ರಾಜೀನಾಮೆ ಕೊಡಿ ಅಂತ ಹೇಳಿಲ್ಲ, ಕೊಡ್ತಾರೆ ಅಂತ ನಿರೀಕ್ಷಿಸಿಲ್ಲ. ನಮ್ಮ ಪಾದಯಾತ್ರೆಗೂ ಪ್ರಾಸಿಕ್ಯೂಷನ್‌ಗೂ ಸಂಬಂಧವಿಲ್ಲ. ಜನತೆಗೆ ಸಂದೇಶ ಕೊಡಲು ಪಾದಯಾತ್ರೆ ಮಾಡಿದ್ದೇವೆ” ಎಂದರು.

ಈ ಮೂಲಕ ಹೆಚ್‌ಡಿಕೆ ಯೂಟರ್ನ್ ಹೊಡೆದ್ರಾ (Muda case) ಎಂಬ ಪ್ರಶ್ನೆ ರಾಜ್ಯ ರಾಜಕಾರಣದಲ್ಲಿ ಮುನ್ನೆಗೆ ಬಂದಿದೆ.

ನನ್ನನ್ನು ಹೆದರಿಸಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ.. HDK ಗಂಭೀರ ಆರೋಪ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಮಂತ್ರಿಗಳು ನನ್ನ ಹೆದರಿಸುವ ಕೆಲಸ ಮಾಡುತ್ತಿದ್ದಾರೆ. ಅದಕ್ಕೆಲ್ಲ ಜಗ್ಗುವ ಜಾಯಮಾನ ನನ್ನದಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಭಾನುವಾರ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವರು, ಯಾವುದೋ ಹಳೆಯ ಪ್ರಕರಣವನ್ನು ಕೆದಕಿ, ಸುಪ್ರೀಂ ಕೋರ್ಟ್ ನಲ್ಲಿರುವ ಪ್ರಕರಣ ಇಟ್ಟುಕೊಂಡು ರಾಜ್ಯಪಾಲರನ್ನು ಅಪಮಾನಿಸುವ, ನನ್ನನ್ನು ಬ್ಲಾಕ್ ಮೇಲ್ ಮಾಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಇದಕ್ಕೆಲ್ಲಾ ಕೇರ್ ಮಾಡುವ ಪೈಕಿ ನಾನಲ್ಲ, ಈ ಸರ್ಕಾರಕ್ಕೂ ಅದು ಗೊತ್ತಿದೆ ಎಂದು ಕಿಡಿಕಾರಿದರು.

ರಾಜ್ಯಪಾಲರಿಗೆ ಸರ್ಕಾರದಿಂದ ಧಮ್ಕಿ:

ರಾಜ್ಯಪಾಲರು ಮೂಡಾ ಹಗರಣ ವಿಚಾರಣೆಗೆ ಅನುಮತಿ ನೀಡಿದಾಕ್ಷಣ ಇಡೀ ಸಚಿವರು, ಶಾಸಕರನ್ನು ಇಟ್ಟುಕೊಂಡು ರಾಜ್ಯಪಾಲರಿಗೆ ಧಮ್ಕಿ ಹಾಕುವ, ಜನರನ್ನು ಎತ್ತಿ ಕಟ್ಟುವ ಕೆಲಸವನ್ನು ಸಿದ್ದರಾಮಯ್ಯ ಅವರು ಮಾಡುತ್ತಿದ್ದಾರೆ. ನಾನು ಹೀಗೆಲ್ಲಾ ಮಾಡಿಲ್ಲ, ನನ್ನ ವಿರುದ್ಧ ಆರೋಪ ಕೇಳಿಬಂದಾಗ ಒಬ್ಬನೇ ಎದುರಿಸುತ್ತೇನೆ ಎಂದು ಹೇಳಿದ್ದೆ. ವಿಧಾನಸಭೆ ಕಲಾಪದಲ್ಲಿಯೂ ಹೇಳಿದ್ದೇನೆ. ಬೇಕಾದರೆ ಕಡತ ತೆಗೆದು ನೋಡಬಹುದು ಎಂದು ಹೇಳಿದರು ಕೇಂದ್ರ ಸಚಿವರು.

ನನ್ನ ವಿರುದ್ಧ 2006ರಲ್ಲಿ ಗಣಿ ಆರೋಪ ಮಾಡಿದಾಗ ನಾನೊಬ್ಬನೇ ಎದುರಿಸಿದೆ. ಶಾಸಕರು, ಸಚಿವರನ್ನು ಅಡ್ಡ ಇಟ್ಟುಕೊಂಡು ರಕ್ಷಣೆ ಪಡೆಯುವ ಕೆಲಸ ಮಾಡಲಿಲ್ಲ. ಹೇಡಿತನ ಪ್ರದರ್ಶಿಸಲಿಲ್ಲ, ಧೈರ್ಯವಾಗಿ ಒಬ್ಬನೇ ಎದುರಿಸಿದೆ ಎಂದರು

Latest News

ಮುದ್ದೇಬಿಹಾಳ : ಮೇ.4 ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ಮೇ.4 ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ತಾಲೂಕಿನ ದೇವೂರ ಜಾಕ್‌ವೆಲ್‌ನಿಂದ ಮುದ್ದೇಬಿಹಾಳ ಪಟ್ಟಣಕ್ಕೆ ನೀರು ಸರಬರಾಜು ಮಾಡುವ ಮುಖ್ಯ

ಈ ಭಾಗದ ಶಾಸಕರು ಏನು ಮಾಡುತ್ತಿದ್ದಾರೆ ? – ಚೂನಪ್ಪ ಪೂಜಾರಿ ಪ್ರಶ್ನೆ

ಈ ಭಾಗದ ಶಾಸಕರು ಏನು ಮಾಡುತ್ತಿದ್ದಾರೆ ? – ಚೂನಪ್ಪ ಪೂಜಾರಿ ಪ್ರಶ್ನೆ

ಮುದ್ದೇಬಿಹಾಳ : ಶೇ.90ರಷ್ಟು ಕಾಮಗಾರಿ ಪೂರ್ಣಗೊಂಡು ಸ್ಥಗಿತಗೊಂಡಿರುವ ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸುವುದಕ್ಕಾಗಿ

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ನನಗೆ ಬಿ.ಎಸ್.ಯಡಿಯೂರಪ್ಪನವರು ರಾಜಕೀಯ ಗುರುಗಳು.ರಾಜಕೀಯ ಭವಿಷ್ಯ ಕಲ್ಪಿಸಿದ ಮಾರ್ಗದರ್ಶಕರಾಗಿದ್ದಾರೆ.ಮೇ.9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ:                ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ: ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಮುದ್ದೇಬಿಹಾಳ : ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಒಟ್ಟು ಮೂರು ಪೆನಲ್‌ಗಳು ಸ್ಪರ್ಧಿಸಿದ್ದವು.ಅದರಲ್ಲಿ

ಪರಿಸರಪ್ರೇಮಿ ಎಂ.ಎಸ್.ಗಡೇದಗೆ ಕಾಯಕಯೋಗಿ ಪ್ರಶಸ್ತಿ

ಪರಿಸರಪ್ರೇಮಿ ಎಂ.ಎಸ್.ಗಡೇದಗೆ ಕಾಯಕಯೋಗಿ ಪ್ರಶಸ್ತಿ

ಮುದ್ದೇಬಿಹಾಳ : ಹಸಿರು ತೋರಣ ಗೆಳೆಯರ ಬಳಗದ ಸಂಚಾಲಕ ಮಹಾಬಲೇಶ್ವರ ಎಸ್. ಗಡೇದ ಅವರಿಗೆ 2026 ನೇ ಸಾಲಿನ "ಕಾಯಕ ಯೋಗಿ" ರಾಜ್ಯ ಪ್ರಶಸ್ತಿ ಲಭಿಸಿದೆ. ಪವಾಡ ಬಯಲು ಆಂದೋಲನದ ಮೂಲಕ ರಾಜ್ಯಾದ್ಯಂತ ಹೆಸರಾಗಿರುವ ಡಾ.ಹುಲಿಕಲ್ ನಟರಾಜ ಸಂಸ್ಥಾಪಕ ಅಧ್ಯಕ್ಷರಾಗಿರುವ 'ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು (ರಿ) ದೊಡ್ಡಬಳ್ಳಾಪುರ ಇವರು ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ. ಗಡೇದ ಅವರು ಸದ್ಯಕ್ಕೆ ಹೂವಿನ ಹಿಪ್ಪರಗಿ ಅಂಚೆ ಇಲಾಖೆಯಲ್ಲಿ ಸಬ್ ಪೋಸ್ಟ್ಮಾಸ್ಟರ್ ಆಗಿ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕೆಲವು ಗುತ್ತಿಗೆದಾರರು ಸಹಾಯ ಮಾಡುವುದು ತಮ್ಮ ರಾಜಕೀಯ ಲಾಭಕ್ಕೋಸ್ಕರ ಮಾಡುತ್ತಾರೆಯೇ ಹೊರತು ಸಮಾಜಕ್ಕೆ ನಿಸ್ವಾರ್ಥದಿಂದ ಕೊಡುವುದಿಲ್ಲ.ತಾಲ್ಲೂಕಿನಲ್ಲಿ ಕೆಲವು ಗುತ್ತಿಗೆದಾರರಿಗೆ ಕೆಲಸ ಬೇಕು.ಆದರೆ ಸಮಾಜಕ್ಕೆ ಕೊಡುವ ಮಾತು ದೂರ.ಅಂತವರಿಗೆ ಮುಂದಿನ ದಿನಗಳಲ್ಲಿ ಕಡಿವಾಣ ಹಾಕುವ ಕೆಲಸ ಮಾಡುವುದಾಗಿ ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಮಾರುತಿ ನಗರದಲ್ಲಿ ಹಮ್ಮಿಕೊಂಡಿದ್ದ ಯಲ್ಲಾಲಿಂಗೇಶ್ವರ ದೇವಸ್ಥಾನದ ಸಮೀಪದಲ್ಲಿ ಸನ್ 2025-26 ಸಾಲಿನ ಮುಖ್ಯಮಂತ್ರಿಯವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ 25 ಲಕ್ಷ ರೂ.ವೆಚ್ಚದಲ್ಲಿ ಸಭಾಭವನದ ಭೂಮಿಪೂಜೆ