Muda case Kumarswamy back side budda icon

Muda Case: ಯೂಟರ್ನ್ ಹೊಡೆದ ಕೇಂದ್ರ ಸಚಿವ HD ಕುಮಾರಸ್ವಾಮಿ?

Muda Case: ಯೂಟರ್ನ್ ಹೊಡೆದ ಕೇಂದ್ರ ಸಚಿವ HD ಕುಮಾರಸ್ವಾಮಿ?

ಬೆಂಗಳೂರು:‌ ಮುಡಾ ಹಗರಣಕ್ಕೆ (Muda Case) ಸಂಬಂಧಿಸಿದಂತೆ ರಾಜೀನಾಮೆ ಕೊಡಿ ಅಂತ ಸಿಎಂ ಸಿದ್ದರಾಮಯ್ಯ (Siddaramaiah)ಗೆ ಹೇಳಲ್ಲ ಕೊಡ್ತಾರೆ ಅಂತ ನಿರೀಕ್ಷೆಯನ್ನೂ ಮಾಡಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಸ್ಫೋಟಕ ಹೇಳಿಕೆ ನೀಡಿದ್ದಾರೆ.

Join Our Telegram: https://t.me/dcgkannada

ಹೆಚ್‌ಡಿಕೆ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿಲ್ಲ ಎಂಬ ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯಿಸಿರುವ ಅವರು, ನನ್ನ ಕೇಸಲ್ಲಿ ಯಾಕೆ ಪ್ರಾಸಿಕ್ಯೂಷನ್ ಬೇಕು? ಇವರು ಯಾಕೆ ಸುಪ್ರಿಂಕೋರ್ಟ್ ಮುಂದೆ ಹೋಗಿಲ್ಲ. ಕೋರ್ಟ್ ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ ತನ್ನಿ ಅಂತ ಹೇಳಿದೆಯಾ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: Heart attack: ಬೈಕ್‌ನಲ್ಲಿ ಹೋಗುತ್ತಿದ್ದಾಗ ಹೃದಯಾಘಾತ! ಯೋಧ ದುರ್ಮರಣ

ಇನ್ನು, “ನಾನು ರಾಜೀನಾಮೆ ಕೊಡಿ ಅಂತ ಹೇಳಿಲ್ಲ, ಕೊಡ್ತಾರೆ ಅಂತ ನಿರೀಕ್ಷಿಸಿಲ್ಲ. ನಮ್ಮ ಪಾದಯಾತ್ರೆಗೂ ಪ್ರಾಸಿಕ್ಯೂಷನ್‌ಗೂ ಸಂಬಂಧವಿಲ್ಲ. ಜನತೆಗೆ ಸಂದೇಶ ಕೊಡಲು ಪಾದಯಾತ್ರೆ ಮಾಡಿದ್ದೇವೆ” ಎಂದರು.

ಈ ಮೂಲಕ ಹೆಚ್‌ಡಿಕೆ ಯೂಟರ್ನ್ ಹೊಡೆದ್ರಾ (Muda case) ಎಂಬ ಪ್ರಶ್ನೆ ರಾಜ್ಯ ರಾಜಕಾರಣದಲ್ಲಿ ಮುನ್ನೆಗೆ ಬಂದಿದೆ.

ನನ್ನನ್ನು ಹೆದರಿಸಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ.. HDK ಗಂಭೀರ ಆರೋಪ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಮಂತ್ರಿಗಳು ನನ್ನ ಹೆದರಿಸುವ ಕೆಲಸ ಮಾಡುತ್ತಿದ್ದಾರೆ. ಅದಕ್ಕೆಲ್ಲ ಜಗ್ಗುವ ಜಾಯಮಾನ ನನ್ನದಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಭಾನುವಾರ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವರು, ಯಾವುದೋ ಹಳೆಯ ಪ್ರಕರಣವನ್ನು ಕೆದಕಿ, ಸುಪ್ರೀಂ ಕೋರ್ಟ್ ನಲ್ಲಿರುವ ಪ್ರಕರಣ ಇಟ್ಟುಕೊಂಡು ರಾಜ್ಯಪಾಲರನ್ನು ಅಪಮಾನಿಸುವ, ನನ್ನನ್ನು ಬ್ಲಾಕ್ ಮೇಲ್ ಮಾಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಇದಕ್ಕೆಲ್ಲಾ ಕೇರ್ ಮಾಡುವ ಪೈಕಿ ನಾನಲ್ಲ, ಈ ಸರ್ಕಾರಕ್ಕೂ ಅದು ಗೊತ್ತಿದೆ ಎಂದು ಕಿಡಿಕಾರಿದರು.

ರಾಜ್ಯಪಾಲರಿಗೆ ಸರ್ಕಾರದಿಂದ ಧಮ್ಕಿ:

ರಾಜ್ಯಪಾಲರು ಮೂಡಾ ಹಗರಣ ವಿಚಾರಣೆಗೆ ಅನುಮತಿ ನೀಡಿದಾಕ್ಷಣ ಇಡೀ ಸಚಿವರು, ಶಾಸಕರನ್ನು ಇಟ್ಟುಕೊಂಡು ರಾಜ್ಯಪಾಲರಿಗೆ ಧಮ್ಕಿ ಹಾಕುವ, ಜನರನ್ನು ಎತ್ತಿ ಕಟ್ಟುವ ಕೆಲಸವನ್ನು ಸಿದ್ದರಾಮಯ್ಯ ಅವರು ಮಾಡುತ್ತಿದ್ದಾರೆ. ನಾನು ಹೀಗೆಲ್ಲಾ ಮಾಡಿಲ್ಲ, ನನ್ನ ವಿರುದ್ಧ ಆರೋಪ ಕೇಳಿಬಂದಾಗ ಒಬ್ಬನೇ ಎದುರಿಸುತ್ತೇನೆ ಎಂದು ಹೇಳಿದ್ದೆ. ವಿಧಾನಸಭೆ ಕಲಾಪದಲ್ಲಿಯೂ ಹೇಳಿದ್ದೇನೆ. ಬೇಕಾದರೆ ಕಡತ ತೆಗೆದು ನೋಡಬಹುದು ಎಂದು ಹೇಳಿದರು ಕೇಂದ್ರ ಸಚಿವರು.

ನನ್ನ ವಿರುದ್ಧ 2006ರಲ್ಲಿ ಗಣಿ ಆರೋಪ ಮಾಡಿದಾಗ ನಾನೊಬ್ಬನೇ ಎದುರಿಸಿದೆ. ಶಾಸಕರು, ಸಚಿವರನ್ನು ಅಡ್ಡ ಇಟ್ಟುಕೊಂಡು ರಕ್ಷಣೆ ಪಡೆಯುವ ಕೆಲಸ ಮಾಡಲಿಲ್ಲ. ಹೇಡಿತನ ಪ್ರದರ್ಶಿಸಲಿಲ್ಲ, ಧೈರ್ಯವಾಗಿ ಒಬ್ಬನೇ ಎದುರಿಸಿದೆ ಎಂದರು

Latest News

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: ಸರ್ಕಾರದಿಂದ ಆಧಾರ್ ಕಾರ್ಡ್ ಹೊಂದಿದವರಿಗೆ 5 ಹೊಸ ರೂಲ್ಸ್ ಜಾರಿ ಮಾಡಿದೆ. ಈ ಐದೂ ನಿಮಯ ಪಾಲಿಸದಿದ್ದರೆ ದಂಡ ಗ್ಯಾರಂಟಿ! ಆಧಾರ್ ಕಾರ್ಡ್ ಅನ್ನು ಪ್ರತಿಯೊಬ್ಬ ನಾಗರಿಕನ ಅಗತ್ಯ ದಾಖಲೆಯಾಗಿ ಗುರುತಿಸಲಾಗಿದೆ. ಇದು ನಮ್ಮ ಗುರುತಿನ ಕಡ್ಡಾಯ ದಾಖಲೆಯಾಗಿದೆ. ಎಲ್ಲಾ ಸರ್ಕಾರಿ ಯೋಜನೆಗಳು ಮತ್ತು ಹಣಕಾಸು ಸೇವೆಗಳು ನಮ್ಮನ್ನು ತಲುಪಲು ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಅಗತ್ಯವಿರುತ್ತದೆ. Join Our Telegram: https://t.me/dcgkannada

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕಳಪೆ ಫಾರ್ಮ್ ನಿಂದ ನಿವೃತ್ತಿ ಕುರಿತು ಚರ್ಚೆ ಶುರುವಾಗಿದೆ. ಈ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ 23.75 ರ ಕಳಪೆ ಸರಾಸರಿಯೊಂದಿಗೆ 190 ರನ್ ಮಾತ್ರ ಕಲೆಹಾಕಿದ್ದಾರೆ. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಕೊಹ್ಲಿ ನಿವೃತ್ತರಾಗುವುದು ಉತ್ತಮ ಎಂಬ ಕೂಗುಗಳು ಕೇಳಿಬಂದಿದ್ದವು. ಆದರೀಗ ವಿರಾಟ್ ಕೊಹ್ಲಿ ತಾವು ಯಾವಾಗ ನಿವೃತ್ತಿ ಆಗುತ್ತೇನೆ ಎಂಬುದರ