ಬಿಜೆಪಿ-ಜೆಡಿಎಸ್‌ ಪಿತೂರಿಗೆ ಜಗ್ಗುವುದಿಲ್ಲ: ಕಾಂಗ್ರೆಸ್ ಹೈಕಮಾಂಡ್ ಖಡಕ್ ಸಂದೇಶ ರವಾನೆ

ಬಿಜೆಪಿ-ಜೆಡಿಎಸ್‌ ಪಿತೂರಿಗೆ ಜಗ್ಗುವುದಿಲ್ಲ: ಕಾಂಗ್ರೆಸ್ ಹೈಕಮಾಂಡ್ ಖಡಕ್ ಸಂದೇಶ ರವಾನೆ

ಬೆಂಗಳೂರು: ಬಿಜೆಪಿ–ಜೆಡಿಎಸ್‌ ಪಕ್ಷಗಳ ಪಿತೂರಿಗೆ ನಾವು ಜಗ್ಗುವುದಿಲ್ಲ. ನಾವು ಜನರ ಬಳಿಗೆ ಹೋಗುತ್ತೇವೆ. ಅವರಿಗೆ ವಾಸ್ತವಾಂಶ ವಿವರಿಸುತ್ತೇವೆ. ಒಗ್ಗಟ್ಟಿನಿಂದ ಹೋರಾಡುತ್ತೇವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಅವರು ಸ್ಪಷ್ಟ ಪಡಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿಂದು ಸಚಿವರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಗಂಭೀರ ಬೆಳವಣಿಗೆಗಳ ಕುರಿತು ರಾಜ್ಯದ ಸಚಿವರೊಂದಿಗೆ ಚರ್ಚಿಸಲಾಯಿತು. ಕರ್ನಾಟಕ ರಾಜ್ಯ ಬಿಜೆಪಿಯು ಸರ್ಕಾರಗಳನ್ನು ಉರುಳಿಸುವ ಇತಿಹಾಸವನ್ನು ಹೊಂದಿದೆ ಎಂದರು.

2018ರಲ್ಲಿ ಕಾಂಗ್ರೆಸ್- ಜೆಡಿಎಸ್‌ ಮೈತ್ರಿ ಸರ್ಕಾರವನ್ನು ಉರುಳಿಸಿದ್ದೇ ಬಿಜೆಪಿ ಕೇಂದ್ರ ನಾಯಕತ್ವದ ಪಿತೂರಿಯಿಂದ. ಅದೇ ರೀತಿಯ ಸ್ಪಷ್ಟ ಉದ್ದೇಶದಿಂದ ಈಗಲೂ ಕರ್ನಾಟಕ ಕಾಂಗ್ರೆಸ್‌ ಸರ್ಕಾರವನ್ನು ಗುರಿಯಾಗಿಸಿಕೊಂಡಿದ್ದಾರೆ.
ತಮ್ಮ ಪಕ್ಷವನ್ನು ಉಳಿಸಿಕೊಳ್ಳಲು ಈ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಪ್ರಜ್ವಲ್‌ ರೇವಣ್ಣ ಪ್ರಕರಣ ಬೆಳಕಿಗೆ ಬಂದಾಗಲೇ ಇಡೀ ದೇಶ ಕಾಂಗ್ರೆಸ್‌ ಸರ್ಕಾರದ ವಿರುದ್ಧದ ಪಿತೂರಿಯನ್ನು ಗಮನಿಸಿದೆ. ಬಿಜೆಪಿ ಹಾಗೂ ಜೆಡಿಎಸ್‌ ನ ಮುಖಂಡರು ತಮ್ಮ ಮಕ್ಕಳನ್ನು ಉಳಿಸಿಕೊಳ್ಳಲು ನಮ್ಮ ಚುನಾಯಿತ ಸರ್ಕಾರವನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದರು.

ಸಿದ್ದರಾಮಯ್ಯ ಅವರು ಬೆಳೆದು ಬಂದ ಹಾದಿ ಎಲ್ಲರಿಗೂ ತಿಳಿದಿದೆ: ಎಲ್ಲರಿಗೂ ಸಿದ್ದರಾಮಯ್ಯನವರ ಪ್ರಾಮಾಣಿಕತೆಯ ಅರಿವಿದೆ. ಅವರು ಮುಖ್ಯಮಂತ್ರಿ ಪದವಿಗೆ ಹೊಸಬರಲ್ಲ. ಅವರ ರಾಜಕೀಯ ಬದುಕು, ತತ್ವ ಸಿದ್ಧಾಂತ, ಹಿನ್ನೆಲೆ ಅವರು ಹಿಂದೆ ಹೇಗಿದ್ದರು, ಈಗ ಹೇಗಿದ್ದಾರೆ ಎಂಬುದು ಕರ್ನಾಟಕದ ಜನತೆಗೆ ಚೆನ್ನಾಗಿ ತಿಳಿದಿದೆ.

ಜನಪ್ರಿಯತೆ ಸಹಿಸದೆ ಸರ್ಕಾರ ಅಸ್ತಿರಗೊಳಿಸುವ ಹುನ್ನಾರ: ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ಕೂಡಲೇ ಬಡವರಿಗಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಯಿತು. ಬಿಜೆಪಿ ಮತ್ತು ಜೆಡಿಎಸ್‌ ನವರಿಗೆ ಇದು ರಾಜಕೀಯವಾಗಿ ನಷ್ಟ ಉಂಟು ಮಾಡುವುದು ಹಾಗೂ ವಿವಿಧ ಪ್ರಕರಣಗಳ ತನಿಖೆಯಿಂದ ವೈಯಕ್ತಿಕವಾಗಿಯೂ ಅವರಿಗೆ ತೊಂದರೆಯಾಗಲಿದೆ ಎಂಬುದು ಅರಿವಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯವರ ವಿರುದ್ಧ ಕೆಲವು ಆರೋಪಗಳನ್ನು ಮಾಡುವ ಮೂಲಕ ಸರ್ಕಾರವನ್ನು ಅಸ್ಥಿರಗೊಳಿಸುವ ಪಿತೂರಿ ನಡೆಸಿದ್ದಾರೆ.

ರಾಜ್ಯಪಾಲರ ಬಳಕೆ ದುರದೃಷ್ಟಕರ: ದುರದೃಷ್ಟವಶಾತ್‌ ರಾಜ್ಯದ ರಾಜ್ಯಪಾಲರು ಬಿಜೆಪಿ ಪಿತೂರಿಯ ಸಾಧನವಾಗಿದ್ದಾರೆ. ಮುಖ್ಯಮಂತ್ರಿಯವರಿಗೆ ಕಾರಣ ಕೇಳಿ ನೋಟೀಸ್‌ ನೀಡುವ ಮೂಲಕ ಸರ್ಕಾರ ಅಸ್ಥಿರಗೊಳ್ಳಲಿದೆ ಎಂಬ ಭಾವನೆ ಮೂಡಿಸುವ ಪ್ರಯತ್ನ ಮಾಡಲಾಗುತ್ತಿದೆ. ಆದರೆ ಕಾಂಗ್ರೆಸ್‌ ಪಕ್ಷವು ಈ ಪಿತೂರಿ ವಿರುದ್ಧ ಹೋರಾಡಲು ತೀರ್ಮಾನಿಸಿದ್ದು, ಕರ್ನಾಟಕದ ಜನತೆಗೆ ವಾಸ್ತವಾಂಶದ ಅರಿವು ಮೂಡಿಸಲು ನಿರ್ಧರಿಸಿದೆ. ಸಚಿವರು, ಶಾಸಕರು ಜಿಲ್ಲೆಗಳು, ತಮ್ಮ ಕ್ಷೇತ್ರಗಳಿಗೆ ಭೇಟಿ ನೀಡಿ ಜನರಿಗೆ ಸರ್ಕಾರದ ಸಾಧನೆಗಳನ್ನು ವಿವರಿಸಿ, ಗ್ಯಾರಂಟಿ ಯೋಜನೆಗಳನ್ನು ಮುಗಿಸುವ ಬಿಜೆಪಿ-ಜೆಡಿಎಸ್‌ ನ ಹುನ್ನಾರವನ್ನು ಬಯಲಿಗೆಳೆಯಲಾಗುವುದು.

ಇದಕ್ಕಾಗಿ ಇಂದು ಸಭೆ ನಡೆಸಿದ್ದು, ರಾಜ್ಯದ ಬಡ ಜನರ ಕುರಿತು ಕಾಂಗ್ರೆಸ್‌ ಸರ್ಕಾರಕ್ಕೆ ಅತೀವ ಕಾಳಜಿ ಇದ್ದು, ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸಲಾಗುವುದು. ಈ ಯೋಜನೆಗಳ ಕುರಿತು ನಮಗೆ ಹೆಮ್ಮೆ ಇದೆ ಎಂದರು.

ಭ್ರಷ್ಟಾಚಾರ ಕುರಿತು ಬಿಜೆಪಿ ಮಾತಾಡುವುದು ಹಾಸ್ಯಾಸ್ಪದ: ಬಿಜೆಪಿ ಭ್ರಷ್ಟಾಚಾರದ ಕುರಿತು ಮಾತನಾಡುತ್ತಿರುವುದು ಅತ್ಯಂತ ಹಾಸ್ಯಾಸ್ಪದ. ವಿಜಯೇಂದ್ರ ಅವರ ಮೇಲೆ ಎಷ್ಟು ಆರೋಪಗಳಿವೆ?, ಪ್ರಜ್ವಲ್‌ ರೇವಣ್ಣ ವಿರುದ್ಧ ಎಷ್ಟು ಆರೋಪಗಳಿವೆ? ಅಂತವರು ತಾವೇ ಅತ್ಯಂತ ಸಭ್ಯರೆಂಬ ಸೋಗಿನಲ್ಲಿ ತಮ್ಮ ರಾಜಕೀಯ ಜೀವನದುದ್ದಕ್ಕೂ ಜನಪರ ಕಾಳಜಿ ಹೊಂದಿದ ರಾಜ್ಯದ ಮುಖ್ಯಮಂತ್ರಿ ವಿರುದ್ಧ ಆರೋಪಗಳನ್ನು ಮಾಡುತ್ತಿದ್ದಾರೆ. ರಾಜ್ಯದ ಬಡ ಜನರ ಜೊತೆ ನಿಂತ ಮುಖ್ಯಮಂತ್ರಿಯವರನ್ನು ಮುಗಿಸಲು ಮುಂದಾಗಿದ್ದಾರೆ ಎಂದರು.

ಸಮಸ್ಯೆ ಇದ್ದರೆ ಕಾನೂನು ಕ್ರಮ ಕೈಗೊಳ್ಳಲಿ: ಆರೋಪಗಳ ಕುರಿತು ಕಾನೂನು ತನ್ನದೇ ಕ್ರಮ ವಹಿಸಲಿದೆ. ಈ ಬಗ್ಗೆ ನಮಗೆ ಯಾವುದೇ ಅಳುಕಿಲ್ಲ. ನಿಜವಾಗಿಯೂ ಸಮಸ್ಯೆ ಇದ್ದರೆ ಕಾನೂನಿನ ಮೊರೆ ಹೋಗಲಿ. ಅದರ ಬದಲಾಗಿ ಪ್ರತಿದಿನ ಸಿದ್ದರಾಮಯ್ಯ ಅವರ ವಿರುದ್ಧ ಪದೇ ಪದೇ ಭ್ರಷ್ಟಾಚಾರ ಆರೋಪ ಮಾಡುವುದು ಸರಿಯಲ್ಲ. ಅವರು ಗ್ಯಾರಂಟಿ ಯೋಜನೆಗಳು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡಿದ್ದಾರೆ.

ಕಾಂಗ್ರೆಸ್‌ ಬಡವರ ಪರವಾಗಿದೆ ಎಂದು ಅವರಿಗೂ ಗೊತ್ತಿದೆ. ಹಿಂದಿನ ಚುನಾವಣೆ ಕರ್ನಾಟಕದಲ್ಲಿ ಬಡವರು-ಶ್ರೀಮಂತರ ನಡುವೆ ಇತ್ತು. ಆದ್ದರಿಂದಲೇ 135 ಸೀಟುಗಳೊಂದಿಗೆ ಗೆಲುವು ಸಾಧಿಸಿ ಅಧಿಕಾರಕ್ಕೆ ಬಂದಿದ್ದೇವೆ. ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಮಾಡಿರುವ ತಾರತಮ್ಯ ಕುರಿತು ಯಾರೂ ಮಾತನಾಡುತ್ತಿಲ್ಲ. ನಿರ್ಮಲಾ ಸೀತಾರಾಮನ್‌ ಅವರು ಇಲ್ಲಿಂದಲೇ ಆಯ್ಕೆಯಾಗಿದ್ದರೂ ಯಾವುದೇ ನೆರವು ಒದಗಿಸಿಲ್ಲ.ಸೀಮಿತ ಸಂಪನ್ಮೂಲದೊಂದಿಗೆ ಸರ್ಕಾರ ಬಡವರ ಕಲ್ಯಾಣಕ್ಕಾಗಿ ಶ್ರಮಿಸುತ್ತಿದೆ. ಕೇಂದ್ರ ಸರ್ಕಾರ ಬೆಂಬಲ ನೀಡುವ ಬದಲಿಗೆ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ. ನಾವು ಇದರ ವಿರುದ್ಧ ಒಗ್ಗಟ್ಟಿನಿಂದ ಹೋರಾಡುತ್ತೇವೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯ ಉಸ್ತುವಾರಿ ಸುರ್ಜೇವಾಲ ಅವರು ಉಪಸ್ಥಿತರಿದ್ದರು.

Latest News

ಮಾಜಿ ಶಾಸಕ ನಡಹಳ್ಳಿ ಆಗ್ರಹ:                                                           ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮಾಜಿ ಶಾಸಕ ನಡಹಳ್ಳಿ ಆಗ್ರಹ: ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮುದ್ದೇಬಿಹಾಳ : ರಾಜ್ಯದಲ್ಲಿ 199 ತಾಲ್ಲೂಕುಗಳು ಬರಪೀಡಿತ ಪ್ರದೇಶಗಳಾಗಿದ್ದು ಕಾಂಗ್ರೆಸ್ ಸರ್ಕಾರ ರೈತರ ಐದು

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡ ಪವಾಡ ಬಸವೇಶ್ವರ ಸಂಸ್ಥೆಯ ವತಿಯಿಂದ ಸೆ.11 ರಂದು ಬೆಳಗ್ಗೆ

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಮುದ್ದೇಬಿಹಾಳ : ರೈತರ ಸಹಕಾರದಿಂದ ಸನ್ 2025-26ನೇ ಸಾಲಿನ ಮಾರ್ಚ ಅಂತ್ಯಕ್ಕೆ ನಮ್ಮ ಸಂಘವು

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ

ಸೆ.9 ರಂದು ಬರಪರಿಸ್ಥಿತಿ ಅವಲೋಕನಕ್ಕೆ ಟಾಸ್ಕಫೋರ್ಸ್ ಸಭೆ

ಸೆ.9 ರಂದು ಬರಪರಿಸ್ಥಿತಿ ಅವಲೋಕನಕ್ಕೆ ಟಾಸ್ಕಫೋರ್ಸ್ ಸಭೆ

ಮುದ್ದೇಬಿಹಾಳ : ಬರಪರಿಸ್ಥಿತಿ,ಕುಡಿವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಲಭ್ಯತೆ ಕುರಿತು ಚರ್ಚೆ ನಡೆಸಲು ಸೆ.9 ರಂದು ಬೆಳಗ್ಗೆ 9 ಕ್ಕೆ ಪಟ್ಟಣದ ಪ್ರವಾಸಿ ಮಂದಿರದ ಸಭಾಭವನದಲ್ಲಿ ಕೆಎಸ್‌ಡಿಎಲ್ ನಿಗಮದ ಅಧ್ಯಕ್ಷರು, ಶಾಸಕ ಸಿ.ಎಸ್.ನಾಡಗೌಡ ಅಧ್ಯಕ್ಷತೆಯಲ್ಲಿ ಟಾಸ್ಕಫೋರ್ಸ್ ಸಭೆ ನಿಗದಿಪಡಿಸಲಾಗಿದೆ. ಟಾಸ್ಕಫರ‍್ಸ್ ಸಭೆಗೆ ಎಲ್ಲ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಹಾಜರಾಗುವಂತೆ ತಹಶೀಲ್ದಾರ್‌ರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕ್ಷೇತ್ರದ ಅವಳಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳು ಎಂದು ಘೋಷಣೆ ಮಾಡುವಂತೆ ಮಾಜಿ ಶಾಸಕ ಎ.ಎಸ್.ಪಾಟೀಲ

ಶಾಸಕ ನಾಡಗೌಡರು ಹಸಿ ಸುಳ್ಳುಗಳ ಸರದಾರರು-ನಡಹಳ್ಳಿ

ಶಾಸಕ ನಾಡಗೌಡರು ಹಸಿ ಸುಳ್ಳುಗಳ ಸರದಾರರು-ನಡಹಳ್ಳಿ

ಮುದ್ದೇಬಿಹಾಳ : ಮತಕ್ಷೇತ್ರದ ರೈತರಿಂದ ಆಯ್ಕೆಯಾಗಿರುವ ನೀವು ಅವರ ಬದುಕಿಗೆ ಸಂಕಷ್ಟ ಎದುರಾದಾಗ ಸ್ಪಂದಿಸುವ ಕೆಲಸ ಮಾಡಬೇಕು.ಅದು ಬಿಟ್ಟು ಮೂವ್ವತ್ತು ವರ್ಷಗಳಿಂದ ಹಸಿ ಸುಳ್ಳುಗಳನ್ನೇ ಹೇಳುತ್ತಾ ರಾಜಕಾರಣ ಮಾಡಿಕೊಂಡು ಬಂದಿದ್ದೀರಿ.ಜನ ಇನ್ನು ಮುಂದೆ ನಿಮ್ಮನ್ನು ನಂಬುವುದಿಲ್ಲ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಮಂಗಳವಾರ ಬರ ಘೋಷಣೆಗೆ ಆಗ್ರಹಿಸಿ ನಡೆದಿರುವ ಬಿಜೆಪಿಯ ಎರಡನೇ ದಿನದ ಧರಣಿ ಸತ್ಯಾಗ್ರಹವನ್ನುದ್ದೇಶಿಸಿ ಅವರು