ಮುಡಾ ಹಗರಣ.. ಸಿಎಂ ಪರ ಅರ್ಜಿ ವಜಾ..! ಆ.21ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್

ಮುಡಾ ಹಗರಣ.. ಸಿಎಂ ಪರ ಅರ್ಜಿ ವಜಾ..! ಆ.21ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದ (Muda scam) ಆರೋಪ ಕುರಿತಾದಂತೆ ಪ್ರಕರಣದ ಅರ್ಜಿಯ ವಿಚಾರಣೆಯನ್ನು ಆಗಸ್ಟ್ 21ಕ್ಕೆ ಮುಂದೂಡಿದೆ.

ಇಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಂ ಹಾಗೂ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ನಡೆಸಲಾಯಿತು.

Join our telegram: https://t.me/dcgkannada

ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಆರೋಪದ ಸಂಬಂಧ ಸ್ನೇಹಮಯಿ ಕೃಷ್ಣ ಅರ್ಜಿಯ ವಿಚಾರಣೆ ನಡೆಸಿದಂತ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಆಗಸ್ಟ್ 20ರಂದು ವಿಚಾರಣೆಗೆ ಸ್ವೀಕರಿಸುವುದಾಗಿ ತಿಳಿಸಿ, ಆಗಸ್ಟ್.21ಕ್ಕೆ ವಿಚಾರಣೆಯನ್ನು ಮುಂದೂಡಿದೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪರವಾಗಿ ಸಲ್ಲಿಕೆಯಾಗಿದ್ದ ಮಧ್ಯಂತರ ಅರ್ಜಿಯನ್ನು ಕೋರ್ಟ್ ವಜಾಗೊಳಿದ್ದು, ಸಿಎಂ ಸಂಕಷ್ಟ ಎದುರಾಗುವ ಸಾಧ್ಯತೆ ದಟ್ಟವಾಗಿದೆ.

ಹೌದು, ಸಿಎಂ ಸಿದ್ದರಾಮಯ್ಯ‌ ವಿರುದ್ಧ ಸ್ನೇಹಮಯಿ ಕೃಷ್ಣ ಎನ್ನುವವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು. ಏತ್ಮಮಧ್ಯೆ, ಆಲಂ ಪಾಷಾ ಪ್ರಾಸಿಕ್ಯೂಷನ್ ಅನುಮತಿ ಇಲ್ಲದೆ ಸಿಎಂ ವಿರುದ್ಧ ಪ್ರಕರಣವನ್ನೇ ಸ್ವೀಕರಿಸಬಾರದು ಎಂದು ಮಧ್ಯಂತರ ಅರ್ಜಿ ಸಲ್ಲಿಸಿದ್ದರು.

ಈ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್, ಸಿಎಂ ಪರ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಕೋರ್ಟ್ ಆದೇಶವನ್ನು ನೀಡಿದೆ. ಅಲ್ಲದೆ, ವಿಚಾರಣೆಯ ವೇಳೆ ಆಲಂ ಪಾಷಾ ಎನ್ನುವವರು ಪ್ರಾಜಸಿಕ್ಯೂಷನ್ ಗೆ ಅನುಮತಿ ಇಲ್ಲದೆ, ಸಿಎಂ ಕೇಸ್ ಸ್ವೀಕರಿಸದಂತೆ ಅರ್ಜಿಯನ್ನು ಯಾವ ಕಾನೂನಿನ ಅಡಿ ಅರ್ಜಿ ಸಲ್ಲಿಸಿದ್ದೀರಾ ಎಂದು ಮಧ್ಯಂತರ ಅರ್ಜಿದಾರರಿಗೆ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಪ್ರಶ್ನಿಸಿದ್ದಾರೆ. ಈ ವೇಳೆ ಸಾರ್ವಜನಿಕ ಹಿತಾಸಕ್ತಿಯಿಂದ ಅರ್ಜಿ ಸಲ್ಲಿಸಿರುವುದಾಗಿ ತಿಳಿಸಿದರು.

ಇದನ್ನೂ ಓದಿ: Tungabhadra dam: ಕ್ರಸ್ಟ್ ಗೇಟ್ ಕಟ್ಟಾದ ಬಗ್ಗೆ ಬಿಜೆಪಿಯವರು ಭಾರತ ಸರ್ಕಾರವನ್ನ ಪ್ರಶ್ನೆ ಮಾಡಬೇಕು: ಸಿಎಂ ಸಿದ್ದರಾಮಯ್ಯ‌ ತೀರುಗೇಟು

ಆಲಂ ಪಾಷಾ ಅವರ ಈ ವಾದಕ್ಕೆ ಜಡ್ಜ್ ಸಂತೋಷ ಗಜಾನನ ಭಟ್ ಅಸಮಾಧಾನ ವ್ಯಕ್ತಪಡಿಸಿದರು. ಅರ್ಜಿದಾರ ಆಲಂಪಾಷ ದೂರು ದಾಖಲಿಸಲು ಅನುಮತಿ ಕೇಳುತ್ತಿಲ್ಲ. ಬದಲಿಗೆ ಕಾನೂನಿನ ಪ್ರಕ್ರಿಯೆನ್ನೇ ತಡೆಹಿಡಿಯಲು ಕೇಳುತ್ತಿದ್ದಾರೆ. ಹೀಗಾಗಿ, ಆಲಂಪಾಷ ಅರ್ಜಿ ವಜಾ ಗೊಳಿಸಲು ಅರ್ಹ ಎಂದು ಕೋರ್ಟ್ ಆದೇಶ ಹೊರಡಿಸಿದೆ.

ಈ ವೇಳೆ ಆಲಂ ಪಾಷ ವಾದಕ್ಕೆ ಸ್ನೇಹಮಯಿ ಕೃಷ್ಣ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿ, ಸಂಬಂಧವಿಲ್ಲದ ವ್ಯಕ್ತಿಯ ವಾದ ಆಲಿಸಬಾರದು. ಕೋರ್ಟ್ ಸಮಯ ವ್ಯರ್ಥ ಮಾಡಿರುವುದಕ್ಕೆ ದಂಡ ವಿಧಿಸಬೇಕು ಎಂದು ದೂರುದಾರರ ಸ್ನೇಹಮಹಿನ ಕೃಷ್ಣ ಪರ ಹಿರಿಯ ವಕೀಲೆ ಲಕ್ಷ್ಮಿ ಅಯ್ಯಂಗಾರ್ ವಾದ ಮಂಡಿಸಿದರು.

ವಿಚಾರಣೆ ಸಂದರ್ಭದಲ್ಲಿದಲ್ಲಿ ಪಿಸಿಆರ್ ಅಂದರೆ ಪಬ್ಲಿಕ್ ಕಂಟ್ರೋಲ್ ರೂಂ ಎಂದು ಆಲಂಪಾಷ ಹೇಳಿದಾಗ, ಪಿ ಸಿ ಆರ್ ಎಂದರೇನು ಎಂದು ತಿಳಿಯದೆ ಅರ್ಜಿ ಸಲ್ಲಿಸಿದ್ದೀರಾ? ಕೋರ್ಟ್ನಲ್ಲಿ ತಮಾಷೆ ಮಾಡುತ್ತಿದ್ದೀರಾ ಎಂದು ಜಡ್ಜ್ ತರಾಟೆಗೆ ತೆಗೆದುಕೊಂಡಿದರು. ಅಲ್ಲದೆ, ನೀವು ಸಂತ್ರಸ್ತರಾ? ಅಥವಾ ದೂರುದಾರರಾ? ಸ್ಪಷ್ಟಪಡಿಸಿ ಎಂದು ಜಡ್ಜ್ ಗರಂ ಆಗಿ ಸೂಚಿಸಿದರು.

Latest News

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ನನಗೆ ಬಿ.ಎಸ್.ಯಡಿಯೂರಪ್ಪನವರು ರಾಜಕೀಯ ಗುರುಗಳು.ರಾಜಕೀಯ ಭವಿಷ್ಯ ಕಲ್ಪಿಸಿದ ಮಾರ್ಗದರ್ಶಕರಾಗಿದ್ದಾರೆ.ಮೇ.9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ:                ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ: ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಮುದ್ದೇಬಿಹಾಳ : ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಒಟ್ಟು ಮೂರು ಪೆನಲ್‌ಗಳು ಸ್ಪರ್ಧಿಸಿದ್ದವು.ಅದರಲ್ಲಿ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್ ಅಡಿ ನಿರ್ಮಿಸಲಾದ ಕಾಲುವೆ ಸಂಖ್ಯೆ 16ಎ- ಲ್ಯಾಟರಲ್ ನಂ.2 ಕಾಲುವೆ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಖಾಸಗಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರೆಯುತ್ತದೆ ಎಂಬ ಪಾಲಕರಲ್ಲಿರುವ ಅಭಿಪ್ರಾಯ ಸರಿಯಲ್ಲ.ಸರ್ಕಾರಿ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ಗ್ರಾಮದ ಎಸ್.ಎನ್.ಡಿ ನ್ಯಾಷನಲ್ ಪಬ್ಲಿಕ್ ಶಾಲೆಗೆ 2025-26ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್. ಸಿ ಪರೀಕ್ಷೆಯಲ್ಲಿ ಪ್ರಥಮ ವರ್ಷದಲ್ಲಿಯೇ ಶೇ. 100 ರಷ್ಟು ಫಲಿತಾಂಶ ದಾಖಲಿಸಿದೆ. ಮೂವರು ಡಿಸ್ಟಿಂಕ್ಷನ್,ಮೂವರು ಪ್ರಥಮ ದರ್ಜೆ,ಇಬ್ಬರು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ದೀಪಾ ಹರಿಂದ್ರಾಳ 90% ರಷ್ಟು ಅಂಕ ಪಡೆದು ಶಾಲೆಗೆ ಪ್ರಥಮ, ದೀಕ್ಷಾ ಬೂದಿಹಾಳ 86.24% ದ್ವಿತೀಯ ಸ್ಥಾನ ಹಾಗೂ ಪೂಜಾ ಕೆಸರಗೊಪ್ಪ 85.12 % ಪಡೆದುಕೊಂಡಿದ್ದಾರೆ. ಕನ್ನಡ ವಿಷಯಕ್ಕೆ

ಎಸ್.ಎಸ್.ಎಲ್.ಸಿ ಪರೀಕ್ಷೆ:                                         ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಎಸ್.ಎಸ್.ಎಲ್.ಸಿ ಪರೀಕ್ಷೆ: ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಸರೂರ ಕ್ರಾಸ್ ಬಳಿ ಇರುವ ಕವಡಿಮಟ್ಟಿಯ ದಿ ಆರ್ಚ್ ಏಂಜಲ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ಪ್ರಥಮ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 100 ರಷ್ಟು ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾಗಿದ್ದ ಮೊದಲ ಬ್ಯಾಚ್‌ನ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಸುಮೈಯಾ ವೈ. ಮುಲ್ಲಾ: ಶೇ. 96.32 ಶಾಲೆಗೆ ಪ್ರಥಮ,ಜವೇರಿಯಾ ಅಂಬರ್ ಕೆ. ಯತ್ತಿನಮನಿ ಶೇ. 94.56 ಹಾಗೂ ಉಮ್ಮೆಐಮನ್ ಎಸ್. ಯಲಿಗಾರ್