ಮುಡಾ ಹಗರಣ.. ಸಿಎಂ ಪರ ಅರ್ಜಿ ವಜಾ..! ಆ.21ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್

ಮುಡಾ ಹಗರಣ.. ಸಿಎಂ ಪರ ಅರ್ಜಿ ವಜಾ..! ಆ.21ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದ (Muda scam) ಆರೋಪ ಕುರಿತಾದಂತೆ ಪ್ರಕರಣದ ಅರ್ಜಿಯ ವಿಚಾರಣೆಯನ್ನು ಆಗಸ್ಟ್ 21ಕ್ಕೆ ಮುಂದೂಡಿದೆ.

ಇಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಂ ಹಾಗೂ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ನಡೆಸಲಾಯಿತು.

Join our telegram: https://t.me/dcgkannada

ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಆರೋಪದ ಸಂಬಂಧ ಸ್ನೇಹಮಯಿ ಕೃಷ್ಣ ಅರ್ಜಿಯ ವಿಚಾರಣೆ ನಡೆಸಿದಂತ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಆಗಸ್ಟ್ 20ರಂದು ವಿಚಾರಣೆಗೆ ಸ್ವೀಕರಿಸುವುದಾಗಿ ತಿಳಿಸಿ, ಆಗಸ್ಟ್.21ಕ್ಕೆ ವಿಚಾರಣೆಯನ್ನು ಮುಂದೂಡಿದೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪರವಾಗಿ ಸಲ್ಲಿಕೆಯಾಗಿದ್ದ ಮಧ್ಯಂತರ ಅರ್ಜಿಯನ್ನು ಕೋರ್ಟ್ ವಜಾಗೊಳಿದ್ದು, ಸಿಎಂ ಸಂಕಷ್ಟ ಎದುರಾಗುವ ಸಾಧ್ಯತೆ ದಟ್ಟವಾಗಿದೆ.

ಹೌದು, ಸಿಎಂ ಸಿದ್ದರಾಮಯ್ಯ‌ ವಿರುದ್ಧ ಸ್ನೇಹಮಯಿ ಕೃಷ್ಣ ಎನ್ನುವವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು. ಏತ್ಮಮಧ್ಯೆ, ಆಲಂ ಪಾಷಾ ಪ್ರಾಸಿಕ್ಯೂಷನ್ ಅನುಮತಿ ಇಲ್ಲದೆ ಸಿಎಂ ವಿರುದ್ಧ ಪ್ರಕರಣವನ್ನೇ ಸ್ವೀಕರಿಸಬಾರದು ಎಂದು ಮಧ್ಯಂತರ ಅರ್ಜಿ ಸಲ್ಲಿಸಿದ್ದರು.

ಈ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್, ಸಿಎಂ ಪರ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಕೋರ್ಟ್ ಆದೇಶವನ್ನು ನೀಡಿದೆ. ಅಲ್ಲದೆ, ವಿಚಾರಣೆಯ ವೇಳೆ ಆಲಂ ಪಾಷಾ ಎನ್ನುವವರು ಪ್ರಾಜಸಿಕ್ಯೂಷನ್ ಗೆ ಅನುಮತಿ ಇಲ್ಲದೆ, ಸಿಎಂ ಕೇಸ್ ಸ್ವೀಕರಿಸದಂತೆ ಅರ್ಜಿಯನ್ನು ಯಾವ ಕಾನೂನಿನ ಅಡಿ ಅರ್ಜಿ ಸಲ್ಲಿಸಿದ್ದೀರಾ ಎಂದು ಮಧ್ಯಂತರ ಅರ್ಜಿದಾರರಿಗೆ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಪ್ರಶ್ನಿಸಿದ್ದಾರೆ. ಈ ವೇಳೆ ಸಾರ್ವಜನಿಕ ಹಿತಾಸಕ್ತಿಯಿಂದ ಅರ್ಜಿ ಸಲ್ಲಿಸಿರುವುದಾಗಿ ತಿಳಿಸಿದರು.

ಇದನ್ನೂ ಓದಿ: Tungabhadra dam: ಕ್ರಸ್ಟ್ ಗೇಟ್ ಕಟ್ಟಾದ ಬಗ್ಗೆ ಬಿಜೆಪಿಯವರು ಭಾರತ ಸರ್ಕಾರವನ್ನ ಪ್ರಶ್ನೆ ಮಾಡಬೇಕು: ಸಿಎಂ ಸಿದ್ದರಾಮಯ್ಯ‌ ತೀರುಗೇಟು

ಆಲಂ ಪಾಷಾ ಅವರ ಈ ವಾದಕ್ಕೆ ಜಡ್ಜ್ ಸಂತೋಷ ಗಜಾನನ ಭಟ್ ಅಸಮಾಧಾನ ವ್ಯಕ್ತಪಡಿಸಿದರು. ಅರ್ಜಿದಾರ ಆಲಂಪಾಷ ದೂರು ದಾಖಲಿಸಲು ಅನುಮತಿ ಕೇಳುತ್ತಿಲ್ಲ. ಬದಲಿಗೆ ಕಾನೂನಿನ ಪ್ರಕ್ರಿಯೆನ್ನೇ ತಡೆಹಿಡಿಯಲು ಕೇಳುತ್ತಿದ್ದಾರೆ. ಹೀಗಾಗಿ, ಆಲಂಪಾಷ ಅರ್ಜಿ ವಜಾ ಗೊಳಿಸಲು ಅರ್ಹ ಎಂದು ಕೋರ್ಟ್ ಆದೇಶ ಹೊರಡಿಸಿದೆ.

ಈ ವೇಳೆ ಆಲಂ ಪಾಷ ವಾದಕ್ಕೆ ಸ್ನೇಹಮಯಿ ಕೃಷ್ಣ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿ, ಸಂಬಂಧವಿಲ್ಲದ ವ್ಯಕ್ತಿಯ ವಾದ ಆಲಿಸಬಾರದು. ಕೋರ್ಟ್ ಸಮಯ ವ್ಯರ್ಥ ಮಾಡಿರುವುದಕ್ಕೆ ದಂಡ ವಿಧಿಸಬೇಕು ಎಂದು ದೂರುದಾರರ ಸ್ನೇಹಮಹಿನ ಕೃಷ್ಣ ಪರ ಹಿರಿಯ ವಕೀಲೆ ಲಕ್ಷ್ಮಿ ಅಯ್ಯಂಗಾರ್ ವಾದ ಮಂಡಿಸಿದರು.

ವಿಚಾರಣೆ ಸಂದರ್ಭದಲ್ಲಿದಲ್ಲಿ ಪಿಸಿಆರ್ ಅಂದರೆ ಪಬ್ಲಿಕ್ ಕಂಟ್ರೋಲ್ ರೂಂ ಎಂದು ಆಲಂಪಾಷ ಹೇಳಿದಾಗ, ಪಿ ಸಿ ಆರ್ ಎಂದರೇನು ಎಂದು ತಿಳಿಯದೆ ಅರ್ಜಿ ಸಲ್ಲಿಸಿದ್ದೀರಾ? ಕೋರ್ಟ್ನಲ್ಲಿ ತಮಾಷೆ ಮಾಡುತ್ತಿದ್ದೀರಾ ಎಂದು ಜಡ್ಜ್ ತರಾಟೆಗೆ ತೆಗೆದುಕೊಂಡಿದರು. ಅಲ್ಲದೆ, ನೀವು ಸಂತ್ರಸ್ತರಾ? ಅಥವಾ ದೂರುದಾರರಾ? ಸ್ಪಷ್ಟಪಡಿಸಿ ಎಂದು ಜಡ್ಜ್ ಗರಂ ಆಗಿ ಸೂಚಿಸಿದರು.

Latest News

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ ಹೇಳಿಕೆಯನ್ನು ತಗೆದುಕೊಂಡರೋ ಗೊತ್ತಿಲ್ಲ.ಸದ್ಯಕ್ಕೆ ಮುಖ್ಯಮಂತ್ರಿಗಳು ಪತ್ರವ್ಯವಹಾರ ನಿಲ್ಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸುಮ್ಮನಾಗಿದ್ದೇನೆ.ನನ್ನದು ಸಿದ್ಧಾಂತದ ಮೇಲೆ ಹೋರಾಟ ನಡೆಯುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಬಳಿ ತಮ್ಮನ್ನು ಎದುರಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ನನ್ನ ಮಾನಸಿಕ ಸ್ಥಿತಿ ಹೇಗಿದೆ ? ಎಂಬುದನ್ನು ಮತ್ತೊಬ್ಬರಿಂದ ಹೇಳಿಸಿಕೊಳ್ಳಬೇಕಾಗಿಲ್ಲ.ಮಾನಸಿಕ ಚಿಕಿತ್ಸೆಯ ಬಗ್ಗೆ ಕೊಟ್ಟಿರುವ ಮಾತಿಗೆ ನಾನು