ಮುದ್ದೇಬಿಹಾಳ : ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ನೂತನ ಪದಾಧಿಕಾರಿಗಳನ್ನು ಬುಧವಾರ ಆಯ್ಕೆ ಮಾಡಲಾಗಿದೆ.
ಪಟ್ಟಣದ ಬಸವೇಶ್ವರ ವೃತ್ತದ ಹತ್ತಿರ ಇರುವ ಸಂಘದ ಕಾರ್ಯಾಲಯದಲ್ಲಿ ನಡೆದ ಸದಸ್ಯರ ಸಭೆಯಲ್ಲಿ ಸಂಘದ ತಾಲೂಕ ಘಟಕದ ನೂತನ ಅಧ್ಯಕ್ಷರಾಗಿ ಬಸರಕೋಡದ ಶ್ರೀ ಪವಾಡ ಬಸವೇಶ್ವರ ಪ್ರೌಢಶಾಲೆಯ ನಿವೃತ್ತ ಮುಖ್ಯಗುರು,ಹಿರಿಯ ಸಾಹಿತಿ ಅಶೋಕ ಪಿ.ಮಣಿ ಅವಿರೋಧವಾಗಿ ಆಯ್ಕೆಯಾದರು.
ಗೌರವಾಧ್ಯಕ್ಷರಾಗಿ ಬಾಪುಗೌಡ ಪಿ.ಪಾಟೀಲ್,ಉಪಾಧ್ಯಕ್ಷರಾಗಿ ಸದಾಶಿವ ಮಾಗಿ,ಪ್ರಧಾನ ಕಾರ್ಯದರ್ಶಿಗಳಾಗಿ ಎಸ.ಎ.ಬೇವಿನಗಿಡದ,ಖಜಾಂಚಿಯಾಗಿ ಬಿ.ಎಚ್.ಬಳಬಟ್ಟಿ,ಜಂಟಿ ಕಾರ್ಯದರ್ಶಿ ಡಿ.ಬಿ.ಓಲೇಕಾರ,ಯು.ಕೆ.ಬಾಗವಾನ,
ಸಂಘಟನಾ ಕಾರ್ಯದರ್ಶಿಗಳಾಗಿ ಎಚ್.ಬಿ.ದಳವಾಯಿ,ಎಸ್.ಎಸ್.ಭೂತಲ,ಕ್ರೀಡಾ ಕಾರ್ಯದರ್ಶಿಗಳಾಗಿ ವಾಯ್.ವಾಯ್. ಮುತ್ತತ್ತಿ,ಸಾಂಸ್ಕೃತಿಕ ಕಾರ್ಯದರ್ಶಿಗಳಾಗಿ ಮಹಾದೇವಿ ಕಂಠಿ,ಆOತರಿಕ ಲೆಕ್ಕ ಪರಿಶೋಧಕರಾಗಿ ಡಾ.ಎಸ್.ವಿ.ವಡ್ಡೋಡಗಿ,
ನಾಮನಿರ್ದೇಶಿತ ಸದಸ್ಯರಾಗಿ ಆರ್.ಜಿ.ಧನಶೆಟ್ಟಿ,ಬಿ. ವಾಯ್.ಲಿಂಗದಳ್ಳಿ,ಎ.ಎಚ್.ಬಿರಾದಾರ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ನಿವೃತ್ತ ಶಿಕ್ಷಕ ಬಸವರಾಜ ಕೋರಿ ತಿಳಿಸಿದ್ದಾರೆ.
ನೂತನ ಅಧ್ಯಕ್ಷರು ಪದಾಧಿಕಾರಿಗಳನ್ನು ತಾಲ್ಲೂಕಿನ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಅಭಿನಂದಿಸಿದ್ದಾರೆ,







