ಮುದ್ದೇಬಿಹಾಳ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ : ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರಿಗೆ ಶೂ ಎಸೆತ ಪ್ರಕರಣ, ತಾಲ್ಲೂಕಿನ ಗ್ರಾಮವೊಂದರಲ್ಲಿ ದಲಿತ ಅಪ್ರಾಪ್ತ ಯುವತಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ ಹಾಗೂ ರಾಜ್ಯದ ವಿವಿಧೆಡೆ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅಪಮಾನ ಮಾಡಿದ ಘಟನೆಗಳನ್ನು ಖಂಡಿಸಿ ಶುಕ್ರವಾರ ವಿವಿಧ ದಲಿತಪರ ಸಂಘಟನೆಗಳು ಕರೆ ನೀಡಿದ್ದ ಮುದ್ದೇಬಿಹಾಳ ಬಂದ್‌ಗೆ ನಾಗರಿಕರು ಉತ್ತಮ ಸ್ಪಂದನೆ ನೀಡಿದ್ದು ಬಂದ್ ಸಂಪೂರ್ಣ ಯಶಸ್ವಿಯಾಯಿತು.

ಬೆಳಗ್ಗೆ 6 ಗಂಟೆಯಿAದಲೇ ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಸಂಚಾರ ಸ್ಥಗಿತಗೊಳಿಸಿದ್ದರಿಂದ ಬಸ್ ನಿಲ್ದಾಣದಲ್ಲಿ ಜನರು ಬರಲಿಲ್ಲ.ಬಂದ್ ಕರೆ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶದಿಂದ ನಗರಕ್ಕೆ ಬರುವವರ ಸಂಖ್ಯೆಯೂ ಇಳಿಮುಖವಾಗಿ ಜನಸಂಚಾರ ವಿರಳವಾಗಿತ್ತು. ಸರಕಾರಿ ನೌಕರಿ ಸೇವೆಗೆ ತೆರಳಲು ಬಸ್ ಇಲ್ಲದೇ ಪರದಾಡಿ ಖಾಸಗಿ ವಾಹನಗಳನ್ನು ಪಟ್ಟಣದ ಹೊರವಲಯದಲ್ಲಿ ಆಶ್ರಯಿಸಿದರು.

ಬಂದ್ ಯಶಸ್ವಿಗೆ ಸಹಕರಿಸುವಂತೆ ನಾಗರಿಕರಲ್ಲಿ,ವ್ಯಾಪಾರಸ್ಥರಲ್ಲಿ,ವಿವಿಧ ಖಾಸಗಿ ಶಾಲೆಗಳು,ಹೊಟೇಲ್,ಬಟ್ಟೆ,ಬಜಾರ್ ಅಸೋಶಿಯೇಷನ್,ಏಪಿಎಂಸಿ,ಸರಾಫ್ ವರ್ತಕರು,ಕಿರಾಣಿ ವರ್ತಕರು,ಬೀದಿ ಬದಿ ವ್ಯಾಪಾರಸ್ಥರು ಸೇರಿದಂತೆ ಪಟ್ಟಣದ ನಾಗರಿಕರಿಗೆ ದಲಿತಪರ,ಪ್ರಗತಿಪರ ಸಂಘಟನೆಯ ಒಕ್ಕೂಟದವರು ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಯಾರೊಬ್ಬರೂ ಅಂಗಡಿಗಳನ್ನು ತೆರೆಯಲಿಲ್ಲ.

ಅಗತ್ಯ ವಸ್ತುಗಳಾದ ಔಷಧಿ,ಹಾಲು,ದಿನಪತ್ರಿಕೆ ಹಾಗೂ ಆಸ್ಪತ್ರೆಗಳ ಸೇವೆ ಅಬಾಧಿತವಾಗಿತ್ತು.ಅಟೋ ಸಂಚಾರ ತುರ್ತು ಪರಿಸ್ಥಿತಿಗೆ ಸೇವೆ ನೀಡಿದ್ದು ಕಂಡು ಬಂದಿತು.

ಭಾರಿ ಪೊಲೀಸ್ ಬಂದೋಬಸ್ತ್ : ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ವಹಿಸಿದ್ದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬೆಳಗ್ಗೆ ಸಿಪಿಐ ಮೊಹ್ಮದಫಸಿವುದ್ದೀನ,ಪಿಎಸ್‌ಐ ಸಂಜಯ ತಿಪರೆಡ್ಡಿ ಸಿಬ್ಬಂದಿಗೆ ಪೆಟ್ರೋಲಿಂಗ್ ನಡೆಸಿದರು.ಪಟ್ಟಣದ ವ್ಯಾಪ್ತಿಯಲ್ಲಿ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ,ಮಾನವ ಸರಪಳಿ ನಿರ್ಮಾಣದ ಹಿನ್ನೆಲೆಯಲ್ಲಿ ಬ¸ Àವೇಶ್ವರ ಸಂಪರ್ಕಿಸುವ ನಾಲ್ಕು ರಸ್ತೆಗಳನ್ನು ಬ್ಯಾರಿಕೇಡ್ ಹಾಕಿ ಪೊಲೀಸರು ಬಂದ್ ಮಾಡಿಸಿದ್ದರು.ಇದರಿಂದ ಬೈಕ್,ಕಾರು,ಜೀಪು,ಅಂಬ್ಯುಲೆನ್ಸ್ಗಳAತಹ ತುರ್ತು ಸೇವೆಗಳನ್ನು ನೀಡಲು ತೊಂದರೆಯಾಗಿತು.ಚಹಾ, ಪಾನ್ ಅಂಗಡಿ ಬಂದ್ ಮಾಡಿದ್ದರು.

ಸಂವಿಧಾನಕ್ಕೆ ಅವಮಾನವಾದರೆ ಸಹಿಸುವುದಿಲ್ಲ-ನಡಹಳ್ಳಿ
ಮುದ್ದೇಬಿಹಾಳ : ಸುಪ್ರೀಂಕೋರ್ಟ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದ ವಕೀಲರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ ಆಗ್ರಹಿಸಿದರು.

ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಶುಕ್ರವಾರ ವಿವಿಧ ದಲಿತಪರ,ಪ್ರಗತಿಪರ ಒಕ್ಕೂಟದ ನೇತೃತ್ವದಲ್ಲಿ ಕರೆ ನೀಡಿದ್ದ ಮುದ್ದೇಬಿಹಾಳ ಬಂದ್ ಕರೆಯ ಹಿನ್ನೆಲೆಯಲ್ಲಿ ಜಮಾಯಿಸಿದ್ದ ಪ್ರತಿಭಟನಾಕಾರರನ್ನುದ್ದೇಶಿಸಿ ಅವರು ಮಾತನಾಡಿದರು.ಕ್ಷಮೆಗೆ ಅರ್ಹ ಅಲ್ಲದ ಕೆಲಸ ಮಾಡಿರುವ ವಕೀಲನ ರಕ್ಷಣೆ ಮಾಡುತ್ತಿರುವುದು ಯಾವ ಪುರುಷಾರ್ಥಕ್ಕಾಗಿ ಎಂದು ಟೀಕಿಸಿದರು.

ಮಾನವ ಬಂಧುತ್ವ ವೇದಿಕೆ ಸಂಚಾಲಕ ಎಸ್.ಎಂ.ನೆರಬೆAಚಿ,ದಲಿತಪರ ಸಂಘಟನೆ ಹೋರಾಟಗಾರ ಚೆನ್ನಪ್ಪ ವಿಜಯಕರ,ಎನ್.ಎಸ್.ಯೂ.ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಸದ್ದಾಂ ಕುಂಟೋಜಿ, ರೇವಣೆಪ್ಪ ಚಲವಾದಿ ಮತ್ತಿತರರು ಮಾತನಾಡಿ,ತಾಲ್ಲೂಕಿನ ಗ್ರಾಮವೊಂದರಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದಿರುವ ದುಷ್ಕರ್ಮಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು.ಅಮಾನವೀಯವಾದ ಇಂತಹ ಘಟನೆಗಳು ನಡೆಯಬಾರದೆಂದರೆ ಸರಕಾರ ಕಠಿಣ ಶಿಕ್ಷೆ ತ್ವರಿತವಾಗಿ ವಿಧಿಸಬೇಕು.ಸಂವಿಧಾನದವನ್ನು ಅಪಮಾನಿಸುವ ಯಾರೇ ಇದ್ದರೂ ಅವರನ್ನು ಮಟ್ಟ ಹಾಕಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.ಹೋರಾಟದ ನೇತೃತ್ವ ವಹಿಸಿದ್ದ ಮುಖಂಡ ಹರೀಶ ನಾಟೀಕಾರ,ಯುವ ಕಾಂಗ್ರೆಸ್ ಮುಖಂಡ ಮಹ್ಮದರಫೀಕ ಶಿರೋಳ,ವಾಲ್ಮೀಕಿ ಸಮಾಜದ ಅಧ್ಯಕ್ಷ ಬಲಭೀಮ ನಾಯ್ಕಮಕ್ಕಳ ಮತ್ತಿತರರು ಮಾತನಾಡಿದರು.
ಮುಖಂಡರಾದ ಪರಶುರಾಮ ಮುರಾಳ,ಪ್ರಕಾಶ ಚಲವಾದಿ ಸರೂರ,ಆನಂದ ದೇವೂರ, ಆನಂದ ಮುದೂರ,ಮಲ್ಲು ತಳವಾರ, ಸಿದ್ದಪ್ಪ ಚಲವಾದಿ,ಮಂಜುನಾಥ ಕಟ್ಟಿಮನಿ,ಪ್ರಶಾಂತ ಕಾಳೆ,ಯಮನಪ್ಪ ಚಲವಾದಿ ಮೊದಲಾದವರು ಪಾಲ್ಗೊಂಡಿದ್ದರು.
ಪಟ್ಟಣದ ಬಸವೇಶ್ವರ ವೃತ್ತದಿಂದ ಅಂಬೇಡ್ಕರ್ ವೃತ್ತದವರೆಗೆ ಹೋರಾಟಗಾರರು ರ‍್ಯಾಲಿ ನಡೆಸಿದರು.ಅಂಬೇಡ್ಕರ್ ವೃತ್ತದಲ್ಲಿ ತಹಶೀಲ್ದಾರ್ ಕೀರ್ತಿ ಚಾಲಕ್ ಪ್ರತಿಭಟನಾಕಾರರಿಂದ ಮನವಿ ಪತ್ರ ಸ್ವೀಕರಿಸಿದರು.

ಅತ್ಯಾಚಾರ ಎಸಗಿ,ಕೊಲೆಯಾಗಿರುವ ಅಪ್ರಾಪ್ತೆ ಕುಟುಂಬಕ್ಕೆ ಎರಡು ಎಕರೆ ಜಮೀನು, 50 ಲಕ್ಷ ಪರಿಹಾರ,ಕುಟುಂಬದ ಸದಸ್ಯರಿಗೆ ಸರಕಾರಿ ನೌಕರಿ ಒದಗಿಸಬೇಕು.ಆರೋಪಿತರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು.ಸಿಜೆಐ ಮೇಲೆ ಶೂ ಎಸೆದ ವಕೀಲ ರಾಕೇಶ ಕಿಶೋರ ಅವರನ್ನು ದೇಶದಿಂದ ಗಡಿಪಾರು ಮಾಡಬೇಕು. ಚಾಮರಾಜನಗರ ಜಿಲ್ಲೆ ಜ್ಯೋತಿಗೌಡನಪುರ ಗ್ರಾಮದಲ್ಲಿ ಬುದ್ದ,ಅಂಬೇಡ್ಕರ್ ಪ್ರತಿಮೆ ಧ್ವಂಸಗೊಳಿಸಿರುವ ದುಷ್ಕರ್ಮಿಗಳನ್ನು ರಾಜ್ಯದಿಂದ ಗಡಿಪಾರು ಮಾಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಲಾಯಿತು.

Latest News

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು ಈವರೆಗೆ ಶೇ.82.47ರಷ್ಟು ಗಣತಿ ನಮೂನೆಗಳನ್ನು ಗಣಕೀಕರಣಗೊಳಿಸಲಾಗಿದೆ ಎಂದು ಮತದಾರರ ನೋಂದಣಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಿದ ಮೇಲ್ವಿಚಾರಕರು,ಬಿಎಲ್‌ಓಗಳ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಗೈರು ಹಾಜರಿ 1483, ಶಾಶ್ವತವಾಗಿ ಸ್ಥಳಾಂತರಗೊAಡವರು 16331,8505 ಮತದಾರರು ಮರಣ ಹೊಂದಿದ್ದಾರೆ ಎಂದು ತಿಳಿಸಿದರು. ಇದೇ ವೇಳೆ ಬಿಎಲ್‌ಓಗಳ ಸಹಕಾರದಿಂದ ಉತ್ತಮ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ ವಿದ್ಯಾಕಣ್ವವಿರಾಜ್ ತೀರ್ಥ ಶ್ರೀಗಳು ತಮ್ಮ ಏಳನೇ ಚಾತುರ್ಮಾಸ್ಯವನ್ನು ಆ.8 ರಿಂದ ಸೆ.26ರವರೆಗೆ ಕೈಗೊಳ್ಳಲಿದ್ದಾರೆ ಎಂದು ಮಹೋತ್ಸವ ಸಮೀತಿ ಅಧ್ಯಕ್ಷ ಅನೀಲಕುಮಾರ ಕುಲಕರ್ಣಿ ಹೇಳಿದರು. ಪಟ್ಟಣದ ಪಟ್ಟಣದ ಶ್ರೀ ಶಿವ ಚಿದಂಬರ ದೇವಸ್ಥಾನದಲ್ಲಿ ಮಂಗಳವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಸಪ್ತಮ ಚಾತುರ್ಮಾಸ್ಯದ ಕುರಿತು ಅವರು ವಿವರಿಸಿದರು.ಮುದ್ದೇಬಿಹಾಳ ಪಟ್ಟಣದಲ್ಲಿ ಸುಮಾರು 58 ವರ್ಷಗಳ ಹಿಂದೆ ಹುಣಶಿಹೊಳೆ ಕಣ್ವಮಠದ ವಿದ್ಯಾತಪೋನಿಧಿ