ಮುದ್ದೇಬಿಹಾಳ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ : ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರಿಗೆ ಶೂ ಎಸೆತ ಪ್ರಕರಣ, ತಾಲ್ಲೂಕಿನ ಗ್ರಾಮವೊಂದರಲ್ಲಿ ದಲಿತ ಅಪ್ರಾಪ್ತ ಯುವತಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ ಹಾಗೂ ರಾಜ್ಯದ ವಿವಿಧೆಡೆ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅಪಮಾನ ಮಾಡಿದ ಘಟನೆಗಳನ್ನು ಖಂಡಿಸಿ ಶುಕ್ರವಾರ ವಿವಿಧ ದಲಿತಪರ ಸಂಘಟನೆಗಳು ಕರೆ ನೀಡಿದ್ದ ಮುದ್ದೇಬಿಹಾಳ ಬಂದ್‌ಗೆ ನಾಗರಿಕರು ಉತ್ತಮ ಸ್ಪಂದನೆ ನೀಡಿದ್ದು ಬಂದ್ ಸಂಪೂರ್ಣ ಯಶಸ್ವಿಯಾಯಿತು.

ಬೆಳಗ್ಗೆ 6 ಗಂಟೆಯಿAದಲೇ ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಸಂಚಾರ ಸ್ಥಗಿತಗೊಳಿಸಿದ್ದರಿಂದ ಬಸ್ ನಿಲ್ದಾಣದಲ್ಲಿ ಜನರು ಬರಲಿಲ್ಲ.ಬಂದ್ ಕರೆ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶದಿಂದ ನಗರಕ್ಕೆ ಬರುವವರ ಸಂಖ್ಯೆಯೂ ಇಳಿಮುಖವಾಗಿ ಜನಸಂಚಾರ ವಿರಳವಾಗಿತ್ತು. ಸರಕಾರಿ ನೌಕರಿ ಸೇವೆಗೆ ತೆರಳಲು ಬಸ್ ಇಲ್ಲದೇ ಪರದಾಡಿ ಖಾಸಗಿ ವಾಹನಗಳನ್ನು ಪಟ್ಟಣದ ಹೊರವಲಯದಲ್ಲಿ ಆಶ್ರಯಿಸಿದರು.

ಬಂದ್ ಯಶಸ್ವಿಗೆ ಸಹಕರಿಸುವಂತೆ ನಾಗರಿಕರಲ್ಲಿ,ವ್ಯಾಪಾರಸ್ಥರಲ್ಲಿ,ವಿವಿಧ ಖಾಸಗಿ ಶಾಲೆಗಳು,ಹೊಟೇಲ್,ಬಟ್ಟೆ,ಬಜಾರ್ ಅಸೋಶಿಯೇಷನ್,ಏಪಿಎಂಸಿ,ಸರಾಫ್ ವರ್ತಕರು,ಕಿರಾಣಿ ವರ್ತಕರು,ಬೀದಿ ಬದಿ ವ್ಯಾಪಾರಸ್ಥರು ಸೇರಿದಂತೆ ಪಟ್ಟಣದ ನಾಗರಿಕರಿಗೆ ದಲಿತಪರ,ಪ್ರಗತಿಪರ ಸಂಘಟನೆಯ ಒಕ್ಕೂಟದವರು ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಯಾರೊಬ್ಬರೂ ಅಂಗಡಿಗಳನ್ನು ತೆರೆಯಲಿಲ್ಲ.

ಅಗತ್ಯ ವಸ್ತುಗಳಾದ ಔಷಧಿ,ಹಾಲು,ದಿನಪತ್ರಿಕೆ ಹಾಗೂ ಆಸ್ಪತ್ರೆಗಳ ಸೇವೆ ಅಬಾಧಿತವಾಗಿತ್ತು.ಅಟೋ ಸಂಚಾರ ತುರ್ತು ಪರಿಸ್ಥಿತಿಗೆ ಸೇವೆ ನೀಡಿದ್ದು ಕಂಡು ಬಂದಿತು.

ಭಾರಿ ಪೊಲೀಸ್ ಬಂದೋಬಸ್ತ್ : ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ವಹಿಸಿದ್ದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬೆಳಗ್ಗೆ ಸಿಪಿಐ ಮೊಹ್ಮದಫಸಿವುದ್ದೀನ,ಪಿಎಸ್‌ಐ ಸಂಜಯ ತಿಪರೆಡ್ಡಿ ಸಿಬ್ಬಂದಿಗೆ ಪೆಟ್ರೋಲಿಂಗ್ ನಡೆಸಿದರು.ಪಟ್ಟಣದ ವ್ಯಾಪ್ತಿಯಲ್ಲಿ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ,ಮಾನವ ಸರಪಳಿ ನಿರ್ಮಾಣದ ಹಿನ್ನೆಲೆಯಲ್ಲಿ ಬ¸ Àವೇಶ್ವರ ಸಂಪರ್ಕಿಸುವ ನಾಲ್ಕು ರಸ್ತೆಗಳನ್ನು ಬ್ಯಾರಿಕೇಡ್ ಹಾಕಿ ಪೊಲೀಸರು ಬಂದ್ ಮಾಡಿಸಿದ್ದರು.ಇದರಿಂದ ಬೈಕ್,ಕಾರು,ಜೀಪು,ಅಂಬ್ಯುಲೆನ್ಸ್ಗಳAತಹ ತುರ್ತು ಸೇವೆಗಳನ್ನು ನೀಡಲು ತೊಂದರೆಯಾಗಿತು.ಚಹಾ, ಪಾನ್ ಅಂಗಡಿ ಬಂದ್ ಮಾಡಿದ್ದರು.

ಸಂವಿಧಾನಕ್ಕೆ ಅವಮಾನವಾದರೆ ಸಹಿಸುವುದಿಲ್ಲ-ನಡಹಳ್ಳಿ
ಮುದ್ದೇಬಿಹಾಳ : ಸುಪ್ರೀಂಕೋರ್ಟ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದ ವಕೀಲರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ ಆಗ್ರಹಿಸಿದರು.

ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಶುಕ್ರವಾರ ವಿವಿಧ ದಲಿತಪರ,ಪ್ರಗತಿಪರ ಒಕ್ಕೂಟದ ನೇತೃತ್ವದಲ್ಲಿ ಕರೆ ನೀಡಿದ್ದ ಮುದ್ದೇಬಿಹಾಳ ಬಂದ್ ಕರೆಯ ಹಿನ್ನೆಲೆಯಲ್ಲಿ ಜಮಾಯಿಸಿದ್ದ ಪ್ರತಿಭಟನಾಕಾರರನ್ನುದ್ದೇಶಿಸಿ ಅವರು ಮಾತನಾಡಿದರು.ಕ್ಷಮೆಗೆ ಅರ್ಹ ಅಲ್ಲದ ಕೆಲಸ ಮಾಡಿರುವ ವಕೀಲನ ರಕ್ಷಣೆ ಮಾಡುತ್ತಿರುವುದು ಯಾವ ಪುರುಷಾರ್ಥಕ್ಕಾಗಿ ಎಂದು ಟೀಕಿಸಿದರು.

ಮಾನವ ಬಂಧುತ್ವ ವೇದಿಕೆ ಸಂಚಾಲಕ ಎಸ್.ಎಂ.ನೆರಬೆAಚಿ,ದಲಿತಪರ ಸಂಘಟನೆ ಹೋರಾಟಗಾರ ಚೆನ್ನಪ್ಪ ವಿಜಯಕರ,ಎನ್.ಎಸ್.ಯೂ.ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಸದ್ದಾಂ ಕುಂಟೋಜಿ, ರೇವಣೆಪ್ಪ ಚಲವಾದಿ ಮತ್ತಿತರರು ಮಾತನಾಡಿ,ತಾಲ್ಲೂಕಿನ ಗ್ರಾಮವೊಂದರಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದಿರುವ ದುಷ್ಕರ್ಮಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು.ಅಮಾನವೀಯವಾದ ಇಂತಹ ಘಟನೆಗಳು ನಡೆಯಬಾರದೆಂದರೆ ಸರಕಾರ ಕಠಿಣ ಶಿಕ್ಷೆ ತ್ವರಿತವಾಗಿ ವಿಧಿಸಬೇಕು.ಸಂವಿಧಾನದವನ್ನು ಅಪಮಾನಿಸುವ ಯಾರೇ ಇದ್ದರೂ ಅವರನ್ನು ಮಟ್ಟ ಹಾಕಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.ಹೋರಾಟದ ನೇತೃತ್ವ ವಹಿಸಿದ್ದ ಮುಖಂಡ ಹರೀಶ ನಾಟೀಕಾರ,ಯುವ ಕಾಂಗ್ರೆಸ್ ಮುಖಂಡ ಮಹ್ಮದರಫೀಕ ಶಿರೋಳ,ವಾಲ್ಮೀಕಿ ಸಮಾಜದ ಅಧ್ಯಕ್ಷ ಬಲಭೀಮ ನಾಯ್ಕಮಕ್ಕಳ ಮತ್ತಿತರರು ಮಾತನಾಡಿದರು.
ಮುಖಂಡರಾದ ಪರಶುರಾಮ ಮುರಾಳ,ಪ್ರಕಾಶ ಚಲವಾದಿ ಸರೂರ,ಆನಂದ ದೇವೂರ, ಆನಂದ ಮುದೂರ,ಮಲ್ಲು ತಳವಾರ, ಸಿದ್ದಪ್ಪ ಚಲವಾದಿ,ಮಂಜುನಾಥ ಕಟ್ಟಿಮನಿ,ಪ್ರಶಾಂತ ಕಾಳೆ,ಯಮನಪ್ಪ ಚಲವಾದಿ ಮೊದಲಾದವರು ಪಾಲ್ಗೊಂಡಿದ್ದರು.
ಪಟ್ಟಣದ ಬಸವೇಶ್ವರ ವೃತ್ತದಿಂದ ಅಂಬೇಡ್ಕರ್ ವೃತ್ತದವರೆಗೆ ಹೋರಾಟಗಾರರು ರ‍್ಯಾಲಿ ನಡೆಸಿದರು.ಅಂಬೇಡ್ಕರ್ ವೃತ್ತದಲ್ಲಿ ತಹಶೀಲ್ದಾರ್ ಕೀರ್ತಿ ಚಾಲಕ್ ಪ್ರತಿಭಟನಾಕಾರರಿಂದ ಮನವಿ ಪತ್ರ ಸ್ವೀಕರಿಸಿದರು.

ಅತ್ಯಾಚಾರ ಎಸಗಿ,ಕೊಲೆಯಾಗಿರುವ ಅಪ್ರಾಪ್ತೆ ಕುಟುಂಬಕ್ಕೆ ಎರಡು ಎಕರೆ ಜಮೀನು, 50 ಲಕ್ಷ ಪರಿಹಾರ,ಕುಟುಂಬದ ಸದಸ್ಯರಿಗೆ ಸರಕಾರಿ ನೌಕರಿ ಒದಗಿಸಬೇಕು.ಆರೋಪಿತರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು.ಸಿಜೆಐ ಮೇಲೆ ಶೂ ಎಸೆದ ವಕೀಲ ರಾಕೇಶ ಕಿಶೋರ ಅವರನ್ನು ದೇಶದಿಂದ ಗಡಿಪಾರು ಮಾಡಬೇಕು. ಚಾಮರಾಜನಗರ ಜಿಲ್ಲೆ ಜ್ಯೋತಿಗೌಡನಪುರ ಗ್ರಾಮದಲ್ಲಿ ಬುದ್ದ,ಅಂಬೇಡ್ಕರ್ ಪ್ರತಿಮೆ ಧ್ವಂಸಗೊಳಿಸಿರುವ ದುಷ್ಕರ್ಮಿಗಳನ್ನು ರಾಜ್ಯದಿಂದ ಗಡಿಪಾರು ಮಾಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಲಾಯಿತು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ