ಮುದ್ದೇಬಿಹಾಳ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ : ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರಿಗೆ ಶೂ ಎಸೆತ ಪ್ರಕರಣ, ತಾಲ್ಲೂಕಿನ ಗ್ರಾಮವೊಂದರಲ್ಲಿ ದಲಿತ ಅಪ್ರಾಪ್ತ ಯುವತಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ ಹಾಗೂ ರಾಜ್ಯದ ವಿವಿಧೆಡೆ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅಪಮಾನ ಮಾಡಿದ ಘಟನೆಗಳನ್ನು ಖಂಡಿಸಿ ಶುಕ್ರವಾರ ವಿವಿಧ ದಲಿತಪರ ಸಂಘಟನೆಗಳು ಕರೆ ನೀಡಿದ್ದ ಮುದ್ದೇಬಿಹಾಳ ಬಂದ್‌ಗೆ ನಾಗರಿಕರು ಉತ್ತಮ ಸ್ಪಂದನೆ ನೀಡಿದ್ದು ಬಂದ್ ಸಂಪೂರ್ಣ ಯಶಸ್ವಿಯಾಯಿತು.

ಬೆಳಗ್ಗೆ 6 ಗಂಟೆಯಿAದಲೇ ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಸಂಚಾರ ಸ್ಥಗಿತಗೊಳಿಸಿದ್ದರಿಂದ ಬಸ್ ನಿಲ್ದಾಣದಲ್ಲಿ ಜನರು ಬರಲಿಲ್ಲ.ಬಂದ್ ಕರೆ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶದಿಂದ ನಗರಕ್ಕೆ ಬರುವವರ ಸಂಖ್ಯೆಯೂ ಇಳಿಮುಖವಾಗಿ ಜನಸಂಚಾರ ವಿರಳವಾಗಿತ್ತು. ಸರಕಾರಿ ನೌಕರಿ ಸೇವೆಗೆ ತೆರಳಲು ಬಸ್ ಇಲ್ಲದೇ ಪರದಾಡಿ ಖಾಸಗಿ ವಾಹನಗಳನ್ನು ಪಟ್ಟಣದ ಹೊರವಲಯದಲ್ಲಿ ಆಶ್ರಯಿಸಿದರು.

ಬಂದ್ ಯಶಸ್ವಿಗೆ ಸಹಕರಿಸುವಂತೆ ನಾಗರಿಕರಲ್ಲಿ,ವ್ಯಾಪಾರಸ್ಥರಲ್ಲಿ,ವಿವಿಧ ಖಾಸಗಿ ಶಾಲೆಗಳು,ಹೊಟೇಲ್,ಬಟ್ಟೆ,ಬಜಾರ್ ಅಸೋಶಿಯೇಷನ್,ಏಪಿಎಂಸಿ,ಸರಾಫ್ ವರ್ತಕರು,ಕಿರಾಣಿ ವರ್ತಕರು,ಬೀದಿ ಬದಿ ವ್ಯಾಪಾರಸ್ಥರು ಸೇರಿದಂತೆ ಪಟ್ಟಣದ ನಾಗರಿಕರಿಗೆ ದಲಿತಪರ,ಪ್ರಗತಿಪರ ಸಂಘಟನೆಯ ಒಕ್ಕೂಟದವರು ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಯಾರೊಬ್ಬರೂ ಅಂಗಡಿಗಳನ್ನು ತೆರೆಯಲಿಲ್ಲ.

ಅಗತ್ಯ ವಸ್ತುಗಳಾದ ಔಷಧಿ,ಹಾಲು,ದಿನಪತ್ರಿಕೆ ಹಾಗೂ ಆಸ್ಪತ್ರೆಗಳ ಸೇವೆ ಅಬಾಧಿತವಾಗಿತ್ತು.ಅಟೋ ಸಂಚಾರ ತುರ್ತು ಪರಿಸ್ಥಿತಿಗೆ ಸೇವೆ ನೀಡಿದ್ದು ಕಂಡು ಬಂದಿತು.

ಭಾರಿ ಪೊಲೀಸ್ ಬಂದೋಬಸ್ತ್ : ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ವಹಿಸಿದ್ದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬೆಳಗ್ಗೆ ಸಿಪಿಐ ಮೊಹ್ಮದಫಸಿವುದ್ದೀನ,ಪಿಎಸ್‌ಐ ಸಂಜಯ ತಿಪರೆಡ್ಡಿ ಸಿಬ್ಬಂದಿಗೆ ಪೆಟ್ರೋಲಿಂಗ್ ನಡೆಸಿದರು.ಪಟ್ಟಣದ ವ್ಯಾಪ್ತಿಯಲ್ಲಿ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ,ಮಾನವ ಸರಪಳಿ ನಿರ್ಮಾಣದ ಹಿನ್ನೆಲೆಯಲ್ಲಿ ಬ¸ Àವೇಶ್ವರ ಸಂಪರ್ಕಿಸುವ ನಾಲ್ಕು ರಸ್ತೆಗಳನ್ನು ಬ್ಯಾರಿಕೇಡ್ ಹಾಕಿ ಪೊಲೀಸರು ಬಂದ್ ಮಾಡಿಸಿದ್ದರು.ಇದರಿಂದ ಬೈಕ್,ಕಾರು,ಜೀಪು,ಅಂಬ್ಯುಲೆನ್ಸ್ಗಳAತಹ ತುರ್ತು ಸೇವೆಗಳನ್ನು ನೀಡಲು ತೊಂದರೆಯಾಗಿತು.ಚಹಾ, ಪಾನ್ ಅಂಗಡಿ ಬಂದ್ ಮಾಡಿದ್ದರು.

ಸಂವಿಧಾನಕ್ಕೆ ಅವಮಾನವಾದರೆ ಸಹಿಸುವುದಿಲ್ಲ-ನಡಹಳ್ಳಿ
ಮುದ್ದೇಬಿಹಾಳ : ಸುಪ್ರೀಂಕೋರ್ಟ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದ ವಕೀಲರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ ಆಗ್ರಹಿಸಿದರು.

ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಶುಕ್ರವಾರ ವಿವಿಧ ದಲಿತಪರ,ಪ್ರಗತಿಪರ ಒಕ್ಕೂಟದ ನೇತೃತ್ವದಲ್ಲಿ ಕರೆ ನೀಡಿದ್ದ ಮುದ್ದೇಬಿಹಾಳ ಬಂದ್ ಕರೆಯ ಹಿನ್ನೆಲೆಯಲ್ಲಿ ಜಮಾಯಿಸಿದ್ದ ಪ್ರತಿಭಟನಾಕಾರರನ್ನುದ್ದೇಶಿಸಿ ಅವರು ಮಾತನಾಡಿದರು.ಕ್ಷಮೆಗೆ ಅರ್ಹ ಅಲ್ಲದ ಕೆಲಸ ಮಾಡಿರುವ ವಕೀಲನ ರಕ್ಷಣೆ ಮಾಡುತ್ತಿರುವುದು ಯಾವ ಪುರುಷಾರ್ಥಕ್ಕಾಗಿ ಎಂದು ಟೀಕಿಸಿದರು.

ಮಾನವ ಬಂಧುತ್ವ ವೇದಿಕೆ ಸಂಚಾಲಕ ಎಸ್.ಎಂ.ನೆರಬೆAಚಿ,ದಲಿತಪರ ಸಂಘಟನೆ ಹೋರಾಟಗಾರ ಚೆನ್ನಪ್ಪ ವಿಜಯಕರ,ಎನ್.ಎಸ್.ಯೂ.ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಸದ್ದಾಂ ಕುಂಟೋಜಿ, ರೇವಣೆಪ್ಪ ಚಲವಾದಿ ಮತ್ತಿತರರು ಮಾತನಾಡಿ,ತಾಲ್ಲೂಕಿನ ಗ್ರಾಮವೊಂದರಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದಿರುವ ದುಷ್ಕರ್ಮಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು.ಅಮಾನವೀಯವಾದ ಇಂತಹ ಘಟನೆಗಳು ನಡೆಯಬಾರದೆಂದರೆ ಸರಕಾರ ಕಠಿಣ ಶಿಕ್ಷೆ ತ್ವರಿತವಾಗಿ ವಿಧಿಸಬೇಕು.ಸಂವಿಧಾನದವನ್ನು ಅಪಮಾನಿಸುವ ಯಾರೇ ಇದ್ದರೂ ಅವರನ್ನು ಮಟ್ಟ ಹಾಕಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.ಹೋರಾಟದ ನೇತೃತ್ವ ವಹಿಸಿದ್ದ ಮುಖಂಡ ಹರೀಶ ನಾಟೀಕಾರ,ಯುವ ಕಾಂಗ್ರೆಸ್ ಮುಖಂಡ ಮಹ್ಮದರಫೀಕ ಶಿರೋಳ,ವಾಲ್ಮೀಕಿ ಸಮಾಜದ ಅಧ್ಯಕ್ಷ ಬಲಭೀಮ ನಾಯ್ಕಮಕ್ಕಳ ಮತ್ತಿತರರು ಮಾತನಾಡಿದರು.
ಮುಖಂಡರಾದ ಪರಶುರಾಮ ಮುರಾಳ,ಪ್ರಕಾಶ ಚಲವಾದಿ ಸರೂರ,ಆನಂದ ದೇವೂರ, ಆನಂದ ಮುದೂರ,ಮಲ್ಲು ತಳವಾರ, ಸಿದ್ದಪ್ಪ ಚಲವಾದಿ,ಮಂಜುನಾಥ ಕಟ್ಟಿಮನಿ,ಪ್ರಶಾಂತ ಕಾಳೆ,ಯಮನಪ್ಪ ಚಲವಾದಿ ಮೊದಲಾದವರು ಪಾಲ್ಗೊಂಡಿದ್ದರು.
ಪಟ್ಟಣದ ಬಸವೇಶ್ವರ ವೃತ್ತದಿಂದ ಅಂಬೇಡ್ಕರ್ ವೃತ್ತದವರೆಗೆ ಹೋರಾಟಗಾರರು ರ‍್ಯಾಲಿ ನಡೆಸಿದರು.ಅಂಬೇಡ್ಕರ್ ವೃತ್ತದಲ್ಲಿ ತಹಶೀಲ್ದಾರ್ ಕೀರ್ತಿ ಚಾಲಕ್ ಪ್ರತಿಭಟನಾಕಾರರಿಂದ ಮನವಿ ಪತ್ರ ಸ್ವೀಕರಿಸಿದರು.

ಅತ್ಯಾಚಾರ ಎಸಗಿ,ಕೊಲೆಯಾಗಿರುವ ಅಪ್ರಾಪ್ತೆ ಕುಟುಂಬಕ್ಕೆ ಎರಡು ಎಕರೆ ಜಮೀನು, 50 ಲಕ್ಷ ಪರಿಹಾರ,ಕುಟುಂಬದ ಸದಸ್ಯರಿಗೆ ಸರಕಾರಿ ನೌಕರಿ ಒದಗಿಸಬೇಕು.ಆರೋಪಿತರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು.ಸಿಜೆಐ ಮೇಲೆ ಶೂ ಎಸೆದ ವಕೀಲ ರಾಕೇಶ ಕಿಶೋರ ಅವರನ್ನು ದೇಶದಿಂದ ಗಡಿಪಾರು ಮಾಡಬೇಕು. ಚಾಮರಾಜನಗರ ಜಿಲ್ಲೆ ಜ್ಯೋತಿಗೌಡನಪುರ ಗ್ರಾಮದಲ್ಲಿ ಬುದ್ದ,ಅಂಬೇಡ್ಕರ್ ಪ್ರತಿಮೆ ಧ್ವಂಸಗೊಳಿಸಿರುವ ದುಷ್ಕರ್ಮಿಗಳನ್ನು ರಾಜ್ಯದಿಂದ ಗಡಿಪಾರು ಮಾಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಲಾಯಿತು.

Latest News

ಕಂದಗನೂರ-ಮುದೂರ ರಸ್ತೆ ದುರಸ್ತಿ : ರೈತರ ಹೊಲಗಳ ದರ ದುಪ್ಪಟ್ಟು-ಶಾಸಕ ಸಿ.ಎಸ್.ನಾಡಗೌಡ

ಕಂದಗನೂರ-ಮುದೂರ ರಸ್ತೆ ದುರಸ್ತಿ : ರೈತರ ಹೊಲಗಳ ದರ ದುಪ್ಪಟ್ಟು-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಹಳ್ಳಿಗಳನ್ನು ಸಂಪರ್ಕಿಸುವ ರೈತರ ಹೊಲಗಳಿಗೆ ಹೋಗುವ ರಸ್ತೆಗಳ ಸುಧಾರಣೆಯಿಂದ

ನಾನು  ಕಾಂಗ್ರೆಸ್  ಹೈಕಮಾಂಡ್  ಲಿಸ್ಟ್’ನಲ್ಲಿರುವೆ-C.S.ನಾಡಗೌಡ

ನಾನು  ಕಾಂಗ್ರೆಸ್  ಹೈಕಮಾಂಡ್  ಲಿಸ್ಟ್’ನಲ್ಲಿರುವೆ-C.S.ನಾಡಗೌಡ

ಮುದ್ದೇಬಿಹಾಳ : ‘ಕೆಲವರು ನಾನು ಡಿಕೆಶಿ ಲಿಸ್ಟ್’ನಲ್ಲಿರುವೆ,ಇನ್ನು ಕೆಲವರು ಸಿದ್ಧರಾಮಯ್ಯ ಲಿಸ್ಟ್’ನಲ್ಲಿರುವೆ ಎನ್ನುತ್ತಿದ್ದಾರೆ.ನಾನು ಅವರಿಬ್ಬರ

ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ಸವಾರಿ ಮಾಡುವರು : ಕೆ. ಶಿವಕುಮಾರ್

ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ಸವಾರಿ ಮಾಡುವರು : ಕೆ. ಶಿವಕುಮಾರ್

ಚಾಮರಾಜನಗರ : ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ನಿಮ್ಮಗಳ ಮೇಲೆ ಸವಾರಿ ಮಾಡುವರು ಎಂದು ವಿಧಾನ

ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ಬೀದರ್ ;- ರಾಜ್ಯದಲ್ಲಿ ಸಂಭವಿಸಿರುವ ನೆರೆ, ಬರ, ಪ್ರವಾಹ ಮೊದಲಾದ ಪ್ರಕೃತಿ ವಿಕೋಪಗಳಿಂದ ರೈತರು,

ಗುಳಬಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆ

ಗುಳಬಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆ

ಗುಳಬಾಳ : ಹುಣಸಗಿ ತಾಲ್ಲೂಕಿನ ಗುಳಬಾಳ ಗ್ರಾಮದ ನಿವಾಸಿಯಾದ ಶ್ರೀಮತಿ ಯಂಕಮ್ಮ ಬಮ್ಮನಳ್ಳಿ ಅವರು ಕಲಿತ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆಯಾಗಿ ನೀಡಿದರು. "ನಾನು ಕಲಿತ ಶಾಲೆ ನನ್ನ ಹೆಮ್ಮೆ" ಎಂದು ತಿಳಿದು ಶಾಲೆಯಲ್ಲಿ ನಡೆಯುವ ರಾಷ್ಟ್ರೀಯ ಕಾರ್ಯಕ್ರಮಗಳು ಇನ್ನಿತರೆ ಜಯಂತಿಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅನುಕೂಲವಾಗುವಂತೆ ತಮ್ಮ ವೈಯಕ್ತಿಕ ಹಣದಲ್ಲಿ ಶಾಲೆಗೆ ದೇಣಿಗೆ ನೀಡಿದರು. ಹುಣಸಗಿ ತಾಲೂಕಿನ ಪದವಿದರರೂ ತಮ್ಮ ಊರಿನ ಶಾಲೆಗೆ ದೇಣಿಗೆ ನೀಡಿ ಮಾದರಿಯಾಗಿ

ಬಸರಕೋಡ ಪಿ.ಕೆ.ಪಿ.ಎಸ್ :                                         ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ, ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಅವಿರೋಧ ಆಯ್ಕೆ

ಬಸರಕೋಡ ಪಿ.ಕೆ.ಪಿ.ಎಸ್ : ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ, ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ವಿವಿದೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ,ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಎರಡನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಕಚೇರಿಯಲ್ಲಿ ಮಂಗಳವಾರ ನಡೆದ ಅಧ್ಯಕ್ಷ,ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ತಲಾ ಒಂದೊAದೇ ನಾಮಪತ್ರ ಸಲ್ಲಿಕೆ ಆದ ಹಿನ್ನೆಲೆಯಲ್ಲಿ ಎರಡೂ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದೆ ಎಂದು ಚುನಾವಣಾಧಿಕಾರಿ, ಸಹಕಾರ ಅಭಿವೃದ್ಧಿ ಅಧಿಕಾರಿ ವಿ.ಎಸ್.ಉತ್ನಾಳ ತಿಳಿಸಿದರು. ಎರಡನೇ ಅವಧಿಗೆ