Muddebihal: Congressmen got municipal council.. Mahbooba Golasangi is the president, Preeti Degina is the vice president.

Muddebihal: ಬಿಜೆಪಿಯವರೇ ಪುರಸಭೆ ಅಧ್ಯಕ್ಷ ಹೇಳಿಕೆ ಟುಸ್ ಬಾಂಬ್-ಸಿ.ಬಿ.ಅಸ್ಕಿ ವ್ಯಂಗ್ಯ

Muddebihal: ಬಿಜೆಪಿಯವರೇ ಪುರಸಭೆ ಅಧ್ಯಕ್ಷ ಹೇಳಿಕೆ ಟುಸ್ ಬಾಂಬ್-ಸಿ.ಬಿ.ಅಸ್ಕಿ ವ್ಯಂಗ್ಯ

ಮುದ್ದೇಬಿಹಾಳ : ಕೆಲವರಿಗೆ ಮಾತನಾಡುವ ಚಟ ಇರುತ್ತದೆ.ಅಂತೆಯೇ ಕೆಲವು ದಿನಗಳ ಹಿಂದೆ ಒಬ್ಬರು ಪತ್ರಿಕಾಗೋಷ್ಠಿ ನಡೆಸಿ (ಎ.ಎಸ್.ಪಾಟೀಲ್ ನಡಹಳ್ಳಿ) ಹಠಾತ್ ಸ್ಪೋಟದಂತೆ ಬಿಜೆಪಿಯವರೇ ಅಧ್ಯಕ್ಷರಾಗುತ್ತಾರೆ ಎಂದು ಹೇಳಿಕೆ ಕೊಟ್ಟಿದ್ದರು. ಆದರೆ ಅದು ಟುಸ್ ಬಾಂಬ್ ಆಗಿದೆ ಎಂದು ಅಸ್ಕಿ ಫೌಂಡೇಶನ್ ಅಧ್ಯಕ್ಷ,ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಪುರಸಭೆಯ ನೂತನ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಉಪಾಧ್ಯಕ್ಷೆ ಪ್ರೀತಿ ದೇಗಿನಾಳ ಅವರನ್ನು ಅಭಿನಂದಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಶಾಸಕರ ಸೂಚನೆಯಂತೆ ಕಾಂಗ್ರೆಸ್ ಸರ್ವ ಸದಸ್ಯರು ಒಮ್ಮತದಿಂದ ಈ ಫಲಿತಾಂಶ ಬಂದಿದೆ. ಕೆಲವು ಜನರಿಗೆ ಮಾತನಾಡುವ ಚಟ ಇರುತ್ತದೆ. ಟುಸ್ ಬಾಂಬ್ ಆಗಿದೆ. ಕಾಂಗ್ರೆಸ್ ಸರ್ಕಾರ ಇದ್ದು ಸಿಎಂ ಸಿದ್ಧರಾಮಯ್ಯನವರು, ನಗರಾಭಿವೃದ್ಧಿ ಸಚಿವರಿಂದ ವಿಶೇಷ ಅನುದಾನ ತಂದು ಪಟ್ಟಣದ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತದೆ ಎಂದರು.

ಎಪಿಎಂಸಿ ಮಾಜಿ ಸದಸ್ಯ ವಾಯ್.ಎಚ್.ವಿಜಯಕರ್, ಪುರಸಭೆ ಮಾಜಿ ಸದಸ್ಯ ಕಾಮರಾಜ ಬಿರಾದಾರ ಮಾತನಾಡಿ, ಹೋರಾಟಗಾರರಿಗೆ ಕಾಂಗ್ರೆಸ್ ಪಕ್ಷದಿಂದ ಆದ್ಯತೆ ನೀಡಲಾಗಿದೆ.ಅಭಿವೃದ್ಧಿ ವಿಷಯವಾಗಿ ಗೊಳಸಂಗಿ, ದೇಗಿನಾಳ ಅವರು ಮುಂಚೂಣಿಯಲ್ಲಿ ನಿಲ್ಲುತ್ತಾರೆ. ಶಾಸಕರು,ಕಾಮರಾಜ ಗೆಳೆಯರ ಬಳಗ,ಅಸ್ಕಿ ಫೌಂಡೇಶನ್ ಪದಾಧಿಕಾರಿಗಳು ಗೊಳಸಂಗಿ ಅವರ ಬೆನ್ನಿಗಿದ್ದಾರೆ ಎಂದರು.

ಇದನ್ನೂ ಓದಿ: ಪರೋಕ್ಷವಾಗಿ ನಡಹಳ್ಳಿಗೆ ನಾಡಗೌಡರ ಪ್ರತ್ಯುತ್ತರ (ವಿಡಿಯೋ ನೋಡಿ)

ಅಸ್ಕಿ ಫೌಂಡೇಶನ್ ಉಪಾಧ್ಯಕ್ಷ ವೀರೇಶಗೌಡ ಅಸ್ಕಿ, ಮುಖಂಡರಾದ ಸದಾಶಿವ ಮಠ, ಸಂಗಪ್ಪ ಮೇಲಿನಮನಿ, ಟಿ.ವಿಜಯಭಾಸ್ಕರ್, ಸೋಮನಗೌಡ ಮೇಟಿ, ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಶೋಭಾ ಶೆಳ್ಳಗಿ, ಮಾಜಿ ಅಧ್ಯಕ್ಷೆ ಪ್ರತಿಭಾ ಅಂಗಡಗೇರಿ,ಅಕ್ಷತಾ ಚಲವಾದಿ ಇದ್ದರು.

Latest News

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಅವೈಜ್ಞಾನಿಕ ಆದಾಯ ಮಿತಿ ರದ್ದುಗೊಳಿಸಲು ವಿಕಲಚೇತನರ ಆಗ್ರಹ

ಅವೈಜ್ಞಾನಿಕ ಆದಾಯ ಮಿತಿ ರದ್ದುಗೊಳಿಸಲು ವಿಕಲಚೇತನರ ಆಗ್ರಹ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಸರಕಾರ ಸಾಮಾಜಿಕ ಭದ್ರತೆ ಯೋಜನೆಗಳ ಅಡಿ ನೀಡಲಾಗುವ ಮಾಶಾಸನಕ್ಕೆ

ಎಂಎಲ್‌ಎ,ಮಂತ್ರಿಗಳ ವೇತನ,ಭತ್ಯೆ ಕಡಿತಗೊಳಿಸಿ-ಎ.ಎಸ್.ಪಾಟೀಲ್ ನಡಹಳ್ಳಿ

ಎಂಎಲ್‌ಎ,ಮಂತ್ರಿಗಳ ವೇತನ,ಭತ್ಯೆ ಕಡಿತಗೊಳಿಸಿ-ಎ.ಎಸ್.ಪಾಟೀಲ್ ನಡಹಳ್ಳಿ

ಮುದ್ದೇಬಿಹಾಳ : ಹಿಂದೆoದೂ ಕಂಡರಿಯದoತ ಭೀಕರ ಬರಗಾಲ ಈ ವರ್ಷ ಬಂದಿದ್ದು ರೈತರ ಖಾತೆಗೆ

ಅಂಜುಮನ್ ಚುನಾವಣೆಯಲ್ಲಿ ಮಹತ್ವದ ಬೆಳವಣಿಗೆ: ಮಕಾನದಾರ,ದಫೇದಾರ,ಸೋಠೆ,ಗೋಲಂದಾಜಗೆ ಹೈಕೋರ್ಟ್ ಬಿಗ್ ರಿಲೀಫ್

ಅಂಜುಮನ್ ಚುನಾವಣೆಯಲ್ಲಿ ಮಹತ್ವದ ಬೆಳವಣಿಗೆ: ಮಕಾನದಾರ,ದಫೇದಾರ,ಸೋಠೆ,ಗೋಲಂದಾಜಗೆ ಹೈಕೋರ್ಟ್ ಬಿಗ್ ರಿಲೀಫ್

ಮುದ್ದೇಬಿಹಾಳ : ಮಹತ್ವದ ಬೆಳವಣಿಗೆಯೊಂದರಲ್ಲಿ ಪಟ್ಟಣದ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯಲ್ಲಿ ತಿರಸ್ಕಾರಗೊಂಡಿದ್ದ ನಾಲ್ವರ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ ಬುಡಕಟ್ಟು ದಿನಾಚರಣೆ ಸಮಾರಂಭ ಆ.8 ರಂದು ಮದ್ಯಾಹ್ನ 12.30ಕ್ಕೆ ಪಟ್ಟಣದ ಎಂಜಿಎoಕೆ ಶಾಲೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಪರಿಷತ್ ರಾಜ್ಯಾಧ್ಯಕ್ಷ ಜಾನಪದ ಎಸ್.ಬಾಲಾಜಿ ಉದ್ಘಾಟಿಸುವರು.ಎಂಜಿಎAಕೆ ಸಂಸ್ಥೆಯ ಅಧ್ಯಕ್ಷ ಮನೋಹರ ಕೋರಿ ಉಪಸ್ಥಿತರಿರುವರು.ಕನ್ನಡ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಬಾಳನಗೌಡ ಪಾಟೀಲ ಅಧ್ಯಕ್ಷತೆ ವಹಿಸುವರು.ಬಾಗಲಕೋಟ ಕಜಾಪ ಜಿಲ್ಲಾಧ್ಯಕ್ಷ ಡಿ.ಎಂ.ಸಾಹುಕಾರ ಪ್ರಾಸ್ತಾವಿಕ ನುಡಿಗಳನ್ನಾಡುವರು. ಕಜಾಪ ಜಿಲ್ಲಾ ಸಂಚಾಲಕ ಪುಂಡಲೀಕ ಮುರಾಳ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ ಭೇದಿಸಿರುವ ವಿಜಯಪುರ ಜಿಲ್ಲೆಯ ಪೊಲೀಸರು ಗುಜರಾತ ಮೂಲದ ಅಂತರಾಜ್ಯ ಮಟ್ಟದ ಮೂವರು ಕಳ್ಳರನ್ನು ಬಂಧಿಸಿ ಅವರಿಂದ ತುಂಡರಿಸಿದ ಬೆಳ್ಳಿ ಹಾಗೂ ಬೆಳ್ಳಿ ತುಣುಕು ಸೇರಿ ಹಲವು ಸಾಮಗ್ರಿ ವಶಕ್ಕೆ ಪಡೆದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಬೆಳಗಾವಿ ಉತ್ತರ ವಲಯದ ಐಜಿಪಿ ಸಂದೀಪ ಪಾಟೀಲ ಅವರು,ಕಳೆದ ಜು. 5 ರಂದು ರಾತ್ರಿ ಬಸರಕೋಡದ ಪವಾಡಬಸವೇಶ್ವರ