Muddebihal: ಕಾಂಗ್ರೆಸ್ಸಿಗರಿಗೇ ಪುರಸಭೆ ಪಟ್ಟ.. ಮಹೆಬೂಬ ಗೊಳಸಂಗಿ ಅಧ್ಯಕ್ಷ, ಪ್ರೀತಿ ದೇಗಿನಾಳ ಉಪಾಧ್ಯಕ್ಷೆ

Muddebihal: ಕಾಂಗ್ರೆಸ್ಸಿಗರಿಗೇ ಪುರಸಭೆ ಪಟ್ಟ.. ಮಹೆಬೂಬ ಗೊಳಸಂಗಿ ಅಧ್ಯಕ್ಷ, ಪ್ರೀತಿ ದೇಗಿನಾಳ ಉಪಾಧ್ಯಕ್ಷೆ

ಮುದ್ದೇಬಿಹಾಳ : ತೀವ್ರ ಪೈಪೋಟಿಯಿಂದ ಕೂಡಿದ್ದ ಇಲ್ಲಿನ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಲ್ಲಿ ಸ್ವಪಕ್ಷೀಯರನ್ನೇ ಗದ್ದುಗೆಗೆ ಕೂಡಿಸುವ ಮೂಲಕ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ವಿರೋಧ ಪಕ್ಷದ ಮುಖಂಡರು ಮುಖಭಂಗ ಅನುಭವಿಸುವಂತೆ ಮಾಡಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಪಟ್ಟಣದ ಪುರಸಭೆಯಲ್ಲಿ ಬುಧವಾರ ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಮಹೆಬೂಬ ಗೊಳಸಂಗಿ, ಕಾಂಗ್ರೆಸ್ ಬೆಂಬಲಿತ ಪಕ್ಷೇತರ ಸದಸ್ಯ ರಿಯಾಜ್ ಢವಳಗಿ,ಬಿಜೆಪಿಯಿಂದ ಬಸವರಾಜ ಮುರಾಳ ನಾಮಪತ್ರ ಸಲ್ಲಿಸಿದ್ದರು.

ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಪ್ರೀತಿ ದೇಗಿನಾಳ, ಭಾರತಿ ಪಾಟೀಲ್ ಹಾಗೂ ಬಿಜೆಪಿಯಿಂದ ಸಹನಾ ಬಡಿಗೇರ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಹಿಂದಕ್ಕೆ ಪಡೆಯುವ ಸಮಯ ಪೂರ್ಣಗೊಂಡಾಗ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ನಾಮಪತ್ರ ಸಲ್ಲಿಸಿದ್ದ ಬಸವರಾಜ ಮುರಾಳ ತಮಗೆ ಸಂಖ್ಯಾ ಬಲ ಇಲ್ಲವೆಂಬುದನ್ನು ಅರಿತು ನಾಮಪತ್ರ ವಾಪಸ್ ಪಡೆದುಕೊಂಡರು. ಉಪಾಧ್ಯಕ್ಷ ಸ್ಥಾನಕ್ಕೆ ಮೂವರು, ಅಧ್ಯಕ್ಷ ಸ್ಥಾನಕ್ಕೆ ಇಬ್ಬರು ಕಣದಲ್ಲಿ ಉಳಿದಿದ್ದರು.

ಚುನಾವಣಾಧಿಕಾರಿಯೂ ಆಗಿರುವ ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಕೈ ಎತ್ತುವ ಮೂಲಕ ಆಯ್ಕೆ ಪ್ರಕ್ರಿಯೆ ನಡೆಸಿದರು.

ಅಧ್ಯಕ್ಷ ಸ್ಥಾನಕ್ಕೆ ಮಹೆಬೂಬ ಗೊಳಸಂಗಿ ಅವರಿಗೆ ಶಾಸಕರ ಮತ ಸೇರಿ ಒಟ್ಟು 16 ಮತಗಳಿಂದ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಬಲರಾಮ ಕಟ್ಟಿಮನಿ ಘೋಷಿಸಿದರು.

ಅಧ್ಯಕ್ಷ ಸ್ಥಾನಕ್ಕೆ ಸ್ವಪಕ್ಷಿಯ ಸದಸ್ಯ ಮಹೆಬೂಬ ಗೊಳಸಂಗಿ ಅವರ ವಿರುದ್ಧ ಕೊನೆಯ ಕ್ಷಣದವರೆಗೂ ತೀವ್ರ ಪೈಪೋಟಿ ಒಡ್ಡಿದ್ದ ಕಾಂಗ್ರೆಸ್ ಬೆಂಬಲಿತ ಪಕ್ಷೇತರ ಸದಸ್ಯ ರಿಯಾಜ್ ಢವಳಗಿ ಸೋಲು ಅನುಭವಿಸಿದರು.

ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಸದಸ್ಯೆ ಪ್ರೀತಿ ದೇಗಿನಾಳ ಪರ ಹಾಜರಿದ್ದ 16 ಸದಸ್ಯರು ಕೈ ಎತ್ತುವ ಮೂಲಕ ಆಯ್ಕೆ ಮಾಡಿದ್ದಾರೆ ಎಂದು ಚುನಾವಣಾಧಿಕಾರಿ ಬಲರಾಮ ಕಟ್ಟಿಮನಿ ತಿಳಿಸಿದರು.

ಗೆಲುವಿನ ನಂತರ ಮಾತನಾಡಿದ ಪುರಸಭೆ ನೂತನ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಉಪಾಧ್ಯಕ್ಷೆ ಪ್ರೀತಿ ದೇಗಿನಾಳ,ಶಾಸಕರ ಆಶೀರ್ವಾದ ಸದಸ್ಯರ ಸಹಕಾರದಿಂದ ನಾವು ಈ ಸ್ಥಾನಕ್ಕೆ ಕೂತಿದ್ದೇವೆ.ಪಟ್ಟಣದ ಜನರ ಬೇಕು ಬೇಡಿಕೆಗಳಿಗೆ ಸ್ಪಂದನೆ ನೀಡುತ್ತೇವೆ. ಪಟ್ಟಣದ ಸಮಸ್ಯೆಗಳಿಗೆ ಧ್ವನಿಯಾಗುತ್ತೇವೆ ಎಂದು ಹೇಳಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಕೆಪಿಸಿಸಿ ಸದಸ್ಯ ಬಾಪುರಾವ ದೇಸಾಯಿ, ಮುಖಂಡರಾದ ಎಂ.ಬಿ.ನಾವದಗಿ,ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ, ಸಂಗನಗೌಡ ಬಿರಾದಾರ, ಕಾಮರಾಜ ಬಿರಾದಾರ,ಸಿಕಂದರ ಜಾನ್ವೇಕರ ಮೊದಲಾದವರು ಇದ್ದರು.

ಇದನ್ನೂ ಓದಿ: Heart attack: ‘ಲೋ ಬಿಪಿ’ಯಿಂದ 8ನೇ ತರಗತಿ ಬಾಲಕನಿಗೆ ಹೃದಯಾಘಾತ, ಸಾವು

ಪಟಾಕಿ ಸಿಡಿಸಿ ಗುಲಾಲು ಎರಚಿ ವಿಜಯೋತ್ಸವ ಆಚರಿಸಲಾಯಿತು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ