Muddebihal: ಕಾಂಗ್ರೆಸ್ಸಿಗರಿಗೇ ಪುರಸಭೆ ಪಟ್ಟ.. ಮಹೆಬೂಬ ಗೊಳಸಂಗಿ ಅಧ್ಯಕ್ಷ, ಪ್ರೀತಿ ದೇಗಿನಾಳ ಉಪಾಧ್ಯಕ್ಷೆ

Muddebihal: ಕಾಂಗ್ರೆಸ್ಸಿಗರಿಗೇ ಪುರಸಭೆ ಪಟ್ಟ.. ಮಹೆಬೂಬ ಗೊಳಸಂಗಿ ಅಧ್ಯಕ್ಷ, ಪ್ರೀತಿ ದೇಗಿನಾಳ ಉಪಾಧ್ಯಕ್ಷೆ

ಮುದ್ದೇಬಿಹಾಳ : ತೀವ್ರ ಪೈಪೋಟಿಯಿಂದ ಕೂಡಿದ್ದ ಇಲ್ಲಿನ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಲ್ಲಿ ಸ್ವಪಕ್ಷೀಯರನ್ನೇ ಗದ್ದುಗೆಗೆ ಕೂಡಿಸುವ ಮೂಲಕ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ವಿರೋಧ ಪಕ್ಷದ ಮುಖಂಡರು ಮುಖಭಂಗ ಅನುಭವಿಸುವಂತೆ ಮಾಡಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಪಟ್ಟಣದ ಪುರಸಭೆಯಲ್ಲಿ ಬುಧವಾರ ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಮಹೆಬೂಬ ಗೊಳಸಂಗಿ, ಕಾಂಗ್ರೆಸ್ ಬೆಂಬಲಿತ ಪಕ್ಷೇತರ ಸದಸ್ಯ ರಿಯಾಜ್ ಢವಳಗಿ,ಬಿಜೆಪಿಯಿಂದ ಬಸವರಾಜ ಮುರಾಳ ನಾಮಪತ್ರ ಸಲ್ಲಿಸಿದ್ದರು.

ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಪ್ರೀತಿ ದೇಗಿನಾಳ, ಭಾರತಿ ಪಾಟೀಲ್ ಹಾಗೂ ಬಿಜೆಪಿಯಿಂದ ಸಹನಾ ಬಡಿಗೇರ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಹಿಂದಕ್ಕೆ ಪಡೆಯುವ ಸಮಯ ಪೂರ್ಣಗೊಂಡಾಗ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ನಾಮಪತ್ರ ಸಲ್ಲಿಸಿದ್ದ ಬಸವರಾಜ ಮುರಾಳ ತಮಗೆ ಸಂಖ್ಯಾ ಬಲ ಇಲ್ಲವೆಂಬುದನ್ನು ಅರಿತು ನಾಮಪತ್ರ ವಾಪಸ್ ಪಡೆದುಕೊಂಡರು. ಉಪಾಧ್ಯಕ್ಷ ಸ್ಥಾನಕ್ಕೆ ಮೂವರು, ಅಧ್ಯಕ್ಷ ಸ್ಥಾನಕ್ಕೆ ಇಬ್ಬರು ಕಣದಲ್ಲಿ ಉಳಿದಿದ್ದರು.

ಚುನಾವಣಾಧಿಕಾರಿಯೂ ಆಗಿರುವ ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಕೈ ಎತ್ತುವ ಮೂಲಕ ಆಯ್ಕೆ ಪ್ರಕ್ರಿಯೆ ನಡೆಸಿದರು.

ಅಧ್ಯಕ್ಷ ಸ್ಥಾನಕ್ಕೆ ಮಹೆಬೂಬ ಗೊಳಸಂಗಿ ಅವರಿಗೆ ಶಾಸಕರ ಮತ ಸೇರಿ ಒಟ್ಟು 16 ಮತಗಳಿಂದ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಬಲರಾಮ ಕಟ್ಟಿಮನಿ ಘೋಷಿಸಿದರು.

ಅಧ್ಯಕ್ಷ ಸ್ಥಾನಕ್ಕೆ ಸ್ವಪಕ್ಷಿಯ ಸದಸ್ಯ ಮಹೆಬೂಬ ಗೊಳಸಂಗಿ ಅವರ ವಿರುದ್ಧ ಕೊನೆಯ ಕ್ಷಣದವರೆಗೂ ತೀವ್ರ ಪೈಪೋಟಿ ಒಡ್ಡಿದ್ದ ಕಾಂಗ್ರೆಸ್ ಬೆಂಬಲಿತ ಪಕ್ಷೇತರ ಸದಸ್ಯ ರಿಯಾಜ್ ಢವಳಗಿ ಸೋಲು ಅನುಭವಿಸಿದರು.

ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಸದಸ್ಯೆ ಪ್ರೀತಿ ದೇಗಿನಾಳ ಪರ ಹಾಜರಿದ್ದ 16 ಸದಸ್ಯರು ಕೈ ಎತ್ತುವ ಮೂಲಕ ಆಯ್ಕೆ ಮಾಡಿದ್ದಾರೆ ಎಂದು ಚುನಾವಣಾಧಿಕಾರಿ ಬಲರಾಮ ಕಟ್ಟಿಮನಿ ತಿಳಿಸಿದರು.

ಗೆಲುವಿನ ನಂತರ ಮಾತನಾಡಿದ ಪುರಸಭೆ ನೂತನ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಉಪಾಧ್ಯಕ್ಷೆ ಪ್ರೀತಿ ದೇಗಿನಾಳ,ಶಾಸಕರ ಆಶೀರ್ವಾದ ಸದಸ್ಯರ ಸಹಕಾರದಿಂದ ನಾವು ಈ ಸ್ಥಾನಕ್ಕೆ ಕೂತಿದ್ದೇವೆ.ಪಟ್ಟಣದ ಜನರ ಬೇಕು ಬೇಡಿಕೆಗಳಿಗೆ ಸ್ಪಂದನೆ ನೀಡುತ್ತೇವೆ. ಪಟ್ಟಣದ ಸಮಸ್ಯೆಗಳಿಗೆ ಧ್ವನಿಯಾಗುತ್ತೇವೆ ಎಂದು ಹೇಳಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಕೆಪಿಸಿಸಿ ಸದಸ್ಯ ಬಾಪುರಾವ ದೇಸಾಯಿ, ಮುಖಂಡರಾದ ಎಂ.ಬಿ.ನಾವದಗಿ,ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ, ಸಂಗನಗೌಡ ಬಿರಾದಾರ, ಕಾಮರಾಜ ಬಿರಾದಾರ,ಸಿಕಂದರ ಜಾನ್ವೇಕರ ಮೊದಲಾದವರು ಇದ್ದರು.

ಇದನ್ನೂ ಓದಿ: Heart attack: ‘ಲೋ ಬಿಪಿ’ಯಿಂದ 8ನೇ ತರಗತಿ ಬಾಲಕನಿಗೆ ಹೃದಯಾಘಾತ, ಸಾವು

ಪಟಾಕಿ ಸಿಡಿಸಿ ಗುಲಾಲು ಎರಚಿ ವಿಜಯೋತ್ಸವ ಆಚರಿಸಲಾಯಿತು.

Latest News

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: ಸರ್ಕಾರದಿಂದ ಆಧಾರ್ ಕಾರ್ಡ್ ಹೊಂದಿದವರಿಗೆ 5 ಹೊಸ ರೂಲ್ಸ್ ಜಾರಿ ಮಾಡಿದೆ. ಈ ಐದೂ ನಿಮಯ ಪಾಲಿಸದಿದ್ದರೆ ದಂಡ ಗ್ಯಾರಂಟಿ! ಆಧಾರ್ ಕಾರ್ಡ್ ಅನ್ನು ಪ್ರತಿಯೊಬ್ಬ ನಾಗರಿಕನ ಅಗತ್ಯ ದಾಖಲೆಯಾಗಿ ಗುರುತಿಸಲಾಗಿದೆ. ಇದು ನಮ್ಮ ಗುರುತಿನ ಕಡ್ಡಾಯ ದಾಖಲೆಯಾಗಿದೆ. ಎಲ್ಲಾ ಸರ್ಕಾರಿ ಯೋಜನೆಗಳು ಮತ್ತು ಹಣಕಾಸು ಸೇವೆಗಳು ನಮ್ಮನ್ನು ತಲುಪಲು ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಅಗತ್ಯವಿರುತ್ತದೆ. Join Our Telegram: https://t.me/dcgkannada

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕಳಪೆ ಫಾರ್ಮ್ ನಿಂದ ನಿವೃತ್ತಿ ಕುರಿತು ಚರ್ಚೆ ಶುರುವಾಗಿದೆ. ಈ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ 23.75 ರ ಕಳಪೆ ಸರಾಸರಿಯೊಂದಿಗೆ 190 ರನ್ ಮಾತ್ರ ಕಲೆಹಾಕಿದ್ದಾರೆ. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಕೊಹ್ಲಿ ನಿವೃತ್ತರಾಗುವುದು ಉತ್ತಮ ಎಂಬ ಕೂಗುಗಳು ಕೇಳಿಬಂದಿದ್ದವು. ಆದರೀಗ ವಿರಾಟ್ ಕೊಹ್ಲಿ ತಾವು ಯಾವಾಗ ನಿವೃತ್ತಿ ಆಗುತ್ತೇನೆ ಎಂಬುದರ