Muddebihal: ಕಾಂಗ್ರೆಸ್ಸಿಗರಿಗೇ ಪುರಸಭೆ ಪಟ್ಟ.. ಮಹೆಬೂಬ ಗೊಳಸಂಗಿ ಅಧ್ಯಕ್ಷ, ಪ್ರೀತಿ ದೇಗಿನಾಳ ಉಪಾಧ್ಯಕ್ಷೆ

Muddebihal: ಕಾಂಗ್ರೆಸ್ಸಿಗರಿಗೇ ಪುರಸಭೆ ಪಟ್ಟ.. ಮಹೆಬೂಬ ಗೊಳಸಂಗಿ ಅಧ್ಯಕ್ಷ, ಪ್ರೀತಿ ದೇಗಿನಾಳ ಉಪಾಧ್ಯಕ್ಷೆ

ಮುದ್ದೇಬಿಹಾಳ : ತೀವ್ರ ಪೈಪೋಟಿಯಿಂದ ಕೂಡಿದ್ದ ಇಲ್ಲಿನ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಲ್ಲಿ ಸ್ವಪಕ್ಷೀಯರನ್ನೇ ಗದ್ದುಗೆಗೆ ಕೂಡಿಸುವ ಮೂಲಕ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ವಿರೋಧ ಪಕ್ಷದ ಮುಖಂಡರು ಮುಖಭಂಗ ಅನುಭವಿಸುವಂತೆ ಮಾಡಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಪಟ್ಟಣದ ಪುರಸಭೆಯಲ್ಲಿ ಬುಧವಾರ ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಮಹೆಬೂಬ ಗೊಳಸಂಗಿ, ಕಾಂಗ್ರೆಸ್ ಬೆಂಬಲಿತ ಪಕ್ಷೇತರ ಸದಸ್ಯ ರಿಯಾಜ್ ಢವಳಗಿ,ಬಿಜೆಪಿಯಿಂದ ಬಸವರಾಜ ಮುರಾಳ ನಾಮಪತ್ರ ಸಲ್ಲಿಸಿದ್ದರು.

ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಪ್ರೀತಿ ದೇಗಿನಾಳ, ಭಾರತಿ ಪಾಟೀಲ್ ಹಾಗೂ ಬಿಜೆಪಿಯಿಂದ ಸಹನಾ ಬಡಿಗೇರ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಹಿಂದಕ್ಕೆ ಪಡೆಯುವ ಸಮಯ ಪೂರ್ಣಗೊಂಡಾಗ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ನಾಮಪತ್ರ ಸಲ್ಲಿಸಿದ್ದ ಬಸವರಾಜ ಮುರಾಳ ತಮಗೆ ಸಂಖ್ಯಾ ಬಲ ಇಲ್ಲವೆಂಬುದನ್ನು ಅರಿತು ನಾಮಪತ್ರ ವಾಪಸ್ ಪಡೆದುಕೊಂಡರು. ಉಪಾಧ್ಯಕ್ಷ ಸ್ಥಾನಕ್ಕೆ ಮೂವರು, ಅಧ್ಯಕ್ಷ ಸ್ಥಾನಕ್ಕೆ ಇಬ್ಬರು ಕಣದಲ್ಲಿ ಉಳಿದಿದ್ದರು.

ಚುನಾವಣಾಧಿಕಾರಿಯೂ ಆಗಿರುವ ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಕೈ ಎತ್ತುವ ಮೂಲಕ ಆಯ್ಕೆ ಪ್ರಕ್ರಿಯೆ ನಡೆಸಿದರು.

ಅಧ್ಯಕ್ಷ ಸ್ಥಾನಕ್ಕೆ ಮಹೆಬೂಬ ಗೊಳಸಂಗಿ ಅವರಿಗೆ ಶಾಸಕರ ಮತ ಸೇರಿ ಒಟ್ಟು 16 ಮತಗಳಿಂದ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಬಲರಾಮ ಕಟ್ಟಿಮನಿ ಘೋಷಿಸಿದರು.

ಅಧ್ಯಕ್ಷ ಸ್ಥಾನಕ್ಕೆ ಸ್ವಪಕ್ಷಿಯ ಸದಸ್ಯ ಮಹೆಬೂಬ ಗೊಳಸಂಗಿ ಅವರ ವಿರುದ್ಧ ಕೊನೆಯ ಕ್ಷಣದವರೆಗೂ ತೀವ್ರ ಪೈಪೋಟಿ ಒಡ್ಡಿದ್ದ ಕಾಂಗ್ರೆಸ್ ಬೆಂಬಲಿತ ಪಕ್ಷೇತರ ಸದಸ್ಯ ರಿಯಾಜ್ ಢವಳಗಿ ಸೋಲು ಅನುಭವಿಸಿದರು.

ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಸದಸ್ಯೆ ಪ್ರೀತಿ ದೇಗಿನಾಳ ಪರ ಹಾಜರಿದ್ದ 16 ಸದಸ್ಯರು ಕೈ ಎತ್ತುವ ಮೂಲಕ ಆಯ್ಕೆ ಮಾಡಿದ್ದಾರೆ ಎಂದು ಚುನಾವಣಾಧಿಕಾರಿ ಬಲರಾಮ ಕಟ್ಟಿಮನಿ ತಿಳಿಸಿದರು.

ಗೆಲುವಿನ ನಂತರ ಮಾತನಾಡಿದ ಪುರಸಭೆ ನೂತನ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಉಪಾಧ್ಯಕ್ಷೆ ಪ್ರೀತಿ ದೇಗಿನಾಳ,ಶಾಸಕರ ಆಶೀರ್ವಾದ ಸದಸ್ಯರ ಸಹಕಾರದಿಂದ ನಾವು ಈ ಸ್ಥಾನಕ್ಕೆ ಕೂತಿದ್ದೇವೆ.ಪಟ್ಟಣದ ಜನರ ಬೇಕು ಬೇಡಿಕೆಗಳಿಗೆ ಸ್ಪಂದನೆ ನೀಡುತ್ತೇವೆ. ಪಟ್ಟಣದ ಸಮಸ್ಯೆಗಳಿಗೆ ಧ್ವನಿಯಾಗುತ್ತೇವೆ ಎಂದು ಹೇಳಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಕೆಪಿಸಿಸಿ ಸದಸ್ಯ ಬಾಪುರಾವ ದೇಸಾಯಿ, ಮುಖಂಡರಾದ ಎಂ.ಬಿ.ನಾವದಗಿ,ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ, ಸಂಗನಗೌಡ ಬಿರಾದಾರ, ಕಾಮರಾಜ ಬಿರಾದಾರ,ಸಿಕಂದರ ಜಾನ್ವೇಕರ ಮೊದಲಾದವರು ಇದ್ದರು.

ಇದನ್ನೂ ಓದಿ: Heart attack: ‘ಲೋ ಬಿಪಿ’ಯಿಂದ 8ನೇ ತರಗತಿ ಬಾಲಕನಿಗೆ ಹೃದಯಾಘಾತ, ಸಾವು

ಪಟಾಕಿ ಸಿಡಿಸಿ ಗುಲಾಲು ಎರಚಿ ವಿಜಯೋತ್ಸವ ಆಚರಿಸಲಾಯಿತು.

Latest News

Free Slots Enjoy 32,178+ Slot Demonstrations Galera Bet app No Install

BlogsWhat are the secret differences when considering totally free ports and

Troll casino Eucasino 50 free spins Seekers Position ️ Play On line Free

ContentCasino Eucasino 50 free spins | Blood Moonlight WildsHigh-Investing SignsFederal CasinoDon’t

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ತಾಳಿಕೋಟಿ : ತಂದೆ ತಾಯಿ ಹುಟ್ಟಿನಿಂದ ನೀಡುವ ಸಂಸ್ಕಾರವು ಮಗುವಿನ ಭವಿಷ್ಯ ನಿರ್ಧರಿಸುತ್ತದೆ. ಈ ಮಣ್ಣಿನ ಸಂಸ್ಕೃತಿಯನ್ನು ಅಳವಡಿಸುವಂತಹ ಕಾರ್ಯ ಮಾಡಿದರೆ ಪ್ರತಿ ಮನೆಯಲ್ಲಿಯೂ ರಾಜ ಮಹಾರಾಜರನ್ನು ಕಾಣಲು ಸಾಧ್ಯವಾಗಲಿದೆ.ಬಿದ್ದಾಗ ಕೈ ಹಿಡಿದೆತ್ತಿಕೊಂಡು ಜೋಪಾನ ಮಾಡುವ ಸಂಸ್ಕಾರವನ್ನು ಮಕ್ಕಳಲ್ಲಿ ಪಾಲಕರು ಬಿತ್ತಬೇಕು ಎಂದು ಕಾರ್ಕಳದ ಖ್ಯಾತ ವಾಗ್ಮಿ ಅಕ್ಷಯಾ ಗೋಖಲೆ ಹೇಳಿದರು. ತಾಳಿಕೋಟಿ ತಾಲ್ಲೂಕಿನ ಮೈಲೇಶ್ವರದಲ್ಲಿ ಶನಿವಾರ ಬ್ರಿಲಿಯಂಟ್ ಕಲಾ ವೈಭವ-2026 ಕಾರ್ಯಕ್ರಮದ ಎರಡನೇ ದಿನದ ಕಾರ್ಯಕ್ರಮದಲ್ಲಿ ಅವರು ವಿಶೇಷ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ