Muddebihal: ಕಾಂಗ್ರೆಸ್ಸಿಗರಿಗೇ ಪುರಸಭೆ ಪಟ್ಟ.. ಮಹೆಬೂಬ ಗೊಳಸಂಗಿ ಅಧ್ಯಕ್ಷ, ಪ್ರೀತಿ ದೇಗಿನಾಳ ಉಪಾಧ್ಯಕ್ಷೆ

Muddebihal: ಕಾಂಗ್ರೆಸ್ಸಿಗರಿಗೇ ಪುರಸಭೆ ಪಟ್ಟ.. ಮಹೆಬೂಬ ಗೊಳಸಂಗಿ ಅಧ್ಯಕ್ಷ, ಪ್ರೀತಿ ದೇಗಿನಾಳ ಉಪಾಧ್ಯಕ್ಷೆ

ಮುದ್ದೇಬಿಹಾಳ : ತೀವ್ರ ಪೈಪೋಟಿಯಿಂದ ಕೂಡಿದ್ದ ಇಲ್ಲಿನ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಲ್ಲಿ ಸ್ವಪಕ್ಷೀಯರನ್ನೇ ಗದ್ದುಗೆಗೆ ಕೂಡಿಸುವ ಮೂಲಕ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ವಿರೋಧ ಪಕ್ಷದ ಮುಖಂಡರು ಮುಖಭಂಗ ಅನುಭವಿಸುವಂತೆ ಮಾಡಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಪಟ್ಟಣದ ಪುರಸಭೆಯಲ್ಲಿ ಬುಧವಾರ ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಮಹೆಬೂಬ ಗೊಳಸಂಗಿ, ಕಾಂಗ್ರೆಸ್ ಬೆಂಬಲಿತ ಪಕ್ಷೇತರ ಸದಸ್ಯ ರಿಯಾಜ್ ಢವಳಗಿ,ಬಿಜೆಪಿಯಿಂದ ಬಸವರಾಜ ಮುರಾಳ ನಾಮಪತ್ರ ಸಲ್ಲಿಸಿದ್ದರು.

ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಪ್ರೀತಿ ದೇಗಿನಾಳ, ಭಾರತಿ ಪಾಟೀಲ್ ಹಾಗೂ ಬಿಜೆಪಿಯಿಂದ ಸಹನಾ ಬಡಿಗೇರ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಹಿಂದಕ್ಕೆ ಪಡೆಯುವ ಸಮಯ ಪೂರ್ಣಗೊಂಡಾಗ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ನಾಮಪತ್ರ ಸಲ್ಲಿಸಿದ್ದ ಬಸವರಾಜ ಮುರಾಳ ತಮಗೆ ಸಂಖ್ಯಾ ಬಲ ಇಲ್ಲವೆಂಬುದನ್ನು ಅರಿತು ನಾಮಪತ್ರ ವಾಪಸ್ ಪಡೆದುಕೊಂಡರು. ಉಪಾಧ್ಯಕ್ಷ ಸ್ಥಾನಕ್ಕೆ ಮೂವರು, ಅಧ್ಯಕ್ಷ ಸ್ಥಾನಕ್ಕೆ ಇಬ್ಬರು ಕಣದಲ್ಲಿ ಉಳಿದಿದ್ದರು.

ಚುನಾವಣಾಧಿಕಾರಿಯೂ ಆಗಿರುವ ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಕೈ ಎತ್ತುವ ಮೂಲಕ ಆಯ್ಕೆ ಪ್ರಕ್ರಿಯೆ ನಡೆಸಿದರು.

ಅಧ್ಯಕ್ಷ ಸ್ಥಾನಕ್ಕೆ ಮಹೆಬೂಬ ಗೊಳಸಂಗಿ ಅವರಿಗೆ ಶಾಸಕರ ಮತ ಸೇರಿ ಒಟ್ಟು 16 ಮತಗಳಿಂದ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಬಲರಾಮ ಕಟ್ಟಿಮನಿ ಘೋಷಿಸಿದರು.

ಅಧ್ಯಕ್ಷ ಸ್ಥಾನಕ್ಕೆ ಸ್ವಪಕ್ಷಿಯ ಸದಸ್ಯ ಮಹೆಬೂಬ ಗೊಳಸಂಗಿ ಅವರ ವಿರುದ್ಧ ಕೊನೆಯ ಕ್ಷಣದವರೆಗೂ ತೀವ್ರ ಪೈಪೋಟಿ ಒಡ್ಡಿದ್ದ ಕಾಂಗ್ರೆಸ್ ಬೆಂಬಲಿತ ಪಕ್ಷೇತರ ಸದಸ್ಯ ರಿಯಾಜ್ ಢವಳಗಿ ಸೋಲು ಅನುಭವಿಸಿದರು.

ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಸದಸ್ಯೆ ಪ್ರೀತಿ ದೇಗಿನಾಳ ಪರ ಹಾಜರಿದ್ದ 16 ಸದಸ್ಯರು ಕೈ ಎತ್ತುವ ಮೂಲಕ ಆಯ್ಕೆ ಮಾಡಿದ್ದಾರೆ ಎಂದು ಚುನಾವಣಾಧಿಕಾರಿ ಬಲರಾಮ ಕಟ್ಟಿಮನಿ ತಿಳಿಸಿದರು.

ಗೆಲುವಿನ ನಂತರ ಮಾತನಾಡಿದ ಪುರಸಭೆ ನೂತನ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಉಪಾಧ್ಯಕ್ಷೆ ಪ್ರೀತಿ ದೇಗಿನಾಳ,ಶಾಸಕರ ಆಶೀರ್ವಾದ ಸದಸ್ಯರ ಸಹಕಾರದಿಂದ ನಾವು ಈ ಸ್ಥಾನಕ್ಕೆ ಕೂತಿದ್ದೇವೆ.ಪಟ್ಟಣದ ಜನರ ಬೇಕು ಬೇಡಿಕೆಗಳಿಗೆ ಸ್ಪಂದನೆ ನೀಡುತ್ತೇವೆ. ಪಟ್ಟಣದ ಸಮಸ್ಯೆಗಳಿಗೆ ಧ್ವನಿಯಾಗುತ್ತೇವೆ ಎಂದು ಹೇಳಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಕೆಪಿಸಿಸಿ ಸದಸ್ಯ ಬಾಪುರಾವ ದೇಸಾಯಿ, ಮುಖಂಡರಾದ ಎಂ.ಬಿ.ನಾವದಗಿ,ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ, ಸಂಗನಗೌಡ ಬಿರಾದಾರ, ಕಾಮರಾಜ ಬಿರಾದಾರ,ಸಿಕಂದರ ಜಾನ್ವೇಕರ ಮೊದಲಾದವರು ಇದ್ದರು.

ಇದನ್ನೂ ಓದಿ: Heart attack: ‘ಲೋ ಬಿಪಿ’ಯಿಂದ 8ನೇ ತರಗತಿ ಬಾಲಕನಿಗೆ ಹೃದಯಾಘಾತ, ಸಾವು

ಪಟಾಕಿ ಸಿಡಿಸಿ ಗುಲಾಲು ಎರಚಿ ವಿಜಯೋತ್ಸವ ಆಚರಿಸಲಾಯಿತು.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು