Muddebihal: ಕಾಂಗ್ರೆಸ್ಸಿಗರಿಗೇ ಪುರಸಭೆ ಪಟ್ಟ.. ಮಹೆಬೂಬ ಗೊಳಸಂಗಿ ಅಧ್ಯಕ್ಷ, ಪ್ರೀತಿ ದೇಗಿನಾಳ ಉಪಾಧ್ಯಕ್ಷೆ

Muddebihal: ಕಾಂಗ್ರೆಸ್ಸಿಗರಿಗೇ ಪುರಸಭೆ ಪಟ್ಟ.. ಮಹೆಬೂಬ ಗೊಳಸಂಗಿ ಅಧ್ಯಕ್ಷ, ಪ್ರೀತಿ ದೇಗಿನಾಳ ಉಪಾಧ್ಯಕ್ಷೆ

ಮುದ್ದೇಬಿಹಾಳ : ತೀವ್ರ ಪೈಪೋಟಿಯಿಂದ ಕೂಡಿದ್ದ ಇಲ್ಲಿನ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಲ್ಲಿ ಸ್ವಪಕ್ಷೀಯರನ್ನೇ ಗದ್ದುಗೆಗೆ ಕೂಡಿಸುವ ಮೂಲಕ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ವಿರೋಧ ಪಕ್ಷದ ಮುಖಂಡರು ಮುಖಭಂಗ ಅನುಭವಿಸುವಂತೆ ಮಾಡಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಪಟ್ಟಣದ ಪುರಸಭೆಯಲ್ಲಿ ಬುಧವಾರ ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಮಹೆಬೂಬ ಗೊಳಸಂಗಿ, ಕಾಂಗ್ರೆಸ್ ಬೆಂಬಲಿತ ಪಕ್ಷೇತರ ಸದಸ್ಯ ರಿಯಾಜ್ ಢವಳಗಿ,ಬಿಜೆಪಿಯಿಂದ ಬಸವರಾಜ ಮುರಾಳ ನಾಮಪತ್ರ ಸಲ್ಲಿಸಿದ್ದರು.

ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಪ್ರೀತಿ ದೇಗಿನಾಳ, ಭಾರತಿ ಪಾಟೀಲ್ ಹಾಗೂ ಬಿಜೆಪಿಯಿಂದ ಸಹನಾ ಬಡಿಗೇರ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಹಿಂದಕ್ಕೆ ಪಡೆಯುವ ಸಮಯ ಪೂರ್ಣಗೊಂಡಾಗ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ನಾಮಪತ್ರ ಸಲ್ಲಿಸಿದ್ದ ಬಸವರಾಜ ಮುರಾಳ ತಮಗೆ ಸಂಖ್ಯಾ ಬಲ ಇಲ್ಲವೆಂಬುದನ್ನು ಅರಿತು ನಾಮಪತ್ರ ವಾಪಸ್ ಪಡೆದುಕೊಂಡರು. ಉಪಾಧ್ಯಕ್ಷ ಸ್ಥಾನಕ್ಕೆ ಮೂವರು, ಅಧ್ಯಕ್ಷ ಸ್ಥಾನಕ್ಕೆ ಇಬ್ಬರು ಕಣದಲ್ಲಿ ಉಳಿದಿದ್ದರು.

ಚುನಾವಣಾಧಿಕಾರಿಯೂ ಆಗಿರುವ ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಕೈ ಎತ್ತುವ ಮೂಲಕ ಆಯ್ಕೆ ಪ್ರಕ್ರಿಯೆ ನಡೆಸಿದರು.

ಅಧ್ಯಕ್ಷ ಸ್ಥಾನಕ್ಕೆ ಮಹೆಬೂಬ ಗೊಳಸಂಗಿ ಅವರಿಗೆ ಶಾಸಕರ ಮತ ಸೇರಿ ಒಟ್ಟು 16 ಮತಗಳಿಂದ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಬಲರಾಮ ಕಟ್ಟಿಮನಿ ಘೋಷಿಸಿದರು.

ಅಧ್ಯಕ್ಷ ಸ್ಥಾನಕ್ಕೆ ಸ್ವಪಕ್ಷಿಯ ಸದಸ್ಯ ಮಹೆಬೂಬ ಗೊಳಸಂಗಿ ಅವರ ವಿರುದ್ಧ ಕೊನೆಯ ಕ್ಷಣದವರೆಗೂ ತೀವ್ರ ಪೈಪೋಟಿ ಒಡ್ಡಿದ್ದ ಕಾಂಗ್ರೆಸ್ ಬೆಂಬಲಿತ ಪಕ್ಷೇತರ ಸದಸ್ಯ ರಿಯಾಜ್ ಢವಳಗಿ ಸೋಲು ಅನುಭವಿಸಿದರು.

ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಸದಸ್ಯೆ ಪ್ರೀತಿ ದೇಗಿನಾಳ ಪರ ಹಾಜರಿದ್ದ 16 ಸದಸ್ಯರು ಕೈ ಎತ್ತುವ ಮೂಲಕ ಆಯ್ಕೆ ಮಾಡಿದ್ದಾರೆ ಎಂದು ಚುನಾವಣಾಧಿಕಾರಿ ಬಲರಾಮ ಕಟ್ಟಿಮನಿ ತಿಳಿಸಿದರು.

ಗೆಲುವಿನ ನಂತರ ಮಾತನಾಡಿದ ಪುರಸಭೆ ನೂತನ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಉಪಾಧ್ಯಕ್ಷೆ ಪ್ರೀತಿ ದೇಗಿನಾಳ,ಶಾಸಕರ ಆಶೀರ್ವಾದ ಸದಸ್ಯರ ಸಹಕಾರದಿಂದ ನಾವು ಈ ಸ್ಥಾನಕ್ಕೆ ಕೂತಿದ್ದೇವೆ.ಪಟ್ಟಣದ ಜನರ ಬೇಕು ಬೇಡಿಕೆಗಳಿಗೆ ಸ್ಪಂದನೆ ನೀಡುತ್ತೇವೆ. ಪಟ್ಟಣದ ಸಮಸ್ಯೆಗಳಿಗೆ ಧ್ವನಿಯಾಗುತ್ತೇವೆ ಎಂದು ಹೇಳಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಕೆಪಿಸಿಸಿ ಸದಸ್ಯ ಬಾಪುರಾವ ದೇಸಾಯಿ, ಮುಖಂಡರಾದ ಎಂ.ಬಿ.ನಾವದಗಿ,ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ, ಸಂಗನಗೌಡ ಬಿರಾದಾರ, ಕಾಮರಾಜ ಬಿರಾದಾರ,ಸಿಕಂದರ ಜಾನ್ವೇಕರ ಮೊದಲಾದವರು ಇದ್ದರು.

ಇದನ್ನೂ ಓದಿ: Heart attack: ‘ಲೋ ಬಿಪಿ’ಯಿಂದ 8ನೇ ತರಗತಿ ಬಾಲಕನಿಗೆ ಹೃದಯಾಘಾತ, ಸಾವು

ಪಟಾಕಿ ಸಿಡಿಸಿ ಗುಲಾಲು ಎರಚಿ ವಿಜಯೋತ್ಸವ ಆಚರಿಸಲಾಯಿತು.

Latest News

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಮುದ್ದೇಬಿಹಾಳ : ಹೆಚ್ಚುತ್ತಿರುವ ಜನಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆ ಮತ್ತಷ್ಟು ದಕ್ಷತೆಯಿಂದ

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಮುದ್ದೇಬಿಹಾಳ : ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಕುಟುಂಬದವರು ಪರಿಶ್ರಮದಿಂದ ಗಳಿಸಿದ ಆಸ್ತಿಯನ್ನು ದಾನ ಮಾಡುವ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು:                      ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು: ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಪಟ್ಟಣದಲ್ಲಿದ್ದ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ ಬಿಟ್ಟರೆ ಮತ್ತೊಂದು

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಶಿಕ್ಷಣ,ಆರ್ಥಿಕ  ಸಬಲತೆಗೆ ಒತ್ತು ನೀಡಿ:                                       ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಶಿಕ್ಷಣ,ಆರ್ಥಿಕ ಸಬಲತೆಗೆ ಒತ್ತು ನೀಡಿ: ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಹಿಂದುಳಿದ ಸಮಾಜದಲ್ಲಿ ಜನಿಸಿದ್ದರೂ ಶಿಕ್ಷಣದಲ್ಲಿ ನಮ್ಮವರು ಎಂದಿಗೂ ಹಿಂದೆ ಬಿದ್ದಿಲ್ಲ.ಶಿಕ್ಷಣದೊಂದಿಗೆ ಜನಾಂಗವನ್ನು ಆರ್ಥಿಕ ಸಬಲತೆಯತ್ತ ಕೊಂಡೊಯ್ಯುವ ಕಾರ್ಯ ಸಮಾಜದ ಬಾಂಧವರು ಮಾಡಬೇಕು ಎಂದು ಮುದ್ದೇಬಿಹಾಳ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಬಡದಾನಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಭಾನುವಾರ ದೇವಾಂಗ ಸಮಾಜ ಹಾಗೂ ದೇವಾಂಗ ನೌಕರರ ಸಂಘದ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಹಿಂದುಳಿದ ವರ್ಗದವರ ನೇಮಕಾತಿ ವಿಭಾಗದಲ್ಲಿ ಕೆಲಸ ಮಾಡಿರುವ ನನಗೆ ನಮ್ಮ ಜನಾಂಗದವರು

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಸತತ ಎರಡನೇ ಬಾರಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಕ್ರೀಡಾಕೂಟದಲ್ಲಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಬಾಲಕರ ವಿಭಾಗದಲ್ಲಿ ಕಬಡ್ಡಿ ಪ್ರಥಮ, ವಾಲಿಬಾಲ್ ಪ್ರಥಮ, ರಿಲೇ ಪ್ರಥಮ, ಥ್ರೋಬಾಲ್ ಪ್ರಥಮ, ಖೋ-ಖೋ ದ್ವಿತೀಯ, 400 ಮೀ. ಓಟದಲ್ಲಿ ಪ್ರಥಮ, 600