Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಸೋಮವಾರ ಜರುಗಿತು.

ಫೈನಲ್‌ನಲ್ಲಿ ಆಲಮಟ್ಟಿ ಸುಶಾಂತ-11 ತಂಡ ಹಾಗೂ ಬೂದಿಹಾಳ ಆರ್.ಕೆ ರಾಕೆಟ್ ತಂಡಗಳು ಮುಖಾಮುಖಿಯಾದವು.ಅದರಲ್ಲಿ ಮೊದಲು ಬ್ಯಾಟ್ ಮಾಡಿದ ಆಲಮಟ್ಟಿ ಸುಶಾಂತ ತಂಡ ನಿಗದಿತ ಹತ್ತು ಓವರ್‌ಗಳಲ್ಲಿ ಐದು ವಿಕೆಟ್ ಕಳೆದುಕೊಂಡು 102 ರನ್ ಗಳಿಸಿತು.ಬಳಿಕ ಬ್ಯಾಟ್ ಮಾಡಿದ ಬೂದಿಹಾಳ ಆರ್.ಕೆ.ರಾಕೆಟ್ ತಂಡ ಆರು ವಿಕೆಟ್ ಕಳೆದುಕೊಂಡು 106 ರನ್ ಗಳಿಸಿ ಗೆಲುವು ಸಾಧಿಸಿತು.
ಪ್ರಶಸ್ತಿ ವಿಜೇತ ತಂಡಗಳಿಗೆ ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ, ಸಂಘಟಕರಾದ ಕಾಮರಾಜ ಬಿರಾದಾರ,ಹುಸೇನ್ ಮುಲ್ಲಾ, ರಂಜಾನ್ ನದಾಫ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಯಲ್ಲಪ್ಪ ಮ್ಯಾಗೇರಿ,ಸಂಗಣ್ಣ ಮೇಲಿನಮನಿ,ಹುಲಗೇಶ ಈಳಗೇರ,ಪತ್ರಕರ್ತ ಶಂಕರ ಹೆಬ್ಬಾಳ,ಬಸವರಾಜ ಕುಂಬಾರ,ಸಿದ್ದು ಚಲವಾದಿ,ಯಾಸೀನ್ ಸೋಠೆ,ನಜೀರ ದಾಂಡಿಯಾ,ಸೋಹೇಬ ಪಟೇಲ್,ಅಡವಯ್ಯ ಹಿರೇಮಠ, ಯಾಸೀನ ಮಕಾನದಾರ ಮೊದಲಾದವರು ಪ್ರಶಸ್ತಿ ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ, ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಸ್ಪರ್ಧಾತ್ಮಕ ಮನೋಭಾವ ಎಲ್ಲರಲ್ಲೂ ಅಗತ್ಯವಾಗಿದೆ.ಕ್ರಿಕೆಟ್‌ಗೆ ಹಣ ಪ್ರಾಯೋಜಕತ್ವ ಮಾಡುವುದು ಯುವಕರ ದೈಹಿಕ ಸಾಮರ್ಥ್ಯ ಸದೃಢವಾಗಿರಬೇಕು.ಆರೋಗ್ಯ ಕಾಪಾಡಿಕೊಳ್ಳಬೇಕು ಎಂಬ ಸದುದ್ದೇಶ ಅಡಗಿದೆ ಎಂದರು. ಮುಖoಡ ಕಾಮರಾಜ ಬಿರಾದಾರ ಮಾತನಾಡಿ, ಕ್ರಿಕೆಟ್ ಟೂರ್ನಾಮೆoಟ್ ಯಶಸ್ವಿಗೆ ಸಹಕರಿಸಿದ ದಾನಿಗಳಿಗೆ ಅಭಿನಂದಿಸಿದರು.ಸರ್ಕಾರಿ ಆಸ್ಪತ್ರೆ ಆರೋಗ್ಯ ರಕ್ಷಾ ಸಮಿತಿ ನಾಮನಿರ್ದೇಶಿತ ಸದಸ್ಯ ಮಹ್ಮದರಫೀಕ ಶಿರೋಳ ಕಾರ್ಯಕ್ರಮ ನಿರೂಪಿಸಿದರು.

ಪ್ರಶಸ್ತಿ ಪಡೆದುಕೊಳ್ಳಲು ಆಟಗಾರರ ನಿರಾಸಕ್ತಿ:
ಫೈನಲ್ ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದ ಆಲಮಟ್ಟಿ ಹಾಗೂ ಬೂದಿಹಾಳ ತಂಡದ ಆಟಗಾರರು ಪಂದ್ಯ ಮುಗಿದು ಫಲಿತಾಂಶ ಬರುತ್ತಿದ್ದಂತೆ ಅಲ್ಲಲ್ಲಿ ಚದುರಿದರು.ಪ್ರಥಮ ಬಹುಮಾನದ ಪ್ರಾಯೋಜಕತ್ವ ವಹಿಸಿದ್ದ ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸೇರಿದಂತೆ ಸಂಘಟಕರು,ಮುಖAಡರು ಬಹುಮಾನ ಸ್ವೀಕರಿಸಲು ಬರುವಂತೆ ಹತ್ತಾರು ಸಲ ಮೈಕ್‌ನಲ್ಲಿ ಕೂಗಿದರು ಬೇಗನೇ ಆಟಗಾರರು ಪ್ರಶಸ್ತಿ ಸ್ವೀಕರಿಸಲು ಬರಲಿಲ್ಲ.ಕಡೆಗೆ ಪ್ರಶಸ್ತಿ ಕೊಡುವ ಅತಿಥಿಗಳು ವೇದಿಕೆ ಬಿಟ್ಟು ಕೆಳಗಿಳಿದರೆ ಪ್ರಶಸ್ತಿ , ನಗದು ಹಣ ನಮ್ಮ ಜವಾಬ್ದಾರಿಯಲ್ಲ ಎಂದಾಗ ಆಟಗಾರರು ಪ್ರಶಸ್ತಿ ಸ್ವೀಕರಿಸಲು ಮುಂದೆ ಬಂದು ಬಹುಮಾನ ಪಡೆದುಕೊಂಡರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ