Muddebihal: ಚಿರತೆ ಹೆಜ್ಜೆ ಹೋಲುವ ಕಾಡುಪ್ರಾಣಿ ಹೆಜ್ಜೆ ಗುರುತು ಪತ್ತೆ? ಕಂದಗನೂರಿನಲ್ಲಿ ಮನೆ ಮಾಡಿದ ಆತಂಕ!

Muddebihal: ಚಿರತೆ ಹೆಜ್ಜೆ ಹೋಲುವ ಕಾಡುಪ್ರಾಣಿ ಹೆಜ್ಜೆ ಗುರುತು ಪತ್ತೆ? ಕಂದಗನೂರಿನಲ್ಲಿ ಮನೆ ಮಾಡಿದ ಆತಂಕ!

ಮುದ್ದೇಬಿಹಾಳ : ತಾಲ್ಲೂಕಿನ ಕಂದಗನೂರಿನ ಕಬ್ಬಿನ ಜಮೀನೊಂದರಲ್ಲಿ ಚಿರತೆಯಂತಹ ಕಾಡುಪ್ರಾಣಿಯದ್ದು ಎನ್ನಲಾದ ಹೆಜ್ಜೆ ಗುರುತು ಪತ್ತೆಯಾಗಿದ್ದು, ಈ ಭಾಗದ ಗ್ರಾಮಸ್ಥರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ.

ಜು.29 ರಂದು ಕಂದಗನೂರ ಗ್ರಾಮದ ಬೀಯಪ್ಪ ಬೋಳಿ ಅವರ ಹೊಲದಲ್ಲಿ ಆಕಳು ಹಾಗೂ ಕರುವಿನ ಕಳೆಬರ ಪತ್ತೆಯಾಗಿದೆ. ಇದು ಕಾಡು ಪ್ರಾಣಿ ದಾಳಿಯಿಂದ ಎರಡು ಜಾನುವಾರುಗಳು ಮೃತಪಟ್ಟಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಏತನ್ಮಧ್ಯೆ, ಕಂದಗನೂರು ಭಾಗದಲ್ಲಿ ಚಿರತೆ ಬಂದಿದೆ ಎಂಬ ವಿಡಿಯೋ, ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು ಅವು ಈ ಭಾಗದ್ದಲ್ಲ ಎಂಬುದನ್ನು ಅರಣ್ಯಾಧಿಕಾರಿಗಳು ಖಚಿತಪಡಿಸಿದ್ದಾರೆ.

ಕಾಡುಪ್ರಾಣಿ ಸೆರೆಗೆ ಬಿ.ಎಸ್.ಬೋಳಿ ಅವರ ಹೊಲದಲ್ಲಿ ಬೋನು ಇರಿಸಲಾಗಿದೆ. ಆದರೆ ಜು.30 ರಂದು ಮೃತಪಟ್ಟ ಆಕಳ ಮಾಂಸ ತಿನ್ನುವುದಕ್ಕೆ ಕಾಡುಪ್ರಾಣಿ ಬಂದು ಹೋಗಿದೆ ಎಂದು ಪ್ರಾದೇಶಿಕ ಅರಣ್ಯ ಇಲಾಖೆಯ ಅಧಿಕಾರಿ ಬಸನಗೌಡ ಬಿರಾದಾರ ತಿಳಿಸಿದ್ದಾರೆ.

ಹೊಲದಲ್ಲಿ ಮಂಗಳವಾರ ಅವಲೋಕಿಸಿದಾಗ ಕಾಡುಪ್ರಾಣಿಯ ಹೆಜ್ಜೆಗಳು ಚಿರತೆಯದ್ದೆಂಬಂತೆ ಕಾಣುತ್ತಿವೆ.ಆದರೆ ಖಚಿತವಾಗಿ ಹೇಳಲು ಆಗದು.ಕತ್ತೆ ಕಿರುಬ ಕೂಡಾ ಜಾನುವಾರುಗಳನ್ನು ತಿಂದು ಹೋಗುತ್ತದೆ. ಮೇಲಧಿಕಾರಿಗಳ ಸೂಚನೆಯಂತೆ ಕಾಡುಪ್ರಾಣಿ ಸೆರೆ ಹಿಡಿಯಲು ಕ್ಯಾಮೆರಾಗಳನ್ನು ಅಳವಡಿಸಲಾಗುತ್ತದೆ. ಅದರಲ್ಲಿ ಸೆರೆಯಾದರೆ ಯಾವ ಪ್ರಾಣಿ ಎಂಬುದು ಖಚಿತವಾಗಿ ತಿಳಿದು ಬರಲಿದೆ ಎಂದು ಮಾಹಿತಿ ನೀಡಿದರು.

ಚಿರತೆ ಬಂದಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ವಿಡಿಯೋ ಫೋಟೊಗಳ ಮಾಹಿತಿಯಿಂದ ಗ್ರಾಮಸ್ಥರು ತೀವ್ರ ಆತಂಕಗೊಂಡರು. ಸಂಜೆಯವ ಹೊತ್ತಿಗೆ ಚಿರತೆ ಕಂದಗನೂರಿನಲ್ಲಿ ಕಾಣಿಸಿದ್ದಲ್ಲ ಬೇರೆ ಸ್ಥಳದ್ದು ಎಂದು ಗೊತ್ತಾದ ಬಳಿಕ ಅಲ್ಪ ನಿರಾಳರಾಗಿದ್ದಾರೆ. ಆದರೆ, ಚಿರತೆಯೇ ಬಂದಿದೆ ಎಂಬುದನ್ನು ಯಾರೊಬ್ಬರು ನೋಡಿಲ್ಲ ಎಂದು ಗ್ರಾಮಸ್ಥ ರಾಜಾಭಕ್ಷಿ ಮಕಾಶಿ ತಿಳಿಸಿದರು.

ಕೃಷಿ ಚಟುವಟಿಕೆ ಕೈಗೊಳ್ಳಲು ಗ್ರಾಮಸ್ಥರ ಹಿಂದೇಟು: ಚಿರತೆ ಕಾಣಿಸಿಕೊಂಡಿದೆ ಎಂಬ ವದಂತಿಯಿಂದ ಭೀತಿಗೊಳಗಾಗಿರುವ ಈ ಭಾಗದ ಕಂದಗನೂರು, ಕಾಳಗಿ, ಬಳಬಟ್ಟಿ ಗ್ರಾಮದ ರೈತಾಪಿ ವರ್ಗದವರಲ್ಲಿ ಕೃಷಿ ಚಟುವಟಿಕೆ ಗೆ ಹೋಗುವುದನ್ನು ಬಿಟ್ಟು ಮನೆಯಲ್ಲಿ ಕೂರುವಂತಾಗಿದೆ. ಆದಷ್ಟು ಬೇಗ ತಾಲ್ಲೂಕಾಡಳಿತದ ಅಧಿಕಾರಿಗಳು ಕಾಡುಪ್ರಾಣಿ ಪತ್ತೆ ಹಚ್ಚಿ ಸೆರೆ ಹಿಡಿದು ರೈತರಲ್ಲಿ ಉಂಟಾಗಿರುವ ಆತಂಕವನ್ನು ದೂರ ಮಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Latest News

ಪರಿಸರ ರಕ್ಷಕ” ಪ್ರಶಸ್ತಿ ಪ್ರದಾನ ಭೂಮಿ ಮೇಲೆ ಸ್ವಾರ್ಥವಿಲ್ಲದೇ ಬದುಕು ನಡೆಸೋಣ: ಬಲರಾಮ ಕಟ್ಟಿಮನಿ

ಪರಿಸರ ರಕ್ಷಕ” ಪ್ರಶಸ್ತಿ ಪ್ರದಾನ ಭೂಮಿ ಮೇಲೆ ಸ್ವಾರ್ಥವಿಲ್ಲದೇ ಬದುಕು ನಡೆಸೋಣ: ಬಲರಾಮ ಕಟ್ಟಿಮನಿ

ಮುದ್ದೇಬಿಹಾಳ : ಭೂಮಿಯ ಮೇಳೆ ಮನುಷ್ಯ ಸ್ವಾರ್ಥವಿಲ್ಲದ ಜೀವನ ನಡೆಸಬೇಕು. ಈ ಭೂಮಿಯ ಮೇಲೆ

ನರೇಗಾ ಕೂಲಿಕಾರರಿಗೆ ಅರೋಗ್ಯ ಉಚಿತ ತಪಾಸಣೆ ಶಿಬಿರ

ನರೇಗಾ ಕೂಲಿಕಾರರಿಗೆ ಅರೋಗ್ಯ ಉಚಿತ ತಪಾಸಣೆ ಶಿಬಿರ

ಖಾತ್ರಿ ಯೋಜನೆಯಡಿ ನಿರಂತರ ಕೆಲಸ : ಗಣಾಚಾರಿ ಮುದ್ದೇಬಿಹಾಳ : ತಾಲ್ಲೂಕಿನ ಮುದ್ನಾಳ ಗ್ರಾಮದ

ಗ್ರಾಮದೇವತೆ ಜಾತ್ರೆಯ ನಿಮಿತ್ಯ ಸ್ಪರ್ಧೆ: ರಂಗೋಲಿ ಸ್ಪರ್ಧೆ ವಿಜೇತರಿಗೆ ನಗದು ಬಹುಮಾನ

ಗ್ರಾಮದೇವತೆ ಜಾತ್ರೆಯ ನಿಮಿತ್ಯ ಸ್ಪರ್ಧೆ: ರಂಗೋಲಿ ಸ್ಪರ್ಧೆ ವಿಜೇತರಿಗೆ ನಗದು ಬಹುಮಾನ

ಮುದ್ದೇಬಿಹಾಳ : ಪಟ್ಟಣದ ಗ್ರಾಮ ದೇವತೆ ಜಾತ್ರೆಯ ಅಂಗವಾಡಿ ಅಂಬೇಡ್ಕರ್ ಸಭಾಂಗಣದಲ್ಲಿ ಮಹಿಳೆಯರಿಗಾಗಿ ಏರ್ಪಡಿಸಿದ್ದ

ಕ್ರೀಡಾಪಟುಗಳಿಗೆ ಅನ್ಯಾಯವಾಗದಂತೆ ಕಾರ್ಯನಿರ್ವಹಿಸಿ-ಸಾವಳಗಿ

ಕ್ರೀಡಾಪಟುಗಳಿಗೆ ಅನ್ಯಾಯವಾಗದಂತೆ ಕಾರ್ಯನಿರ್ವಹಿಸಿ-ಸಾವಳಗಿ

ಮುದ್ದೇಬಿಹಾಳ : ಕ್ರೀಡಾಪಟುಗಳನ್ನು ಅವರ ಕೌಟುಂಬಿಕ ಹಿನ್ನೆಲೆ, ಜಾತಿ, ಮತದ ಆಧಾರದ ಮೇಲೆ ಗುರುತಿಸದೇ

ಗ್ರಾಮದೇವತೆ ಜಾತ್ರೆ : ರಾಷ್ಟ್ರ, ರಾಜ್ಯಮಟ್ಟದ ಪೈಲ್ವಾನ್‌ಗಳಿಂದ ರಂಗೇರಿದ ಕುಸ್ತಿ

ಗ್ರಾಮದೇವತೆ ಜಾತ್ರೆ : ರಾಷ್ಟ್ರ, ರಾಜ್ಯಮಟ್ಟದ ಪೈಲ್ವಾನ್‌ಗಳಿಂದ ರಂಗೇರಿದ ಕುಸ್ತಿ

ಮುದ್ದೇಬಿಹಾಳ : ಪಟ್ಟಣದ ಗ್ರಾಮದೇವತೆ ಜಾತ್ರೆಯ ಅಂಗವಾಗಿ ಭಾನುವಾರ ಸಂಜೆ ಇಲ್ಲಿನ ಪ್ರಾರ್ಥನಾ ವಿದ್ಯಾಮಂದಿರದ ಹಿಂಭಾಗದಲ್ಲಿರುವ ಕುಸ್ತಿ ಮೈದಾನದಲ್ಲಿ ರಾಷ್ಟ್ರ, ರಾಜ್ಯಮಟ್ಟದ ಕುಸ್ತಿಪಟುಗಳಿಂದ ಭರ್ಜರಿ ಕುಸ್ತಿ ಪ್ರದರ್ಶನ ನಡೆಯಿತು. ಮಧ್ಯಪ್ರದೇಶ, ಮಹಾರಾಷ್ಟ್ರ, ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ರಾಜ್ಯಮಟ್ಟದ ಕುಸ್ತಿಪಟುಗಳು ಪಾಲ್ಗೊಂಡು ಅಖಾಡವನ್ನು ರಂಗೇರಿಸಿದ್ದರು. ವಿಶೇಷವಾಗಿ ಕುಸ್ತಿಯನ್ನು ನಿಗದಿ ಮಾಡಿದ ಪೈಲ್ವಾನ್‌ರೊಂದಿಗೆ ಆಡಿಸಿದ್ದು ಕುಸ್ತಿ ಪ್ರೇಮಿಗಳ ಮೆಚ್ಚುಗೆಗೆ ಕಾರಣವಾಯಿತು. ಸಾವಿರಾರು ಜನರು ಕುಸ್ತಿಯನ್ನು ವೀಕ್ಷಿಸಿದರು.

ಗ್ರಾಮದೇವತೆ ಜಾತ್ರೆ : ರಾಷ್ಟ್ರ, ರಾಜ್ಯಮಟ್ಟದ ಪೈಲ್ವಾನ್‌ಗಳಿಂದ ರಂಗೇರಿದ ಕುಸ್ತಿ

ಗ್ರಾಮದೇವತೆ ಜಾತ್ರೆ : ರಾಷ್ಟ್ರ, ರಾಜ್ಯಮಟ್ಟದ ಪೈಲ್ವಾನ್‌ಗಳಿಂದ ರಂಗೇರಿದ ಕುಸ್ತಿ

ಮುದ್ದೇಬಿಹಾಳ : ಪಟ್ಟಣದ ಗ್ರಾಮದೇವತೆ ಜಾತ್ರೆಯ ಅಂಗವಾಗಿ ಭಾನುವಾರ ಸಂಜೆ ಇಲ್ಲಿನ ಪ್ರಾರ್ಥನಾ ವಿದ್ಯಾಮಂದಿರದ ಹಿಂಭಾಗದಲ್ಲಿರುವ ಕುಸ್ತಿ ಮೈದಾನದಲ್ಲಿ ರಾಷ್ಟ್ರ, ರಾಜ್ಯಮಟ್ಟದ ಕುಸ್ತಿಪಟುಗಳಿಂದ ಭರ್ಜರಿ ಕುಸ್ತಿ ಪ್ರದರ್ಶನ ನಡೆಯಿತು. ಮಧ್ಯಪ್ರದೇಶ, ಮಹಾರಾಷ್ಟ್ರ, ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ರಾಜ್ಯಮಟ್ಟದ ಕುಸ್ತಿಪಟುಗಳು ಪಾಲ್ಗೊಂಡು ಅಖಾಡವನ್ನು ರಂಗೇರಿಸಿದ್ದರು. ವಿಶೇಷವಾಗಿ ಕುಸ್ತಿಯನ್ನು ನಿಗದಿ ಮಾಡಿದ ಪೈಲ್ವಾನ್‌ರೊಂದಿಗೆ ಆಡಿಸಿದ್ದು ಕುಸ್ತಿ ಪ್ರೇಮಿಗಳ ಮೆಚ್ಚುಗೆಗೆ ಕಾರಣವಾಯಿತು. ಸಾವಿರಾರು ಜನರು ಕುಸ್ತಿಯನ್ನು ವೀಕ್ಷಿಸಿದರು.