Muddebihal: Demand to provide infrastructure to Urdu school

Muddebihal: ಉರ್ದು ಶಾಲೆಗೆ ಮೂಲಸೌರ‍್ಯ ಒದಗಿಸಲು ಆಗ್ರಹ

Muddebihal: ಉರ್ದು ಶಾಲೆಗೆ ಮೂಲಸೌರ‍್ಯ ಒದಗಿಸಲು ಆಗ್ರಹ

ಮುದ್ದೇಬಿಹಾಳ : ಪಟ್ಟಣದ ಸರಕಾರಿ ಉರ್ದು ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೊಠಡಿಗಳ ಕೊರತೆ ಇದ್ದು ಹೆಚ್ಚುವರಿ ಕೊಠಡಿಗಳನ್ನು ತ್ವರಿತವಾಗಿ ನಿರ್ಮಿಸಬೇಕು ಎಂದು ಆಗ್ರಹಿಸಿ ತಹಶೀಲ್ದಾರ್, ಬಿಇಒ ಹಾಗೂ Muddebihal ಪುರಸಭೆಗೆ ಎಸ್ಡಿಎಂಸಿ ಪದಾಧಿಕಾರಿಗಳು ಶುಕ್ರವಾರ ಪ್ರತ್ಯೇಕ ಮನವಿ ಪತ್ರ ಸಲ್ಲಿಸಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಎಸ್‌ಡಿಎಂಸಿ ಅಧ್ಯಕ್ಷ ಮಹ್ಮದರಫೀಕ ನಾಗರಾಳ ಮಾತನಾಡಿ, ಒಟ್ಟು 380 ವಿದ್ಯಾರ್ಥಿಗಳು ಈ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು ಉರ್ದು ಮತ್ತು ಇಂಗ್ಲಿಷ್ ವಿಭಾಗಗಳು ಇದ್ದು ಉರ್ದು ಮಾಧ್ಯಮದ 8 ತರಗತಿಗಳು ಮತ್ತು ಇಂಗ್ಲಿಷ್ ಮಾಧ್ಯಮದ 4 ತರಗತಿಗಳು ನಡೆಯುತ್ತಿವೆ.ಜೊತೆಗೆ ಎಸ್‌ಡಿಎಮ್‌ಸಿ ಸಹಾಯದಿಂದ ಎಲ್‌ಕೆಜಿ ಹಾಗೂ ಯುಕೆಜಿ ತರಗತಿಗಳು ನಡೆಯುತ್ತಿವೆ. ಮಕ್ಕಳಿಗೆ ಪಾಠ ಬೋಧನೆ ಮಾಡಲು ಒಟ್ಟು 13 ಕೊಠಡಿಗಳ ಅವಶ್ಯಕತೆ ಇದೆ. ಆದರೆ ಇರುವ ಕೊಠಡಿಗಳಲ್ಲಿ ನಾಲ್ಕು ಕೊಠಡಿಗಳು ಶಿಥಿಲಗೊಂಡಿವೆ ಎಂದು ತಿಳಿಸಿದರು.

ಎಲ್ಲಾ ತರಗತಿಗಳನ್ನು ನಡೆಸಲು ತೊಂದರೆಯಾಗುತ್ತಿದೆ. ಜೊತೆಗೆ ಬಿಸಿಯೂಟಿ ಕೊಠಡಿಯು ಸಹ ಶಿಥಿಲವಾಗಿದ್ದು, ಮಕ್ಕಳ ಆಹಾರ ತಯಾರಿಕೆ ಮಾಡಲು ತೊಂದರೆಯಾಗುತ್ತಿದೆ. ಈ ವ್ಯವಸ್ಥೆ ಪಾಲಕರು ತಮ್ಮ ಮಕ್ಕಳ ಟಿಸಿ ತೆಗೆದುಕೊಂಡು ಹೋಗಲು ಕಾರಣವಾಗುತ್ತಿದೆ. ಹೊಸದಾಗಿ ಐದು ಕೊಠಡಿಗಳನ್ನು ನಿರ್ಮಿಸಿಕೊಡಬೇಕು ಎಂದು ಮನವಿ ಮಾಡಿದರು.

ಈ ಬೇಡಿಕೆಗೆ ಸ್ಪಂದಿಸದಿದ್ದರೆ ಶಾಲೆಯನ್ನು ಬಂದ್ ಮಾಡಿ ಪ್ರತಿಭಟನೆ ಮಾಡುತ್ತೇವೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಶೀರಸ್ತೇದಾರ ಎಂ.ಎಸ್.ಬಾಗೇವಾಡಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಎಸ್‌ಡಿಎಂಸಿ ಸದಸ್ಯರಾದ ನಜೀರಅಹ್ಮದ್ ಮಮದಾಪುರ, ಲಾಡ್ಲೆಮಶ್ಯಾಕ ನದಾಫ, ರಿಯಾಜ್ ದೇಸಾಯಿ, ಅಬ್ದುಲ್‌ರಜಾಕ ಇಲಕಲ್, ಇರ್ಫಾನ್ ದೇಸಾಯಿ, ಮಹ್ಮದಹುಸೇನ ಪಠಾಣ, ಸುಲೇಮಾನ ನಾಯ್ಯೋಡಿ, ಉಮರ್‌ಫಾರೂಕ ಕೂಡಗಿ, ದಾವಲ್ ಗೊಳಸಂಗಿ, ಸಮಿಉಲ್ಲಾ ಹುಣಚಗಿ, ಸದ್ದಾಂ ನದಾಫ್, ಝುಬೈರ ಸಾತಿಹಾಳ್, ಝುಬೈರ ಮುದಗಲ್, ಸಯೀದ್ ಹುಣಚಗಿ ಇದ್ದರು.

ಇದನ್ನೂ ಓದಿ: Crime News: ಗ್ರಾಪಂ ಸಿಬ್ಬಂದಿಗೆ ಚಪ್ಪಲಿಯಿಂದ ಹಲ್ಲೆ ಮಾಡಿದ ಉಪಾಧ್ಯಕ್ಷೆ!

Latest News

ಉಪನ್ಯಾಸಕಿ ಗುರುದೇವಿ ಹಳ್ಳೂರರಿಗೆ ಪಿ.ಎಚ್.ಡಿ ಪ್ರದಾನ

ಉಪನ್ಯಾಸಕಿ ಗುರುದೇವಿ ಹಳ್ಳೂರರಿಗೆ ಪಿ.ಎಚ್.ಡಿ ಪ್ರದಾನ

ಮುದ್ದೇಬಿಹಾಳ : ಮುದ್ದೇಬಿಹಾಳ ಮೂಲದ ಉಪನ್ಯಾಸಕಿ ಗುರುದೇವಿ ಹಳ್ಳೂರ ಅವರು ಶಿಕ್ಷಣಶಾಸ್ತçದಲ್ಲಿ ವಿಜಯಪುರದ ಕರ್ನಾಟಕ

ಯಲಗೂರ ಗೋಶಾಲೆಗೆ ಐದು ಟ್ರಾಕ್ಟರ್ ಮೇವು ಕೊಡುಗೆ

ಯಲಗೂರ ಗೋಶಾಲೆಗೆ ಐದು ಟ್ರಾಕ್ಟರ್ ಮೇವು ಕೊಡುಗೆ

ಮುದ್ದೇಬಿಹಾಳ : ಈಚೆಗೆ ಮುದ್ದೇಬಿಹಾಳದಲ್ಲಿ ಜರುಗಿದ್ದ ಹಿಂದೂ ಮಹಾಸಮ್ಮೇಳನದಲ್ಲಿ ಜಮಾಖರ್ಚು ಆಗಿ ಉಳಿತಾಯದ ಹಣದಲ್ಲಿ

60 ಲಕ್ಷ ರೂ.ಶಿಷ್ಯವೇತನ ಗೆಲ್ಲುವ ಅವಕಾಶ..!                         ಏ.3 ರಂದು ಎಕ್ಸಪರ್ಟ್ ಟ್ಯಾಲೆಂಟ್ ಅವಾರ್ಡ್-2026 ಪರೀಕ್ಷೆ

60 ಲಕ್ಷ ರೂ.ಶಿಷ್ಯವೇತನ ಗೆಲ್ಲುವ ಅವಕಾಶ..! ಏ.3 ರಂದು ಎಕ್ಸಪರ್ಟ್ ಟ್ಯಾಲೆಂಟ್ ಅವಾರ್ಡ್-2026 ಪರೀಕ್ಷೆ

ಮುದ್ದೇಬಿಹಾಳ : ಉನ್ನತ ಶಿಕ್ಷಣ ದುಬಾರಿ ಎನ್ನುವ ಕಾಲಘಟ್ಟದಲ್ಲಿ ನಮ್ಮ ಉತ್ತರ ಕರ್ನಾಟಕ ಭಾಗದ

ಸರಳತೆಯ ಸೇವೆಯಿಂದಲೇ ಜನಮನ್ನಣೆ-ಪ್ರಭುಗೌಡ ದೇಸಾಯಿ

ಸರಳತೆಯ ಸೇವೆಯಿಂದಲೇ ಜನಮನ್ನಣೆ-ಪ್ರಭುಗೌಡ ದೇಸಾಯಿ

ಮುದ್ದೇಬಿಹಾಳ : ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವವರಲ್ಲಿ ಸರಳತೆಯು ಅವರನ್ನು ಬಹುದೊಡ್ಡ ಮಟ್ಟಕ್ಕೆ ಕೊಂಡೊಯ್ಯುತ್ತದೆ.ಸೇವೆಯಲ್ಲಿ ಪ್ರಾಮಾಣಿಕತೆ,ದಕ್ಷತೆಯಿಂದ

ಢವಳಗಿಯಲ್ಲಿ ಮಾ. 29ರಂದು ವಿದ್ಯಾಸ್ಪೂರ್ತಿ ಟಾಲೆಂಟ್ ಅವಾರ್ಡ್ ಪರೀಕ್ಷೆ

ಢವಳಗಿಯಲ್ಲಿ ಮಾ. 29ರಂದು ವಿದ್ಯಾಸ್ಪೂರ್ತಿ ಟಾಲೆಂಟ್ ಅವಾರ್ಡ್ ಪರೀಕ್ಷೆ

ಮುದ್ದೇಬಿಹಾಳ : ವಿದ್ಯಾರ್ಥಿಗಳ ಪ್ರತಿಭೆ ಅನಾವರಣಗೊಳಿಸಲು ಹಾಗೂ ಅವರಿಗೆ ಉತ್ತೇಜನ ನೀಡುವ ಉದ್ದೇಶದಿಂದ ವಿದ್ಯಾಸ್ಪೂರ್ತಿ ಸಂಸ್ಥೆಯ ವತಿಯಿಂದ “ವಿದ್ಯಾಸ್ಪೂರ್ತಿ ಟಾಲೆಂಟ್ ಅವಾರ್ಡ್” ಪರೀಕ್ಷೆಯನ್ನು ಆಯೋಜಿಸಲಾಗಿದೆ ಎಂದು ಸಂಸ್ಥೆಯವರು ತಿಳಿಸಿದ್ದಾರೆ. ಈ ಪರೀಕ್ಷೆ ಮಾರ್ಚ್ 29ರಂದು (ಭಾನುವಾರ) ಬೆಳಿಗ್ಗೆ 10:30 ಗಂಟೆಗೆ ನಡೆಯಲಿದ್ದು, 3ನೇ ಮತ್ತು 4ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಜಿಲ್ಲೆಯ ವಿವಿಧ ಭಾಗಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆ ವ್ಯಕ್ತವಾಗಿದೆ. ಪರೀಕ್ಷೆಯು ವಿಜಯಪುರ ಜಿಲ್ಲೆಯ

ಉತ್ತಮ ಸೇವೆ ಒದಗಿಸುವುದೇ ನಮ್ಮ ಗುರಿ-ಡಾ.ರಂಗನಾಥ ವೈದ್ಯ

ಉತ್ತಮ ಸೇವೆ ಒದಗಿಸುವುದೇ ನಮ್ಮ ಗುರಿ-ಡಾ.ರಂಗನಾಥ ವೈದ್ಯ

ಮುದ್ದೇಬಿಹಾಳ : ಸಾರ್ವಜನಿಕರಿಗೆ ನಮ್ಮಿಂದ ಸಾಧ್ಯವಷ್ಟರ ಮಟ್ಟಿಗೆ ಉತ್ತಮ ಸೇವೆ ನೀಡಲು ಶ್ರಮಿಸುತ್ತೇವೆ.ಕೆಲವು ಸಂದರ್ಭಗಳಲ್ಲಿ ಜಿಲ್ಲಾ ಆಸ್ಪತ್ರೆಗೆ ಬರೆದುಕೊಡುವುದು ಅನಿವಾರ್ಯವಾಗುತ್ತದೆ.ಇಂತಹ ಸಮಯದಲ್ಲಿ ನಾಗರಿಕರು ಆರೋಗ್ಯ ಇಲಾಖೆ ವೈದ್ಯರು,ಸಿಬ್ಬಂದಿಯೊAದಿಗೆ ಸಂಯಮದಿAದ ನಡೆದುಕೊಳ್ಳಬೇಕು ಎಂದು ಪ್ರಸೂತಿ ತಜ್ಞ ಡಾ.ರಂಗನಾಥ ವೈದ್ಯ ಅಭಿಪ್ರಾಯಪಟ್ಟರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಗುರುವಾರ ಆರೋಗ್ಯ ರಕ್ಷಾ ಸಮಿತಿ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಏರ್ಪಡಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.ಮೊದಲಿನಂತೆ ಈಗ ವೈದ್ಯಕೀಯ ಸೇವೆ ಅಷ್ಟೊಂದು