Muddebihal: Demand to provide infrastructure to Urdu school

Muddebihal: ಉರ್ದು ಶಾಲೆಗೆ ಮೂಲಸೌರ‍್ಯ ಒದಗಿಸಲು ಆಗ್ರಹ

Muddebihal: ಉರ್ದು ಶಾಲೆಗೆ ಮೂಲಸೌರ‍್ಯ ಒದಗಿಸಲು ಆಗ್ರಹ

ಮುದ್ದೇಬಿಹಾಳ : ಪಟ್ಟಣದ ಸರಕಾರಿ ಉರ್ದು ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೊಠಡಿಗಳ ಕೊರತೆ ಇದ್ದು ಹೆಚ್ಚುವರಿ ಕೊಠಡಿಗಳನ್ನು ತ್ವರಿತವಾಗಿ ನಿರ್ಮಿಸಬೇಕು ಎಂದು ಆಗ್ರಹಿಸಿ ತಹಶೀಲ್ದಾರ್, ಬಿಇಒ ಹಾಗೂ Muddebihal ಪುರಸಭೆಗೆ ಎಸ್ಡಿಎಂಸಿ ಪದಾಧಿಕಾರಿಗಳು ಶುಕ್ರವಾರ ಪ್ರತ್ಯೇಕ ಮನವಿ ಪತ್ರ ಸಲ್ಲಿಸಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಎಸ್‌ಡಿಎಂಸಿ ಅಧ್ಯಕ್ಷ ಮಹ್ಮದರಫೀಕ ನಾಗರಾಳ ಮಾತನಾಡಿ, ಒಟ್ಟು 380 ವಿದ್ಯಾರ್ಥಿಗಳು ಈ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು ಉರ್ದು ಮತ್ತು ಇಂಗ್ಲಿಷ್ ವಿಭಾಗಗಳು ಇದ್ದು ಉರ್ದು ಮಾಧ್ಯಮದ 8 ತರಗತಿಗಳು ಮತ್ತು ಇಂಗ್ಲಿಷ್ ಮಾಧ್ಯಮದ 4 ತರಗತಿಗಳು ನಡೆಯುತ್ತಿವೆ.ಜೊತೆಗೆ ಎಸ್‌ಡಿಎಮ್‌ಸಿ ಸಹಾಯದಿಂದ ಎಲ್‌ಕೆಜಿ ಹಾಗೂ ಯುಕೆಜಿ ತರಗತಿಗಳು ನಡೆಯುತ್ತಿವೆ. ಮಕ್ಕಳಿಗೆ ಪಾಠ ಬೋಧನೆ ಮಾಡಲು ಒಟ್ಟು 13 ಕೊಠಡಿಗಳ ಅವಶ್ಯಕತೆ ಇದೆ. ಆದರೆ ಇರುವ ಕೊಠಡಿಗಳಲ್ಲಿ ನಾಲ್ಕು ಕೊಠಡಿಗಳು ಶಿಥಿಲಗೊಂಡಿವೆ ಎಂದು ತಿಳಿಸಿದರು.

ಎಲ್ಲಾ ತರಗತಿಗಳನ್ನು ನಡೆಸಲು ತೊಂದರೆಯಾಗುತ್ತಿದೆ. ಜೊತೆಗೆ ಬಿಸಿಯೂಟಿ ಕೊಠಡಿಯು ಸಹ ಶಿಥಿಲವಾಗಿದ್ದು, ಮಕ್ಕಳ ಆಹಾರ ತಯಾರಿಕೆ ಮಾಡಲು ತೊಂದರೆಯಾಗುತ್ತಿದೆ. ಈ ವ್ಯವಸ್ಥೆ ಪಾಲಕರು ತಮ್ಮ ಮಕ್ಕಳ ಟಿಸಿ ತೆಗೆದುಕೊಂಡು ಹೋಗಲು ಕಾರಣವಾಗುತ್ತಿದೆ. ಹೊಸದಾಗಿ ಐದು ಕೊಠಡಿಗಳನ್ನು ನಿರ್ಮಿಸಿಕೊಡಬೇಕು ಎಂದು ಮನವಿ ಮಾಡಿದರು.

ಈ ಬೇಡಿಕೆಗೆ ಸ್ಪಂದಿಸದಿದ್ದರೆ ಶಾಲೆಯನ್ನು ಬಂದ್ ಮಾಡಿ ಪ್ರತಿಭಟನೆ ಮಾಡುತ್ತೇವೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಶೀರಸ್ತೇದಾರ ಎಂ.ಎಸ್.ಬಾಗೇವಾಡಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಎಸ್‌ಡಿಎಂಸಿ ಸದಸ್ಯರಾದ ನಜೀರಅಹ್ಮದ್ ಮಮದಾಪುರ, ಲಾಡ್ಲೆಮಶ್ಯಾಕ ನದಾಫ, ರಿಯಾಜ್ ದೇಸಾಯಿ, ಅಬ್ದುಲ್‌ರಜಾಕ ಇಲಕಲ್, ಇರ್ಫಾನ್ ದೇಸಾಯಿ, ಮಹ್ಮದಹುಸೇನ ಪಠಾಣ, ಸುಲೇಮಾನ ನಾಯ್ಯೋಡಿ, ಉಮರ್‌ಫಾರೂಕ ಕೂಡಗಿ, ದಾವಲ್ ಗೊಳಸಂಗಿ, ಸಮಿಉಲ್ಲಾ ಹುಣಚಗಿ, ಸದ್ದಾಂ ನದಾಫ್, ಝುಬೈರ ಸಾತಿಹಾಳ್, ಝುಬೈರ ಮುದಗಲ್, ಸಯೀದ್ ಹುಣಚಗಿ ಇದ್ದರು.

ಇದನ್ನೂ ಓದಿ: Crime News: ಗ್ರಾಪಂ ಸಿಬ್ಬಂದಿಗೆ ಚಪ್ಪಲಿಯಿಂದ ಹಲ್ಲೆ ಮಾಡಿದ ಉಪಾಧ್ಯಕ್ಷೆ!

Latest News

ಜಾನುವಾರುಗಳಿಗೆ ಕುಡಿವ ನೀರು ಸೌಲಭ್ಯ ಕಲ್ಪಿಸಿ

ಜಾನುವಾರುಗಳಿಗೆ ಕುಡಿವ ನೀರು ಸೌಲಭ್ಯ ಕಲ್ಪಿಸಿ

ಮುದ್ದೇಬಿಹಾಳ : ಬೇಸಿಗೆಯ ಧಗೆಯಲ್ಲಿ ಪ್ರಾಣಿ ಪಕ್ಷಿಗಳು ಕುಡಿಯುವ ನೀರು, ಆಹಾರ ಇಲ್ಲದೇ ಬಹಳ

ಬಂಜಾರ ಭಾಷಾ ಅಕಾಡೆಮಿ ಅಧ್ಯಕ್ಷ ಡಾ.ಮೋತಿಲಾಲ  ಚವ್ಹಾಣರಿಗೆ  ಸನ್ಮಾನ

ಬಂಜಾರ ಭಾಷಾ ಅಕಾಡೆಮಿ ಅಧ್ಯಕ್ಷ ಡಾ.ಮೋತಿಲಾಲ  ಚವ್ಹಾಣರಿಗೆ  ಸನ್ಮಾನ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ತಾಂಡಾ(ವೆಂಕಟೇಶ ನಗರ) ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುವ ಬಸು

ಶಾಸಕ ನಾಡಗೌಡರ ಮನೆಗೆ ನನ್ನ ಚಪ್ಪಲಿಯೂ ಹೋಗಿಲ್ಲ-ಎ.ಎಸ್.ಪಾಟೀಲ ನಡಹಳ್ಳಿ

ಶಾಸಕ ನಾಡಗೌಡರ ಮನೆಗೆ ನನ್ನ ಚಪ್ಪಲಿಯೂ ಹೋಗಿಲ್ಲ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ತಮಗೆ ಸಾಷ್ಟಾಂಗ ಹಾಕಿರುವುದಾಗಿ ಸುಳ್ಳು ಹೇಳಿಕೆ ಕೊಡುವುದನ್ನು ಮೊದಲು ಶಾಸಕ ನಾಡಗೌಡರು

ತಂಗಡಗಿಯಲ್ಲಿ 26 ಜೋಡಿ ನವಜೀವನಕ್ಕೆ ಪದಾರ್ಪಣೆ

ತಂಗಡಗಿಯಲ್ಲಿ 26 ಜೋಡಿ ನವಜೀವನಕ್ಕೆ ಪದಾರ್ಪಣೆ

ಮುದ್ದೇಬಿಹಾಳ : ಇಂದಿನ ರಾಜಕಾರಣಿಗಳು ತಮ್ಮ ಮಕ್ಕಳ ಮದುವೆಗಳನ್ನು ದುಂದುವೆಚ್ಚದಲ್ಲಿ ಮಾಡುವಬದಲು ಅದೇ ಖರ್ಚಿನಲ್ಲಿ

SSLC ಪರೀಕ್ಷೆ : ಶಿಕ್ಷಣ ಸಚಿವರಿಗೆ ಅಭಿನಂದನೆ ತಿಳಿಸಿದ ವಿದ್ಯಾರ್ಥಿನಿ

SSLC ಪರೀಕ್ಷೆ : ಶಿಕ್ಷಣ ಸಚಿವರಿಗೆ ಅಭಿನಂದನೆ ತಿಳಿಸಿದ ವಿದ್ಯಾರ್ಥಿನಿ

ಮುದ್ದೇಬಿಹಾಳ : ಪಟ್ಟಣದ ಐದು ಪರೀಕ್ಷಾ ಕೇಂದ್ರಗಳು ಸೇರಿದಂತೆ ಮುದ್ದೇಬಿಹಾಳ,ತಾಳಿಕೋಟಿ,ನಾಗರಬೆಟ್ಟ ಪರೀಕ್ಷಾ ಕೇಂದ್ರಗಳಲ್ಲಿ ಮೊದಲ ದಿನದ ಪರೀಕ್ಷೆಗಳು ಅತ್ಯಂತ ಬಿಗಿ ಭದ್ರತೆಯಲ್ಲಿ ಕಟ್ಟುನಿಟ್ಟಾಗಿ ನಡೆದಿರುವುದಾಗಿ ವರದಿಯಾಗಿದೆ. ಪಟ್ಟಣದ ವಿಬಿಸಿ ಪ್ರೌಢಶಾಲೆ,ಜ್ಞಾನ ಭಾರತಿ ವಿದ್ಯಾಮಂದಿರ, ಚಿನ್ಮಯ ಜೆ.ಸಿ.ಆಂಗ್ಲಮಾಧ್ಯಮ ಪ್ರೌಢಶಾಲೆ,ಸ್ವಾಮಿ ವಿವೇಕಾನಂದ ಪ್ರೌಢಶಾಲೆ ಶಿರೋಳ,ಅಭ್ಯುದಯ ಆಂಗ್ಲಮಾಧ್ಯಮ ಪ್ರೌಢಶಾಲೆ ಸೇರಿದಂತೆ ತಾಲ್ಲೂಕಿನ ಗ್ರಾಮೀಣ ಭಾಗದ ಪರೀಕ್ಷಾ ಕೇಂದ್ರಗಳಲ್ಲೂ ಯಾವುದೇ ಗೊಂದಲವಿಲ್ಲದೇ ಕಟ್ಟುನಿಟ್ಟಾಗಿ ಪರೀಕ್ಷೆಗಳು ನಡೆದಿವೆ ಎಂದು ಎಸ್.ಎಸ್.ಎಲ್.ಸಿ ಪರೀಕ್ಷೆಯ ಅಧ್ಯಕ್ಷರು,ತಹಶೀಲ್ದಾರ್ ಕೀರ್ತಿ ಚಾಲಕ ತಿಳಿಸಿದರು.

ಸೌಹಾರ್ದತೆ ಮೆರೆದ ಮನಿಯಾರ್ :                                          ಹಬ್ಬದ ಸಮಯಗಳಲ್ಲಿ ಬಡವರಿಗೆ ನೆರವಾಗಿ-ಸಿಪಿಐ ಫಸಿವುದ್ದೀನ್

ಸೌಹಾರ್ದತೆ ಮೆರೆದ ಮನಿಯಾರ್ : ಹಬ್ಬದ ಸಮಯಗಳಲ್ಲಿ ಬಡವರಿಗೆ ನೆರವಾಗಿ-ಸಿಪಿಐ ಫಸಿವುದ್ದೀನ್

ಮುದ್ದೇಬಿಹಾಳ : ಸಮಾಜದಲ್ಲಿ ಆರ್ಥಿಕವಾಗಿ ಸಬಲತೆ ಸಾಧಿಸಿದವರು ಬಡವರು,ನಿರ್ಗತಿಕರಿಗೆ ಹಬ್ಬದ ಸಮಯಗಳಲ್ಲಿ ನೆರವಾಗುವ ಕಾರ್ಯ ಮಾಡಬೇಕು ಎಂದು ಸಿಪಿಐ ಮೊಹ್ಮದ್ ಫಸಿವುದ್ದೀನ್ ಹೇಳಿದರು. ಪಟ್ಟಣದ ಹುಡ್ಕೋದಲ್ಲಿರುವ ಉದ್ಯಮಿ ಅಯ್ಯೂಬ ಮನಿಯಾರ್ ಅವರ ಮನಿಯಾರ್ ಚಾರಿಟೇಬಲ್ ಟ್ರಸ್ಟ್ನಿಂದ ಮಂಗಳವಾರ ರಂಜಾನ್ ಹಬ್ಬದ ನಿಮಿತ್ಯ ಬಡವರಿಗೆ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮನಿಯಾರ್ ಅವರು ತಮ್ಮ ತಂದೆ ತಾಯಿ ಸ್ಮರಣಾರ್ಥ ಈ ಕಿಟ್‌ಗಳನ್ನು ವಿತರಿಸುತ್ತಿದ್ದಾರೆ.ಆರ್ಥಿಕ ಸಬಲತೆ ಸಾಧಿಸಿದವರು ಇಂತಹ ಕಾರ್ಯಗಳನ್ನು ಮಾಡುತ್ತಿದ್ದರೆ