Muddebihal: Demand to provide infrastructure to Urdu school

Muddebihal: ಉರ್ದು ಶಾಲೆಗೆ ಮೂಲಸೌರ‍್ಯ ಒದಗಿಸಲು ಆಗ್ರಹ

Muddebihal: ಉರ್ದು ಶಾಲೆಗೆ ಮೂಲಸೌರ‍್ಯ ಒದಗಿಸಲು ಆಗ್ರಹ

ಮುದ್ದೇಬಿಹಾಳ : ಪಟ್ಟಣದ ಸರಕಾರಿ ಉರ್ದು ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೊಠಡಿಗಳ ಕೊರತೆ ಇದ್ದು ಹೆಚ್ಚುವರಿ ಕೊಠಡಿಗಳನ್ನು ತ್ವರಿತವಾಗಿ ನಿರ್ಮಿಸಬೇಕು ಎಂದು ಆಗ್ರಹಿಸಿ ತಹಶೀಲ್ದಾರ್, ಬಿಇಒ ಹಾಗೂ Muddebihal ಪುರಸಭೆಗೆ ಎಸ್ಡಿಎಂಸಿ ಪದಾಧಿಕಾರಿಗಳು ಶುಕ್ರವಾರ ಪ್ರತ್ಯೇಕ ಮನವಿ ಪತ್ರ ಸಲ್ಲಿಸಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಎಸ್‌ಡಿಎಂಸಿ ಅಧ್ಯಕ್ಷ ಮಹ್ಮದರಫೀಕ ನಾಗರಾಳ ಮಾತನಾಡಿ, ಒಟ್ಟು 380 ವಿದ್ಯಾರ್ಥಿಗಳು ಈ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು ಉರ್ದು ಮತ್ತು ಇಂಗ್ಲಿಷ್ ವಿಭಾಗಗಳು ಇದ್ದು ಉರ್ದು ಮಾಧ್ಯಮದ 8 ತರಗತಿಗಳು ಮತ್ತು ಇಂಗ್ಲಿಷ್ ಮಾಧ್ಯಮದ 4 ತರಗತಿಗಳು ನಡೆಯುತ್ತಿವೆ.ಜೊತೆಗೆ ಎಸ್‌ಡಿಎಮ್‌ಸಿ ಸಹಾಯದಿಂದ ಎಲ್‌ಕೆಜಿ ಹಾಗೂ ಯುಕೆಜಿ ತರಗತಿಗಳು ನಡೆಯುತ್ತಿವೆ. ಮಕ್ಕಳಿಗೆ ಪಾಠ ಬೋಧನೆ ಮಾಡಲು ಒಟ್ಟು 13 ಕೊಠಡಿಗಳ ಅವಶ್ಯಕತೆ ಇದೆ. ಆದರೆ ಇರುವ ಕೊಠಡಿಗಳಲ್ಲಿ ನಾಲ್ಕು ಕೊಠಡಿಗಳು ಶಿಥಿಲಗೊಂಡಿವೆ ಎಂದು ತಿಳಿಸಿದರು.

ಎಲ್ಲಾ ತರಗತಿಗಳನ್ನು ನಡೆಸಲು ತೊಂದರೆಯಾಗುತ್ತಿದೆ. ಜೊತೆಗೆ ಬಿಸಿಯೂಟಿ ಕೊಠಡಿಯು ಸಹ ಶಿಥಿಲವಾಗಿದ್ದು, ಮಕ್ಕಳ ಆಹಾರ ತಯಾರಿಕೆ ಮಾಡಲು ತೊಂದರೆಯಾಗುತ್ತಿದೆ. ಈ ವ್ಯವಸ್ಥೆ ಪಾಲಕರು ತಮ್ಮ ಮಕ್ಕಳ ಟಿಸಿ ತೆಗೆದುಕೊಂಡು ಹೋಗಲು ಕಾರಣವಾಗುತ್ತಿದೆ. ಹೊಸದಾಗಿ ಐದು ಕೊಠಡಿಗಳನ್ನು ನಿರ್ಮಿಸಿಕೊಡಬೇಕು ಎಂದು ಮನವಿ ಮಾಡಿದರು.

ಈ ಬೇಡಿಕೆಗೆ ಸ್ಪಂದಿಸದಿದ್ದರೆ ಶಾಲೆಯನ್ನು ಬಂದ್ ಮಾಡಿ ಪ್ರತಿಭಟನೆ ಮಾಡುತ್ತೇವೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಶೀರಸ್ತೇದಾರ ಎಂ.ಎಸ್.ಬಾಗೇವಾಡಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಎಸ್‌ಡಿಎಂಸಿ ಸದಸ್ಯರಾದ ನಜೀರಅಹ್ಮದ್ ಮಮದಾಪುರ, ಲಾಡ್ಲೆಮಶ್ಯಾಕ ನದಾಫ, ರಿಯಾಜ್ ದೇಸಾಯಿ, ಅಬ್ದುಲ್‌ರಜಾಕ ಇಲಕಲ್, ಇರ್ಫಾನ್ ದೇಸಾಯಿ, ಮಹ್ಮದಹುಸೇನ ಪಠಾಣ, ಸುಲೇಮಾನ ನಾಯ್ಯೋಡಿ, ಉಮರ್‌ಫಾರೂಕ ಕೂಡಗಿ, ದಾವಲ್ ಗೊಳಸಂಗಿ, ಸಮಿಉಲ್ಲಾ ಹುಣಚಗಿ, ಸದ್ದಾಂ ನದಾಫ್, ಝುಬೈರ ಸಾತಿಹಾಳ್, ಝುಬೈರ ಮುದಗಲ್, ಸಯೀದ್ ಹುಣಚಗಿ ಇದ್ದರು.

ಇದನ್ನೂ ಓದಿ: Crime News: ಗ್ರಾಪಂ ಸಿಬ್ಬಂದಿಗೆ ಚಪ್ಪಲಿಯಿಂದ ಹಲ್ಲೆ ಮಾಡಿದ ಉಪಾಧ್ಯಕ್ಷೆ!

Latest News

ಬೆಳಗಾವಿ ರಾಣಿ ಚೆನ್ನಮ್ಮ ವಿವಿ ಸಿಂಡಿಕೇಟ್‌ಗೆ ಹೊಸಮನಿ ನಾಮನಿರ್ದೇಶನ

ಬೆಳಗಾವಿ ರಾಣಿ ಚೆನ್ನಮ್ಮ ವಿವಿ ಸಿಂಡಿಕೇಟ್‌ಗೆ ಹೊಸಮನಿ ನಾಮನಿರ್ದೇಶನ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕು ಕುಂಟೋಜಿ ಗ್ರಾಮದ ನಿವಾಸಿ, ಬಸವನ ಬಾಗೇವಾಡಿ ತಾಲೂಕಿನ

ಆಲಿಕಲ್ಲು ಮಳೆಯಿಂದ ಬೆಳೆ‌ ಹಾನಿ:                                            3 ದಿನದೊಳಗೆ‌ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಸೂಚನೆ‌

ಆಲಿಕಲ್ಲು ಮಳೆಯಿಂದ ಬೆಳೆ‌ ಹಾನಿ: 3 ದಿನದೊಳಗೆ‌ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಸೂಚನೆ‌

ವಿಜಯಪುರ : ಇತ್ತೀಚಿಗೆ ಬೀಸಿದ‌‌ ಬಿರುಗಾಳಿ ಹಾಗೂ ಆಲಿಕಲ್ಲು ಮಳೆಯಿಂದಾಗಿ ಕೃಷಿ, ತೋಟಗಾರಿಕಾ ಬೆಳೆ

ಇನ್ನೊಬ್ಬರ ಬೆಳವಣಿಗೆ ನೋಡಿ ಉರಿಯಬೇಡಿ-ಸಿದ್ಧಲಿಂಗ ದೇವರು

ಇನ್ನೊಬ್ಬರ ಬೆಳವಣಿಗೆ ನೋಡಿ ಉರಿಯಬೇಡಿ-ಸಿದ್ಧಲಿಂಗ ದೇವರು

ಮುದ್ದೇಬಿಹಾಳ : ದ್ವೇಷ ಮಾಡದೇ ಇರುವಷ್ಟು ದಿನ ಒಳ್ಳೆಯ ಕೆಲಸಗಳನ್ನು ಮಾಡಿ.ಪರಸ್ಪರ ಕಾಲೆಳೆಯಬೇಡಿ.ದ್ವೇಷ ಮಾಡಬೇಡಿ.ಇನ್ನೊಬ್ಬರ

ಶ್ರದ್ಧೆಯಿಂದ ಹಬ್ಬದಾಚರಣೆಗಳಲ್ಲಿ ತೊಡಗಿ-ಪೇಶ ಇಮಾಮ್

ಶ್ರದ್ಧೆಯಿಂದ ಹಬ್ಬದಾಚರಣೆಗಳಲ್ಲಿ ತೊಡಗಿ-ಪೇಶ ಇಮಾಮ್

ಮುದ್ದೇಬಿಹಾಳ : ಯಾರು ರಂಜಾನ್ ಮಾಸದಲ್ಲಿ ಶ್ರದ್ಧೆಯಿಂದ ನಮಾಜ್, ರೋಜಾ, ಕುರಾನ್ ತಿಲಾವತ್ ಹಾಗೂ

ಮಾಜಿ ಶಾಸಕರು ಐದು ವರ್ಷ ನಿದ್ದೆ ಮಾಡುತ್ತಿದ್ದರೇ ?-ಶಾಸಕ ನಾಡಗೌಡ ಪ್ರಶ್ನೆ

ಮಾಜಿ ಶಾಸಕರು ಐದು ವರ್ಷ ನಿದ್ದೆ ಮಾಡುತ್ತಿದ್ದರೇ ?-ಶಾಸಕ ನಾಡಗೌಡ ಪ್ರಶ್ನೆ

ಮುದ್ದೇಬಿಹಾಳ : ಮತಕ್ಷೇತ್ರದ ತಾಳಿಕೋಟಿ ತಾಲ್ಲೂಕಿನಲ್ಲಿ ಪ್ರಜಾಸೌಧ ನಿರ್ಮಾಣಕ್ಕೆ ತಮ್ಮ ಅವಧಿಯಲ್ಲಿ ಜಾಗೆ ಗುರುತಿಸುವುದನ್ನು ಬಿಟ್ಟು ಮಾಜಿ ಶಾಸಕರು ಐದು ವರ್ಷ ನಿದ್ದೆ ಮಾಡುತ್ತಿದ್ದರೇ ಎಂದು ಶಾಸಕ ಸಿ.ಎಸ್.ನಾಡಗೌಡ ಮಾಜಿ ಶಾಸಕ ನಡಹಳ್ಳಿ ಅವರಿಗೆ ಪ್ರಶ್ನಿಸಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ಶಾಸಕರಾಗಿದ್ದುಕೊಂಡು ಐದು ವರ್ಷ ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ಶ್ರಮಿಸದೇ ನಿದ್ದೆ ಮಾಡಿದ್ರಾ ನೀವು ? ಎಂದ ನಾಡಗೌಡ, ನಿಮಗೇಕೆ ಜಾಗೆ ಗುರುತಿಸಲಾಗಲಿಲ್ಲ.ನಿಮ್ಮಲ್ಲಿ ಇಚ್ಛಾಶಕ್ತಿ

ಮಾ.20 ರಂದು ತಂಗಡಗಿಯಲ್ಲಿ ದುರ್ಗಾದೇವಿ ಜಾತ್ರೆ,ಸಾಮೂಹಿಕ ವಿವಾಹ

ಮಾ.20 ರಂದು ತಂಗಡಗಿಯಲ್ಲಿ ದುರ್ಗಾದೇವಿ ಜಾತ್ರೆ,ಸಾಮೂಹಿಕ ವಿವಾಹ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದಲ್ಲಿ ದುರ್ಗಾದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಮಾ.20 ರಂದು ಸಾಮೂಹಿಕ ವಿವಾಹ ಕಾರ್ಯಕ್ರಮಗಳು ನಡೆಯಲಿದೆ. ಜಾತ್ರೆಯ ನಿಮಿತ್ಯ ಬೆಳಗ್ಗೆ 8.30ಕ್ಕೆ 101 ಕುಂಭಮೇಳ ಹಾಗೂ ಅಗ್ನಿಪ್ರವೇಶ ಕಾರ್ಯಕ್ರಮ ಜರುಗಲಿದೆ.ಮದ್ಯಾಹ್ನ 12ಕ್ಕೆ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿವೆ. ಕಾರ್ಯಕ್ರಮದ ನೇತೃತ್ವ ದೇವಿ ಆರಾಧಕ ಶಾಂತಪ್ಪ ಪೂಜಾರಿ ಅವರು ವಹಿಸಿಕೊಂಡಿದ್ದು ದಿವ್ಯ ಸಾನಿಧ್ಯವನ್ನು ಬಿಲ್‌ಕೆರೂರನ ಸಿದ್ಧಲಿಂಗ ಶಿವಾಚಾರ್ಯರು, ಪದ್ಮಶ್ರೀ ಪ್ರಶಸ್ತಿ ವಿಜೇತೆ ಮಾತಾ ಮಂಜಮ್ಮ ಜೋಗತಿ,ಬಸವನ ಬಾಗೇವಾಡಿಯ