Muddebihal: Demand to provide infrastructure to Urdu school

Muddebihal: ಉರ್ದು ಶಾಲೆಗೆ ಮೂಲಸೌರ‍್ಯ ಒದಗಿಸಲು ಆಗ್ರಹ

Muddebihal: ಉರ್ದು ಶಾಲೆಗೆ ಮೂಲಸೌರ‍್ಯ ಒದಗಿಸಲು ಆಗ್ರಹ

ಮುದ್ದೇಬಿಹಾಳ : ಪಟ್ಟಣದ ಸರಕಾರಿ ಉರ್ದು ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೊಠಡಿಗಳ ಕೊರತೆ ಇದ್ದು ಹೆಚ್ಚುವರಿ ಕೊಠಡಿಗಳನ್ನು ತ್ವರಿತವಾಗಿ ನಿರ್ಮಿಸಬೇಕು ಎಂದು ಆಗ್ರಹಿಸಿ ತಹಶೀಲ್ದಾರ್, ಬಿಇಒ ಹಾಗೂ Muddebihal ಪುರಸಭೆಗೆ ಎಸ್ಡಿಎಂಸಿ ಪದಾಧಿಕಾರಿಗಳು ಶುಕ್ರವಾರ ಪ್ರತ್ಯೇಕ ಮನವಿ ಪತ್ರ ಸಲ್ಲಿಸಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಎಸ್‌ಡಿಎಂಸಿ ಅಧ್ಯಕ್ಷ ಮಹ್ಮದರಫೀಕ ನಾಗರಾಳ ಮಾತನಾಡಿ, ಒಟ್ಟು 380 ವಿದ್ಯಾರ್ಥಿಗಳು ಈ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು ಉರ್ದು ಮತ್ತು ಇಂಗ್ಲಿಷ್ ವಿಭಾಗಗಳು ಇದ್ದು ಉರ್ದು ಮಾಧ್ಯಮದ 8 ತರಗತಿಗಳು ಮತ್ತು ಇಂಗ್ಲಿಷ್ ಮಾಧ್ಯಮದ 4 ತರಗತಿಗಳು ನಡೆಯುತ್ತಿವೆ.ಜೊತೆಗೆ ಎಸ್‌ಡಿಎಮ್‌ಸಿ ಸಹಾಯದಿಂದ ಎಲ್‌ಕೆಜಿ ಹಾಗೂ ಯುಕೆಜಿ ತರಗತಿಗಳು ನಡೆಯುತ್ತಿವೆ. ಮಕ್ಕಳಿಗೆ ಪಾಠ ಬೋಧನೆ ಮಾಡಲು ಒಟ್ಟು 13 ಕೊಠಡಿಗಳ ಅವಶ್ಯಕತೆ ಇದೆ. ಆದರೆ ಇರುವ ಕೊಠಡಿಗಳಲ್ಲಿ ನಾಲ್ಕು ಕೊಠಡಿಗಳು ಶಿಥಿಲಗೊಂಡಿವೆ ಎಂದು ತಿಳಿಸಿದರು.

ಎಲ್ಲಾ ತರಗತಿಗಳನ್ನು ನಡೆಸಲು ತೊಂದರೆಯಾಗುತ್ತಿದೆ. ಜೊತೆಗೆ ಬಿಸಿಯೂಟಿ ಕೊಠಡಿಯು ಸಹ ಶಿಥಿಲವಾಗಿದ್ದು, ಮಕ್ಕಳ ಆಹಾರ ತಯಾರಿಕೆ ಮಾಡಲು ತೊಂದರೆಯಾಗುತ್ತಿದೆ. ಈ ವ್ಯವಸ್ಥೆ ಪಾಲಕರು ತಮ್ಮ ಮಕ್ಕಳ ಟಿಸಿ ತೆಗೆದುಕೊಂಡು ಹೋಗಲು ಕಾರಣವಾಗುತ್ತಿದೆ. ಹೊಸದಾಗಿ ಐದು ಕೊಠಡಿಗಳನ್ನು ನಿರ್ಮಿಸಿಕೊಡಬೇಕು ಎಂದು ಮನವಿ ಮಾಡಿದರು.

ಈ ಬೇಡಿಕೆಗೆ ಸ್ಪಂದಿಸದಿದ್ದರೆ ಶಾಲೆಯನ್ನು ಬಂದ್ ಮಾಡಿ ಪ್ರತಿಭಟನೆ ಮಾಡುತ್ತೇವೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಶೀರಸ್ತೇದಾರ ಎಂ.ಎಸ್.ಬಾಗೇವಾಡಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಎಸ್‌ಡಿಎಂಸಿ ಸದಸ್ಯರಾದ ನಜೀರಅಹ್ಮದ್ ಮಮದಾಪುರ, ಲಾಡ್ಲೆಮಶ್ಯಾಕ ನದಾಫ, ರಿಯಾಜ್ ದೇಸಾಯಿ, ಅಬ್ದುಲ್‌ರಜಾಕ ಇಲಕಲ್, ಇರ್ಫಾನ್ ದೇಸಾಯಿ, ಮಹ್ಮದಹುಸೇನ ಪಠಾಣ, ಸುಲೇಮಾನ ನಾಯ್ಯೋಡಿ, ಉಮರ್‌ಫಾರೂಕ ಕೂಡಗಿ, ದಾವಲ್ ಗೊಳಸಂಗಿ, ಸಮಿಉಲ್ಲಾ ಹುಣಚಗಿ, ಸದ್ದಾಂ ನದಾಫ್, ಝುಬೈರ ಸಾತಿಹಾಳ್, ಝುಬೈರ ಮುದಗಲ್, ಸಯೀದ್ ಹುಣಚಗಿ ಇದ್ದರು.

ಇದನ್ನೂ ಓದಿ: Crime News: ಗ್ರಾಪಂ ಸಿಬ್ಬಂದಿಗೆ ಚಪ್ಪಲಿಯಿಂದ ಹಲ್ಲೆ ಮಾಡಿದ ಉಪಾಧ್ಯಕ್ಷೆ!

Latest News

ಕೂಲಿ ಕಾರ್ಮಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ

ಕೂಲಿ ಕಾರ್ಮಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ

ಮುದ್ದೇಬಿಹಾಳ : ಕೂಲಿಕಾರ್ಮಿಕನೊಬ್ಬ ಸಾಲದ ಬಾಧೆ ತಾಳದೇ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ

ಸಿಂಚನಾ ಸಜ್ಜನ ಸೈನಿಕ ಶಾಲೆಗೆ ಆಯ್ಕೆ

ಸಿಂಚನಾ ಸಜ್ಜನ ಸೈನಿಕ ಶಾಲೆಗೆ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಹಳ್ಳೂರ ಕ್ರಾಸ್ ನಲ್ಲಿರುವ ಹೊಸನಗರದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ

ಫಾಸ್ಟ್ ,ಜಂಕ್ ಫುಡ್ ಆರೋಗ್ಯಕ್ಕೆ ಮಾರಕ-ವಿ.ಜಿ.ರಾಮಚಂದ್ರಯ್ಯ

ಫಾಸ್ಟ್ ,ಜಂಕ್ ಫುಡ್ ಆರೋಗ್ಯಕ್ಕೆ ಮಾರಕ-ವಿ.ಜಿ.ರಾಮಚಂದ್ರಯ್ಯ

ಮುದ್ದೇಬಿಹಾಳ : ಫಾಸ್ಟ್ ಫುಡ್,ಜಂಕ್ ಫುಡ್‌ನಿಂದ ದೇಹದ ಮೇಲಿನ ದುಷ್ಪರಿಣಾಮ ಬೀರುತ್ತದೆ.ಅಂತಹ ಆಹಾರ ಪದಾರ್ಥಗಳ

ಜಾಗೃತಿಯೊಂದೇ ಏಡ್ಸ್ ನಿಯಂತ್ರಣಕ್ಕೆ ಮಾರ್ಗ – ಅನಸೂಯಾ ತೇರದಾಳ

ಜಾಗೃತಿಯೊಂದೇ ಏಡ್ಸ್ ನಿಯಂತ್ರಣಕ್ಕೆ ಮಾರ್ಗ – ಅನಸೂಯಾ ತೇರದಾಳ

ಮುದ್ದೇಬಿಹಾಳ : ಇಂದಿನ ಯುವಕ, ಯುವತಿಯರು ಏಡ್ಸ್ ಹಾಗೂ ಟಿಬಿಯಂತ ಮಾರಕ ರೋಗಗಳ ಬಗ್ಗೆ

ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ : ಚಾಲಕ್

ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ : ಚಾಲಕ್

ಮುದ್ದೇಬಿಹಾಳ : ಮನುಕುಲಕ್ಕೆ ಮಾರ್ಗದರ್ಶಿಯಾದ ಸರ್ವಜ್ಞರ ತ್ರಿಪದಿಗಳು ಇಂದಿಗೂ ಸಾರ್ವಕಾಲಿಕ ಸತ್ಯಗಳಾಗಿವೆ. ತಮ್ಮ ಸರಳ ಸಾಹಿತ್ಯದ ಮೂಲಕ ಸಮಾಜದ ಅಂಕು ಡೊಂಕುಗಳನ್ನು ತಿದ್ದುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು ಎಂದು ತಹಶೀಲ್ದಾರ್ ಕೀರ್ತಿ ಚಾಲಕ್ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಶುಕ್ರವಾರ ತಾಲೂಕು ಆಡಳಿತದ ವತಿಯಿಂದ ಏರ್ಪಡಿಸಲಾಗಿದ್ದ ತ್ರಿಪದಿ ಕವಿ, ಸರ್ವಜ್ಞರ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು. ಕನ್ನಡ ಸಾಹಿತ್ಯ ಲೋಕಕ್ಕೆ ಸರ್ವಜ್ಞರ ಕೊಡುಗೆ ಅಪಾರ

ಫೆ.22 ರಂದು ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಅವಾರ್ಡ್ ಎಕ್ಸಾಂ

ಫೆ.22 ರಂದು ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಅವಾರ್ಡ್ ಎಕ್ಸಾಂ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಗುರಡ್ಡಿ ಪೆಟ್ರೋಲ್ ಪಂಪ್ ಹತ್ತಿರದಲ್ಲಿರುವ ಆಕ್ಸಫರ್ಡ್ಸ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯ ಆಕ್ಸಫರ್ಡ್ಸ್ ಪಾಟೀಲ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿಫೆ.22 ರಂದು ಬೆಳಗ್ಗೆ 10ಕ್ಕೆ ಆಕ್ಸಫರ್ಡ್ ಚಾಂಪಿಯನ್ ಅವಾರ್ಡ ಪರೀಕ್ಷೆ ಹಾಗೂ ನಾಗರಬೆಟ್ಟದಲ್ಲಿ ಅದೇ ದಿನ ಆಕ್ಸಫರ್ಡ್ ಪಾಟೀಲ್ಸ್ ಸೀನಿಯರ್ ಜೀನಿಯಸ್ ಅವಾರ್ಡ್ ಪರೀಕ್ಷೆಗಳನ್ನು ತರಗತಿವಾರು ಆಯೋಜಿಸಲಾಗಿದೆ ಎಂದು ಸಂಸ್ಥೆಯ ಆಡಳಿತಾಧಿಕಾರಿ ಅಮಿತಗೌಡ ಎಂ.ಪಾಟೀಲ ತಿಳಿಸಿದರು. ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಆಂಗ್ಲ