Muddebihal: Demand to provide infrastructure to Urdu school

Muddebihal: ಉರ್ದು ಶಾಲೆಗೆ ಮೂಲಸೌರ‍್ಯ ಒದಗಿಸಲು ಆಗ್ರಹ

Muddebihal: ಉರ್ದು ಶಾಲೆಗೆ ಮೂಲಸೌರ‍್ಯ ಒದಗಿಸಲು ಆಗ್ರಹ

ಮುದ್ದೇಬಿಹಾಳ : ಪಟ್ಟಣದ ಸರಕಾರಿ ಉರ್ದು ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೊಠಡಿಗಳ ಕೊರತೆ ಇದ್ದು ಹೆಚ್ಚುವರಿ ಕೊಠಡಿಗಳನ್ನು ತ್ವರಿತವಾಗಿ ನಿರ್ಮಿಸಬೇಕು ಎಂದು ಆಗ್ರಹಿಸಿ ತಹಶೀಲ್ದಾರ್, ಬಿಇಒ ಹಾಗೂ Muddebihal ಪುರಸಭೆಗೆ ಎಸ್ಡಿಎಂಸಿ ಪದಾಧಿಕಾರಿಗಳು ಶುಕ್ರವಾರ ಪ್ರತ್ಯೇಕ ಮನವಿ ಪತ್ರ ಸಲ್ಲಿಸಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಎಸ್‌ಡಿಎಂಸಿ ಅಧ್ಯಕ್ಷ ಮಹ್ಮದರಫೀಕ ನಾಗರಾಳ ಮಾತನಾಡಿ, ಒಟ್ಟು 380 ವಿದ್ಯಾರ್ಥಿಗಳು ಈ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು ಉರ್ದು ಮತ್ತು ಇಂಗ್ಲಿಷ್ ವಿಭಾಗಗಳು ಇದ್ದು ಉರ್ದು ಮಾಧ್ಯಮದ 8 ತರಗತಿಗಳು ಮತ್ತು ಇಂಗ್ಲಿಷ್ ಮಾಧ್ಯಮದ 4 ತರಗತಿಗಳು ನಡೆಯುತ್ತಿವೆ.ಜೊತೆಗೆ ಎಸ್‌ಡಿಎಮ್‌ಸಿ ಸಹಾಯದಿಂದ ಎಲ್‌ಕೆಜಿ ಹಾಗೂ ಯುಕೆಜಿ ತರಗತಿಗಳು ನಡೆಯುತ್ತಿವೆ. ಮಕ್ಕಳಿಗೆ ಪಾಠ ಬೋಧನೆ ಮಾಡಲು ಒಟ್ಟು 13 ಕೊಠಡಿಗಳ ಅವಶ್ಯಕತೆ ಇದೆ. ಆದರೆ ಇರುವ ಕೊಠಡಿಗಳಲ್ಲಿ ನಾಲ್ಕು ಕೊಠಡಿಗಳು ಶಿಥಿಲಗೊಂಡಿವೆ ಎಂದು ತಿಳಿಸಿದರು.

ಎಲ್ಲಾ ತರಗತಿಗಳನ್ನು ನಡೆಸಲು ತೊಂದರೆಯಾಗುತ್ತಿದೆ. ಜೊತೆಗೆ ಬಿಸಿಯೂಟಿ ಕೊಠಡಿಯು ಸಹ ಶಿಥಿಲವಾಗಿದ್ದು, ಮಕ್ಕಳ ಆಹಾರ ತಯಾರಿಕೆ ಮಾಡಲು ತೊಂದರೆಯಾಗುತ್ತಿದೆ. ಈ ವ್ಯವಸ್ಥೆ ಪಾಲಕರು ತಮ್ಮ ಮಕ್ಕಳ ಟಿಸಿ ತೆಗೆದುಕೊಂಡು ಹೋಗಲು ಕಾರಣವಾಗುತ್ತಿದೆ. ಹೊಸದಾಗಿ ಐದು ಕೊಠಡಿಗಳನ್ನು ನಿರ್ಮಿಸಿಕೊಡಬೇಕು ಎಂದು ಮನವಿ ಮಾಡಿದರು.

ಈ ಬೇಡಿಕೆಗೆ ಸ್ಪಂದಿಸದಿದ್ದರೆ ಶಾಲೆಯನ್ನು ಬಂದ್ ಮಾಡಿ ಪ್ರತಿಭಟನೆ ಮಾಡುತ್ತೇವೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಶೀರಸ್ತೇದಾರ ಎಂ.ಎಸ್.ಬಾಗೇವಾಡಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಎಸ್‌ಡಿಎಂಸಿ ಸದಸ್ಯರಾದ ನಜೀರಅಹ್ಮದ್ ಮಮದಾಪುರ, ಲಾಡ್ಲೆಮಶ್ಯಾಕ ನದಾಫ, ರಿಯಾಜ್ ದೇಸಾಯಿ, ಅಬ್ದುಲ್‌ರಜಾಕ ಇಲಕಲ್, ಇರ್ಫಾನ್ ದೇಸಾಯಿ, ಮಹ್ಮದಹುಸೇನ ಪಠಾಣ, ಸುಲೇಮಾನ ನಾಯ್ಯೋಡಿ, ಉಮರ್‌ಫಾರೂಕ ಕೂಡಗಿ, ದಾವಲ್ ಗೊಳಸಂಗಿ, ಸಮಿಉಲ್ಲಾ ಹುಣಚಗಿ, ಸದ್ದಾಂ ನದಾಫ್, ಝುಬೈರ ಸಾತಿಹಾಳ್, ಝುಬೈರ ಮುದಗಲ್, ಸಯೀದ್ ಹುಣಚಗಿ ಇದ್ದರು.

ಇದನ್ನೂ ಓದಿ: Crime News: ಗ್ರಾಪಂ ಸಿಬ್ಬಂದಿಗೆ ಚಪ್ಪಲಿಯಿಂದ ಹಲ್ಲೆ ಮಾಡಿದ ಉಪಾಧ್ಯಕ್ಷೆ!

Latest News

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಮುದ್ದೇಬಿಹಾಳ(ಜಿಲ್ಲೆ : ವಿಜಯಪುರ) : ದೇಶದ ಪ್ರತಿಷ್ಠಿತ ಐಐಟಿ ಕಾಲೇಜುಗಳಲ್ಲಿ ಒಂದಾಗಿರುವ ಕಾನ್ಪುರದ ಐಐಟಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ : ಸಿಎಂ ಸಿದ್ಧರಾಮಯ್ಯನವರ ಅವಧಿಯಲ್ಲಿ ಕಳೆದ ಬಜೆಟ್‌ನಲ್ಲಿ ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದ ಬೆಳ್ಳಿ ಕವಚ ಕಳ್ಳತನ ಪ್ರಕರಣಕ್ಕೆ

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ ನಿರ್ಮಾಣ ಸಮಿತಿಯ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಸಮಿತಿಯ ಅಧ್ಯಕ್ಷರಾಗಿ ಪುನೀತ ಹಿಪ್ಪರಗಿ, ಉಪಾಧ್ಯಕ್ಷರಾಗಿ ಸೋಮನಗೌಡ ಬಿರಾದಾರ ಹಾಗೂ ಕಾರ್ಯದರ್ಶಿಯಾಗಿ ಕಾಶಿನಾಥ ಹುಗ್ಗಿ ಅವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಅಧ್ಯಕ್ಷ ಮಹಾಂತೇಶ ಬೂದಿಹಾಳಮಠ, ನೂತನ ಪದಾಧಿಕಾರಿಗಳು ಕಾರ್ಗಿಲ್ ಸಮಿತಿಯ ಉದ್ದೇಶಗಳನ್ನು ಮತ್ತಷ್ಟು ಬಲಪಡಿಸಿ, ದೇಶಭಕ್ತಿ ಹಾಗೂ ಸಾಮಾಜಿಕ ಸೇವಾ ಚಟುವಟಿಕೆಗಳಿಗೆ ಹೆಚ್ಚಿನ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ ಯುವಕನೋರ್ವ ಕರ್ತವ್ಯಕ್ಕೆ ಅಡ್ಡಿ ಪಡಿಸುವುದಲ್ಲದೆ, ಕಳೆದ ಒಂದು ವರ್ಷದಿಂದ ಉದ್ದೇಶಪೂರ್ವಕವಾಗಿ ತನ್ನ ವಿಡಿಯೋ,ಪೋಟೋ ಚಿತ್ರೀಕರಣ ಮಾಡಿ ಅಧಿಕಾರಿಗಳಿಗೆ ಹರಿ ಬಿಡುತ್ತಿದ್ದಾನೆ ಎಂದು ಆರೋಪಿಸಿದ ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ಹೊರ ಗುತ್ತಿಗೆ ಮಹಿಳಾ ಸಿಬ್ಬಂದಿಯೋರ್ವರು ಮಂಗಳವಾರ ಆಸ್ಪತ್ರೆಯಲ್ಲೇ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.ಏತನ್ಮಧ್ಯೆ ಘಟನೆ ಖಂಡಿಸಿ ಆಸ್ಪತ್ರೆಯ ಹೊರಗೆ