Muddebihal: Demand to provide infrastructure to Urdu school

Muddebihal: ಉರ್ದು ಶಾಲೆಗೆ ಮೂಲಸೌರ‍್ಯ ಒದಗಿಸಲು ಆಗ್ರಹ

Muddebihal: ಉರ್ದು ಶಾಲೆಗೆ ಮೂಲಸೌರ‍್ಯ ಒದಗಿಸಲು ಆಗ್ರಹ

ಮುದ್ದೇಬಿಹಾಳ : ಪಟ್ಟಣದ ಸರಕಾರಿ ಉರ್ದು ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೊಠಡಿಗಳ ಕೊರತೆ ಇದ್ದು ಹೆಚ್ಚುವರಿ ಕೊಠಡಿಗಳನ್ನು ತ್ವರಿತವಾಗಿ ನಿರ್ಮಿಸಬೇಕು ಎಂದು ಆಗ್ರಹಿಸಿ ತಹಶೀಲ್ದಾರ್, ಬಿಇಒ ಹಾಗೂ Muddebihal ಪುರಸಭೆಗೆ ಎಸ್ಡಿಎಂಸಿ ಪದಾಧಿಕಾರಿಗಳು ಶುಕ್ರವಾರ ಪ್ರತ್ಯೇಕ ಮನವಿ ಪತ್ರ ಸಲ್ಲಿಸಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಎಸ್‌ಡಿಎಂಸಿ ಅಧ್ಯಕ್ಷ ಮಹ್ಮದರಫೀಕ ನಾಗರಾಳ ಮಾತನಾಡಿ, ಒಟ್ಟು 380 ವಿದ್ಯಾರ್ಥಿಗಳು ಈ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು ಉರ್ದು ಮತ್ತು ಇಂಗ್ಲಿಷ್ ವಿಭಾಗಗಳು ಇದ್ದು ಉರ್ದು ಮಾಧ್ಯಮದ 8 ತರಗತಿಗಳು ಮತ್ತು ಇಂಗ್ಲಿಷ್ ಮಾಧ್ಯಮದ 4 ತರಗತಿಗಳು ನಡೆಯುತ್ತಿವೆ.ಜೊತೆಗೆ ಎಸ್‌ಡಿಎಮ್‌ಸಿ ಸಹಾಯದಿಂದ ಎಲ್‌ಕೆಜಿ ಹಾಗೂ ಯುಕೆಜಿ ತರಗತಿಗಳು ನಡೆಯುತ್ತಿವೆ. ಮಕ್ಕಳಿಗೆ ಪಾಠ ಬೋಧನೆ ಮಾಡಲು ಒಟ್ಟು 13 ಕೊಠಡಿಗಳ ಅವಶ್ಯಕತೆ ಇದೆ. ಆದರೆ ಇರುವ ಕೊಠಡಿಗಳಲ್ಲಿ ನಾಲ್ಕು ಕೊಠಡಿಗಳು ಶಿಥಿಲಗೊಂಡಿವೆ ಎಂದು ತಿಳಿಸಿದರು.

ಎಲ್ಲಾ ತರಗತಿಗಳನ್ನು ನಡೆಸಲು ತೊಂದರೆಯಾಗುತ್ತಿದೆ. ಜೊತೆಗೆ ಬಿಸಿಯೂಟಿ ಕೊಠಡಿಯು ಸಹ ಶಿಥಿಲವಾಗಿದ್ದು, ಮಕ್ಕಳ ಆಹಾರ ತಯಾರಿಕೆ ಮಾಡಲು ತೊಂದರೆಯಾಗುತ್ತಿದೆ. ಈ ವ್ಯವಸ್ಥೆ ಪಾಲಕರು ತಮ್ಮ ಮಕ್ಕಳ ಟಿಸಿ ತೆಗೆದುಕೊಂಡು ಹೋಗಲು ಕಾರಣವಾಗುತ್ತಿದೆ. ಹೊಸದಾಗಿ ಐದು ಕೊಠಡಿಗಳನ್ನು ನಿರ್ಮಿಸಿಕೊಡಬೇಕು ಎಂದು ಮನವಿ ಮಾಡಿದರು.

ಈ ಬೇಡಿಕೆಗೆ ಸ್ಪಂದಿಸದಿದ್ದರೆ ಶಾಲೆಯನ್ನು ಬಂದ್ ಮಾಡಿ ಪ್ರತಿಭಟನೆ ಮಾಡುತ್ತೇವೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಶೀರಸ್ತೇದಾರ ಎಂ.ಎಸ್.ಬಾಗೇವಾಡಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಎಸ್‌ಡಿಎಂಸಿ ಸದಸ್ಯರಾದ ನಜೀರಅಹ್ಮದ್ ಮಮದಾಪುರ, ಲಾಡ್ಲೆಮಶ್ಯಾಕ ನದಾಫ, ರಿಯಾಜ್ ದೇಸಾಯಿ, ಅಬ್ದುಲ್‌ರಜಾಕ ಇಲಕಲ್, ಇರ್ಫಾನ್ ದೇಸಾಯಿ, ಮಹ್ಮದಹುಸೇನ ಪಠಾಣ, ಸುಲೇಮಾನ ನಾಯ್ಯೋಡಿ, ಉಮರ್‌ಫಾರೂಕ ಕೂಡಗಿ, ದಾವಲ್ ಗೊಳಸಂಗಿ, ಸಮಿಉಲ್ಲಾ ಹುಣಚಗಿ, ಸದ್ದಾಂ ನದಾಫ್, ಝುಬೈರ ಸಾತಿಹಾಳ್, ಝುಬೈರ ಮುದಗಲ್, ಸಯೀದ್ ಹುಣಚಗಿ ಇದ್ದರು.

ಇದನ್ನೂ ಓದಿ: Crime News: ಗ್ರಾಪಂ ಸಿಬ್ಬಂದಿಗೆ ಚಪ್ಪಲಿಯಿಂದ ಹಲ್ಲೆ ಮಾಡಿದ ಉಪಾಧ್ಯಕ್ಷೆ!

Latest News

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ

ಅಂಜುಮನ್ ಸಂಸ್ಥೆಯಲ್ಲಿ ನನ್ನ ಮಕ್ಕಳು ಕಲಿಯುತ್ತಾರಾ ?-ನಾಡಗೌಡ ಪ್ರಶ್ನೆ

ಅಂಜುಮನ್ ಸಂಸ್ಥೆಯಲ್ಲಿ ನನ್ನ ಮಕ್ಕಳು ಕಲಿಯುತ್ತಾರಾ ?-ನಾಡಗೌಡ ಪ್ರಶ್ನೆ

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಪವಿತ್ರವಾದ ಸಂಸ್ಥೆಯಾಗಿದೆ. ಅಂಜುಮನ್ ಕಮೀಟಿ ಹದಿನೈದು ವರ್ಷಗಳಿಂದ ಅಭಿವೃದ್ಧಿ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ

ಟ್ಯಾಕ್ಸಿ,ಜೀಪ್ ಚಾಲಕರು,ಮಾಲೀಕರ ಸಂಘದಿoದ ಭಾವೈಕ್ಯತೆ ಸಂದೇಶ

ಟ್ಯಾಕ್ಸಿ,ಜೀಪ್ ಚಾಲಕರು,ಮಾಲೀಕರ ಸಂಘದಿoದ ಭಾವೈಕ್ಯತೆ ಸಂದೇಶ

ಮುದ್ದೇಬಿಹಾಳ : ಮುಸ್ಲಿಂರ ಹಬ್ಬಕ್ಕೆ ಹಿಂದೂಗಳು ಕೈಜೋಡಿಸುವುದು,ಹಿಂದೂಗಳ ಹಬ್ಬಕ್ಕೆ ಮುಸ್ಲಿಂ ಬಾಂಧವರು ಸಹಕಾರ ನೀಡುವ ಕಾರ್ಯಗಳಿಂದ ಸಮಾಜದಲ್ಲಿ ಭಾವೈಕ್ಯತೆ ಸೌಹಾರ್ದತೆ ನೆಲೆಸುತ್ತದೆ ಎಂದು ಗಣಿತ ಲೋಕ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಬಸವರಾಜ ಗುರವ ಹೇಳಿದರು. ಪಟ್ಟಣದ ಪುರಸಭೆ ಮುಂದೆ ಇರುವ ಗಜಾನನ ಟ್ಯಾಕ್ಸಿ ,ಜೀಪ್ ಚಾಲಕರು,ಮಾಲೀಕರ ಸಂಘದಿoದ ಏರ್ಪಡಿಸಿದ್ದ ಸಾರ್ವಜನಿಕ ಅನ್ನಸಂತರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜಾತಿ,ಧರ್ಮಗಳ ಮಧ್ಯೆ ಭಿನ್ನಾಭಿಪ್ರಾಯಗಳನ್ನು ಇಟ್ಟುಕೊಂಡು ದೇಶದ ಹಲವೆಡೆ ವಿಷಮ ಪರಿಸ್ಥಿತಿ ಸೃಷ್ಟಿಸುವ ಕಾರ್ಯ

ಹಸಿರು,ಅರ್ಧ ಚಂದ್ರ ಮುಸ್ಲಿಂರ ನಿಶಾನೆಯಲ್ಲ-ಲಾಲ್‌ಹುಸೇನ್ ಕಂದಗಲ್

ಹಸಿರು,ಅರ್ಧ ಚಂದ್ರ ಮುಸ್ಲಿಂರ ನಿಶಾನೆಯಲ್ಲ-ಲಾಲ್‌ಹುಸೇನ್ ಕಂದಗಲ್

ಮುದ್ದೇಬಿಹಾಳ : ಹಸಿರು ಬಣ್ಣ,ಅರ್ಧ ಚಂದ್ರಾಕೃತಿ,ನಕ್ಷತ್ರ ಇವು ಮುಸ್ಲಿಂರ ಗುರುತುಗಳಲ್ಲ.ಅದೇ ರೀತಿ ಕೇಸರಿ ಬಣ್ಣವೂ ಹಿಂದೂಗಳದ್ದಲ್ಲ.ಎಲ್ಲ ಬಣ್ಣಗಳು ಯಾವುದೇ ಒಂದು ಸಮುದಾಯಕ್ಕೆ ಸೇರಿಲ್ಲ.ಲಾಂಛನಗಳನ್ನು ನಾವು ಮಾಡಿಕೊಂಡು ನಮ್ಮ ನಮ್ಮಲ್ಲಿ ಬೇಧಗಳನ್ನು ಸೃಷ್ಟಿಸಿಕೊಳ್ಳುತ್ತಿದ್ದೇವೆ ಎಂದು ಇಳಕಲ್‌ನ ಖ್ಯಾತ ಪ್ರವಚನಕಾರ ಲಾಲ್‌ಹುಸೇನ್ ಕಂದಗಲ್ ಹೇಳಿದರು. ಪಟ್ಟಣದ ಸಾರಿಗೆ ಘಟಕದಲ್ಲಿ ಬುಧವಾರ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಾನವನ ಘನತೆ ಎತ್ತಿ ಹಿಡಿಯುವ ಕೆಲಸವನ್ನು ಪ್ರವಾದಿ