Muddebihal: Demand to provide infrastructure to Urdu school

Muddebihal: ಉರ್ದು ಶಾಲೆಗೆ ಮೂಲಸೌರ‍್ಯ ಒದಗಿಸಲು ಆಗ್ರಹ

Muddebihal: ಉರ್ದು ಶಾಲೆಗೆ ಮೂಲಸೌರ‍್ಯ ಒದಗಿಸಲು ಆಗ್ರಹ

ಮುದ್ದೇಬಿಹಾಳ : ಪಟ್ಟಣದ ಸರಕಾರಿ ಉರ್ದು ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೊಠಡಿಗಳ ಕೊರತೆ ಇದ್ದು ಹೆಚ್ಚುವರಿ ಕೊಠಡಿಗಳನ್ನು ತ್ವರಿತವಾಗಿ ನಿರ್ಮಿಸಬೇಕು ಎಂದು ಆಗ್ರಹಿಸಿ ತಹಶೀಲ್ದಾರ್, ಬಿಇಒ ಹಾಗೂ Muddebihal ಪುರಸಭೆಗೆ ಎಸ್ಡಿಎಂಸಿ ಪದಾಧಿಕಾರಿಗಳು ಶುಕ್ರವಾರ ಪ್ರತ್ಯೇಕ ಮನವಿ ಪತ್ರ ಸಲ್ಲಿಸಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಎಸ್‌ಡಿಎಂಸಿ ಅಧ್ಯಕ್ಷ ಮಹ್ಮದರಫೀಕ ನಾಗರಾಳ ಮಾತನಾಡಿ, ಒಟ್ಟು 380 ವಿದ್ಯಾರ್ಥಿಗಳು ಈ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು ಉರ್ದು ಮತ್ತು ಇಂಗ್ಲಿಷ್ ವಿಭಾಗಗಳು ಇದ್ದು ಉರ್ದು ಮಾಧ್ಯಮದ 8 ತರಗತಿಗಳು ಮತ್ತು ಇಂಗ್ಲಿಷ್ ಮಾಧ್ಯಮದ 4 ತರಗತಿಗಳು ನಡೆಯುತ್ತಿವೆ.ಜೊತೆಗೆ ಎಸ್‌ಡಿಎಮ್‌ಸಿ ಸಹಾಯದಿಂದ ಎಲ್‌ಕೆಜಿ ಹಾಗೂ ಯುಕೆಜಿ ತರಗತಿಗಳು ನಡೆಯುತ್ತಿವೆ. ಮಕ್ಕಳಿಗೆ ಪಾಠ ಬೋಧನೆ ಮಾಡಲು ಒಟ್ಟು 13 ಕೊಠಡಿಗಳ ಅವಶ್ಯಕತೆ ಇದೆ. ಆದರೆ ಇರುವ ಕೊಠಡಿಗಳಲ್ಲಿ ನಾಲ್ಕು ಕೊಠಡಿಗಳು ಶಿಥಿಲಗೊಂಡಿವೆ ಎಂದು ತಿಳಿಸಿದರು.

ಎಲ್ಲಾ ತರಗತಿಗಳನ್ನು ನಡೆಸಲು ತೊಂದರೆಯಾಗುತ್ತಿದೆ. ಜೊತೆಗೆ ಬಿಸಿಯೂಟಿ ಕೊಠಡಿಯು ಸಹ ಶಿಥಿಲವಾಗಿದ್ದು, ಮಕ್ಕಳ ಆಹಾರ ತಯಾರಿಕೆ ಮಾಡಲು ತೊಂದರೆಯಾಗುತ್ತಿದೆ. ಈ ವ್ಯವಸ್ಥೆ ಪಾಲಕರು ತಮ್ಮ ಮಕ್ಕಳ ಟಿಸಿ ತೆಗೆದುಕೊಂಡು ಹೋಗಲು ಕಾರಣವಾಗುತ್ತಿದೆ. ಹೊಸದಾಗಿ ಐದು ಕೊಠಡಿಗಳನ್ನು ನಿರ್ಮಿಸಿಕೊಡಬೇಕು ಎಂದು ಮನವಿ ಮಾಡಿದರು.

ಈ ಬೇಡಿಕೆಗೆ ಸ್ಪಂದಿಸದಿದ್ದರೆ ಶಾಲೆಯನ್ನು ಬಂದ್ ಮಾಡಿ ಪ್ರತಿಭಟನೆ ಮಾಡುತ್ತೇವೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಶೀರಸ್ತೇದಾರ ಎಂ.ಎಸ್.ಬಾಗೇವಾಡಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಎಸ್‌ಡಿಎಂಸಿ ಸದಸ್ಯರಾದ ನಜೀರಅಹ್ಮದ್ ಮಮದಾಪುರ, ಲಾಡ್ಲೆಮಶ್ಯಾಕ ನದಾಫ, ರಿಯಾಜ್ ದೇಸಾಯಿ, ಅಬ್ದುಲ್‌ರಜಾಕ ಇಲಕಲ್, ಇರ್ಫಾನ್ ದೇಸಾಯಿ, ಮಹ್ಮದಹುಸೇನ ಪಠಾಣ, ಸುಲೇಮಾನ ನಾಯ್ಯೋಡಿ, ಉಮರ್‌ಫಾರೂಕ ಕೂಡಗಿ, ದಾವಲ್ ಗೊಳಸಂಗಿ, ಸಮಿಉಲ್ಲಾ ಹುಣಚಗಿ, ಸದ್ದಾಂ ನದಾಫ್, ಝುಬೈರ ಸಾತಿಹಾಳ್, ಝುಬೈರ ಮುದಗಲ್, ಸಯೀದ್ ಹುಣಚಗಿ ಇದ್ದರು.

ಇದನ್ನೂ ಓದಿ: Crime News: ಗ್ರಾಪಂ ಸಿಬ್ಬಂದಿಗೆ ಚಪ್ಪಲಿಯಿಂದ ಹಲ್ಲೆ ಮಾಡಿದ ಉಪಾಧ್ಯಕ್ಷೆ!

Latest News

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡ ಎಂ.ಎಸ್.ಬಡದಾನಿ ಅವರಿಗೆ ತಾಲ್ಲೂಕಿನ ಅನುದಾನಿತ

ಟ್ಯಾಕ್ಸಿ,ಜೀಪ್ ಚಾಲಕರು,ಮಾಲೀಕರ ಸಂಘದಿoದ ಭಾವೈಕ್ಯತೆ ಸಂದೇಶ

ಟ್ಯಾಕ್ಸಿ,ಜೀಪ್ ಚಾಲಕರು,ಮಾಲೀಕರ ಸಂಘದಿoದ ಭಾವೈಕ್ಯತೆ ಸಂದೇಶ

ಮುದ್ದೇಬಿಹಾಳ : ಮುಸ್ಲಿಂರ ಹಬ್ಬಕ್ಕೆ ಹಿಂದೂಗಳು ಕೈಜೋಡಿಸುವುದು,ಹಿಂದೂಗಳ ಹಬ್ಬಕ್ಕೆ ಮುಸ್ಲಿಂ ಬಾಂಧವರು ಸಹಕಾರ ನೀಡುವ

ಹಸಿರು,ಅರ್ಧ ಚಂದ್ರ ಮುಸ್ಲಿಂರ ನಿಶಾನೆಯಲ್ಲ-ಲಾಲ್‌ಹುಸೇನ್ ಕಂದಗಲ್

ಹಸಿರು,ಅರ್ಧ ಚಂದ್ರ ಮುಸ್ಲಿಂರ ನಿಶಾನೆಯಲ್ಲ-ಲಾಲ್‌ಹುಸೇನ್ ಕಂದಗಲ್

ಮುದ್ದೇಬಿಹಾಳ : ಹಸಿರು ಬಣ್ಣ,ಅರ್ಧ ಚಂದ್ರಾಕೃತಿ,ನಕ್ಷತ್ರ ಇವು ಮುಸ್ಲಿಂರ ಗುರುತುಗಳಲ್ಲ.ಅದೇ ರೀತಿ ಕೇಸರಿ ಬಣ್ಣವೂ

3056 ಜನರಿಗೆ ನೋಟಿಸ್ ಕೊಡಲು ಸಿದ್ಧತೆ:          ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಂಟು ಹೊಸ ಮತಗಟ್ಟೆ ಸ್ಥಾಪನೆ

3056 ಜನರಿಗೆ ನೋಟಿಸ್ ಕೊಡಲು ಸಿದ್ಧತೆ: ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಂಟು ಹೊಸ ಮತಗಟ್ಟೆ ಸ್ಥಾಪನೆ

ಮುದ್ದೇಬಿಹಾಳ : ಮತಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಬಳಿಕ ಕರಡು ಪಟ್ಟಿ ಪ್ರಕಟಿಸಲಾಗಿದ್ದು

ಜಾನಪದ ಕ್ಷೇತ್ರದ ಪುನಃಶ್ಚೇತನಕ್ಕೆ ಶ್ರಮಿಸಿ-ಅಶೋಕ ತಡಸದ

ಜಾನಪದ ಕ್ಷೇತ್ರದ ಪುನಃಶ್ಚೇತನಕ್ಕೆ ಶ್ರಮಿಸಿ-ಅಶೋಕ ತಡಸದ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿರುವ ಜನಪದ ಕಲೆಗಳನ್ನು,ಕಲಾವಿದರನ್ನು ಗುರುತಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಶ್ರಮಿಸಬೇಕು ಎಂದು ಎಸ್.ಜಿ.ವಿ.ಸಿ ವಿದ್ಯಾಪ್ರಸಾರಕ ಟ್ರಸ್ಟ್ ಕಾರ್ಯದರ್ಶಿ ಅಶೋಕ ತಡಸದ ಹೇಳಿದರು. ಪಟ್ಟಣದ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಶನಿವಾರ ಕರ್ನಾಟಕ ಜಾನಪದ ಪರಿಷತ್ ತಾಲ್ಲೂಕು ಘಟಕದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಜಾನಪದ ಕಲೆಗಳನ್ನು ಬಲ್ಲವರು ಗ್ರಾಮೀಣ ಭಾಗದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿದ್ದಾರೆ.ಆದರೆ ಅವರಿಗೆ ಆರ್ಥಿಕ ಶಕ್ತಿ ಇಲ್ಲವಾಗಿದೆ.ಪರಿಷತ್ತಿನ ಮೂಲಕ ಆರ್ಥಿಕ ಶಕ್ತಿ ತುಂಬಲು ಸರ್ಕಾರದ

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :               ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :   ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಮುದ್ದೇಬಿಹಾಳ : ಅಕ್ಕ ತಂಗಿಯರ ಶವ ಬಾವಿಯಲ್ಲಿ ಪತ್ತೆಯಾಗಿರುವ ಹೃದಯ ವಿದ್ರಾವಕ ಘಟನೆ ತಾಲ್ಲೂಕಿನ ಬಳಬಟ್ಟಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.      ಏತನ್ಮಧ್ಯೆ ಬಾವಿಗೆ ತಂದೆಯೂ ಜಿಗಿದಿದ್ದಾನೆ ಎಂದು ಹೇಳಲಾಗಿದ್ದು ಆತನ ಶವ ಶೋಧಕ್ಕೆ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಹಗಲಿರಳು ಕಾರ್ಯಾಚರಣೆ ನಡೆಸಿದ್ದರೂ ಆತನ ಶವ ಪತ್ತೆಯಾಗಿಲ್ಲ.        ಬಾವಿಯಲ್ಲಿ ಮುಳುಗಿ ಮೃತಪಟ್ಟಿರುವ  ಬಾಲಕಿಯರನ್ನು ಹಿರಿಯ ಸಹೋದರಿ ರಕ್ಷಿತಾ ಬರಗಿ(15) ಹಾಗೂ ಕಿರಿಯ ಸಹೋದರಿ ಸಾಕ್ಷಿ ಬರಗಿ(10) ಎಂದು