Muddebihal: Demand to provide infrastructure to Urdu school

Muddebihal: ಉರ್ದು ಶಾಲೆಗೆ ಮೂಲಸೌರ‍್ಯ ಒದಗಿಸಲು ಆಗ್ರಹ

Muddebihal: ಉರ್ದು ಶಾಲೆಗೆ ಮೂಲಸೌರ‍್ಯ ಒದಗಿಸಲು ಆಗ್ರಹ

ಮುದ್ದೇಬಿಹಾಳ : ಪಟ್ಟಣದ ಸರಕಾರಿ ಉರ್ದು ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೊಠಡಿಗಳ ಕೊರತೆ ಇದ್ದು ಹೆಚ್ಚುವರಿ ಕೊಠಡಿಗಳನ್ನು ತ್ವರಿತವಾಗಿ ನಿರ್ಮಿಸಬೇಕು ಎಂದು ಆಗ್ರಹಿಸಿ ತಹಶೀಲ್ದಾರ್, ಬಿಇಒ ಹಾಗೂ Muddebihal ಪುರಸಭೆಗೆ ಎಸ್ಡಿಎಂಸಿ ಪದಾಧಿಕಾರಿಗಳು ಶುಕ್ರವಾರ ಪ್ರತ್ಯೇಕ ಮನವಿ ಪತ್ರ ಸಲ್ಲಿಸಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಎಸ್‌ಡಿಎಂಸಿ ಅಧ್ಯಕ್ಷ ಮಹ್ಮದರಫೀಕ ನಾಗರಾಳ ಮಾತನಾಡಿ, ಒಟ್ಟು 380 ವಿದ್ಯಾರ್ಥಿಗಳು ಈ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು ಉರ್ದು ಮತ್ತು ಇಂಗ್ಲಿಷ್ ವಿಭಾಗಗಳು ಇದ್ದು ಉರ್ದು ಮಾಧ್ಯಮದ 8 ತರಗತಿಗಳು ಮತ್ತು ಇಂಗ್ಲಿಷ್ ಮಾಧ್ಯಮದ 4 ತರಗತಿಗಳು ನಡೆಯುತ್ತಿವೆ.ಜೊತೆಗೆ ಎಸ್‌ಡಿಎಮ್‌ಸಿ ಸಹಾಯದಿಂದ ಎಲ್‌ಕೆಜಿ ಹಾಗೂ ಯುಕೆಜಿ ತರಗತಿಗಳು ನಡೆಯುತ್ತಿವೆ. ಮಕ್ಕಳಿಗೆ ಪಾಠ ಬೋಧನೆ ಮಾಡಲು ಒಟ್ಟು 13 ಕೊಠಡಿಗಳ ಅವಶ್ಯಕತೆ ಇದೆ. ಆದರೆ ಇರುವ ಕೊಠಡಿಗಳಲ್ಲಿ ನಾಲ್ಕು ಕೊಠಡಿಗಳು ಶಿಥಿಲಗೊಂಡಿವೆ ಎಂದು ತಿಳಿಸಿದರು.

ಎಲ್ಲಾ ತರಗತಿಗಳನ್ನು ನಡೆಸಲು ತೊಂದರೆಯಾಗುತ್ತಿದೆ. ಜೊತೆಗೆ ಬಿಸಿಯೂಟಿ ಕೊಠಡಿಯು ಸಹ ಶಿಥಿಲವಾಗಿದ್ದು, ಮಕ್ಕಳ ಆಹಾರ ತಯಾರಿಕೆ ಮಾಡಲು ತೊಂದರೆಯಾಗುತ್ತಿದೆ. ಈ ವ್ಯವಸ್ಥೆ ಪಾಲಕರು ತಮ್ಮ ಮಕ್ಕಳ ಟಿಸಿ ತೆಗೆದುಕೊಂಡು ಹೋಗಲು ಕಾರಣವಾಗುತ್ತಿದೆ. ಹೊಸದಾಗಿ ಐದು ಕೊಠಡಿಗಳನ್ನು ನಿರ್ಮಿಸಿಕೊಡಬೇಕು ಎಂದು ಮನವಿ ಮಾಡಿದರು.

ಈ ಬೇಡಿಕೆಗೆ ಸ್ಪಂದಿಸದಿದ್ದರೆ ಶಾಲೆಯನ್ನು ಬಂದ್ ಮಾಡಿ ಪ್ರತಿಭಟನೆ ಮಾಡುತ್ತೇವೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಶೀರಸ್ತೇದಾರ ಎಂ.ಎಸ್.ಬಾಗೇವಾಡಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಎಸ್‌ಡಿಎಂಸಿ ಸದಸ್ಯರಾದ ನಜೀರಅಹ್ಮದ್ ಮಮದಾಪುರ, ಲಾಡ್ಲೆಮಶ್ಯಾಕ ನದಾಫ, ರಿಯಾಜ್ ದೇಸಾಯಿ, ಅಬ್ದುಲ್‌ರಜಾಕ ಇಲಕಲ್, ಇರ್ಫಾನ್ ದೇಸಾಯಿ, ಮಹ್ಮದಹುಸೇನ ಪಠಾಣ, ಸುಲೇಮಾನ ನಾಯ್ಯೋಡಿ, ಉಮರ್‌ಫಾರೂಕ ಕೂಡಗಿ, ದಾವಲ್ ಗೊಳಸಂಗಿ, ಸಮಿಉಲ್ಲಾ ಹುಣಚಗಿ, ಸದ್ದಾಂ ನದಾಫ್, ಝುಬೈರ ಸಾತಿಹಾಳ್, ಝುಬೈರ ಮುದಗಲ್, ಸಯೀದ್ ಹುಣಚಗಿ ಇದ್ದರು.

ಇದನ್ನೂ ಓದಿ: Crime News: ಗ್ರಾಪಂ ಸಿಬ್ಬಂದಿಗೆ ಚಪ್ಪಲಿಯಿಂದ ಹಲ್ಲೆ ಮಾಡಿದ ಉಪಾಧ್ಯಕ್ಷೆ!

Latest News

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ ಸಹಕಾರದಿಂದ ಗಣತಿ ನಮೂನೆಗಳ ವಿತರಣೆ ಕಾರ್ಯದಲ್ಲಿ ಮುದ್ದೇಬಿಹಾಳ ಮತಕ್ಷೇತ್ರ ಶೇ.98.38ರಷ್ಟು ಸಾಧನೆ ಮಾಡಿ ವಿಜಯಪುರ ಜಿಲ್ಲೆಗೆ ಎರಡನೇ ಸ್ಥಾನ ಪಡೆದುಕೊಂಡಿದೆ ಎಂದು ಮತದಾರರ ನೋಂದಣಾಧಿಕಾರಿ,ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯ ಕುರಿತು ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.2,28,285 ಮತದಾರರಲ್ಲಿ 2,24,589 ಮತದಾರರಿಗೆ ಗಣತಿ ನಮೂನೆ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ