Muddebihal: ಶಿಕ್ಷಣ ಯಾರಿಂದಲೂ ಕಸಿದುಕೊಳ್ಳಲಾಗದ ಆಸ್ತಿ: ಪಲ್ಲವಿ

Muddebihal: ಶಿಕ್ಷಣ ಯಾರಿಂದಲೂ ಕಸಿದುಕೊಳ್ಳಲಾಗದ ಆಸ್ತಿ: ಪಲ್ಲವಿ


ಮುದ್ದೇಬಿಹಾಳ: ಸಂಘ, ಸಂಸ್ಥೆಗಳು ಎಲ್ಲರನ್ನೂ ಸೇರಿಸಿಕೊಂಡು, ಸರ್ವರ ಏಳ್ಗೆಗೆ ಶ್ರಮಿಸುವ ಕೆಲಸ ಮಾಡಬೇಕು ಎಂದು ದೇವಿಕಾ ಸುಬ್ಬರಾವ್ ಫೌಂಡೇಶನ್ ಅಧ್ಯಕ್ಷೆ, ಸಮಾಜ ಸೇವಕಿ ಪಲ್ಲವಿ ನಾಡಗೌಡ ಹೇಳಿದರು.

ಪಟ್ಟಣದ ಟಾಪ್ ಇನ್ ಟೌನ್ ಹಾಲ್ ನಲ್ಲಿ ಪ್ರಗತಿ ಜೆಸಿ ಸಂಸ್ಥೆಯ 2024-25 ನೇ ಸಾಲಿನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

Join Our Telegram: https://t.me/dcgkannada

ಸಮಾಜಮುಖಿ ಕೆಲಸಗಳು ಮತ್ತು ಪಾರದರ್ಶಕತೆ ಸಂಘ ಸಂಸ್ಥೆಗಳ ಮೇಲಿನ ನಂಬಿಕೆಗೆ ಮುಖ್ಯ ಕಾರಣವಾಗುತ್ತವೆ. ಜೆಸಿ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಶಿಕ್ಷಣ ಸಂಸ್ಥೆಯಿಂದ ಅತ್ಯುತ್ತಮ ಶಿಕ್ಷಣ ನೂರಾರು ಮಕ್ಕಳಿಗೆ ಲಭಿಸುತ್ತಿರುವುದು ಸಂತಸದ ವಿಷಯ. ಶಿಕ್ಷಣದಿಂದ ದೊರಕುವ ಶಕ್ತಿ ದೊಡ್ಡದು. ಎಂದರು.

ಅತಿಥಿಗಳಾಗಿದ್ದ ವಿಜಯಪುರ ಜಿಲ್ಲಾ ಬಿಜೆಪಿ ಅಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ ಮಾತನಾಡಿ, ಒಂದು ಸಂಸ್ಥೆಯ ನೇತೃತ್ವ ವಹಿಸಿಕೊಂಡ ಕೆಲವರು, ಕೆಲವೇ ದಿನಗಳಲ್ಲಿ ಆ ಇಡೀ ಸಂಸ್ಥೆಯನ್ನು ತಮ್ಮ ಕುಟುಂಬದ ಆಸ್ತಿಯನ್ನಾಗಿಸಿಕೊಂಡ ಜ್ವಲಂತ ಉದಾಹರಣೆಗಳು ನಮ್ಮ ಮುಂದೆ ಇವೆ. ಆದರೆ ಜೆಸಿ ಸಂಸ್ಥೆಯ ಸದಸ್ಯರು ಫಲಾಪೇಕ್ಷೆ ಇಲ್ಲದೇ ಸ್ವಂತಕ್ಕೆ ಸ್ವಲ್ಪ, ಸಮಾಜಕ್ಕೆ ಸರ್ವಸ್ವ ಎನ್ನುವ ತತ್ವದಡಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.

ಸಭೆಯಲ್ಲಿ ಬೆಂಗಳೂರು ಮಹಾ ನಗರಸಭೆಯ ವಿಶೇಷ ಆಯುಕ್ತ ಶಿವಾನಂದ ಕಲಕೇರಿ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರ ಆಪ್ತ ಕಾರ್ಯದರ್ಶಿ ಶ್ರೀಶೈಲ ಬಿದರಕುಂದಿ ಮಾತನಾಡಿದರು.

ಅಹಲ್ಯಾದೇವಿ ಹೋಳ್ಕರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮಲ್ಲಿಕಾರ್ಜುನ ಮದರಿ, ಜೆಸಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ರವಿ ತಡಸದ ಅಧ್ಯಕ್ಷರಾದ ಗುರುಲಿಂಗಪ್ಪಗೌಡ ಪಾಟೀಲ, ನಿಕಟಪೂರ್ವ ಅಧ್ಯಕ್ಷರಾದ ಮಹಾಬಲೇಶ್ವರ ಶಿ.ಗಡೇದ, ಕಾರ್ಯದರ್ಶಿ ಮುತ್ತು ಕಡಿ ವೇದಿಕೆಯಲ್ಲಿದ್ದರು.

ಇದನ್ನೂ‌ ಓದಿ: Murder case: ಶೆಡ್‌ನಲ್ಲಿ ನಡೀತು ಮತ್ತೊಂದು ಭೀಕರ ಹತ್ಯೆ..! ಇಲ್ಲಿ ಸ್ನೇಹಿತನೇ ಕೊಲೆಗಾರ

2024-25 ನೇ ಸಾಲಿನ ನೂತನ ಅಧ್ಯಕ್ಷರಾಗಿ ಉದ್ಯಮಿ ಶರಣು ಅಯ್ಯಪ್ಪ ಸಜ್ಜನ ಹಾಗೂ ಕಾರ್ಯದರ್ಶಿಯಾಗಿ ಸುನೀಲ್ ಇಲ್ಲೂರ ಅಧಿಕಾರ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಜೆಸಿ ಸಂಸ್ಥೆಗೆ ಸಲಹಾ ಸಮಿತಿಯ ಸದಸ್ಯರನ್ನಾಗಿ ಬಾಲಾಜಿ ಶುಗರ್ಸನ ರಾಹುಲ ಪಾಟೀಲ ಹಾಗೂ ಆರ್.ಎಸ್.ಪಾಟೀಲ ಅವರನ್ನು ಸೇರಿಸಿಕೊಳ್ಳಲಾಯಿತು.

ಸಮಾರಂಭದಲ್ಲಿ ವಿವಿದ ಕ್ಷೇತ್ರಗಳಲ್ಲಿ ಸಾಧನೆ ತೋರಿದ ಜೆಸಿ ಸದಸ್ಯರನ್ನು ಹಾಗೂ ಮಕ್ಕಳನ್ನು ಸನ್ಮಾನಿಸಲಾಯಿತು.

ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ್ದ ಕುಂಟೋಜಿಯ ಭಾವೈಕ್ಯತೆ ಹಿರೇಮಠದ ಡಾ.ಚನ್ನವೀರ ಶಿವಾಚಾರ್ಯರು ಆಶೀರ್ವಚನ ನೀಡಿ, ಸಂಘ, ಸಂಸ್ಥೆಗಳು ದೀನರ, ದಲಿತರ, ದುರ್ಬಲರ, ನೊಂದವರ ಜೀವನಾಡಿಯಾಗಿ ಬೆಳೆಯಬೇಕು. ಸಮಾಜದ ಸರ್ವರ ಕಲ್ಯಾಣಕ್ಕೆ ಸಮಾಜ ಸೇವಾದೀಕ್ಷೆ ಪಡೆಯಬೇಕು ಎಂದರು.

ಜೆಸಿ ಶಾಲೆಯ ಮಕ್ಕಳು ಪ್ರಾರ್ಥಿಸಿದರು. ಡಾ.ವೀರೇಶ ಪಾಟೀಲ ಸ್ವಾಗತಿಸಿದರು. ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಸಹಾಯಕ ಆಯುಕ್ತ ಅರವಿಂದ ಜಮಖಂಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೊ.ಎಸ್.ಎಸ್.ಹೂಗಾರ ಹಾಗೂ ಮಹಾಬಲೇಶ್ವರ ಗಡೇದ ನಿರೂಪಿಸಿದರು.

Latest News

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಅವೈಜ್ಞಾನಿಕ ಆದಾಯ ಮಿತಿ ರದ್ದುಗೊಳಿಸಲು ವಿಕಲಚೇತನರ ಆಗ್ರಹ

ಅವೈಜ್ಞಾನಿಕ ಆದಾಯ ಮಿತಿ ರದ್ದುಗೊಳಿಸಲು ವಿಕಲಚೇತನರ ಆಗ್ರಹ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಸರಕಾರ ಸಾಮಾಜಿಕ ಭದ್ರತೆ ಯೋಜನೆಗಳ ಅಡಿ ನೀಡಲಾಗುವ ಮಾಶಾಸನಕ್ಕೆ

ಎಂಎಲ್‌ಎ,ಮಂತ್ರಿಗಳ ವೇತನ,ಭತ್ಯೆ ಕಡಿತಗೊಳಿಸಿ-ಎ.ಎಸ್.ಪಾಟೀಲ್ ನಡಹಳ್ಳಿ

ಎಂಎಲ್‌ಎ,ಮಂತ್ರಿಗಳ ವೇತನ,ಭತ್ಯೆ ಕಡಿತಗೊಳಿಸಿ-ಎ.ಎಸ್.ಪಾಟೀಲ್ ನಡಹಳ್ಳಿ

ಮುದ್ದೇಬಿಹಾಳ : ಹಿಂದೆoದೂ ಕಂಡರಿಯದoತ ಭೀಕರ ಬರಗಾಲ ಈ ವರ್ಷ ಬಂದಿದ್ದು ರೈತರ ಖಾತೆಗೆ

ಅಂಜುಮನ್ ಚುನಾವಣೆಯಲ್ಲಿ ಮಹತ್ವದ ಬೆಳವಣಿಗೆ: ಮಕಾನದಾರ,ದಫೇದಾರ,ಸೋಠೆ,ಗೋಲಂದಾಜಗೆ ಹೈಕೋರ್ಟ್ ಬಿಗ್ ರಿಲೀಫ್

ಅಂಜುಮನ್ ಚುನಾವಣೆಯಲ್ಲಿ ಮಹತ್ವದ ಬೆಳವಣಿಗೆ: ಮಕಾನದಾರ,ದಫೇದಾರ,ಸೋಠೆ,ಗೋಲಂದಾಜಗೆ ಹೈಕೋರ್ಟ್ ಬಿಗ್ ರಿಲೀಫ್

ಮುದ್ದೇಬಿಹಾಳ : ಮಹತ್ವದ ಬೆಳವಣಿಗೆಯೊಂದರಲ್ಲಿ ಪಟ್ಟಣದ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯಲ್ಲಿ ತಿರಸ್ಕಾರಗೊಂಡಿದ್ದ ನಾಲ್ವರ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ ಬುಡಕಟ್ಟು ದಿನಾಚರಣೆ ಸಮಾರಂಭ ಆ.8 ರಂದು ಮದ್ಯಾಹ್ನ 12.30ಕ್ಕೆ ಪಟ್ಟಣದ ಎಂಜಿಎoಕೆ ಶಾಲೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಪರಿಷತ್ ರಾಜ್ಯಾಧ್ಯಕ್ಷ ಜಾನಪದ ಎಸ್.ಬಾಲಾಜಿ ಉದ್ಘಾಟಿಸುವರು.ಎಂಜಿಎAಕೆ ಸಂಸ್ಥೆಯ ಅಧ್ಯಕ್ಷ ಮನೋಹರ ಕೋರಿ ಉಪಸ್ಥಿತರಿರುವರು.ಕನ್ನಡ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಬಾಳನಗೌಡ ಪಾಟೀಲ ಅಧ್ಯಕ್ಷತೆ ವಹಿಸುವರು.ಬಾಗಲಕೋಟ ಕಜಾಪ ಜಿಲ್ಲಾಧ್ಯಕ್ಷ ಡಿ.ಎಂ.ಸಾಹುಕಾರ ಪ್ರಾಸ್ತಾವಿಕ ನುಡಿಗಳನ್ನಾಡುವರು. ಕಜಾಪ ಜಿಲ್ಲಾ ಸಂಚಾಲಕ ಪುಂಡಲೀಕ ಮುರಾಳ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ ಭೇದಿಸಿರುವ ವಿಜಯಪುರ ಜಿಲ್ಲೆಯ ಪೊಲೀಸರು ಗುಜರಾತ ಮೂಲದ ಅಂತರಾಜ್ಯ ಮಟ್ಟದ ಮೂವರು ಕಳ್ಳರನ್ನು ಬಂಧಿಸಿ ಅವರಿಂದ ತುಂಡರಿಸಿದ ಬೆಳ್ಳಿ ಹಾಗೂ ಬೆಳ್ಳಿ ತುಣುಕು ಸೇರಿ ಹಲವು ಸಾಮಗ್ರಿ ವಶಕ್ಕೆ ಪಡೆದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಬೆಳಗಾವಿ ಉತ್ತರ ವಲಯದ ಐಜಿಪಿ ಸಂದೀಪ ಪಾಟೀಲ ಅವರು,ಕಳೆದ ಜು. 5 ರಂದು ರಾತ್ರಿ ಬಸರಕೋಡದ ಪವಾಡಬಸವೇಶ್ವರ