Muddebihal: ಶಿಕ್ಷಣ ಯಾರಿಂದಲೂ ಕಸಿದುಕೊಳ್ಳಲಾಗದ ಆಸ್ತಿ: ಪಲ್ಲವಿ

Muddebihal: ಶಿಕ್ಷಣ ಯಾರಿಂದಲೂ ಕಸಿದುಕೊಳ್ಳಲಾಗದ ಆಸ್ತಿ: ಪಲ್ಲವಿ


ಮುದ್ದೇಬಿಹಾಳ: ಸಂಘ, ಸಂಸ್ಥೆಗಳು ಎಲ್ಲರನ್ನೂ ಸೇರಿಸಿಕೊಂಡು, ಸರ್ವರ ಏಳ್ಗೆಗೆ ಶ್ರಮಿಸುವ ಕೆಲಸ ಮಾಡಬೇಕು ಎಂದು ದೇವಿಕಾ ಸುಬ್ಬರಾವ್ ಫೌಂಡೇಶನ್ ಅಧ್ಯಕ್ಷೆ, ಸಮಾಜ ಸೇವಕಿ ಪಲ್ಲವಿ ನಾಡಗೌಡ ಹೇಳಿದರು.

ಪಟ್ಟಣದ ಟಾಪ್ ಇನ್ ಟೌನ್ ಹಾಲ್ ನಲ್ಲಿ ಪ್ರಗತಿ ಜೆಸಿ ಸಂಸ್ಥೆಯ 2024-25 ನೇ ಸಾಲಿನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

Join Our Telegram: https://t.me/dcgkannada

ಸಮಾಜಮುಖಿ ಕೆಲಸಗಳು ಮತ್ತು ಪಾರದರ್ಶಕತೆ ಸಂಘ ಸಂಸ್ಥೆಗಳ ಮೇಲಿನ ನಂಬಿಕೆಗೆ ಮುಖ್ಯ ಕಾರಣವಾಗುತ್ತವೆ. ಜೆಸಿ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಶಿಕ್ಷಣ ಸಂಸ್ಥೆಯಿಂದ ಅತ್ಯುತ್ತಮ ಶಿಕ್ಷಣ ನೂರಾರು ಮಕ್ಕಳಿಗೆ ಲಭಿಸುತ್ತಿರುವುದು ಸಂತಸದ ವಿಷಯ. ಶಿಕ್ಷಣದಿಂದ ದೊರಕುವ ಶಕ್ತಿ ದೊಡ್ಡದು. ಎಂದರು.

ಅತಿಥಿಗಳಾಗಿದ್ದ ವಿಜಯಪುರ ಜಿಲ್ಲಾ ಬಿಜೆಪಿ ಅಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ ಮಾತನಾಡಿ, ಒಂದು ಸಂಸ್ಥೆಯ ನೇತೃತ್ವ ವಹಿಸಿಕೊಂಡ ಕೆಲವರು, ಕೆಲವೇ ದಿನಗಳಲ್ಲಿ ಆ ಇಡೀ ಸಂಸ್ಥೆಯನ್ನು ತಮ್ಮ ಕುಟುಂಬದ ಆಸ್ತಿಯನ್ನಾಗಿಸಿಕೊಂಡ ಜ್ವಲಂತ ಉದಾಹರಣೆಗಳು ನಮ್ಮ ಮುಂದೆ ಇವೆ. ಆದರೆ ಜೆಸಿ ಸಂಸ್ಥೆಯ ಸದಸ್ಯರು ಫಲಾಪೇಕ್ಷೆ ಇಲ್ಲದೇ ಸ್ವಂತಕ್ಕೆ ಸ್ವಲ್ಪ, ಸಮಾಜಕ್ಕೆ ಸರ್ವಸ್ವ ಎನ್ನುವ ತತ್ವದಡಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.

ಸಭೆಯಲ್ಲಿ ಬೆಂಗಳೂರು ಮಹಾ ನಗರಸಭೆಯ ವಿಶೇಷ ಆಯುಕ್ತ ಶಿವಾನಂದ ಕಲಕೇರಿ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರ ಆಪ್ತ ಕಾರ್ಯದರ್ಶಿ ಶ್ರೀಶೈಲ ಬಿದರಕುಂದಿ ಮಾತನಾಡಿದರು.

ಅಹಲ್ಯಾದೇವಿ ಹೋಳ್ಕರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮಲ್ಲಿಕಾರ್ಜುನ ಮದರಿ, ಜೆಸಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ರವಿ ತಡಸದ ಅಧ್ಯಕ್ಷರಾದ ಗುರುಲಿಂಗಪ್ಪಗೌಡ ಪಾಟೀಲ, ನಿಕಟಪೂರ್ವ ಅಧ್ಯಕ್ಷರಾದ ಮಹಾಬಲೇಶ್ವರ ಶಿ.ಗಡೇದ, ಕಾರ್ಯದರ್ಶಿ ಮುತ್ತು ಕಡಿ ವೇದಿಕೆಯಲ್ಲಿದ್ದರು.

ಇದನ್ನೂ‌ ಓದಿ: Murder case: ಶೆಡ್‌ನಲ್ಲಿ ನಡೀತು ಮತ್ತೊಂದು ಭೀಕರ ಹತ್ಯೆ..! ಇಲ್ಲಿ ಸ್ನೇಹಿತನೇ ಕೊಲೆಗಾರ

2024-25 ನೇ ಸಾಲಿನ ನೂತನ ಅಧ್ಯಕ್ಷರಾಗಿ ಉದ್ಯಮಿ ಶರಣು ಅಯ್ಯಪ್ಪ ಸಜ್ಜನ ಹಾಗೂ ಕಾರ್ಯದರ್ಶಿಯಾಗಿ ಸುನೀಲ್ ಇಲ್ಲೂರ ಅಧಿಕಾರ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಜೆಸಿ ಸಂಸ್ಥೆಗೆ ಸಲಹಾ ಸಮಿತಿಯ ಸದಸ್ಯರನ್ನಾಗಿ ಬಾಲಾಜಿ ಶುಗರ್ಸನ ರಾಹುಲ ಪಾಟೀಲ ಹಾಗೂ ಆರ್.ಎಸ್.ಪಾಟೀಲ ಅವರನ್ನು ಸೇರಿಸಿಕೊಳ್ಳಲಾಯಿತು.

ಸಮಾರಂಭದಲ್ಲಿ ವಿವಿದ ಕ್ಷೇತ್ರಗಳಲ್ಲಿ ಸಾಧನೆ ತೋರಿದ ಜೆಸಿ ಸದಸ್ಯರನ್ನು ಹಾಗೂ ಮಕ್ಕಳನ್ನು ಸನ್ಮಾನಿಸಲಾಯಿತು.

ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ್ದ ಕುಂಟೋಜಿಯ ಭಾವೈಕ್ಯತೆ ಹಿರೇಮಠದ ಡಾ.ಚನ್ನವೀರ ಶಿವಾಚಾರ್ಯರು ಆಶೀರ್ವಚನ ನೀಡಿ, ಸಂಘ, ಸಂಸ್ಥೆಗಳು ದೀನರ, ದಲಿತರ, ದುರ್ಬಲರ, ನೊಂದವರ ಜೀವನಾಡಿಯಾಗಿ ಬೆಳೆಯಬೇಕು. ಸಮಾಜದ ಸರ್ವರ ಕಲ್ಯಾಣಕ್ಕೆ ಸಮಾಜ ಸೇವಾದೀಕ್ಷೆ ಪಡೆಯಬೇಕು ಎಂದರು.

ಜೆಸಿ ಶಾಲೆಯ ಮಕ್ಕಳು ಪ್ರಾರ್ಥಿಸಿದರು. ಡಾ.ವೀರೇಶ ಪಾಟೀಲ ಸ್ವಾಗತಿಸಿದರು. ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಸಹಾಯಕ ಆಯುಕ್ತ ಅರವಿಂದ ಜಮಖಂಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೊ.ಎಸ್.ಎಸ್.ಹೂಗಾರ ಹಾಗೂ ಮಹಾಬಲೇಶ್ವರ ಗಡೇದ ನಿರೂಪಿಸಿದರು.

Latest News

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಮುದ್ದೇಬಿಹಾಳ : ಹೆಚ್ಚುತ್ತಿರುವ ಜನಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆ ಮತ್ತಷ್ಟು ದಕ್ಷತೆಯಿಂದ

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಮುದ್ದೇಬಿಹಾಳ : ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಕುಟುಂಬದವರು ಪರಿಶ್ರಮದಿಂದ ಗಳಿಸಿದ ಆಸ್ತಿಯನ್ನು ದಾನ ಮಾಡುವ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು:                      ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು: ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಪಟ್ಟಣದಲ್ಲಿದ್ದ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ ಬಿಟ್ಟರೆ ಮತ್ತೊಂದು

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಶಿಕ್ಷಣ,ಆರ್ಥಿಕ  ಸಬಲತೆಗೆ ಒತ್ತು ನೀಡಿ:                                       ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಶಿಕ್ಷಣ,ಆರ್ಥಿಕ ಸಬಲತೆಗೆ ಒತ್ತು ನೀಡಿ: ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಹಿಂದುಳಿದ ಸಮಾಜದಲ್ಲಿ ಜನಿಸಿದ್ದರೂ ಶಿಕ್ಷಣದಲ್ಲಿ ನಮ್ಮವರು ಎಂದಿಗೂ ಹಿಂದೆ ಬಿದ್ದಿಲ್ಲ.ಶಿಕ್ಷಣದೊಂದಿಗೆ ಜನಾಂಗವನ್ನು ಆರ್ಥಿಕ ಸಬಲತೆಯತ್ತ ಕೊಂಡೊಯ್ಯುವ ಕಾರ್ಯ ಸಮಾಜದ ಬಾಂಧವರು ಮಾಡಬೇಕು ಎಂದು ಮುದ್ದೇಬಿಹಾಳ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಬಡದಾನಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಭಾನುವಾರ ದೇವಾಂಗ ಸಮಾಜ ಹಾಗೂ ದೇವಾಂಗ ನೌಕರರ ಸಂಘದ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಹಿಂದುಳಿದ ವರ್ಗದವರ ನೇಮಕಾತಿ ವಿಭಾಗದಲ್ಲಿ ಕೆಲಸ ಮಾಡಿರುವ ನನಗೆ ನಮ್ಮ ಜನಾಂಗದವರು

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಸತತ ಎರಡನೇ ಬಾರಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಕ್ರೀಡಾಕೂಟದಲ್ಲಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಬಾಲಕರ ವಿಭಾಗದಲ್ಲಿ ಕಬಡ್ಡಿ ಪ್ರಥಮ, ವಾಲಿಬಾಲ್ ಪ್ರಥಮ, ರಿಲೇ ಪ್ರಥಮ, ಥ್ರೋಬಾಲ್ ಪ್ರಥಮ, ಖೋ-ಖೋ ದ್ವಿತೀಯ, 400 ಮೀ. ಓಟದಲ್ಲಿ ಪ್ರಥಮ, 600