Muddebihal: eviction of poor shed, demand for money from PDO for GPS- allegation

Muddebihal: ಬಡವರ ಶೆಡ್ ತೆರವು, ಜಿಪಿಎಸ್‌ಗೆ ಪಿಡಿಒಯಿಂದ ಹಣಕ್ಕೆ ಬೇಡಿಕೆ- ಆರೋಪ

Muddebihal: ಬಡವರ ಶೆಡ್ ತೆರವು, ಜಿಪಿಎಸ್‌ಗೆ ಪಿಡಿಒಯಿಂದ ಹಣಕ್ಕೆ ಬೇಡಿಕೆ- ಆರೋಪ

ಮುದ್ದೇಬಿಹಾಳ : ತಾಲ್ಲೂಕಿನ ಯರಝರಿ ಗ್ರಾಪಂ ಪಿಡಿಒ ವಿಜಯಾ ಮುದಗಲ್ ಹಾಗೂ ಕಾರ್ಯದರ್ಶಿ ವಿಲಾಸ ಚವ್ಹಾಣ ಬಡವರ ಮೇಲೆ ದೌರ್ಜನ್ಯ ನಡೆಸುತ್ತಿದ್ದು ಮನೆಗಳ ಜಿಪಿಎಸ್ ಮಾಡಲು ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂದು ಆರೋಪಿಸಿ ಯರಝರಿ ಪಂಚಾಯಿತಿ ವ್ಯಾಪ್ತಿಯ ಹಂಡರಗಲ್ ಗ್ರಾಮಸ್ಥರು ತಾಪಂ ಇಒಗೆ ಸೋಮವಾರ ದೂರು ಸಲ್ಲಿಸಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಇಲ್ಲಿನ ತಾಲ್ಲೂಕಾ ಪಂಚಾಯಿತಿ ಕಚೇರಿಗೆ ಆಗಮಿಸಿದ್ದ ಹಂಡರಗಲ್ಲ ಗ್ರಾಮದ ಹುಲ್ಲಪ್ಪ ಕೇಸಾಪೂರ ಮಾತನಾಡಿ, ಯರಝರಿ ಗ್ರಾಪಂನ ವ್ಯಾಪ್ತಿಯಲ್ಲಿ ಹಂಡರಗಲ್ಲ ಗ್ರಾಮದಲ್ಲಿ ಸೆ.6 ರಂದು ಪೊಲೀಸರ ಬಲದೊಂದಿಗೆ ಪಿಡಿಒ, ಕಾರ್ಯದರ್ಶಿಗಳು ಬಂದು ನಮ್ಮ ಮನೆಯ ಪಕ್ಕದಲ್ಲಿ ಬುದ್ಧಿಮಾಂದ್ಯಳು, ವಿಕಲಚೇತನಳು ಇರುವ ಮರಗಮ್ಮ ಕೇಸಾಪುರ ಹಾಕಿಕೊಂಡು ಉಪಜೀವನ ನಡೆಸುತ್ತಿದ್ದ ಶೆಡ್‌ನ್ನು ತೆರವುಗೊಳಿಸಿದ್ದಾರೆ. ಗಾಂವಠಾಣ ಜಾಗೆ ಎಂದು ಅದನ್ನು ಪಿಡಿಒ, ಕಾರ್ಯದರ್ಶಿಗಳು ತೆರವುಗೊಳಿಸಿದ್ದಾರೆ.

ಗ್ರಾಮದಲ್ಲಿ ಇನ್ನೂ ಹಲವಾರು ಕಡೆ ಗಾಂವಠಾಣಾ ಜಾಗೆ ಇದ್ದರೂ ನಮ್ಮ ಮಗಳಿದ್ದ ಶೆಡ್ ತೆರವುಗೊಳಿಸಿ ಅನ್ಯಾಯ ಮಾಡಿದ್ದಾರೆ ಎಂದು ತಾಪಂ ಇಒಗೆ ದೂರಿದರು.

ಇದಕ್ಕೆ ಉತ್ತರಿಸಿದ ಯರಝರಿ ಗ್ರಾಪಂ ಕಾರ್ಯದರ್ಶಿ ವಿಲಾಸ ಚವ್ಹಾಣ, ಸದರಿ ಜಾಗೆ ಗ್ರಾಮ ಪಂಚಾಯಿತಿಗೆ ಸೇರಿದ ಗಾಂವಠಾಣೆ ಜಾಗೆ ಆಗಿದ್ದು ಅಲ್ಲಿ ಅಂಗನವಾಡಿ ಕಟ್ಟಡ ಕಟ್ಟಲು ಜಾಗೆ ಗುರುತಿಸಲಾಗಿದೆ.ಹೀಗಾಗಿ ಅಲ್ಲಿನ ಅತಿಕ್ರಮಣ ತೆರವುಗೊಳಿಸಲಾಗಿದೆ. ಸರಕಾರದ ಜಾಗೆಯನ್ನು ಯಾರೊಬ್ಬರೂ ಅತಿಕ್ರಮಣ ಮಾಡಲು ಬರುವುದಿಲ್ಲ ಎಂದು ತಿಳಿಸಿದರು.

ತಾಪಂ ಇಒ ನಿಂಗಪ್ಪ ಮಸಳಿ ಮಾತನಾಡಿ, ಗ್ರಾಪಂ ಜಾಗೆ ಅತಿಕ್ರಮಿಸಲು ಅವಕಾಶ ಇಲ್ಲ.ಆದರೂ ಹಂಡರಗಲ್ಲ ಗ್ರಾಮದಲ್ಲಿನ ಗಾಂವಠಾಣೆ ಜಾಗೆ ಎಷ್ಟಿದೆ ಎಂಬುದನ್ನು ಪರಿಶೀಲನೆ ನಡೆಸಿ ಸದರಿ ವಿವಾದದ ಕುರಿತು ವರದಿ ನೀಡಲು ತಾಪಂ ವ್ಯವಸ್ಥಾಪಕರನ್ನು ನಿಯೋಜಿಸಲಾಗುತ್ತದೆ ಎಂದು ತಿಳಿಸಿದರು.

ಪಿಡಿಒ ಅವರಿಂದ ಹಣಕ್ಕೆ ಬೇಡಿಕೆ ಆರೋಪ

ಗ್ರಾಮ ಪಂಚಾಯಿತಿ ಪಿಡಿಒ ವಿಜಯಾ ಮುದಗಲ್ ಜಿಪಿಎಸ್ ಮಾಡಲು ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ. ಈಗಾಗಲೇ ಮನೆಗಳ ಜಿಪಿಎಸ್ ಮಾಡಲು 8 ಸಾವಿರ ರೂಪಾಯಿ ಹಣ ಕೊಟ್ಟಿದ್ದೇನೆ ಎಂದು ಗ್ರಾಮದ ದಾವಲಸಾಬ ಗುಡೂರ ಆರೋಪಿಸಿದರು.

ಸನ್ 2021ನೇ ಸಾಲಿನಲ್ಲಿ ಬಸವ ವಸತಿ ಯೋಜನೆಯಡಿ ನನ್ನ ಪತ್ನಿಯ ಹೆಸರಿನಲ್ಲಿ ಮನೆ ಮಂಜೂರಾಗಿದ್ದು ಮೂರನೇ ಹಂತಕ್ಕೆ ಮನೆ ಬಂದು ನಿಂತಿದೆ.ಜಿಪಿಎಸ್ ಮಾಡಿಸಲು ಹಣವನ್ನು ಕೊಟ್ಟಿದ್ದೇನೆ. ಆದರೆ ಜಿಪಿಎಸ್ ಮಾಡಲು ಹಿಂದೇಟು ಹಾಕುತ್ತಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್ ಮುಖಂಡ ಇಬ್ರಾಹಿಂ ಮಾಗಿ ಮಾತನಾಡಿ, ಯರಝರಿ ಗ್ರಾಪಂ ಕಾರ್ಯದರ್ಶಿ ವಿಲಾಸ ಚವ್ಹಾಣ ಗ್ರಾಮೀಣ ಭಾಗದ ಸಮಸ್ಯೆಗಳನ್ನು ತೆಗೆದುಕೊಂಡು ಹೋದರೆ ಜನರೊಂದಿಗೆ ಉಡಾಫೆಯೊಂದಿಗೆ ಮಾತನಾಡುತ್ತಾರೆ. ಅಲ್ಲದೇ ತಮ್ಮದೇ ಒಂದು ಗುಂಪು ಕಟ್ಟಿಕೊಂಡಿದ್ದು ಧ್ವನಿ ಎತ್ತುವವರ ಮೇಲೆ ಹೊಡೆಸುವ ಬೆದರಿಕೆ ಹಾಕುತ್ತಾರೆ. ಸೌಜನ್ಯದಿಂದ ವರ್ತಿಸುವುದೇ ಇಲ್ಲ ಎಂದು ಆರೋಪಿಸಿದರು.

ಇದನ್ನೂ ಓದಿ: ಹುಟ್ಟಿದ ಮಗು ಹೆಣ್ಣೆಂಬ ಕಾರಣಕ್ಕೆ ಪ್ರೇಯಸಿಗೆ ಕೈಕೊಟ್ಟು ಪರಾರಿಯಾದ ಪ್ರಿಯಕರ!

ಜಿಪಿಎಸ್‌ಗೆ ಪಿಡಿಒ ಹಣ ಪಡೆದುಕೊಳ್ಳುತ್ತಾರೆ ಎನ್ನುವ ಆರೋಪ ಬಂದಾಗ ತಾಪಂ ಇಒ ಎದುರಿನಲ್ಲೇ ದೂರುದಾರರನ್ನು ಬೆದರಿಸುವ ಧಾಟಿಯಲ್ಲಿ ಕಾರ್ಯದರ್ಶಿ ವಿಲಾಸ ಚವ್ಹಾಣ ಅವರು ನಡೆದುಕೊಂಡಿದ್ದು ಕಂಡು ಬಂದಿತು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ