Muddebihal: eviction of poor shed, demand for money from PDO for GPS- allegation

Muddebihal: ಬಡವರ ಶೆಡ್ ತೆರವು, ಜಿಪಿಎಸ್‌ಗೆ ಪಿಡಿಒಯಿಂದ ಹಣಕ್ಕೆ ಬೇಡಿಕೆ- ಆರೋಪ

Muddebihal: ಬಡವರ ಶೆಡ್ ತೆರವು, ಜಿಪಿಎಸ್‌ಗೆ ಪಿಡಿಒಯಿಂದ ಹಣಕ್ಕೆ ಬೇಡಿಕೆ- ಆರೋಪ

ಮುದ್ದೇಬಿಹಾಳ : ತಾಲ್ಲೂಕಿನ ಯರಝರಿ ಗ್ರಾಪಂ ಪಿಡಿಒ ವಿಜಯಾ ಮುದಗಲ್ ಹಾಗೂ ಕಾರ್ಯದರ್ಶಿ ವಿಲಾಸ ಚವ್ಹಾಣ ಬಡವರ ಮೇಲೆ ದೌರ್ಜನ್ಯ ನಡೆಸುತ್ತಿದ್ದು ಮನೆಗಳ ಜಿಪಿಎಸ್ ಮಾಡಲು ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂದು ಆರೋಪಿಸಿ ಯರಝರಿ ಪಂಚಾಯಿತಿ ವ್ಯಾಪ್ತಿಯ ಹಂಡರಗಲ್ ಗ್ರಾಮಸ್ಥರು ತಾಪಂ ಇಒಗೆ ಸೋಮವಾರ ದೂರು ಸಲ್ಲಿಸಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಇಲ್ಲಿನ ತಾಲ್ಲೂಕಾ ಪಂಚಾಯಿತಿ ಕಚೇರಿಗೆ ಆಗಮಿಸಿದ್ದ ಹಂಡರಗಲ್ಲ ಗ್ರಾಮದ ಹುಲ್ಲಪ್ಪ ಕೇಸಾಪೂರ ಮಾತನಾಡಿ, ಯರಝರಿ ಗ್ರಾಪಂನ ವ್ಯಾಪ್ತಿಯಲ್ಲಿ ಹಂಡರಗಲ್ಲ ಗ್ರಾಮದಲ್ಲಿ ಸೆ.6 ರಂದು ಪೊಲೀಸರ ಬಲದೊಂದಿಗೆ ಪಿಡಿಒ, ಕಾರ್ಯದರ್ಶಿಗಳು ಬಂದು ನಮ್ಮ ಮನೆಯ ಪಕ್ಕದಲ್ಲಿ ಬುದ್ಧಿಮಾಂದ್ಯಳು, ವಿಕಲಚೇತನಳು ಇರುವ ಮರಗಮ್ಮ ಕೇಸಾಪುರ ಹಾಕಿಕೊಂಡು ಉಪಜೀವನ ನಡೆಸುತ್ತಿದ್ದ ಶೆಡ್‌ನ್ನು ತೆರವುಗೊಳಿಸಿದ್ದಾರೆ. ಗಾಂವಠಾಣ ಜಾಗೆ ಎಂದು ಅದನ್ನು ಪಿಡಿಒ, ಕಾರ್ಯದರ್ಶಿಗಳು ತೆರವುಗೊಳಿಸಿದ್ದಾರೆ.

ಗ್ರಾಮದಲ್ಲಿ ಇನ್ನೂ ಹಲವಾರು ಕಡೆ ಗಾಂವಠಾಣಾ ಜಾಗೆ ಇದ್ದರೂ ನಮ್ಮ ಮಗಳಿದ್ದ ಶೆಡ್ ತೆರವುಗೊಳಿಸಿ ಅನ್ಯಾಯ ಮಾಡಿದ್ದಾರೆ ಎಂದು ತಾಪಂ ಇಒಗೆ ದೂರಿದರು.

ಇದಕ್ಕೆ ಉತ್ತರಿಸಿದ ಯರಝರಿ ಗ್ರಾಪಂ ಕಾರ್ಯದರ್ಶಿ ವಿಲಾಸ ಚವ್ಹಾಣ, ಸದರಿ ಜಾಗೆ ಗ್ರಾಮ ಪಂಚಾಯಿತಿಗೆ ಸೇರಿದ ಗಾಂವಠಾಣೆ ಜಾಗೆ ಆಗಿದ್ದು ಅಲ್ಲಿ ಅಂಗನವಾಡಿ ಕಟ್ಟಡ ಕಟ್ಟಲು ಜಾಗೆ ಗುರುತಿಸಲಾಗಿದೆ.ಹೀಗಾಗಿ ಅಲ್ಲಿನ ಅತಿಕ್ರಮಣ ತೆರವುಗೊಳಿಸಲಾಗಿದೆ. ಸರಕಾರದ ಜಾಗೆಯನ್ನು ಯಾರೊಬ್ಬರೂ ಅತಿಕ್ರಮಣ ಮಾಡಲು ಬರುವುದಿಲ್ಲ ಎಂದು ತಿಳಿಸಿದರು.

ತಾಪಂ ಇಒ ನಿಂಗಪ್ಪ ಮಸಳಿ ಮಾತನಾಡಿ, ಗ್ರಾಪಂ ಜಾಗೆ ಅತಿಕ್ರಮಿಸಲು ಅವಕಾಶ ಇಲ್ಲ.ಆದರೂ ಹಂಡರಗಲ್ಲ ಗ್ರಾಮದಲ್ಲಿನ ಗಾಂವಠಾಣೆ ಜಾಗೆ ಎಷ್ಟಿದೆ ಎಂಬುದನ್ನು ಪರಿಶೀಲನೆ ನಡೆಸಿ ಸದರಿ ವಿವಾದದ ಕುರಿತು ವರದಿ ನೀಡಲು ತಾಪಂ ವ್ಯವಸ್ಥಾಪಕರನ್ನು ನಿಯೋಜಿಸಲಾಗುತ್ತದೆ ಎಂದು ತಿಳಿಸಿದರು.

ಪಿಡಿಒ ಅವರಿಂದ ಹಣಕ್ಕೆ ಬೇಡಿಕೆ ಆರೋಪ

ಗ್ರಾಮ ಪಂಚಾಯಿತಿ ಪಿಡಿಒ ವಿಜಯಾ ಮುದಗಲ್ ಜಿಪಿಎಸ್ ಮಾಡಲು ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ. ಈಗಾಗಲೇ ಮನೆಗಳ ಜಿಪಿಎಸ್ ಮಾಡಲು 8 ಸಾವಿರ ರೂಪಾಯಿ ಹಣ ಕೊಟ್ಟಿದ್ದೇನೆ ಎಂದು ಗ್ರಾಮದ ದಾವಲಸಾಬ ಗುಡೂರ ಆರೋಪಿಸಿದರು.

ಸನ್ 2021ನೇ ಸಾಲಿನಲ್ಲಿ ಬಸವ ವಸತಿ ಯೋಜನೆಯಡಿ ನನ್ನ ಪತ್ನಿಯ ಹೆಸರಿನಲ್ಲಿ ಮನೆ ಮಂಜೂರಾಗಿದ್ದು ಮೂರನೇ ಹಂತಕ್ಕೆ ಮನೆ ಬಂದು ನಿಂತಿದೆ.ಜಿಪಿಎಸ್ ಮಾಡಿಸಲು ಹಣವನ್ನು ಕೊಟ್ಟಿದ್ದೇನೆ. ಆದರೆ ಜಿಪಿಎಸ್ ಮಾಡಲು ಹಿಂದೇಟು ಹಾಕುತ್ತಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್ ಮುಖಂಡ ಇಬ್ರಾಹಿಂ ಮಾಗಿ ಮಾತನಾಡಿ, ಯರಝರಿ ಗ್ರಾಪಂ ಕಾರ್ಯದರ್ಶಿ ವಿಲಾಸ ಚವ್ಹಾಣ ಗ್ರಾಮೀಣ ಭಾಗದ ಸಮಸ್ಯೆಗಳನ್ನು ತೆಗೆದುಕೊಂಡು ಹೋದರೆ ಜನರೊಂದಿಗೆ ಉಡಾಫೆಯೊಂದಿಗೆ ಮಾತನಾಡುತ್ತಾರೆ. ಅಲ್ಲದೇ ತಮ್ಮದೇ ಒಂದು ಗುಂಪು ಕಟ್ಟಿಕೊಂಡಿದ್ದು ಧ್ವನಿ ಎತ್ತುವವರ ಮೇಲೆ ಹೊಡೆಸುವ ಬೆದರಿಕೆ ಹಾಕುತ್ತಾರೆ. ಸೌಜನ್ಯದಿಂದ ವರ್ತಿಸುವುದೇ ಇಲ್ಲ ಎಂದು ಆರೋಪಿಸಿದರು.

ಇದನ್ನೂ ಓದಿ: ಹುಟ್ಟಿದ ಮಗು ಹೆಣ್ಣೆಂಬ ಕಾರಣಕ್ಕೆ ಪ್ರೇಯಸಿಗೆ ಕೈಕೊಟ್ಟು ಪರಾರಿಯಾದ ಪ್ರಿಯಕರ!

ಜಿಪಿಎಸ್‌ಗೆ ಪಿಡಿಒ ಹಣ ಪಡೆದುಕೊಳ್ಳುತ್ತಾರೆ ಎನ್ನುವ ಆರೋಪ ಬಂದಾಗ ತಾಪಂ ಇಒ ಎದುರಿನಲ್ಲೇ ದೂರುದಾರರನ್ನು ಬೆದರಿಸುವ ಧಾಟಿಯಲ್ಲಿ ಕಾರ್ಯದರ್ಶಿ ವಿಲಾಸ ಚವ್ಹಾಣ ಅವರು ನಡೆದುಕೊಂಡಿದ್ದು ಕಂಡು ಬಂದಿತು.

Latest News

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12 ರಂದು ಅವಲೋಕನ ನಡೆಸಿ ಬೆಳೆ ವೀಕ್ಷಣೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ. ಆ.11 ರದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚೆ, ಮದ್ಯಾಹ್ನ 2.30ಕ್ಕೆ ಬರಪೀಡಿತ ಪ್ರದೇಶಗಳಾದ ಹರಿಂದ್ರಾಳ,ಹಡಲಗೇರಿ ಗ್ರಾಮಗಳಲ್ಲಿ ಹತ್ತಿ,ತೊಗರಿ,ಸಜ್ಜೆ ಬೆಳೆಗಳ ವೀಕ್ಷಣೆ,ಸಂಜೆ 4ಕ್ಕೆ ಢವಳಗಿ ಹೋಬಳಿಯ ಹತ್ತಿ ತೊಗರಿ ಬೆಳೆಗಳ ವೀಕ್ಷಣೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ