ಮುದ್ದೇಬಿಹಾಳ : ಅಬ್ಬರದ ಆಲಿಕಲ್ಲು ಮಳೆಗೆ ನೆಲಕಚ್ಚಿದ ದ್ರಾಕ್ಷಿ,ಚಿಕ್ಕು,ತೆಂಗಿನ ಗಿಡ

ಮುದ್ದೇಬಿಹಾಳ : ಅಬ್ಬರದ ಆಲಿಕಲ್ಲು ಮಳೆಗೆ ನೆಲಕಚ್ಚಿದ ದ್ರಾಕ್ಷಿ,ಚಿಕ್ಕು,ತೆಂಗಿನ ಗಿಡ

ಮುದ್ದೇಬಿಹಾಳ : ಪಟ್ಟಣವೂ ಸೇರಿದಂತೆ ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ಮಂಗಳವಾರ ಕೆಲಕಾಲ ಸುರಿದ ಭಾರೀ ಬಿರುಗಾಳಿ,ಆಲಿಕಲ್ಲು ಮಳೆ ರೈತರಿಗೆ ನಷ್ಟವನ್ನುಂಟು ಮಾಡಿದ್ದು ಫಸಲಿನ ನಿರೀಕ್ಷೆಯಲ್ಲಿದ್ದ ರೈತರಿಗೆ ಬರಸಿಡಿಲು ಅಪ್ಪಳಿಸಿದಂತಾಗಿದೆ.

ತಾಲ್ಲೂಕಿನ ಆಲೂರ ಗ್ರಾಮದಲ್ಲಿ ಬಿರುಗಾಳಿ,ಮಳೆಗೆ ಶಿವಪುತ್ರಪ್ಪ ಗೂಳಿ ಎಂಬುವರ ಹೊಲದಲ್ಲಿ ಬೆಳೆದಿದ್ದ ಐದು ಎಕರೆ ದ್ರಾಕ್ಷಿ ಬೆಳೆ ಹಾನಿಯಾಗಿದೆ.ಇನ್ನೆನ್ನು ವಾರದಲ್ಲಿ ದ್ರಾಕ್ಷಿ ಕಟಾವು ಮಾಡಬೇಕಿದ್ದ ರೈತನಿಗೆ ಈ ಬಿರುಗಾಳಿ,ಮಳೆ ಬರಸಿಡಿಲಿನಂತೆ ಬಂದೆರಗಿದ್ದು ದ್ರಾಕ್ಷಿ ಗೊನೆಗಳು,ಹಣ್ಣುಗಳು ಉದುರಿ ಬಿದ್ದಿವೆ.ಇದರೊಟ್ಟಿಗೆ ಚಿಕ್ಕು ಗಿಡಗಳಿಂದ ಕಾಯಿಗಳು ಉದುರಿ ಬಿದ್ದಿದ್ದು ಐದಾರು ತೆಂಗಿನ ಮರಗಳು ನೆಲಕ್ಕಚ್ಚಿವೆ.

ಮುದ್ದೇಬಿಹಾಳ ಪಟ್ಟಣದಲ್ಲಿ ಜೋರಾಗಿ ಬಿದ್ದ ಆಲಿಕಲ್ಲುಗಳು ಜನತೆಯಲ್ಲಿ ಕೆಲಕಾಲ ಆತಂಕವನ್ನುoಟು ಮಾಡಿತು.ಪಟ್ಟಣದ ಬಸ್ ನಿಲ್ದಾಣ,ಟ್ಯಾಕ್ಸಿ ಸ್ಟಾö್ಯಂಡ್,ಜೀಪ್,ಆಟೋ ಸ್ಟಾö್ಯಂಡದಲ್ಲಿ ನಿಂತಿದ್ದ ವಾಹನಗಳ ಗಾಜುಗಳಿಗೆ ಎಲ್ಲಿ ಧಕ್ಕೆಯಾಗುತ್ತದೆಯೋ ಎಂಬ ಆತಂಕ ನಾಲ್ಕು ಚಕ್ರಗಳ ವಾಹನ ಚಾಲಕರು,ಮಾಲೀಕರಿಗೆ ಉಂಟಾಗಿತ್ತು.

ಇನ್ನುಳಿದoತೆ ಬಿರು ಬೇಸಿಗೆಯ ಬಿಸಿಲಿನಿಂದ ಕಂಗೆಟ್ಟಿದ್ದ ಪಟ್ಟಣದ ಜನತೆಗೆ ಈ ಮಳೆ ತಂಪೆರೆಯಿತು.ಶಾಲೆ,ಅoಗಡಿಸರ್ಕಾರಿ ಕಚೇರಿ,ಮನೆಗಳಲ್ಲಿ ಜನರು ಆಲಿಕಲ್ಲು ಹಿಡಿದುಕೊಳ್ಳಲು ಬೀದಿಗೆ ಇಳಿದರು.ಕೆಲವು ಶಾಲೆಗಳಲ್ಲಿ ಮಕ್ಕಳು ಆಲಿಕಲ್ಲು ಹಿಡಿದು ಕುಣಿದ ಕುಪ್ಪಳಿಸಿದರು.
ಎಂಜಿವಿಸಿ ಕಾಲೇಜಿನ ಪ್ರಾಧ್ಯಾಪಕ ಪ್ರಕಾಶ ನರಗುಂದ, ಬೈಕ್ ಸರ್ವಿಸ್ ಸೆಂಟರ್‌ನ ವಿನಾಯಕ ಸಂಗಮದ, ಶ್ರೀಕಾಂತ ಗೌಡರ, ಪಂಡಿತ ಚವ್ಹಾಣ,ಸುನಿಲ್ ಅಂಬಿಗೇರ, ಅಸ್ಲಾಂ, ಶಿವಕುಮಾರ್ ಶಿರೋಳ ಮೊದಲಾದ ಯುವಕರು ಇಂಥ ಮಳೆಯಾಗಿದ್ದು ಇದೇ ಮೊದಲು ಎಂದು ಸಂಭ್ರಮ ಹಂಚಿಕೊAಡರು.

Latest News

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ ಸಹಕಾರದಿಂದ ಗಣತಿ ನಮೂನೆಗಳ ವಿತರಣೆ ಕಾರ್ಯದಲ್ಲಿ ಮುದ್ದೇಬಿಹಾಳ ಮತಕ್ಷೇತ್ರ ಶೇ.98.38ರಷ್ಟು ಸಾಧನೆ ಮಾಡಿ ವಿಜಯಪುರ ಜಿಲ್ಲೆಗೆ ಎರಡನೇ ಸ್ಥಾನ ಪಡೆದುಕೊಂಡಿದೆ ಎಂದು ಮತದಾರರ ನೋಂದಣಾಧಿಕಾರಿ,ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯ ಕುರಿತು ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.2,28,285 ಮತದಾರರಲ್ಲಿ 2,24,589 ಮತದಾರರಿಗೆ ಗಣತಿ ನಮೂನೆ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ