ಮುದ್ದೇಬಿಹಾಳ : ಅಬ್ಬರದ ಆಲಿಕಲ್ಲು ಮಳೆಗೆ ನೆಲಕಚ್ಚಿದ ದ್ರಾಕ್ಷಿ,ಚಿಕ್ಕು,ತೆಂಗಿನ ಗಿಡ

ಮುದ್ದೇಬಿಹಾಳ : ಅಬ್ಬರದ ಆಲಿಕಲ್ಲು ಮಳೆಗೆ ನೆಲಕಚ್ಚಿದ ದ್ರಾಕ್ಷಿ,ಚಿಕ್ಕು,ತೆಂಗಿನ ಗಿಡ

ಮುದ್ದೇಬಿಹಾಳ : ಪಟ್ಟಣವೂ ಸೇರಿದಂತೆ ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ಮಂಗಳವಾರ ಕೆಲಕಾಲ ಸುರಿದ ಭಾರೀ ಬಿರುಗಾಳಿ,ಆಲಿಕಲ್ಲು ಮಳೆ ರೈತರಿಗೆ ನಷ್ಟವನ್ನುಂಟು ಮಾಡಿದ್ದು ಫಸಲಿನ ನಿರೀಕ್ಷೆಯಲ್ಲಿದ್ದ ರೈತರಿಗೆ ಬರಸಿಡಿಲು ಅಪ್ಪಳಿಸಿದಂತಾಗಿದೆ.

ತಾಲ್ಲೂಕಿನ ಆಲೂರ ಗ್ರಾಮದಲ್ಲಿ ಬಿರುಗಾಳಿ,ಮಳೆಗೆ ಶಿವಪುತ್ರಪ್ಪ ಗೂಳಿ ಎಂಬುವರ ಹೊಲದಲ್ಲಿ ಬೆಳೆದಿದ್ದ ಐದು ಎಕರೆ ದ್ರಾಕ್ಷಿ ಬೆಳೆ ಹಾನಿಯಾಗಿದೆ.ಇನ್ನೆನ್ನು ವಾರದಲ್ಲಿ ದ್ರಾಕ್ಷಿ ಕಟಾವು ಮಾಡಬೇಕಿದ್ದ ರೈತನಿಗೆ ಈ ಬಿರುಗಾಳಿ,ಮಳೆ ಬರಸಿಡಿಲಿನಂತೆ ಬಂದೆರಗಿದ್ದು ದ್ರಾಕ್ಷಿ ಗೊನೆಗಳು,ಹಣ್ಣುಗಳು ಉದುರಿ ಬಿದ್ದಿವೆ.ಇದರೊಟ್ಟಿಗೆ ಚಿಕ್ಕು ಗಿಡಗಳಿಂದ ಕಾಯಿಗಳು ಉದುರಿ ಬಿದ್ದಿದ್ದು ಐದಾರು ತೆಂಗಿನ ಮರಗಳು ನೆಲಕ್ಕಚ್ಚಿವೆ.

ಮುದ್ದೇಬಿಹಾಳ ಪಟ್ಟಣದಲ್ಲಿ ಜೋರಾಗಿ ಬಿದ್ದ ಆಲಿಕಲ್ಲುಗಳು ಜನತೆಯಲ್ಲಿ ಕೆಲಕಾಲ ಆತಂಕವನ್ನುoಟು ಮಾಡಿತು.ಪಟ್ಟಣದ ಬಸ್ ನಿಲ್ದಾಣ,ಟ್ಯಾಕ್ಸಿ ಸ್ಟಾö್ಯಂಡ್,ಜೀಪ್,ಆಟೋ ಸ್ಟಾö್ಯಂಡದಲ್ಲಿ ನಿಂತಿದ್ದ ವಾಹನಗಳ ಗಾಜುಗಳಿಗೆ ಎಲ್ಲಿ ಧಕ್ಕೆಯಾಗುತ್ತದೆಯೋ ಎಂಬ ಆತಂಕ ನಾಲ್ಕು ಚಕ್ರಗಳ ವಾಹನ ಚಾಲಕರು,ಮಾಲೀಕರಿಗೆ ಉಂಟಾಗಿತ್ತು.

ಇನ್ನುಳಿದoತೆ ಬಿರು ಬೇಸಿಗೆಯ ಬಿಸಿಲಿನಿಂದ ಕಂಗೆಟ್ಟಿದ್ದ ಪಟ್ಟಣದ ಜನತೆಗೆ ಈ ಮಳೆ ತಂಪೆರೆಯಿತು.ಶಾಲೆ,ಅoಗಡಿಸರ್ಕಾರಿ ಕಚೇರಿ,ಮನೆಗಳಲ್ಲಿ ಜನರು ಆಲಿಕಲ್ಲು ಹಿಡಿದುಕೊಳ್ಳಲು ಬೀದಿಗೆ ಇಳಿದರು.ಕೆಲವು ಶಾಲೆಗಳಲ್ಲಿ ಮಕ್ಕಳು ಆಲಿಕಲ್ಲು ಹಿಡಿದು ಕುಣಿದ ಕುಪ್ಪಳಿಸಿದರು.
ಎಂಜಿವಿಸಿ ಕಾಲೇಜಿನ ಪ್ರಾಧ್ಯಾಪಕ ಪ್ರಕಾಶ ನರಗುಂದ, ಬೈಕ್ ಸರ್ವಿಸ್ ಸೆಂಟರ್‌ನ ವಿನಾಯಕ ಸಂಗಮದ, ಶ್ರೀಕಾಂತ ಗೌಡರ, ಪಂಡಿತ ಚವ್ಹಾಣ,ಸುನಿಲ್ ಅಂಬಿಗೇರ, ಅಸ್ಲಾಂ, ಶಿವಕುಮಾರ್ ಶಿರೋಳ ಮೊದಲಾದ ಯುವಕರು ಇಂಥ ಮಳೆಯಾಗಿದ್ದು ಇದೇ ಮೊದಲು ಎಂದು ಸಂಭ್ರಮ ಹಂಚಿಕೊAಡರು.

Latest News

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್(ರಿ) ಸಹಯೋಗದಲ್ಲಿ ಪತ್ರಿಕಾ ಹಾಗೂ ವೈದ್ಯರ ದಿನಾಚರಣೆಯ ಅಂಗವಾಗಿ ಜು.26 ರಂದು ಬೆಳಗ್ಗೆ 10.00ಕ್ಕೆ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿವೃತ್ತ ನೌಕರರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ, ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ. ಹುನಗುಂದ-ಮುದ್ದೇಬಿಹಾಳದ ಗಚ್ಚಿನಮಠ-ಹೊಸಮಠದ ಅಮರೇಶ್ವರ ದೇವರು ದಿವ್ಯ ಸಾನಿಧ್ಯ ವಹಿಸುವರು.ಕಾನಿಪ ಧ್ವನಿ ರಾಜ್ಯ ಅಧ್ಯಕ್ಷ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್ ಅಕಾಡೆಮಿಯ 2026ರ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು 12 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕ ಪಡೆದುಕೊಂಡಿದ್ದಾರೆ. ನೀಟ್ ಫಲಿತಾಂಶದ ಕುರಿತು ಮಾಹಿತಿ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ಅವರು, ಈ ಬಾರಿ 190ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು ದೊರೆಯುವ ನಿರೀಕ್ಷೆ ಇದೆ ಎಂದು ತಿಳಿಸಿದರು.ನೀಟ್‌ನಲ್ಲಿ 500ಕ್ಕೂ ಅಧಿಕ 140 ವಿದ್ಯಾರ್ಥಿಗಳು,