Muddebihal: ಕ್ಷೇತ್ರಕ್ಕೆ ಬಿಡುಗಡೆಯಾದ ಅನುದಾನ ಎಷ್ಟು…? 250, 350, 394 ಕೋಟಿ ರೂಪಾಯಿ..?!

Muddebihal: ಕ್ಷೇತ್ರಕ್ಕೆ ಬಿಡುಗಡೆಯಾದ ಅನುದಾನ ಎಷ್ಟು…? 250, 350, 394 ಕೋಟಿ ರೂಪಾಯಿ..?!

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರ ಅವಧಿಯಲ್ಲಿ ಮತಕ್ಷೇತ್ರಕ್ಕೆ ಬಿಡುಗಡೆಯಾದ ಅನುದಾನದ ಸಂಕ್ಷಿಪ್ತ ಮಾಹಿತಿಯನ್ನು ಮಾಧ್ಯಮದವರಿಗೆ ಶಾಸಕರ ಖಾಸಗಿ ಆಪ್ತ ಸಹಾಯಕ ನಾಗರಾಜ ತಂಗಡಗಿ ಅವರು ಕಳಿಸಿಕೊಟ್ಟಿದ್ದು ಅದರಲ್ಲಿ ಕ್ಷೇತ್ರಕ್ಕೆ ಬಿಡುಗಡೆಯಾದ ಅನುದಾನ ಲೆಕ್ಕ ಹಾಕಿದರೆ 394.47 ಕೋಟಿ ರೂ.ಮೊತ್ತವಾಗುತ್ತಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಆದರೆ, ಕಾಂಗ್ರೆಸ್ ಮುಖಂಡರು ಸುದ್ದಿಗೋಷ್ಠಿಯಲ್ಲಿ ಹೇಳುವಾಗ ಒಬ್ಬರು 350 ಕೋಟಿ,ಇನ್ನೊಬ್ಬರು 250 ಕೋಟಿ ಹಣ ಬಿಡುಗಡೆ ಆಗಿದೆ ಎಂದು ಹೇಳಿದ್ದು ಗೊಂದಲ ಮೂಡಿಸಿತ್ತು. ಇದೀಗ ಶಾಸಕರ ಆಪ್ತ ಸಹಾಯಕರು ಕೊಟ್ಟಿರುವ ಚೀಟಿಯಲ್ಲಿ ಅನುದಾನದ ಲೆಕ್ಕ ಹಾಕಿದಾಗ ಒಟ್ಟು 394.47 ಕೋಟಿ ರೂ.ಮೊತ್ತದ ಯೋಜನೆಗಳು ಶಾಸಕ ನಾಡಗೌಡರ ಅವಧಿಯಲ್ಲಿ ಅನುದಾನ ಬಂದಿರುವುದಾಗಿ ಹೇಳಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಶಾಸಕರ ಆಪ್ತ ಸಹಾಯಕರು ಕೊಟ್ಟಿರುವ ಚೀಟಿಯಲ್ಲಿರುವ ಅನುದಾನ ಮಾಹಿತಿ:

ಲೋಕೋಪಯೋಗಿ ಇಲಾಖೆಗೆ 115.8 ಕೋಟಿ ರೂ., ಸಣ್ಣ ನೀರಾವರಿಗೆ 15.75 ಕೋಟಿ.ರೂ,
ಮುದ್ದೇಬಿಹಾಳ, ನಾಲತವಾಡ ಹಾಗೂ ತಾಳಿಕೋಟಿ ಪಟ್ಟಣಗಳ ಯುಜಿಡಿಗಾಗಿ ಅಮೃತ 2.0 ಯೋಜನೆಗಾಗಿ 132.8ಕೋಟಿ ರೂ., ಮುದ್ದೇಬಿಹಾಳ ಮತಕ್ಷೇತ್ರದ ಪ್ರೌಢಶಾಲೆಗಳಿಗಾಗಿ 1 ಕೋಟಿ ರೂ., ಮುಖ್ಯಮಂತ್ರಿ ವಿಶೇಷ ಅನುದಾನ ಯೋಜನೆಯಡಿ 25 ಕೋಟಿ ರೂ., ರಾಜೀವ ಗಾಂಧಿ ವಸತಿ ಯೋಜನೆ ಅಡಿ 49 ಕೋಟಿ ರೂ., ತಾಳಿಕೋಟಿ ಹಾಗೂ ನಾಲತವಾಡದಲ್ಲಿ ರೈತಸಂಪರ್ಕ ಕೇಂದ್ರಕ್ಕೆ 4 ಕೋಟಿ ರೂ., ರಸ್ತೆಗಾಗಿ ಸಿಎಂ ವಿಶೇಷ ಅನುದಾನ 50 ಕೋಟಿ ರೂ.,
ಸಣ್ಣ ನೀರಾವರಿ ಇಲಾಖೆಯಿಂದ 1.12 ಕೋಟಿ ರೂಪಾಯಿ.

ಇದನ್ನೂ ಓದಿ: Muddebihal: ಮಾಜಿ ಶಾಸಕ ನಡಹಳ್ಳಿ ಆರೋಪಕ್ಕೆ ಕೈ ಮುಖಂಡರ ಪ್ರತ್ಯುತ್ತರ…! ಸುದ್ದಿಗೋಷ್ಠಿಯಲ್ಲಿ ಅಂಕಿ ಅಂಶ ನೀಡುವಾಗ ಗೊಂದಲ

Latest News

ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ: BJP ಕಾರ್ಯಕರ್ತನ ಪ್ಯಾಂಟ್‌ಗೆ ತಾಗಿದ ಬೆಂಕಿ

ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ: BJP ಕಾರ್ಯಕರ್ತನ ಪ್ಯಾಂಟ್‌ಗೆ ತಾಗಿದ ಬೆಂಕಿ

ಗದಗ: ನಗರದ ಗಾಂಧಿ ವೃತ್ತದಲ್ಲಿ ಕಾಂಗ್ರೆಸ್‌ ನಾಯಕರ ವಿರುದ್ಧ ಬಿಜೆಪಿ ಯುವ ಮೋರ್ಚಾ ವತಿಯಿಂದ

ನನಗೆ ಸಚಿವ ಸ್ಥಾನ ಕೈ ತಪ್ಪಲು ಸಚಿವ ಎಂ.ಬಿ.ಪಾಟೀಲ್ ನೇರ ಕಾರಣ-ಸಿ.ಎಸ್.ನಾಡಗೌಡ

ನನಗೆ ಸಚಿವ ಸ್ಥಾನ ಕೈ ತಪ್ಪಲು ಸಚಿವ ಎಂ.ಬಿ.ಪಾಟೀಲ್ ನೇರ ಕಾರಣ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಜಿಲ್ಲೆಯ ರಾಜಕಾರಣದಲ್ಲಿ ಸಾಸನೂರ ಬಿ.ಎಸ್.ಪಾಟೀಲ,ಪ್ರಕಾಶ ರಾಠೋಡ ,ಶರಣಪ್ಪ ಸುಣಗಾರ,ಮನೋಹರ ಐನಾಪೂರ ಅವರನ್ನು

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಅಂಜುಮನ್ ಚುನಾವಣೆಯಲ್ಲಿ ಮಹತ್ವದ ಬೆಳವಣಿಗೆ: ಮಕಾನದಾರ,ದಫೇದಾರ,ಸೋಠೆ,ಗೋಲಂದಾಜಗೆ ಹೈಕೋರ್ಟ್ ಬಿಗ್ ರಿಲೀಫ್

ಅಂಜುಮನ್ ಚುನಾವಣೆಯಲ್ಲಿ ಮಹತ್ವದ ಬೆಳವಣಿಗೆ: ಮಕಾನದಾರ,ದಫೇದಾರ,ಸೋಠೆ,ಗೋಲಂದಾಜಗೆ ಹೈಕೋರ್ಟ್ ಬಿಗ್ ರಿಲೀಫ್

ಮುದ್ದೇಬಿಹಾಳ : ಮಹತ್ವದ ಬೆಳವಣಿಗೆಯೊಂದರಲ್ಲಿ ಪಟ್ಟಣದ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯಲ್ಲಿ ತಿರಸ್ಕಾರಗೊಂಡಿದ್ದ ನಾಲ್ವರ ನಾಮಪತ್ರಗಳನ್ನು ಕ್ರಮಬದ್ಧಗೊಳಿಸಿ ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸುವಂತೆ ಕಲ್ಬುರ್ಗಿ ಉಚ್ಛ ನ್ಯಾಯಾಲಯ ಮಧ್ಯಂತರ ಆದೇಶ ನೀಡಿರುವ ಬೆಳವಣಿಗೆ ಮಂಗಳವಾರ ಜರುಗಿದೆ. ಪಟ್ಟಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತ ವಿವರಣೆ ನೀಡಿದ ಮುಖಂಡ ಹಾಗೂ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅಬ್ದುಲಗಫೂರ ಮಕಾನದಾರ ಅವರು, ಚುನಾವಣಾಧಿಕಾರಿಗಳು ನಮ್ಮ ನಾಮಪತ್ರಗಳನ್ನು ತಿರಸ್ಕರಿಸಿ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿ

ಕುಂಟೋಜಿ ಎಸ್ಡಿಎಂಸಿ ರಚನೆಯಲ್ಲಿ ನಿಯಮ ಉಲ್ಲಂಘನೆ ಆರೋಪ

ಕುಂಟೋಜಿ ಎಸ್ಡಿಎಂಸಿ ರಚನೆಯಲ್ಲಿ ನಿಯಮ ಉಲ್ಲಂಘನೆ ಆರೋಪ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಸಮೀತಿ ರಚನೆಯಲ್ಲಿ ಅಕ್ರಮ ನಡೆದಿದ್ದು ತನಿಖೆ ನಡೆಸಿ ನಿಯಮಾನುಸಾರ ಸಮೀತಿಯನ್ನು ಮರು ರಚಿಸಬೇಕು ಎಂದು ಆಗ್ರಹಿಸಿ ಗ್ರಾಮದ ಯುವಕರು,ಕೆಲ ಮುಖಂಡರು ಬಿಇಓಗೆ ಸೋಮವಾರ ಮನವಿ ಪತ್ರ ಸಲ್ಲಿಸಿದ್ದಾರೆ. ಪಟ್ಟಣದ ಬಿಇಓ ಕಚೇರಿಗೆ ಆಗಮಿಸಿದ್ದ ಗ್ರಾಮದ ಯುವಕರು,ಮುಖಂಡರು ಬಿಇಓ ಬಿ.ಎಸ್.ಸಾವಳಗಿ ಅವರಿಗೆ ಮನವಿ ಸಲ್ಲಿಸಿದರು.ಈ ಕುರಿತು ಸಲ್ಲಿಸಿದ ಮನವಿಯಲ್ಲಿ, ಕುಂಟೋಜಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ