Muddebihal: ಕ್ಷೇತ್ರಕ್ಕೆ ಬಿಡುಗಡೆಯಾದ ಅನುದಾನ ಎಷ್ಟು…? 250, 350, 394 ಕೋಟಿ ರೂಪಾಯಿ..?!

Muddebihal: ಕ್ಷೇತ್ರಕ್ಕೆ ಬಿಡುಗಡೆಯಾದ ಅನುದಾನ ಎಷ್ಟು…? 250, 350, 394 ಕೋಟಿ ರೂಪಾಯಿ..?!

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರ ಅವಧಿಯಲ್ಲಿ ಮತಕ್ಷೇತ್ರಕ್ಕೆ ಬಿಡುಗಡೆಯಾದ ಅನುದಾನದ ಸಂಕ್ಷಿಪ್ತ ಮಾಹಿತಿಯನ್ನು ಮಾಧ್ಯಮದವರಿಗೆ ಶಾಸಕರ ಖಾಸಗಿ ಆಪ್ತ ಸಹಾಯಕ ನಾಗರಾಜ ತಂಗಡಗಿ ಅವರು ಕಳಿಸಿಕೊಟ್ಟಿದ್ದು ಅದರಲ್ಲಿ ಕ್ಷೇತ್ರಕ್ಕೆ ಬಿಡುಗಡೆಯಾದ ಅನುದಾನ ಲೆಕ್ಕ ಹಾಕಿದರೆ 394.47 ಕೋಟಿ ರೂ.ಮೊತ್ತವಾಗುತ್ತಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಆದರೆ, ಕಾಂಗ್ರೆಸ್ ಮುಖಂಡರು ಸುದ್ದಿಗೋಷ್ಠಿಯಲ್ಲಿ ಹೇಳುವಾಗ ಒಬ್ಬರು 350 ಕೋಟಿ,ಇನ್ನೊಬ್ಬರು 250 ಕೋಟಿ ಹಣ ಬಿಡುಗಡೆ ಆಗಿದೆ ಎಂದು ಹೇಳಿದ್ದು ಗೊಂದಲ ಮೂಡಿಸಿತ್ತು. ಇದೀಗ ಶಾಸಕರ ಆಪ್ತ ಸಹಾಯಕರು ಕೊಟ್ಟಿರುವ ಚೀಟಿಯಲ್ಲಿ ಅನುದಾನದ ಲೆಕ್ಕ ಹಾಕಿದಾಗ ಒಟ್ಟು 394.47 ಕೋಟಿ ರೂ.ಮೊತ್ತದ ಯೋಜನೆಗಳು ಶಾಸಕ ನಾಡಗೌಡರ ಅವಧಿಯಲ್ಲಿ ಅನುದಾನ ಬಂದಿರುವುದಾಗಿ ಹೇಳಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಶಾಸಕರ ಆಪ್ತ ಸಹಾಯಕರು ಕೊಟ್ಟಿರುವ ಚೀಟಿಯಲ್ಲಿರುವ ಅನುದಾನ ಮಾಹಿತಿ:

ಲೋಕೋಪಯೋಗಿ ಇಲಾಖೆಗೆ 115.8 ಕೋಟಿ ರೂ., ಸಣ್ಣ ನೀರಾವರಿಗೆ 15.75 ಕೋಟಿ.ರೂ,
ಮುದ್ದೇಬಿಹಾಳ, ನಾಲತವಾಡ ಹಾಗೂ ತಾಳಿಕೋಟಿ ಪಟ್ಟಣಗಳ ಯುಜಿಡಿಗಾಗಿ ಅಮೃತ 2.0 ಯೋಜನೆಗಾಗಿ 132.8ಕೋಟಿ ರೂ., ಮುದ್ದೇಬಿಹಾಳ ಮತಕ್ಷೇತ್ರದ ಪ್ರೌಢಶಾಲೆಗಳಿಗಾಗಿ 1 ಕೋಟಿ ರೂ., ಮುಖ್ಯಮಂತ್ರಿ ವಿಶೇಷ ಅನುದಾನ ಯೋಜನೆಯಡಿ 25 ಕೋಟಿ ರೂ., ರಾಜೀವ ಗಾಂಧಿ ವಸತಿ ಯೋಜನೆ ಅಡಿ 49 ಕೋಟಿ ರೂ., ತಾಳಿಕೋಟಿ ಹಾಗೂ ನಾಲತವಾಡದಲ್ಲಿ ರೈತಸಂಪರ್ಕ ಕೇಂದ್ರಕ್ಕೆ 4 ಕೋಟಿ ರೂ., ರಸ್ತೆಗಾಗಿ ಸಿಎಂ ವಿಶೇಷ ಅನುದಾನ 50 ಕೋಟಿ ರೂ.,
ಸಣ್ಣ ನೀರಾವರಿ ಇಲಾಖೆಯಿಂದ 1.12 ಕೋಟಿ ರೂಪಾಯಿ.

ಇದನ್ನೂ ಓದಿ: Muddebihal: ಮಾಜಿ ಶಾಸಕ ನಡಹಳ್ಳಿ ಆರೋಪಕ್ಕೆ ಕೈ ಮುಖಂಡರ ಪ್ರತ್ಯುತ್ತರ…! ಸುದ್ದಿಗೋಷ್ಠಿಯಲ್ಲಿ ಅಂಕಿ ಅಂಶ ನೀಡುವಾಗ ಗೊಂದಲ

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ