Muddebihal: ಕ್ಷೇತ್ರಕ್ಕೆ ಬಿಡುಗಡೆಯಾದ ಅನುದಾನ ಎಷ್ಟು…? 250, 350, 394 ಕೋಟಿ ರೂಪಾಯಿ..?!

Muddebihal: ಕ್ಷೇತ್ರಕ್ಕೆ ಬಿಡುಗಡೆಯಾದ ಅನುದಾನ ಎಷ್ಟು…? 250, 350, 394 ಕೋಟಿ ರೂಪಾಯಿ..?!

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರ ಅವಧಿಯಲ್ಲಿ ಮತಕ್ಷೇತ್ರಕ್ಕೆ ಬಿಡುಗಡೆಯಾದ ಅನುದಾನದ ಸಂಕ್ಷಿಪ್ತ ಮಾಹಿತಿಯನ್ನು ಮಾಧ್ಯಮದವರಿಗೆ ಶಾಸಕರ ಖಾಸಗಿ ಆಪ್ತ ಸಹಾಯಕ ನಾಗರಾಜ ತಂಗಡಗಿ ಅವರು ಕಳಿಸಿಕೊಟ್ಟಿದ್ದು ಅದರಲ್ಲಿ ಕ್ಷೇತ್ರಕ್ಕೆ ಬಿಡುಗಡೆಯಾದ ಅನುದಾನ ಲೆಕ್ಕ ಹಾಕಿದರೆ 394.47 ಕೋಟಿ ರೂ.ಮೊತ್ತವಾಗುತ್ತಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಆದರೆ, ಕಾಂಗ್ರೆಸ್ ಮುಖಂಡರು ಸುದ್ದಿಗೋಷ್ಠಿಯಲ್ಲಿ ಹೇಳುವಾಗ ಒಬ್ಬರು 350 ಕೋಟಿ,ಇನ್ನೊಬ್ಬರು 250 ಕೋಟಿ ಹಣ ಬಿಡುಗಡೆ ಆಗಿದೆ ಎಂದು ಹೇಳಿದ್ದು ಗೊಂದಲ ಮೂಡಿಸಿತ್ತು. ಇದೀಗ ಶಾಸಕರ ಆಪ್ತ ಸಹಾಯಕರು ಕೊಟ್ಟಿರುವ ಚೀಟಿಯಲ್ಲಿ ಅನುದಾನದ ಲೆಕ್ಕ ಹಾಕಿದಾಗ ಒಟ್ಟು 394.47 ಕೋಟಿ ರೂ.ಮೊತ್ತದ ಯೋಜನೆಗಳು ಶಾಸಕ ನಾಡಗೌಡರ ಅವಧಿಯಲ್ಲಿ ಅನುದಾನ ಬಂದಿರುವುದಾಗಿ ಹೇಳಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಶಾಸಕರ ಆಪ್ತ ಸಹಾಯಕರು ಕೊಟ್ಟಿರುವ ಚೀಟಿಯಲ್ಲಿರುವ ಅನುದಾನ ಮಾಹಿತಿ:

ಲೋಕೋಪಯೋಗಿ ಇಲಾಖೆಗೆ 115.8 ಕೋಟಿ ರೂ., ಸಣ್ಣ ನೀರಾವರಿಗೆ 15.75 ಕೋಟಿ.ರೂ,
ಮುದ್ದೇಬಿಹಾಳ, ನಾಲತವಾಡ ಹಾಗೂ ತಾಳಿಕೋಟಿ ಪಟ್ಟಣಗಳ ಯುಜಿಡಿಗಾಗಿ ಅಮೃತ 2.0 ಯೋಜನೆಗಾಗಿ 132.8ಕೋಟಿ ರೂ., ಮುದ್ದೇಬಿಹಾಳ ಮತಕ್ಷೇತ್ರದ ಪ್ರೌಢಶಾಲೆಗಳಿಗಾಗಿ 1 ಕೋಟಿ ರೂ., ಮುಖ್ಯಮಂತ್ರಿ ವಿಶೇಷ ಅನುದಾನ ಯೋಜನೆಯಡಿ 25 ಕೋಟಿ ರೂ., ರಾಜೀವ ಗಾಂಧಿ ವಸತಿ ಯೋಜನೆ ಅಡಿ 49 ಕೋಟಿ ರೂ., ತಾಳಿಕೋಟಿ ಹಾಗೂ ನಾಲತವಾಡದಲ್ಲಿ ರೈತಸಂಪರ್ಕ ಕೇಂದ್ರಕ್ಕೆ 4 ಕೋಟಿ ರೂ., ರಸ್ತೆಗಾಗಿ ಸಿಎಂ ವಿಶೇಷ ಅನುದಾನ 50 ಕೋಟಿ ರೂ.,
ಸಣ್ಣ ನೀರಾವರಿ ಇಲಾಖೆಯಿಂದ 1.12 ಕೋಟಿ ರೂಪಾಯಿ.

ಇದನ್ನೂ ಓದಿ: Muddebihal: ಮಾಜಿ ಶಾಸಕ ನಡಹಳ್ಳಿ ಆರೋಪಕ್ಕೆ ಕೈ ಮುಖಂಡರ ಪ್ರತ್ಯುತ್ತರ…! ಸುದ್ದಿಗೋಷ್ಠಿಯಲ್ಲಿ ಅಂಕಿ ಅಂಶ ನೀಡುವಾಗ ಗೊಂದಲ

Latest News

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್ ಅಕಾಡೆಮಿಯ 2026ರ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು 12 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕ ಪಡೆದುಕೊಂಡಿದ್ದಾರೆ. ನೀಟ್ ಫಲಿತಾಂಶದ ಕುರಿತು ಮಾಹಿತಿ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ಅವರು, ಈ ಬಾರಿ 190ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು ದೊರೆಯುವ ನಿರೀಕ್ಷೆ ಇದೆ ಎಂದು ತಿಳಿಸಿದರು.ನೀಟ್‌ನಲ್ಲಿ 500ಕ್ಕೂ ಅಧಿಕ 140 ವಿದ್ಯಾರ್ಥಿಗಳು,

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಮುದ್ದೇಬಿಹಾಳ(ಜಿಲ್ಲೆ : ವಿಜಯಪುರ) : ದೇಶದ ಪ್ರತಿಷ್ಠಿತ ಐಐಟಿ ಕಾಲೇಜುಗಳಲ್ಲಿ ಒಂದಾಗಿರುವ ಕಾನ್ಪುರದ ಐಐಟಿ ಕಾಲೇಜಿಗೆ ಮುದ್ದೇಬಿಹಾಳ ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಅದಿತಿ ಸವಣೂರ ಆಯ್ಕೆಯಾಗಿದ್ದು ಸಂಸ್ಥೆಗೆ ಹೆಮ್ಮೆ ತಂದಿದೆ ಎಂದು ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಮೀತಗೌಡ ಎಂ.ಪಾಟೀಲ್ ತಿಳಿಸಿದರು. ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿದ್ಯಾರ್ಥಿನಿಯ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ನಮ್ಮ ಸಂಸ್ಥೆಯಿoದ