Muddebihal: ಕ್ಷೇತ್ರಕ್ಕೆ ಬಿಡುಗಡೆಯಾದ ಅನುದಾನ ಎಷ್ಟು…? 250, 350, 394 ಕೋಟಿ ರೂಪಾಯಿ..?!

Muddebihal: ಕ್ಷೇತ್ರಕ್ಕೆ ಬಿಡುಗಡೆಯಾದ ಅನುದಾನ ಎಷ್ಟು…? 250, 350, 394 ಕೋಟಿ ರೂಪಾಯಿ..?!

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರ ಅವಧಿಯಲ್ಲಿ ಮತಕ್ಷೇತ್ರಕ್ಕೆ ಬಿಡುಗಡೆಯಾದ ಅನುದಾನದ ಸಂಕ್ಷಿಪ್ತ ಮಾಹಿತಿಯನ್ನು ಮಾಧ್ಯಮದವರಿಗೆ ಶಾಸಕರ ಖಾಸಗಿ ಆಪ್ತ ಸಹಾಯಕ ನಾಗರಾಜ ತಂಗಡಗಿ ಅವರು ಕಳಿಸಿಕೊಟ್ಟಿದ್ದು ಅದರಲ್ಲಿ ಕ್ಷೇತ್ರಕ್ಕೆ ಬಿಡುಗಡೆಯಾದ ಅನುದಾನ ಲೆಕ್ಕ ಹಾಕಿದರೆ 394.47 ಕೋಟಿ ರೂ.ಮೊತ್ತವಾಗುತ್ತಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಆದರೆ, ಕಾಂಗ್ರೆಸ್ ಮುಖಂಡರು ಸುದ್ದಿಗೋಷ್ಠಿಯಲ್ಲಿ ಹೇಳುವಾಗ ಒಬ್ಬರು 350 ಕೋಟಿ,ಇನ್ನೊಬ್ಬರು 250 ಕೋಟಿ ಹಣ ಬಿಡುಗಡೆ ಆಗಿದೆ ಎಂದು ಹೇಳಿದ್ದು ಗೊಂದಲ ಮೂಡಿಸಿತ್ತು. ಇದೀಗ ಶಾಸಕರ ಆಪ್ತ ಸಹಾಯಕರು ಕೊಟ್ಟಿರುವ ಚೀಟಿಯಲ್ಲಿ ಅನುದಾನದ ಲೆಕ್ಕ ಹಾಕಿದಾಗ ಒಟ್ಟು 394.47 ಕೋಟಿ ರೂ.ಮೊತ್ತದ ಯೋಜನೆಗಳು ಶಾಸಕ ನಾಡಗೌಡರ ಅವಧಿಯಲ್ಲಿ ಅನುದಾನ ಬಂದಿರುವುದಾಗಿ ಹೇಳಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಶಾಸಕರ ಆಪ್ತ ಸಹಾಯಕರು ಕೊಟ್ಟಿರುವ ಚೀಟಿಯಲ್ಲಿರುವ ಅನುದಾನ ಮಾಹಿತಿ:

ಲೋಕೋಪಯೋಗಿ ಇಲಾಖೆಗೆ 115.8 ಕೋಟಿ ರೂ., ಸಣ್ಣ ನೀರಾವರಿಗೆ 15.75 ಕೋಟಿ.ರೂ,
ಮುದ್ದೇಬಿಹಾಳ, ನಾಲತವಾಡ ಹಾಗೂ ತಾಳಿಕೋಟಿ ಪಟ್ಟಣಗಳ ಯುಜಿಡಿಗಾಗಿ ಅಮೃತ 2.0 ಯೋಜನೆಗಾಗಿ 132.8ಕೋಟಿ ರೂ., ಮುದ್ದೇಬಿಹಾಳ ಮತಕ್ಷೇತ್ರದ ಪ್ರೌಢಶಾಲೆಗಳಿಗಾಗಿ 1 ಕೋಟಿ ರೂ., ಮುಖ್ಯಮಂತ್ರಿ ವಿಶೇಷ ಅನುದಾನ ಯೋಜನೆಯಡಿ 25 ಕೋಟಿ ರೂ., ರಾಜೀವ ಗಾಂಧಿ ವಸತಿ ಯೋಜನೆ ಅಡಿ 49 ಕೋಟಿ ರೂ., ತಾಳಿಕೋಟಿ ಹಾಗೂ ನಾಲತವಾಡದಲ್ಲಿ ರೈತಸಂಪರ್ಕ ಕೇಂದ್ರಕ್ಕೆ 4 ಕೋಟಿ ರೂ., ರಸ್ತೆಗಾಗಿ ಸಿಎಂ ವಿಶೇಷ ಅನುದಾನ 50 ಕೋಟಿ ರೂ.,
ಸಣ್ಣ ನೀರಾವರಿ ಇಲಾಖೆಯಿಂದ 1.12 ಕೋಟಿ ರೂಪಾಯಿ.

ಇದನ್ನೂ ಓದಿ: Muddebihal: ಮಾಜಿ ಶಾಸಕ ನಡಹಳ್ಳಿ ಆರೋಪಕ್ಕೆ ಕೈ ಮುಖಂಡರ ಪ್ರತ್ಯುತ್ತರ…! ಸುದ್ದಿಗೋಷ್ಠಿಯಲ್ಲಿ ಅಂಕಿ ಅಂಶ ನೀಡುವಾಗ ಗೊಂದಲ

Latest News

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಮುದ್ದೇಬಿಹಾಳ(ಜಿಲ್ಲೆ : ವಿಜಯಪುರ) : ದೇಶದ ಪ್ರತಿಷ್ಠಿತ ಐಐಟಿ ಕಾಲೇಜುಗಳಲ್ಲಿ ಒಂದಾಗಿರುವ ಕಾನ್ಪುರದ ಐಐಟಿ ಕಾಲೇಜಿಗೆ ಮುದ್ದೇಬಿಹಾಳ ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಅದಿತಿ ಸವಣೂರ ಆಯ್ಕೆಯಾಗಿದ್ದು ಸಂಸ್ಥೆಗೆ ಹೆಮ್ಮೆ ತಂದಿದೆ ಎಂದು ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಮೀತಗೌಡ ಎಂ.ಪಾಟೀಲ್ ತಿಳಿಸಿದರು. ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿದ್ಯಾರ್ಥಿನಿಯ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ನಮ್ಮ ಸಂಸ್ಥೆಯಿoದ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ : ಸಿಎಂ ಸಿದ್ಧರಾಮಯ್ಯನವರ ಅವಧಿಯಲ್ಲಿ ಕಳೆದ ಬಜೆಟ್‌ನಲ್ಲಿ ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ ಮಂಜೂರಾತಿಯಾಗಿದ್ದು ಅದನ್ನು ಕೂಡಲೇ ಕಾರ್ಯಾರಂಭಗೊಳಿಸಲು ಕ್ರಮ ಜರುಗಿಸುವಂತೆ ಮುದ್ದೇಬಿಹಾಳದ ಜನಸೇವಾ ಸಂಸ್ಥೆಯ ಪದಾಧಿಕಾರಿಗಳು ಬೆಳಗಾವಿ ಐಜಿಪಿ ಸಂದೀಪ್ ಪಾಟೀಲ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿದ್ದ ವೇಳೆ ಐಜಿಪಿ ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು.ಈ ವೇಳೆ ಮಾತನಾಡಿದ ಜನಸೇವಾ ಸಂಸ್ಥೆಯ ಅಧ್ಯಕ್ಷ