ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ ನಿರ್ಮಾಣ ಸಮಿತಿಯ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.
ಸಮಿತಿಯ ಅಧ್ಯಕ್ಷರಾಗಿ ಪುನೀತ ಹಿಪ್ಪರಗಿ, ಉಪಾಧ್ಯಕ್ಷರಾಗಿ ಸೋಮನಗೌಡ ಬಿರಾದಾರ ಹಾಗೂ ಕಾರ್ಯದರ್ಶಿಯಾಗಿ ಕಾಶಿನಾಥ ಹುಗ್ಗಿ ಅವರನ್ನು ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಅಧ್ಯಕ್ಷ ಮಹಾಂತೇಶ ಬೂದಿಹಾಳಮಠ, ನೂತನ ಪದಾಧಿಕಾರಿಗಳು ಕಾರ್ಗಿಲ್ ಸಮಿತಿಯ ಉದ್ದೇಶಗಳನ್ನು ಮತ್ತಷ್ಟು ಬಲಪಡಿಸಿ, ದೇಶಭಕ್ತಿ ಹಾಗೂ ಸಾಮಾಜಿಕ ಸೇವಾ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡಲಿ ಎಂದರು.
ಕಾರ್ಯಕ್ರಮದಲ್ಲಿ ಬಸಯ್ಯ ನಂದಿಕೇಶ್ವರಮಠ, ಉದಯಸಿಂಗ್ ರಾಯಚೂರ್, ರವಿ ನಾಲತವಾಡ, ರಾಜಶೇಖರ್ ಮ್ಯಾಗೇರಿ, ಚಂದ್ರು ಕಲಾಲ, ನಬಿಸಾಬ್ ನದಾಫ್, ಸಂಜು ಬಾಗೇವಾಡಿ, ಶೇಖರ್ ಢವಳಗಿ ,ಹಾಗೂ ಮಾಜಿ ಅಧ್ಯಕ್ಷ ಶ್ರೀಕಾಂತ್ ಹಿರೇಮಠ ಇದ್ದರು.







