Muddebihal news: After 20 years, minorities got their seats

Muddebihal news: ಅಲ್ಪಸಂಖ್ಯಾತರಿಗೆ 20 ವರ್ಷದ ಬಳಿಕ ದೊರೆತ ಸ್ಥಾನ: ಮೂರು ದಿನಕ್ಕೊಮ್ಮೆ ಕುಡಿಯುವ ನೀರು ಪೂರೈಕೆ-ಗೊಳಸಂಗಿ

Muddebihal news: ಅಲ್ಪಸಂಖ್ಯಾತರಿಗೆ 20 ವರ್ಷದ ಬಳಿಕ ದೊರೆತ ಸ್ಥಾನ: ಮೂರು ದಿನಕ್ಕೊಮ್ಮೆ ಕುಡಿಯುವ ನೀರು ಪೂರೈಕೆ-ಗೊಳಸಂಗಿ

Ad
Ad

ಮುದ್ದೇಬಿಹಾಳ : ಪಟ್ಟಣಕ್ಕೆ ಸದ್ಯಕ್ಕೆ ಐದಾರು ದಿನಕ್ಕೊಮ್ಮೆ ನೀರು ಪೂರೈಕೆ ಆಗುತ್ತಿದ್ದು, ಆ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸಿ ಜನತೆಗೆ ಮೂರು ದಿನಕ್ಕೊಮ್ಮೆ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗುವುದು ಎಂದು (Muddebihal news) ಪುರಸಭೆ ನೂತನ ಅಧ್ಯಕ್ಷ ಮಹೆಬೂಬ ಗೊಳಸಂಗಿ ಹೇಳಿದರು.

Ad
Ad

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌‌ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ‌ಲಿಂಕ್ ಬಳಸಿ: https://t.me/dcgkannada

ಪಟ್ಟಣದ ಪುರಸಭೆ ಸಭಾ ಭವನದಲ್ಲಿ ಅಧ್ಯಕ್ಷ,ಉಪಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಶುಕ್ರವಾರ ಹಮ್ಮಿಕೊಂಡಿದ್ದ ಅಧಿಕಾರ ಗ್ರಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಚರಂಡಿ ವ್ಯವಸ್ಥೆ, ಬೀದಿ ದೀಪಗಳು, ನಗರದ ಸ್ವಚ್ಛತೆ ಹಾಗೂ ಯುಜಿಡಿ ಯೋಜನೆಯನ್ನು ಆದಷ್ಟು ತ್ವರಿತವಾಗಿ ಪುರಸಭೆಗೆ ಹಸ್ತಾಂತರ ಮಾಡಿಕೊಂಡು ಜನತೆಗೆ ಅನುಕೂಲ ಒದಗಿಸಿಕೊಡುವ ಕಾರ್ಯ ಮಾಡುತ್ತೇವೆ.ಇಲ್ಲಿ ಚುನಾವಣೆ ಬಂದಾಗಲಷ್ಟೇ ಪಕ್ಷ ಎಂದು ಭಾವಿಸುತ್ತೇನೆ. ಉಳಿದ ಎಲ್ಲ ಸದಸ್ಯರ ಸಹಕಾರದೊಂದಿಗೆ ಜನರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಣೆ ಮಾಡುತ್ತೇವೆ ಎಂದರು.

ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ರಾಜ್ಯಾಧ್ಯಕ್ಷೆ ನೀಲಮ್ಮ ಬೋರಾವತ್ ಮಾತನಾಡಿ, ಹೋರಾಟದಿಂದಲೇ ಅಧ್ಯಕ್ಷ ಸ್ಥಾನದವರೆಗೆ ಬೆಳೆದಿರುವ ಮಹೆಬೂಬ ಗೊಳಸಂಗಿ ಅವರು ಒಳ್ಳೆಯ ಆಡಳಿತ ನೀಡಲಿ.ಪಂಚಮಸಾಲಿ ಸಮಾಜದ ಪ್ರೀತಿ ದೇಗಿನಾಳ ಅವರನ್ನು ಉಪಾಧ್ಯಕ್ಷರನ್ನಾಗಿ ಮಾಡುವ ಮೂಲಕ ಪಂಚಮಸಾಲಿ ಸಮಾಜದವರಿಗೂ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿಯವರು ಆದ್ಯತೆ ಕೊಟ್ಟಿರುವುದು ಹೆಮ್ಮೆಯ ಸಂಗತಿ ಎಂದರು.

ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ ಮಾತನಾಡಿ, ಜನರ ಸಮಸ್ಯೆಗಳನ್ನು ಮೊದಲ ಆದ್ಯತೆ ಮೇರೆಗೆ ಪರಿಹರಿಸಲು ನೂತನ ಅಧ್ಯಕ್ಷರು ಶ್ರಮಿಸಬೇಕು. ದಿ.ಅಲ್ಲಾಭಕ್ಷ್ಯ ಢವಳಗಿ ನಂತರದಲ್ಲಿ ಗೊಳಸಂಗಿಯವರು ಅಲ್ಪಸಂಖ್ಯಾತರ ನಾಯಕರಾಗಿ ಗುರುತಿಸಿಕೊಂಡಿದ್ದಾರೆ ಎಂದರು.

ಪುರಸಭೆ ನೂತನ ಉಪಾಧ್ಯಕ್ಷೆ ಪ್ರೀತಿ ದೇಗಿನಾಳ, ಮುಖಂಡ ವಾಯ್.ಎಚ್.ವಿಜಯಕರ್, ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ ಮಾತನಾಡಿದರು.

ಇದಕ್ಕೂ ಮುನ್ನ ಪುರಸಭೆ ಉಪಾಧ್ಯಕ್ಷೆ ಪ್ರೀತಿ ದೇಗಿನಾಳ ಅವರ ಕೊಠಡಿಗೆ ಮೊದಲು ಪೂಜೆ ಸಲ್ಲಿಸಲಾಯಿತು. ಬಳಿಕ ಅಧ್ಯಕ್ಷ ಮಹೆಬೂಬ ಗೊಳಸಂಗಿ ಅವರು ಅಧಿಕಾರ ವಹಿಸಿಕೊಂಡರು. ವಿವಿಧ ಮಸೀದಿಯ ಮೌಲಾನಾಗಳು ಗೊಳಸಂಗಿ ಅವರನ್ನು ಅಭಿನಂದಿಸಿದರು. ವಿವಿಧ ಸಂಘ ಸಂಸ್ಥೆಯ ಪ್ರಮುಖರು ನೂತನ ಪುರಸಭೆ ಅಧ್ಯಕ್ಷ ಗೊಳಸಂಗಿ, ಉಪಾಧ್ಯಕ್ಷೆ ದೇಗಿನಾಳ ಅವರನ್ನು ಸನ್ಮಾನಿಸಿದರು.

ಕಣ್ಣೀರಾಕಿದ ಕಾಂಗ್ರೆಸ್ ಮುಖಂಡನ ಪುತ್ರ


ಪುರಸಭೆ ಉಪಾಧ್ಯಕ್ಷೆ ಪ್ರೀತಿ ದೇಗಿನಾಳ ಅಧ್ಯಕ್ಷರ ಹೆಸರು ಉಚ್ಛರಿಸುವಾಗ ಈಚೇಗೆ ನಿಧನರಾದ ಸದಸ್ಯ ಅಲ್ಲಾಭಕ್ಷ ಅವರ ಹೆಸರು ಹೇಳಿದ ಪ್ರಸಂಗ ನಡೆಯಿತು. ಒಂದು ವೇಳೆ ಅಲ್ಲಾಭಕ್ಷ ಅವರು ಜೀವಂತವಾಗಿದ್ದರೆ ಅವರೇ ಅಧ್ಯಕ್ಷರಾಗಿರುತ್ತಿದ್ದರು ಎಂಬ ಮಾತುಗಳು ಕೇಳಿ ಬಂದವು.

ಇದನ್ನೂ ಓದಿ: Gold Price Today : ಚಿನ್ನ ಪ್ರಿಯರಿಗೆ ಇದು ಶಾಕಿಂಗ್ ನ್ಯೂಸ್!

ಬಳಿಕ ಅದನ್ನು ಪುನರುಚ್ಛರಿಸಿದ ಅಂಗನವಾಡಿ ನೌಕರರ ಸಂಘದ ರಾಜ್ಯಾಧ್ಯಕ್ಷೆ ನೀಲಮ್ಮ ಬೋರಾವತ್ ಅವರು, ಪುರಸಭೆ ಹಿರಿಯ ಸದಸ್ಯರಾಗಿದ್ದ ದಿ.ಅಲ್ಲಾಭಕ್ಷ ಅವರ ಹೆಸರು ಇಲ್ಲಿ ಬಂದಿದೆ ಎಂದರೆ ಅವರು ಜೀವಂತ ಇದ್ದಾಗ ತೋರಿದ ಘನತೆಯ ಆಡಳಿತವನ್ನು ಗೊಳಸಂಗಿ ಅವರು ನೀಡಿ ಎಂದು ನೆನಪಿಸಿದರು. ಈ ವೇಳೆ ಅಲ್ಲಾಭಕ್ಷ ಢವಳಗಿ ಅವರ ಪುತ್ರ ಬಾಪ್ ಢವಳಗಿ ತಂದೆಯ ಹೆಸರು ಪ್ರಸ್ತಾಪವಾಗಿದ್ದಕ್ಕೆ ಕಣ್ಣೀರಾದರು.

Latest News

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ಕುಳಗೇರಿ ಕ್ರಾಸ್: ಜಗದ್ಗುರು ರೇಣುಕಾಚಾರ್ಯರು ಬೋಧಿಸಿರುವ ತತ್ವ ಸಿದ್ಧಾಂತಗಳು ಸಮಾಜದ ಸುಧಾರಣೆಗೆ ಸೋಪಾನವಾಗಿವೆ. ಇಂಥ

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಬಾದಾಮಿ: ಕಳೆದ ಮಾ.9 ರಂದು ತಾಲೂಕಿನ ಉಗಲವಾಟ ಗ್ರಾಮದ ಕುರಿಗಳ್ಳರಿಂದ ಕೊಲೆಯಾದ ಮೃತ ಕುರಿಗಾಹಿ

ರೇಣುಕಾಚಾರ್ಯರ ಜಯಂತಿ ಆಚರಣೆ

ರೇಣುಕಾಚಾರ್ಯರ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲ್ಲೂಕು ಆಡಳಿತದಿಂದ ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ರೇಣುಕಾಚಾರ್ಯರ ಜಯಂತಿ

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ರಾಯಚೂರು, ಮಾ.11- ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ಸಂಘರ್ಷ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ನಿನ್ನೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ ಮಕ್ಕಳಿಗೆ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡಲು ಬದ್ಧ ಎಂದು ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು. ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚೆನ್ನಬಸವಶ್ರೀ ಸ್ಕಾಲರ್‌ಶಿಪ್ ಎಕ್ಸಾಂನಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.ಹಳ್ಳಿಯ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಕಷ್ಟಪಟ್ಟು

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು 2 ನೇ ಸ್ಥಾನದಲ್ಲಿದೆ. 2024-25ರ ಪರಿಷ್ಕೃತ ಅಂದಾಜಿನಲ್ಲಿ ವಾಣಿಜ್ಯ ತೆರಿಗೆಯಿಂದ ಒಟ್ಟು 1,05,000 ಕೋಟಿ ರೂ.ಗಳ ರಾಜಸ್ವವನ್ನು ನಿರೀಕ್ಷಿಸಲಾಗಿದ್ದು ಇದು ವರ್ತಕರಿಗೆ ಹಾಗೂ ಅಧಿಕಾರಿಗಳಿಗೆ ಒತ್ತಡ ವಾಗಬಹುದು ಎಂದು ತೆರಿಗೆ ಸಲಹೆಗಾರ ಬಿ.ಎನ್.ಹೂಗಾರ ತಿಳಿಸಿದ್ದಾರೆ. ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ತೆರಿಗೆ ಅಧಿನಿಯಮದಡಿ ವಾರ್ಷಿಕವಾಗಿ ಅನುಮತಿಸಬಹುದಾದ ಗರಿಷ್ಟ ಮಿತಿ 2,500