Muddebihal news: After 20 years, minorities got their seats

Muddebihal news: ಅಲ್ಪಸಂಖ್ಯಾತರಿಗೆ 20 ವರ್ಷದ ಬಳಿಕ ದೊರೆತ ಸ್ಥಾನ: ಮೂರು ದಿನಕ್ಕೊಮ್ಮೆ ಕುಡಿಯುವ ನೀರು ಪೂರೈಕೆ-ಗೊಳಸಂಗಿ

Muddebihal news: ಅಲ್ಪಸಂಖ್ಯಾತರಿಗೆ 20 ವರ್ಷದ ಬಳಿಕ ದೊರೆತ ಸ್ಥಾನ: ಮೂರು ದಿನಕ್ಕೊಮ್ಮೆ ಕುಡಿಯುವ ನೀರು ಪೂರೈಕೆ-ಗೊಳಸಂಗಿ

ಮುದ್ದೇಬಿಹಾಳ : ಪಟ್ಟಣಕ್ಕೆ ಸದ್ಯಕ್ಕೆ ಐದಾರು ದಿನಕ್ಕೊಮ್ಮೆ ನೀರು ಪೂರೈಕೆ ಆಗುತ್ತಿದ್ದು, ಆ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸಿ ಜನತೆಗೆ ಮೂರು ದಿನಕ್ಕೊಮ್ಮೆ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗುವುದು ಎಂದು (Muddebihal news) ಪುರಸಭೆ ನೂತನ ಅಧ್ಯಕ್ಷ ಮಹೆಬೂಬ ಗೊಳಸಂಗಿ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌‌ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ‌ಲಿಂಕ್ ಬಳಸಿ: https://t.me/dcgkannada

ಪಟ್ಟಣದ ಪುರಸಭೆ ಸಭಾ ಭವನದಲ್ಲಿ ಅಧ್ಯಕ್ಷ,ಉಪಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಶುಕ್ರವಾರ ಹಮ್ಮಿಕೊಂಡಿದ್ದ ಅಧಿಕಾರ ಗ್ರಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಚರಂಡಿ ವ್ಯವಸ್ಥೆ, ಬೀದಿ ದೀಪಗಳು, ನಗರದ ಸ್ವಚ್ಛತೆ ಹಾಗೂ ಯುಜಿಡಿ ಯೋಜನೆಯನ್ನು ಆದಷ್ಟು ತ್ವರಿತವಾಗಿ ಪುರಸಭೆಗೆ ಹಸ್ತಾಂತರ ಮಾಡಿಕೊಂಡು ಜನತೆಗೆ ಅನುಕೂಲ ಒದಗಿಸಿಕೊಡುವ ಕಾರ್ಯ ಮಾಡುತ್ತೇವೆ.ಇಲ್ಲಿ ಚುನಾವಣೆ ಬಂದಾಗಲಷ್ಟೇ ಪಕ್ಷ ಎಂದು ಭಾವಿಸುತ್ತೇನೆ. ಉಳಿದ ಎಲ್ಲ ಸದಸ್ಯರ ಸಹಕಾರದೊಂದಿಗೆ ಜನರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಣೆ ಮಾಡುತ್ತೇವೆ ಎಂದರು.

ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ರಾಜ್ಯಾಧ್ಯಕ್ಷೆ ನೀಲಮ್ಮ ಬೋರಾವತ್ ಮಾತನಾಡಿ, ಹೋರಾಟದಿಂದಲೇ ಅಧ್ಯಕ್ಷ ಸ್ಥಾನದವರೆಗೆ ಬೆಳೆದಿರುವ ಮಹೆಬೂಬ ಗೊಳಸಂಗಿ ಅವರು ಒಳ್ಳೆಯ ಆಡಳಿತ ನೀಡಲಿ.ಪಂಚಮಸಾಲಿ ಸಮಾಜದ ಪ್ರೀತಿ ದೇಗಿನಾಳ ಅವರನ್ನು ಉಪಾಧ್ಯಕ್ಷರನ್ನಾಗಿ ಮಾಡುವ ಮೂಲಕ ಪಂಚಮಸಾಲಿ ಸಮಾಜದವರಿಗೂ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿಯವರು ಆದ್ಯತೆ ಕೊಟ್ಟಿರುವುದು ಹೆಮ್ಮೆಯ ಸಂಗತಿ ಎಂದರು.

ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ ಮಾತನಾಡಿ, ಜನರ ಸಮಸ್ಯೆಗಳನ್ನು ಮೊದಲ ಆದ್ಯತೆ ಮೇರೆಗೆ ಪರಿಹರಿಸಲು ನೂತನ ಅಧ್ಯಕ್ಷರು ಶ್ರಮಿಸಬೇಕು. ದಿ.ಅಲ್ಲಾಭಕ್ಷ್ಯ ಢವಳಗಿ ನಂತರದಲ್ಲಿ ಗೊಳಸಂಗಿಯವರು ಅಲ್ಪಸಂಖ್ಯಾತರ ನಾಯಕರಾಗಿ ಗುರುತಿಸಿಕೊಂಡಿದ್ದಾರೆ ಎಂದರು.

ಪುರಸಭೆ ನೂತನ ಉಪಾಧ್ಯಕ್ಷೆ ಪ್ರೀತಿ ದೇಗಿನಾಳ, ಮುಖಂಡ ವಾಯ್.ಎಚ್.ವಿಜಯಕರ್, ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ ಮಾತನಾಡಿದರು.

ಇದಕ್ಕೂ ಮುನ್ನ ಪುರಸಭೆ ಉಪಾಧ್ಯಕ್ಷೆ ಪ್ರೀತಿ ದೇಗಿನಾಳ ಅವರ ಕೊಠಡಿಗೆ ಮೊದಲು ಪೂಜೆ ಸಲ್ಲಿಸಲಾಯಿತು. ಬಳಿಕ ಅಧ್ಯಕ್ಷ ಮಹೆಬೂಬ ಗೊಳಸಂಗಿ ಅವರು ಅಧಿಕಾರ ವಹಿಸಿಕೊಂಡರು. ವಿವಿಧ ಮಸೀದಿಯ ಮೌಲಾನಾಗಳು ಗೊಳಸಂಗಿ ಅವರನ್ನು ಅಭಿನಂದಿಸಿದರು. ವಿವಿಧ ಸಂಘ ಸಂಸ್ಥೆಯ ಪ್ರಮುಖರು ನೂತನ ಪುರಸಭೆ ಅಧ್ಯಕ್ಷ ಗೊಳಸಂಗಿ, ಉಪಾಧ್ಯಕ್ಷೆ ದೇಗಿನಾಳ ಅವರನ್ನು ಸನ್ಮಾನಿಸಿದರು.

ಕಣ್ಣೀರಾಕಿದ ಕಾಂಗ್ರೆಸ್ ಮುಖಂಡನ ಪುತ್ರ


ಪುರಸಭೆ ಉಪಾಧ್ಯಕ್ಷೆ ಪ್ರೀತಿ ದೇಗಿನಾಳ ಅಧ್ಯಕ್ಷರ ಹೆಸರು ಉಚ್ಛರಿಸುವಾಗ ಈಚೇಗೆ ನಿಧನರಾದ ಸದಸ್ಯ ಅಲ್ಲಾಭಕ್ಷ ಅವರ ಹೆಸರು ಹೇಳಿದ ಪ್ರಸಂಗ ನಡೆಯಿತು. ಒಂದು ವೇಳೆ ಅಲ್ಲಾಭಕ್ಷ ಅವರು ಜೀವಂತವಾಗಿದ್ದರೆ ಅವರೇ ಅಧ್ಯಕ್ಷರಾಗಿರುತ್ತಿದ್ದರು ಎಂಬ ಮಾತುಗಳು ಕೇಳಿ ಬಂದವು.

ಇದನ್ನೂ ಓದಿ: Gold Price Today : ಚಿನ್ನ ಪ್ರಿಯರಿಗೆ ಇದು ಶಾಕಿಂಗ್ ನ್ಯೂಸ್!

ಬಳಿಕ ಅದನ್ನು ಪುನರುಚ್ಛರಿಸಿದ ಅಂಗನವಾಡಿ ನೌಕರರ ಸಂಘದ ರಾಜ್ಯಾಧ್ಯಕ್ಷೆ ನೀಲಮ್ಮ ಬೋರಾವತ್ ಅವರು, ಪುರಸಭೆ ಹಿರಿಯ ಸದಸ್ಯರಾಗಿದ್ದ ದಿ.ಅಲ್ಲಾಭಕ್ಷ ಅವರ ಹೆಸರು ಇಲ್ಲಿ ಬಂದಿದೆ ಎಂದರೆ ಅವರು ಜೀವಂತ ಇದ್ದಾಗ ತೋರಿದ ಘನತೆಯ ಆಡಳಿತವನ್ನು ಗೊಳಸಂಗಿ ಅವರು ನೀಡಿ ಎಂದು ನೆನಪಿಸಿದರು. ಈ ವೇಳೆ ಅಲ್ಲಾಭಕ್ಷ ಢವಳಗಿ ಅವರ ಪುತ್ರ ಬಾಪ್ ಢವಳಗಿ ತಂದೆಯ ಹೆಸರು ಪ್ರಸ್ತಾಪವಾಗಿದ್ದಕ್ಕೆ ಕಣ್ಣೀರಾದರು.

Latest News

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಮುದ್ದೇಬಿಹಾಳ(ಜಿಲ್ಲೆ : ವಿಜಯಪುರ) : ದೇಶದ ಪ್ರತಿಷ್ಠಿತ ಐಐಟಿ ಕಾಲೇಜುಗಳಲ್ಲಿ ಒಂದಾಗಿರುವ ಕಾನ್ಪುರದ ಐಐಟಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ : ಸಿಎಂ ಸಿದ್ಧರಾಮಯ್ಯನವರ ಅವಧಿಯಲ್ಲಿ ಕಳೆದ ಬಜೆಟ್‌ನಲ್ಲಿ ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದ ಬೆಳ್ಳಿ ಕವಚ ಕಳ್ಳತನ ಪ್ರಕರಣಕ್ಕೆ

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ ನಿರ್ಮಾಣ ಸಮಿತಿಯ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಸಮಿತಿಯ ಅಧ್ಯಕ್ಷರಾಗಿ ಪುನೀತ ಹಿಪ್ಪರಗಿ, ಉಪಾಧ್ಯಕ್ಷರಾಗಿ ಸೋಮನಗೌಡ ಬಿರಾದಾರ ಹಾಗೂ ಕಾರ್ಯದರ್ಶಿಯಾಗಿ ಕಾಶಿನಾಥ ಹುಗ್ಗಿ ಅವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಅಧ್ಯಕ್ಷ ಮಹಾಂತೇಶ ಬೂದಿಹಾಳಮಠ, ನೂತನ ಪದಾಧಿಕಾರಿಗಳು ಕಾರ್ಗಿಲ್ ಸಮಿತಿಯ ಉದ್ದೇಶಗಳನ್ನು ಮತ್ತಷ್ಟು ಬಲಪಡಿಸಿ, ದೇಶಭಕ್ತಿ ಹಾಗೂ ಸಾಮಾಜಿಕ ಸೇವಾ ಚಟುವಟಿಕೆಗಳಿಗೆ ಹೆಚ್ಚಿನ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ ಯುವಕನೋರ್ವ ಕರ್ತವ್ಯಕ್ಕೆ ಅಡ್ಡಿ ಪಡಿಸುವುದಲ್ಲದೆ, ಕಳೆದ ಒಂದು ವರ್ಷದಿಂದ ಉದ್ದೇಶಪೂರ್ವಕವಾಗಿ ತನ್ನ ವಿಡಿಯೋ,ಪೋಟೋ ಚಿತ್ರೀಕರಣ ಮಾಡಿ ಅಧಿಕಾರಿಗಳಿಗೆ ಹರಿ ಬಿಡುತ್ತಿದ್ದಾನೆ ಎಂದು ಆರೋಪಿಸಿದ ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ಹೊರ ಗುತ್ತಿಗೆ ಮಹಿಳಾ ಸಿಬ್ಬಂದಿಯೋರ್ವರು ಮಂಗಳವಾರ ಆಸ್ಪತ್ರೆಯಲ್ಲೇ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.ಏತನ್ಮಧ್ಯೆ ಘಟನೆ ಖಂಡಿಸಿ ಆಸ್ಪತ್ರೆಯ ಹೊರಗೆ