Muddebihal news: After 20 years, minorities got their seats

Muddebihal news: ಅಲ್ಪಸಂಖ್ಯಾತರಿಗೆ 20 ವರ್ಷದ ಬಳಿಕ ದೊರೆತ ಸ್ಥಾನ: ಮೂರು ದಿನಕ್ಕೊಮ್ಮೆ ಕುಡಿಯುವ ನೀರು ಪೂರೈಕೆ-ಗೊಳಸಂಗಿ

Muddebihal news: ಅಲ್ಪಸಂಖ್ಯಾತರಿಗೆ 20 ವರ್ಷದ ಬಳಿಕ ದೊರೆತ ಸ್ಥಾನ: ಮೂರು ದಿನಕ್ಕೊಮ್ಮೆ ಕುಡಿಯುವ ನೀರು ಪೂರೈಕೆ-ಗೊಳಸಂಗಿ

ಮುದ್ದೇಬಿಹಾಳ : ಪಟ್ಟಣಕ್ಕೆ ಸದ್ಯಕ್ಕೆ ಐದಾರು ದಿನಕ್ಕೊಮ್ಮೆ ನೀರು ಪೂರೈಕೆ ಆಗುತ್ತಿದ್ದು, ಆ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸಿ ಜನತೆಗೆ ಮೂರು ದಿನಕ್ಕೊಮ್ಮೆ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗುವುದು ಎಂದು (Muddebihal news) ಪುರಸಭೆ ನೂತನ ಅಧ್ಯಕ್ಷ ಮಹೆಬೂಬ ಗೊಳಸಂಗಿ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌‌ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ‌ಲಿಂಕ್ ಬಳಸಿ: https://t.me/dcgkannada

ಪಟ್ಟಣದ ಪುರಸಭೆ ಸಭಾ ಭವನದಲ್ಲಿ ಅಧ್ಯಕ್ಷ,ಉಪಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಶುಕ್ರವಾರ ಹಮ್ಮಿಕೊಂಡಿದ್ದ ಅಧಿಕಾರ ಗ್ರಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಚರಂಡಿ ವ್ಯವಸ್ಥೆ, ಬೀದಿ ದೀಪಗಳು, ನಗರದ ಸ್ವಚ್ಛತೆ ಹಾಗೂ ಯುಜಿಡಿ ಯೋಜನೆಯನ್ನು ಆದಷ್ಟು ತ್ವರಿತವಾಗಿ ಪುರಸಭೆಗೆ ಹಸ್ತಾಂತರ ಮಾಡಿಕೊಂಡು ಜನತೆಗೆ ಅನುಕೂಲ ಒದಗಿಸಿಕೊಡುವ ಕಾರ್ಯ ಮಾಡುತ್ತೇವೆ.ಇಲ್ಲಿ ಚುನಾವಣೆ ಬಂದಾಗಲಷ್ಟೇ ಪಕ್ಷ ಎಂದು ಭಾವಿಸುತ್ತೇನೆ. ಉಳಿದ ಎಲ್ಲ ಸದಸ್ಯರ ಸಹಕಾರದೊಂದಿಗೆ ಜನರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಣೆ ಮಾಡುತ್ತೇವೆ ಎಂದರು.

ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ರಾಜ್ಯಾಧ್ಯಕ್ಷೆ ನೀಲಮ್ಮ ಬೋರಾವತ್ ಮಾತನಾಡಿ, ಹೋರಾಟದಿಂದಲೇ ಅಧ್ಯಕ್ಷ ಸ್ಥಾನದವರೆಗೆ ಬೆಳೆದಿರುವ ಮಹೆಬೂಬ ಗೊಳಸಂಗಿ ಅವರು ಒಳ್ಳೆಯ ಆಡಳಿತ ನೀಡಲಿ.ಪಂಚಮಸಾಲಿ ಸಮಾಜದ ಪ್ರೀತಿ ದೇಗಿನಾಳ ಅವರನ್ನು ಉಪಾಧ್ಯಕ್ಷರನ್ನಾಗಿ ಮಾಡುವ ಮೂಲಕ ಪಂಚಮಸಾಲಿ ಸಮಾಜದವರಿಗೂ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿಯವರು ಆದ್ಯತೆ ಕೊಟ್ಟಿರುವುದು ಹೆಮ್ಮೆಯ ಸಂಗತಿ ಎಂದರು.

ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ ಮಾತನಾಡಿ, ಜನರ ಸಮಸ್ಯೆಗಳನ್ನು ಮೊದಲ ಆದ್ಯತೆ ಮೇರೆಗೆ ಪರಿಹರಿಸಲು ನೂತನ ಅಧ್ಯಕ್ಷರು ಶ್ರಮಿಸಬೇಕು. ದಿ.ಅಲ್ಲಾಭಕ್ಷ್ಯ ಢವಳಗಿ ನಂತರದಲ್ಲಿ ಗೊಳಸಂಗಿಯವರು ಅಲ್ಪಸಂಖ್ಯಾತರ ನಾಯಕರಾಗಿ ಗುರುತಿಸಿಕೊಂಡಿದ್ದಾರೆ ಎಂದರು.

ಪುರಸಭೆ ನೂತನ ಉಪಾಧ್ಯಕ್ಷೆ ಪ್ರೀತಿ ದೇಗಿನಾಳ, ಮುಖಂಡ ವಾಯ್.ಎಚ್.ವಿಜಯಕರ್, ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ ಮಾತನಾಡಿದರು.

ಇದಕ್ಕೂ ಮುನ್ನ ಪುರಸಭೆ ಉಪಾಧ್ಯಕ್ಷೆ ಪ್ರೀತಿ ದೇಗಿನಾಳ ಅವರ ಕೊಠಡಿಗೆ ಮೊದಲು ಪೂಜೆ ಸಲ್ಲಿಸಲಾಯಿತು. ಬಳಿಕ ಅಧ್ಯಕ್ಷ ಮಹೆಬೂಬ ಗೊಳಸಂಗಿ ಅವರು ಅಧಿಕಾರ ವಹಿಸಿಕೊಂಡರು. ವಿವಿಧ ಮಸೀದಿಯ ಮೌಲಾನಾಗಳು ಗೊಳಸಂಗಿ ಅವರನ್ನು ಅಭಿನಂದಿಸಿದರು. ವಿವಿಧ ಸಂಘ ಸಂಸ್ಥೆಯ ಪ್ರಮುಖರು ನೂತನ ಪುರಸಭೆ ಅಧ್ಯಕ್ಷ ಗೊಳಸಂಗಿ, ಉಪಾಧ್ಯಕ್ಷೆ ದೇಗಿನಾಳ ಅವರನ್ನು ಸನ್ಮಾನಿಸಿದರು.

ಕಣ್ಣೀರಾಕಿದ ಕಾಂಗ್ರೆಸ್ ಮುಖಂಡನ ಪುತ್ರ


ಪುರಸಭೆ ಉಪಾಧ್ಯಕ್ಷೆ ಪ್ರೀತಿ ದೇಗಿನಾಳ ಅಧ್ಯಕ್ಷರ ಹೆಸರು ಉಚ್ಛರಿಸುವಾಗ ಈಚೇಗೆ ನಿಧನರಾದ ಸದಸ್ಯ ಅಲ್ಲಾಭಕ್ಷ ಅವರ ಹೆಸರು ಹೇಳಿದ ಪ್ರಸಂಗ ನಡೆಯಿತು. ಒಂದು ವೇಳೆ ಅಲ್ಲಾಭಕ್ಷ ಅವರು ಜೀವಂತವಾಗಿದ್ದರೆ ಅವರೇ ಅಧ್ಯಕ್ಷರಾಗಿರುತ್ತಿದ್ದರು ಎಂಬ ಮಾತುಗಳು ಕೇಳಿ ಬಂದವು.

ಇದನ್ನೂ ಓದಿ: Gold Price Today : ಚಿನ್ನ ಪ್ರಿಯರಿಗೆ ಇದು ಶಾಕಿಂಗ್ ನ್ಯೂಸ್!

ಬಳಿಕ ಅದನ್ನು ಪುನರುಚ್ಛರಿಸಿದ ಅಂಗನವಾಡಿ ನೌಕರರ ಸಂಘದ ರಾಜ್ಯಾಧ್ಯಕ್ಷೆ ನೀಲಮ್ಮ ಬೋರಾವತ್ ಅವರು, ಪುರಸಭೆ ಹಿರಿಯ ಸದಸ್ಯರಾಗಿದ್ದ ದಿ.ಅಲ್ಲಾಭಕ್ಷ ಅವರ ಹೆಸರು ಇಲ್ಲಿ ಬಂದಿದೆ ಎಂದರೆ ಅವರು ಜೀವಂತ ಇದ್ದಾಗ ತೋರಿದ ಘನತೆಯ ಆಡಳಿತವನ್ನು ಗೊಳಸಂಗಿ ಅವರು ನೀಡಿ ಎಂದು ನೆನಪಿಸಿದರು. ಈ ವೇಳೆ ಅಲ್ಲಾಭಕ್ಷ ಢವಳಗಿ ಅವರ ಪುತ್ರ ಬಾಪ್ ಢವಳಗಿ ತಂದೆಯ ಹೆಸರು ಪ್ರಸ್ತಾಪವಾಗಿದ್ದಕ್ಕೆ ಕಣ್ಣೀರಾದರು.

Latest News

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಯೊಬ್ಬರು ನೀಟ್

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ಮುದ್ದೇಬಿಹಾಳ : ಹುನಗುಂದ ತಾಲ್ಲೂಕಿನಿಂದ ತಂಗಡಗಿ ಮುಖಾಂತರ ತಾಳಿಕೋಟಿಯವರೆಗೆ ನಿರ್ಮಿಸಿರುವ ರಾಜ್ಯ ಹೆದ್ದಾರಿ ಕಾಮಗಾರಿಯನ್ನು

ಅಶೋಕ ಚಟ್ಟೇರ ಅಧ್ಯಕ್ಷರಾಗಿ ಆಯ್ಕೆ : ಬಣಜಿಗ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ

ಅಶೋಕ ಚಟ್ಟೇರ ಅಧ್ಯಕ್ಷರಾಗಿ ಆಯ್ಕೆ : ಬಣಜಿಗ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕು ಬಣಜಿಗ ಸಮಾಜದ ನೂತನ ಕಾರ್ಯಕಾರಿಣಿ ಮಂಡಳಿಯನ್ನು ಸರ್ವಾನುಮತದಿಂದ ಭಾನುವಾರ ಆಯ್ಕೆ

ದೇವದುರ್ಗ ಉದ್ಯೋಗ ಖಾತ್ರಿ ಅಕ್ರಮ: ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ

ದೇವದುರ್ಗ ಉದ್ಯೋಗ ಖಾತ್ರಿ ಅಕ್ರಮ: ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ

ರಾಯಚೂರು,ಜೂ 15- ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನಡೆದಿರುವ

ವಲಯ ವ್ಯಾಪ್ತಿ ಶಾಲೆಗಳ ಮುಖ್ಯಶಿಕ್ಷಕರ ಸಭೆ

ವಲಯ ವ್ಯಾಪ್ತಿ ಶಾಲೆಗಳ ಮುಖ್ಯಶಿಕ್ಷಕರ ಸಭೆ

ನಾರಾಯಣಪುರ: ಕೊಡೇಕಲ್ ಪಟ್ಟಣದ ಸರರ್ಕಾರಿ ಪ್ರೌಢಶಾಲೆಯಲ್ಲಿ ವಲಯ ವ್ಯಾಪ್ತಿಯ ಸರ್ಕಾರಿ, ಅನುದಾನಿತ, ಅನುದಾನ ರಹಿತ ಹಿರಿಯ, ಕಿರಿಯ ಪ್ರಾಥಮಿಕ ಶಾಲೆಗಳ ಮುಖ್ಯಶಿಕ್ಷಕರ ಸಭೆ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಸುರುಪುರ ಬಿಇಒ ಯಲ್ಲಪ್ಪ ಕಾಡ್ಲೂರ ಮಾತನಾಡಿ ಮಕ್ಕಳಿಗೆ ಕಲಿಕೆಗೆ ಪೂರಕವಾದ ವಾತವರಣ ನಿರ್ಮಾಣದ ಜೊತೆಗೆ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಿಸುವದು ಹಾಗೂ ಕ್ಲಸ್ಟರ್ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಸೇರಿ ಅನುದಾನಿತ ಶಾಲೆಗಳಲ್ಲಿ ಸಿಗುವ ಬಿಸಿಯೂಟ, ಸಮವಸ್ತ್ರ ಪಠ್ಯಪುಸ್ತಕಗಳ ವಿತರಣೆ ಸೇರಿ

ಬಿಜೆಪಿ ಸರ್ಕಾರಕ್ಕೆ 11 ವರ್ಷ: ಕೇಂದ್ರ ಸರ್ಕಾರದಿಂದಲೂ ಐದು ಕೆ.ಜಿ ಅಕ್ಕಿ- ಪಂಪಣ್ಣವರ

ಬಿಜೆಪಿ ಸರ್ಕಾರಕ್ಕೆ 11 ವರ್ಷ: ಕೇಂದ್ರ ಸರ್ಕಾರದಿಂದಲೂ ಐದು ಕೆ.ಜಿ ಅಕ್ಕಿ- ಪಂಪಣ್ಣವರ

ಮುದ್ದೇಬಿಹಾಳ : ಜನೌಷಧಿ ಕೇಂದ್ರಗಳು, ಉಚಿತ ಅಕ್ಕಿ ಕೊಡುವ ಯೋಜನೆ, ಆಯುಷ್ಮಾನ್ ಆರೋಗ್ಯ ಕಾರ್ಡ ಇಂತಹ ನೂರಾರು ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ಮಾಡಲಾಗಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ ಹೇಳಿದರು. ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಬಿಜೆಪಿ ಸರ್ಕಾರ ಕೇಂದ್ರದಲ್ಲಿ 11 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಐದು ಲಕ್ಷ ರೂ.ಗಳವರೆಗೆ ಆರೋಗ್ಯ ವಿಮೆ ಕಲ್ಪಿಸುವ ಯೋಜನೆಯನ್ನು ಮೋದಿ