Muddebihal: ಚಿರತೆ ಹೆಜ್ಜೆ ಹೋಲುವ ಕಾಡುಪ್ರಾಣಿ ಹೆಜ್ಜೆ ಗುರುತು ಪತ್ತೆ? ಕಂದಗನೂರಿನಲ್ಲಿ ಆತಂಕ!

Muddebihal: ಚಿರತೆ ಹೆಜ್ಜೆ ಹೋಲುವ ಕಾಡುಪ್ರಾಣಿ ಹೆಜ್ಜೆ ಗುರುತು ಪತ್ತೆ? ಕಂದಗನೂರಿನಲ್ಲಿ ಆತಂಕ!

ಮುದ್ದೇಬಿಹಾಳ : ತಾಲ್ಲೂಕಿನ ಕಂದಗನೂರಿನ ಕಬ್ಬಿನ ಜಮೀನೊಂದರಲ್ಲಿ ಚಿರತೆಯಂತಹ ಕಾಡುಪ್ರಾಣಿಯದ್ದು ಎನ್ನಲಾದ ಹೆಜ್ಜೆ ಗುರುತು ಪತ್ತೆಯಾಗಿದ್ದು, ಈ ಭಾಗದ ಗ್ರಾಮಸ್ಥರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ.

ಜು.29 ರಂದು ಕಂದಗನೂರ ಗ್ರಾಮದ ಬೀಯಪ್ಪ ಬೋಳಿ ಅವರ ಹೊಲದಲ್ಲಿ ಆಕಳು ಹಾಗೂ ಕರುವಿನ ಕಳೆಬರ ಪತ್ತೆಯಾಗಿದೆ. ಇದು ಕಾಡು ಪ್ರಾಣಿ ದಾಳಿಯಿಂದ ಎರಡು ಜಾನುವಾರುಗಳು ಮೃತಪಟ್ಟಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಏತನ್ಮಧ್ಯೆ, ಕಂದಗನೂರು ಭಾಗದಲ್ಲಿ ಚಿರತೆ ಬಂದಿದೆ ಎಂಬ ವಿಡಿಯೋ, ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು ಅವು ಈ ಭಾಗದ್ದಲ್ಲ ಎಂಬುದನ್ನು ಅರಣ್ಯಾಧಿಕಾರಿಗಳು ಖಚಿತಪಡಿಸಿದ್ದಾರೆ.

ಕಾಡುಪ್ರಾಣಿ ಸೆರೆಗೆ ಬಿ.ಎಸ್.ಬೋಳಿ ಅವರ ಹೊಲದಲ್ಲಿ ಬೋನು ಇರಿಸಲಾಗಿದೆ. ಆದರೆ ಜು.30 ರಂದು ಮೃತಪಟ್ಟ ಆಕಳ ಮಾಂಸ ತಿನ್ನುವುದಕ್ಕೆ ಕಾಡುಪ್ರಾಣಿ ಬಂದು ಹೋಗಿದೆ ಎಂದು ಪ್ರಾದೇಶಿಕ ಅರಣ್ಯ ಇಲಾಖೆಯ ಅಧಿಕಾರಿ ಬಸನಗೌಡ ಬಿರಾದಾರ ತಿಳಿಸಿದ್ದಾರೆ.

ಹೊಲದಲ್ಲಿ ಮಂಗಳವಾರ ಅವಲೋಕಿಸಿದಾಗ ಕಾಡುಪ್ರಾಣಿಯ ಹೆಜ್ಜೆಗಳು ಚಿರತೆಯದ್ದೆಂಬಂತೆ ಕಾಣುತ್ತಿವೆ.ಆದರೆ ಖಚಿತವಾಗಿ ಹೇಳಲು ಆಗದು.ಕತ್ತೆ ಕಿರುಬ ಕೂಡಾ ಜಾನುವಾರುಗಳನ್ನು ತಿಂದು ಹೋಗುತ್ತದೆ. ಮೇಲಧಿಕಾರಿಗಳ ಸೂಚನೆಯಂತೆ ಕಾಡುಪ್ರಾಣಿ ಸೆರೆ ಹಿಡಿಯಲು ಕ್ಯಾಮೆರಾಗಳನ್ನು ಅಳವಡಿಸಲಾಗುತ್ತದೆ. ಅದರಲ್ಲಿ ಸೆರೆಯಾದರೆ ಯಾವ ಪ್ರಾಣಿ ಎಂಬುದು ಖಚಿತವಾಗಿ ತಿಳಿದು ಬರಲಿದೆ ಎಂದು ಮಾಹಿತಿ ನೀಡಿದರು.

ಚಿರತೆ ಬಂದಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ವಿಡಿಯೋ ಫೋಟೊಗಳ ಮಾಹಿತಿಯಿಂದ ಗ್ರಾಮಸ್ಥರು ತೀವ್ರ ಆತಂಕಗೊಂಡರು. ಸಂಜೆಯವ ಹೊತ್ತಿಗೆ ಚಿರತೆ ಕಂದಗನೂರಿನಲ್ಲಿ ಕಾಣಿಸಿದ್ದಲ್ಲ ಬೇರೆ ಸ್ಥಳದ್ದು ಎಂದು ಗೊತ್ತಾದ ಬಳಿಕ ಅಲ್ಪ ನಿರಾಳರಾಗಿದ್ದಾರೆ. ಆದರೆ, ಚಿರತೆಯೇ ಬಂದಿದೆ ಎಂಬುದನ್ನು ಯಾರೊಬ್ಬರು ನೋಡಿಲ್ಲ ಎಂದು ಗ್ರಾಮಸ್ಥ ರಾಜಾಭಕ್ಷಿ ಮಕಾಶಿ ತಿಳಿಸಿದರು.

ಕೃಷಿ ಚಟುವಟಿಕೆ ಕೈಗೊಳ್ಳಲು ಗ್ರಾಮಸ್ಥರ ಹಿಂದೇಟು: ಚಿರತೆ ಕಾಣಿಸಿಕೊಂಡಿದೆ ಎಂಬ ವದಂತಿಯಿಂದ ಭೀತಿಗೊಳಗಾಗಿರುವ ಈ ಭಾಗದ ಕಂದಗನೂರು, ಕಾಳಗಿ, ಬಳಬಟ್ಟಿ ಗ್ರಾಮದ ರೈತಾಪಿ ವರ್ಗದವರಲ್ಲಿ ಕೃಷಿ ಚಟುವಟಿಕೆ ಗೆ ಹೋಗುವುದನ್ನು ಬಿಟ್ಟು ಮನೆಯಲ್ಲಿ ಕೂರುವಂತಾಗಿದೆ. ಆದಷ್ಟು ಬೇಗ ತಾಲ್ಲೂಕಾಡಳಿತದ ಅಧಿಕಾರಿಗಳು ಕಾಡುಪ್ರಾಣಿ ಪತ್ತೆ ಹಚ್ಚಿ ಸೆರೆ ಹಿಡಿದು ರೈತರಲ್ಲಿ ಉಂಟಾಗಿರುವ ಆತಂಕವನ್ನು ದೂರ ಮಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Latest News

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ : ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ಸಮಗ್ರ ಪ್ರಶಸ್ತಿ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ : ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ಸಮಗ್ರ ಪ್ರಶಸ್ತಿ

ಮುದ್ದೇಬಿಹಾಳ : ತಾಲ್ಲೂಕಿನ ಕೊಪ್ಪ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹುಲ್ಲೂರ ಕ್ಲಸ್ಟರ್

ಮನೆಮನೆಗೆ ಪೋಲಿಸ್ ಭೇಟಿ ನೀಡಿ ಕಾನೂನು ಅರಿವು ಕಾರ್ಯಕ್ರಮ

ಮನೆಮನೆಗೆ ಪೋಲಿಸ್ ಭೇಟಿ ನೀಡಿ ಕಾನೂನು ಅರಿವು ಕಾರ್ಯಕ್ರಮ

ನಾಲತವಾಡ: ಸ್ಥಳೀಯ ಹೊರ ಪೋಲಿಸ್ ಠಾಣೆ ಆರಕ್ಷಕ ಸಿಬ್ಬಂದಿ ಘಾಳಪೂಜಿ, ಬಿಜ್ಜೂರ, ಖಾನೀಕೇರಿ, ಲೊಟಗೇರಿ

ಪ್ರತಿಭಾ ಕಾರಂಜಿಯಲ್ಲಿ ಮಕ್ಕಳ ಕಲರವ

ಪ್ರತಿಭಾ ಕಾರಂಜಿಯಲ್ಲಿ ಮಕ್ಕಳ ಕಲರವ

ನಾಲತವಾಡ: ಸಮೀಪದ ಲೊಟಗೇರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಸ್ಕೃತಿಯ ಕಾಂತಿ ಮಕ್ಕಳ ಮೂಲಕ

ಮಹಿಳೆಯರಿಗೆ ಋತುಚಕ್ರ ರಜೆ :ಸರ್ಕಾರದಿಂದ ಮಾನವೀಯ ಸಂವೇದನೆಯ ಆದೇಶ-ಸಂಗೀತಾ ನಾಡಗೌಡ

ಮಹಿಳೆಯರಿಗೆ ಋತುಚಕ್ರ ರಜೆ :ಸರ್ಕಾರದಿಂದ ಮಾನವೀಯ ಸಂವೇದನೆಯ ಆದೇಶ-ಸಂಗೀತಾ ನಾಡಗೌಡ

ಮುದ್ದೇಬಿಹಾಳ : ರಾಜ್ಯ ಸರ್ಕಾರ ಎರಡು ದಿನಗಳ ಹಿಂದಷ್ಟೇ ರಾಜ್ಯದ ಸರ್ಕಾರಿ,ಖಾಸಗಿ.ಗುತ್ತಿಗೆ,ಹೊರಗುತ್ತಿಗೆ ಕ್ಷೇತ್ರದಲ್ಲಿ ಸೇವೆ

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆಯ ಅಭಿವೃದ್ಧಿಗೆ ಕೈ ಜೋಡಿಸೋಣ

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆಯ ಅಭಿವೃದ್ಧಿಗೆ ಕೈ ಜೋಡಿಸೋಣ

ಮುದ್ದೇಬಿಹಾಳ : ಮುಸ್ಲಿಂ ಸಮಾಜದ ಪ್ರಾತಿನಿಧಿಕ ಸಂಸ್ಥೆ ಅಂಜುಮನ್ ಇಸ್ಲಾಂ ಕಮೀಟಿಗೆ ಆಡಳಿತ ಮಂಡಳಿ ರಚನೆಗೊಂಡರೆ ಸಮಾಜದ ಶೈಕ್ಷಣಿಕ ಹಾಗೂ ಔದ್ಯೋಗಿಕ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಲು ಆದ್ಯತೆ ದೊರೆಯುತ್ತದೆ ಎಂದು ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಅಂಜುಮನ್ ಇಸ್ಲಾಂ ಕಮೀಟಿ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಹರನಾಳ ಪಿಕೆಪಿಎಸ್ ಅಧ್ಯಕ್ಷ ಕಾಶೀಂಪಟೇಲ್ ಮೂಕಿಹಾಳ ಹಾಗೂ ಅಂಜುಮನ್ ಸಂಸ್ಥೆಯ ಮತದಾರ ಸದಸ್ಯರ ದಾಖಲಾತಿ ಅಧಿಕಾರಿಯಾಗಿ ನೇಮಕವಾದ ಹುಸೇನ ನಾಯಕೋಡಿ ಅವರ

ಬಸರಕೋಡ ಪಿಕೆಪಿಎಸ್‌ಗೆ ಅವಿರೋಧ ಆಯ್ಕೆ : ಮತ್ತೆ ಹೇಮರೆಡ್ಡಿ ಮೇಟಿ ಪೆನಲ್‌ಗೆ ಮುನ್ನಡೆ

ಬಸರಕೋಡ ಪಿಕೆಪಿಎಸ್‌ಗೆ ಅವಿರೋಧ ಆಯ್ಕೆ : ಮತ್ತೆ ಹೇಮರೆಡ್ಡಿ ಮೇಟಿ ಪೆನಲ್‌ಗೆ ಮುನ್ನಡೆ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ವಿವಿಧೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ 12 ಸ್ಥಾನಗಳಿಗೆ ಸೋಮವಾರ ಅವಿರೋಧ ಆಯ್ಕೆ ನಡೆದಿದ್ದು ಹಿಂದಿನ ಅಧ್ಯಕ್ಷ ಹೇಮರೆಡ್ಡಿ ಮೇಟಿ ಪೆನಲ್‌ಗೆ ಮುನ್ನಡೆ ದೊರೆತಿದೆ. ಚುನಾವಣಾಧಿಕಾರಿ, ಸಹಕಾರ ಅಭಿವೃದ್ಧಿ ಅಧಿಕಾರಿ ವಿ.ಎಸ್.ಉತ್ನಾಳ ಅವರು 12 ನಿರ್ದೇಶಕರು ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು. ಸಾಮಾನ್ಯ ವರ್ಗದಿಂದ ಹಿಂದಿನ ಅಧ್ಯಕ್ಷ ಹೇಮಣ್ಣ ಮೇಟಿ, ಬಸವರಾಜ ಪಾಟೀಲ, ಶಾಂತಪ್ಪ ಸಂಕನಾಳ, ಬಾಬು ಸೂಳಿಭಾವಿ,ಸಿಂದೂಬಲ್ಲಾಳ ನಾಡಗೌಡ, ಹಿಂದುಳಿದ ಅ