Muddebihal: ಚಿರತೆ ಹೆಜ್ಜೆ ಹೋಲುವ ಕಾಡುಪ್ರಾಣಿ ಹೆಜ್ಜೆ ಗುರುತು ಪತ್ತೆ? ಕಂದಗನೂರಿನಲ್ಲಿ ಆತಂಕ!

Muddebihal: ಚಿರತೆ ಹೆಜ್ಜೆ ಹೋಲುವ ಕಾಡುಪ್ರಾಣಿ ಹೆಜ್ಜೆ ಗುರುತು ಪತ್ತೆ? ಕಂದಗನೂರಿನಲ್ಲಿ ಆತಂಕ!

ಮುದ್ದೇಬಿಹಾಳ : ತಾಲ್ಲೂಕಿನ ಕಂದಗನೂರಿನ ಕಬ್ಬಿನ ಜಮೀನೊಂದರಲ್ಲಿ ಚಿರತೆಯಂತಹ ಕಾಡುಪ್ರಾಣಿಯದ್ದು ಎನ್ನಲಾದ ಹೆಜ್ಜೆ ಗುರುತು ಪತ್ತೆಯಾಗಿದ್ದು, ಈ ಭಾಗದ ಗ್ರಾಮಸ್ಥರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ.

ಜು.29 ರಂದು ಕಂದಗನೂರ ಗ್ರಾಮದ ಬೀಯಪ್ಪ ಬೋಳಿ ಅವರ ಹೊಲದಲ್ಲಿ ಆಕಳು ಹಾಗೂ ಕರುವಿನ ಕಳೆಬರ ಪತ್ತೆಯಾಗಿದೆ. ಇದು ಕಾಡು ಪ್ರಾಣಿ ದಾಳಿಯಿಂದ ಎರಡು ಜಾನುವಾರುಗಳು ಮೃತಪಟ್ಟಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಏತನ್ಮಧ್ಯೆ, ಕಂದಗನೂರು ಭಾಗದಲ್ಲಿ ಚಿರತೆ ಬಂದಿದೆ ಎಂಬ ವಿಡಿಯೋ, ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು ಅವು ಈ ಭಾಗದ್ದಲ್ಲ ಎಂಬುದನ್ನು ಅರಣ್ಯಾಧಿಕಾರಿಗಳು ಖಚಿತಪಡಿಸಿದ್ದಾರೆ.

ಕಾಡುಪ್ರಾಣಿ ಸೆರೆಗೆ ಬಿ.ಎಸ್.ಬೋಳಿ ಅವರ ಹೊಲದಲ್ಲಿ ಬೋನು ಇರಿಸಲಾಗಿದೆ. ಆದರೆ ಜು.30 ರಂದು ಮೃತಪಟ್ಟ ಆಕಳ ಮಾಂಸ ತಿನ್ನುವುದಕ್ಕೆ ಕಾಡುಪ್ರಾಣಿ ಬಂದು ಹೋಗಿದೆ ಎಂದು ಪ್ರಾದೇಶಿಕ ಅರಣ್ಯ ಇಲಾಖೆಯ ಅಧಿಕಾರಿ ಬಸನಗೌಡ ಬಿರಾದಾರ ತಿಳಿಸಿದ್ದಾರೆ.

ಹೊಲದಲ್ಲಿ ಮಂಗಳವಾರ ಅವಲೋಕಿಸಿದಾಗ ಕಾಡುಪ್ರಾಣಿಯ ಹೆಜ್ಜೆಗಳು ಚಿರತೆಯದ್ದೆಂಬಂತೆ ಕಾಣುತ್ತಿವೆ.ಆದರೆ ಖಚಿತವಾಗಿ ಹೇಳಲು ಆಗದು.ಕತ್ತೆ ಕಿರುಬ ಕೂಡಾ ಜಾನುವಾರುಗಳನ್ನು ತಿಂದು ಹೋಗುತ್ತದೆ. ಮೇಲಧಿಕಾರಿಗಳ ಸೂಚನೆಯಂತೆ ಕಾಡುಪ್ರಾಣಿ ಸೆರೆ ಹಿಡಿಯಲು ಕ್ಯಾಮೆರಾಗಳನ್ನು ಅಳವಡಿಸಲಾಗುತ್ತದೆ. ಅದರಲ್ಲಿ ಸೆರೆಯಾದರೆ ಯಾವ ಪ್ರಾಣಿ ಎಂಬುದು ಖಚಿತವಾಗಿ ತಿಳಿದು ಬರಲಿದೆ ಎಂದು ಮಾಹಿತಿ ನೀಡಿದರು.

ಚಿರತೆ ಬಂದಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ವಿಡಿಯೋ ಫೋಟೊಗಳ ಮಾಹಿತಿಯಿಂದ ಗ್ರಾಮಸ್ಥರು ತೀವ್ರ ಆತಂಕಗೊಂಡರು. ಸಂಜೆಯವ ಹೊತ್ತಿಗೆ ಚಿರತೆ ಕಂದಗನೂರಿನಲ್ಲಿ ಕಾಣಿಸಿದ್ದಲ್ಲ ಬೇರೆ ಸ್ಥಳದ್ದು ಎಂದು ಗೊತ್ತಾದ ಬಳಿಕ ಅಲ್ಪ ನಿರಾಳರಾಗಿದ್ದಾರೆ. ಆದರೆ, ಚಿರತೆಯೇ ಬಂದಿದೆ ಎಂಬುದನ್ನು ಯಾರೊಬ್ಬರು ನೋಡಿಲ್ಲ ಎಂದು ಗ್ರಾಮಸ್ಥ ರಾಜಾಭಕ್ಷಿ ಮಕಾಶಿ ತಿಳಿಸಿದರು.

ಕೃಷಿ ಚಟುವಟಿಕೆ ಕೈಗೊಳ್ಳಲು ಗ್ರಾಮಸ್ಥರ ಹಿಂದೇಟು: ಚಿರತೆ ಕಾಣಿಸಿಕೊಂಡಿದೆ ಎಂಬ ವದಂತಿಯಿಂದ ಭೀತಿಗೊಳಗಾಗಿರುವ ಈ ಭಾಗದ ಕಂದಗನೂರು, ಕಾಳಗಿ, ಬಳಬಟ್ಟಿ ಗ್ರಾಮದ ರೈತಾಪಿ ವರ್ಗದವರಲ್ಲಿ ಕೃಷಿ ಚಟುವಟಿಕೆ ಗೆ ಹೋಗುವುದನ್ನು ಬಿಟ್ಟು ಮನೆಯಲ್ಲಿ ಕೂರುವಂತಾಗಿದೆ. ಆದಷ್ಟು ಬೇಗ ತಾಲ್ಲೂಕಾಡಳಿತದ ಅಧಿಕಾರಿಗಳು ಕಾಡುಪ್ರಾಣಿ ಪತ್ತೆ ಹಚ್ಚಿ ಸೆರೆ ಹಿಡಿದು ರೈತರಲ್ಲಿ ಉಂಟಾಗಿರುವ ಆತಂಕವನ್ನು ದೂರ ಮಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Latest News

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ತಾಳಿಕೋಟಿ : ತಾಲ್ಲೂಕಿನ ಮೈಲೇಶ್ವರ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ:                  ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ: ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ತಾಳಿಕೋಟೆ : ಮಕ್ಕಳಲ್ಲಿ ಶಿಕ್ಷಣದೊಂದಿಗೆ ನಮ್ಮ ಸಂಸ್ಕೃತಿ ಸಂಸ್ಕಾರದ ಅರಿವು ಮೂಡಿಸುವ ಕಾರ್ಯ ಶಿಕ್ಷಣ

ತಂಗಡಗಿಯಲ್ಲಿ ದಿನದರ್ಶಿಕೆ ಬಿಡುಗಡೆ :                             ಸತ್ಯದ ಪರ ವರದಿಗಳಿಗೆ ಸದಾ ಜಯ-ಶ್ರೀಶೈಲ ಮರೋಳ

ತಂಗಡಗಿಯಲ್ಲಿ ದಿನದರ್ಶಿಕೆ ಬಿಡುಗಡೆ : ಸತ್ಯದ ಪರ ವರದಿಗಳಿಗೆ ಸದಾ ಜಯ-ಶ್ರೀಶೈಲ ಮರೋಳ

ಮುದ್ದೇಬಿಹಾಳ : ಸತ್ಯದ ಪರವಾಗಿರುವ ವರದಿಗಳಿಗೆ ಸದಾ ಸಾಮಾಜಿಕವಾಗಿ ಸ್ಪಂದನೆ ಇದ್ದೇ ಇರುತ್ತದೆ.ವರದಿಯನ್ನು ಉತ್ಪೇಕ್ಷೆಯಾಗಿ ಮಾಡಿದರೆ ಅದು ಸಮಾಜದ ದಾರಿ ತಪ್ಪಿಸುವಂತಾಗುತ್ತದೆ ಎಂದು ತಂಗಡಗಿ ಪಿಕೆಪಿಎಸ್ ಅಧ್ಯಕ್ಷ ಶ್ರೀಶೈಲ ಮರೋಳ ಹೇಳಿದರು. ತಾಲ್ಲೂಕಿನ ತಂಗಡಗಿ ಗ್ರಾಮದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಹೆಬ್ಬಾಳ ಪಬ್ಲಿಸಿಟಿ ಹಾಗೂ ಜನರಕೂಗು ಡಿಜಿಟಲ್ ಸುದ್ದಿವಾಹಿನಿಯ ಕ್ಯಾಲೆಂಡರ್ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮುದ್ರಣ ಮಾಧ್ಯಮದ ಜೊತೆಗೆ ಇಂದು ಡಿಜಿಟಲ್ ಮಾಧ್ಯಮಗಳು ತಮ್ಮ ಶಕ್ತಿ ಹೆಚ್ಚಿಸಿಕೊಂಡಿವೆ.ಜಗತ್ತಿನ ಯಾವುದೇ ಮೂಲೆಯಲ್ಲಿ

ನಕಲಿ ದಾಖಲೆ ಸೃಷ್ಟಿಸಿ ಅಧಿಕಾರಿಯ ವಿರುದ್ಧ ಕಾನೂನು ಕ್ರಮ ಜರುಗಿಸಿ ಎಂದು ಜಿಲ್ಲಾ ಅಧಿಕಾರಿಗೆ ಮನವಿ.

ಕಚಕನೂರ ಗ್ರಾಮದ : ಯಾದಗಿರಿ ಜಿಲ್ಲೆಯ, ಹುಣಸಗಿ ತಾಲೂಕಿನ ಕಚಕನೂರ ಗ್ರಾಮದ ಸ.ನಂ. 122/3 ಎ. 6-10 ಎ-ಗು ಜಮೀನು ಪರ್ವತಗೌಡ ತಂ/ ಚನ್ನಮಲ್ಲಪ್ಪ ಹೆಸರಿಗೆ ಇದ್ದು, ಮೃತಪಟ್ಟಿದ್ದು, ಮೃತರಿಗೆ 2 ಜನ ಹೆಂಡತಿಯರಿದ್ದು, ಕಾನೂನು ಬದ್ಧವಾಗಿ ಮೊದಲನೇ ಹೆಂಡತಿ ಮಕ್ಕಳ ಹೆಸರಿಗೆ ವಾರಸಾ ವರ್ಗಾವಣೆ ಮಾಡದೇ, ನಕಲಿ ದಾಖಲೆ ಸೃಷ್ಟಿಸಿ, ಮಕ್ಕಳಿಲ್ಲದ 2ನೇ ಹೆಂಡತಿಗೆ ವರ್ಗಾವಣೆ ಆಗಿದ್ದು, ರದ್ದುಪಡಿಸಿ, ತಹಸೀಲ್ದಾರರು, ಗ್ರಾಮ ಆಡಳಿತ ಅಧಿಕಾರಿ, ಕಂದಾಯ ನಿರೀಕ್ಷಕರು ಹಾಗೂ