Muddebihal: ಚಿರತೆ ಹೆಜ್ಜೆ ಹೋಲುವ ಕಾಡುಪ್ರಾಣಿ ಹೆಜ್ಜೆ ಗುರುತು ಪತ್ತೆ? ಕಂದಗನೂರಿನಲ್ಲಿ ಆತಂಕ!

Muddebihal: ಚಿರತೆ ಹೆಜ್ಜೆ ಹೋಲುವ ಕಾಡುಪ್ರಾಣಿ ಹೆಜ್ಜೆ ಗುರುತು ಪತ್ತೆ? ಕಂದಗನೂರಿನಲ್ಲಿ ಆತಂಕ!

ಮುದ್ದೇಬಿಹಾಳ : ತಾಲ್ಲೂಕಿನ ಕಂದಗನೂರಿನ ಕಬ್ಬಿನ ಜಮೀನೊಂದರಲ್ಲಿ ಚಿರತೆಯಂತಹ ಕಾಡುಪ್ರಾಣಿಯದ್ದು ಎನ್ನಲಾದ ಹೆಜ್ಜೆ ಗುರುತು ಪತ್ತೆಯಾಗಿದ್ದು, ಈ ಭಾಗದ ಗ್ರಾಮಸ್ಥರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ.

ಜು.29 ರಂದು ಕಂದಗನೂರ ಗ್ರಾಮದ ಬೀಯಪ್ಪ ಬೋಳಿ ಅವರ ಹೊಲದಲ್ಲಿ ಆಕಳು ಹಾಗೂ ಕರುವಿನ ಕಳೆಬರ ಪತ್ತೆಯಾಗಿದೆ. ಇದು ಕಾಡು ಪ್ರಾಣಿ ದಾಳಿಯಿಂದ ಎರಡು ಜಾನುವಾರುಗಳು ಮೃತಪಟ್ಟಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಏತನ್ಮಧ್ಯೆ, ಕಂದಗನೂರು ಭಾಗದಲ್ಲಿ ಚಿರತೆ ಬಂದಿದೆ ಎಂಬ ವಿಡಿಯೋ, ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು ಅವು ಈ ಭಾಗದ್ದಲ್ಲ ಎಂಬುದನ್ನು ಅರಣ್ಯಾಧಿಕಾರಿಗಳು ಖಚಿತಪಡಿಸಿದ್ದಾರೆ.

ಕಾಡುಪ್ರಾಣಿ ಸೆರೆಗೆ ಬಿ.ಎಸ್.ಬೋಳಿ ಅವರ ಹೊಲದಲ್ಲಿ ಬೋನು ಇರಿಸಲಾಗಿದೆ. ಆದರೆ ಜು.30 ರಂದು ಮೃತಪಟ್ಟ ಆಕಳ ಮಾಂಸ ತಿನ್ನುವುದಕ್ಕೆ ಕಾಡುಪ್ರಾಣಿ ಬಂದು ಹೋಗಿದೆ ಎಂದು ಪ್ರಾದೇಶಿಕ ಅರಣ್ಯ ಇಲಾಖೆಯ ಅಧಿಕಾರಿ ಬಸನಗೌಡ ಬಿರಾದಾರ ತಿಳಿಸಿದ್ದಾರೆ.

ಹೊಲದಲ್ಲಿ ಮಂಗಳವಾರ ಅವಲೋಕಿಸಿದಾಗ ಕಾಡುಪ್ರಾಣಿಯ ಹೆಜ್ಜೆಗಳು ಚಿರತೆಯದ್ದೆಂಬಂತೆ ಕಾಣುತ್ತಿವೆ.ಆದರೆ ಖಚಿತವಾಗಿ ಹೇಳಲು ಆಗದು.ಕತ್ತೆ ಕಿರುಬ ಕೂಡಾ ಜಾನುವಾರುಗಳನ್ನು ತಿಂದು ಹೋಗುತ್ತದೆ. ಮೇಲಧಿಕಾರಿಗಳ ಸೂಚನೆಯಂತೆ ಕಾಡುಪ್ರಾಣಿ ಸೆರೆ ಹಿಡಿಯಲು ಕ್ಯಾಮೆರಾಗಳನ್ನು ಅಳವಡಿಸಲಾಗುತ್ತದೆ. ಅದರಲ್ಲಿ ಸೆರೆಯಾದರೆ ಯಾವ ಪ್ರಾಣಿ ಎಂಬುದು ಖಚಿತವಾಗಿ ತಿಳಿದು ಬರಲಿದೆ ಎಂದು ಮಾಹಿತಿ ನೀಡಿದರು.

ಚಿರತೆ ಬಂದಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ವಿಡಿಯೋ ಫೋಟೊಗಳ ಮಾಹಿತಿಯಿಂದ ಗ್ರಾಮಸ್ಥರು ತೀವ್ರ ಆತಂಕಗೊಂಡರು. ಸಂಜೆಯವ ಹೊತ್ತಿಗೆ ಚಿರತೆ ಕಂದಗನೂರಿನಲ್ಲಿ ಕಾಣಿಸಿದ್ದಲ್ಲ ಬೇರೆ ಸ್ಥಳದ್ದು ಎಂದು ಗೊತ್ತಾದ ಬಳಿಕ ಅಲ್ಪ ನಿರಾಳರಾಗಿದ್ದಾರೆ. ಆದರೆ, ಚಿರತೆಯೇ ಬಂದಿದೆ ಎಂಬುದನ್ನು ಯಾರೊಬ್ಬರು ನೋಡಿಲ್ಲ ಎಂದು ಗ್ರಾಮಸ್ಥ ರಾಜಾಭಕ್ಷಿ ಮಕಾಶಿ ತಿಳಿಸಿದರು.

ಕೃಷಿ ಚಟುವಟಿಕೆ ಕೈಗೊಳ್ಳಲು ಗ್ರಾಮಸ್ಥರ ಹಿಂದೇಟು: ಚಿರತೆ ಕಾಣಿಸಿಕೊಂಡಿದೆ ಎಂಬ ವದಂತಿಯಿಂದ ಭೀತಿಗೊಳಗಾಗಿರುವ ಈ ಭಾಗದ ಕಂದಗನೂರು, ಕಾಳಗಿ, ಬಳಬಟ್ಟಿ ಗ್ರಾಮದ ರೈತಾಪಿ ವರ್ಗದವರಲ್ಲಿ ಕೃಷಿ ಚಟುವಟಿಕೆ ಗೆ ಹೋಗುವುದನ್ನು ಬಿಟ್ಟು ಮನೆಯಲ್ಲಿ ಕೂರುವಂತಾಗಿದೆ. ಆದಷ್ಟು ಬೇಗ ತಾಲ್ಲೂಕಾಡಳಿತದ ಅಧಿಕಾರಿಗಳು ಕಾಡುಪ್ರಾಣಿ ಪತ್ತೆ ಹಚ್ಚಿ ಸೆರೆ ಹಿಡಿದು ರೈತರಲ್ಲಿ ಉಂಟಾಗಿರುವ ಆತಂಕವನ್ನು ದೂರ ಮಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Latest News

ಡಿ.22 ರಂದು ದಿನದರ್ಶಿಕೆ ಲೋಕಾರ್ಪಣೆ

ಡಿ.22 ರಂದು ದಿನದರ್ಶಿಕೆ ಲೋಕಾರ್ಪಣೆ

ಮುದ್ದೇಬಿಹಾಳ : ಪ್ರಜಾನಾಡು ಡಿಜಿಟಲ್ ಸುದ್ದಿವಾಹಿನಿಯ ದಿನದರ್ಶಿಕೆ ಲೋಕಾರ್ಪಣೆ ಕಾರ್ಯಕ್ರಮ ಡಿ.22 ರಂದು ಸಂಜೆ

ಅಂಗವೈಕಲ್ಯ ತಡೆಗೆ ಪೊಲೀಯೋ ಲಸಿಕೆ ಹಾಕಿಸಿ

ಅಂಗವೈಕಲ್ಯ ತಡೆಗೆ ಪೊಲೀಯೋ ಲಸಿಕೆ ಹಾಕಿಸಿ

ಮುದ್ದೇಬಿಹಾಳ : ಮಕ್ಕಳು ಹುಟ್ಟಿನಿಂದಲೇ ಅಂಗವೈಕಲ್ಯತೆ ಹೊಂದುವುದನ್ನು ತಪ್ಪಿಸಲು ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೆ

T20 World Cup 2026 ಏಳು ಆಟಗಾರರು ಔಟ್!

T20 World Cup 2026 ಏಳು ಆಟಗಾರರು ಔಟ್!

T20 World Cup 2026: ಟಿ20 ವಿಶ್ವಕಪ್​​ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ

Good News: Gruha Lakshmi ಫಲಾನುಭವಿಗಳಿಗೆ ಸಿಹಿ ಸುದ್ದಿ ನೀಡಿದ ಸಚಿವೆ Lakshmi Hebbalkar ​​

Good News: Gruha Lakshmi ಫಲಾನುಭವಿಗಳಿಗೆ ಸಿಹಿ ಸುದ್ದಿ ನೀಡಿದ ಸಚಿವೆ Lakshmi Hebbalkar ​​

ಬೆಳಗಾವಿ: ಗೃಹಲಕ್ಷ್ಮೀ ಯೋಜನೆಯ (Gruha Lakshmi) ಹಣ ಬಿಡುಗಡೆ ವಿಚಾರವಾಗಿ ಇತ್ತೀಚೆಗೆ ಅಧಿವೇಶನದಲ್ಲಿ ಚರ್ಚೆಗೆ

Shocking News: ಬಿಸಿನೀರಿನ ಪಾತ್ರೆಗೆ ಬಿದ್ದು 2 ವರ್ಷದ ಪುಟಾಣಿ ದುರ್ಮರಣ

Shocking News: ಬಿಸಿನೀರಿನ ಪಾತ್ರೆಗೆ ಬಿದ್ದು 2 ವರ್ಷದ ಪುಟಾಣಿ ದುರ್ಮರಣ

ಮೈಸೂರು: ರಾಜ್ಯದಲ್ಲಿ ಘೋರ ದುರಂತ ಎನ್ನುವಂತೆ ಬಿಸಿನೀರಿನ ಪಾತ್ರೆಗೆ ಬಿದ್ದು ಎರಡು ವರ್ಷದ ಮಗು ಧಾರುಣವಾಗಿ ಸಾವನ್ನಪ್ಪಿರುವ ದುರ್ಘಟನೆ ಮೈಸೂರಲ್ಲಿ ಸಂಭವಿಸಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಜಯಗಿರಿ ಹಾಡಿಯಲ್ಲಿ ಈ ದುರಂತ ಸಂಭವಿಸಿದೆ. ರಮ್ಯಾ ಮತ್ತು ಬಸಪ್ಪ ಎಂಬುವರ ದಂಪತಿಗಳ ಪುತ್ರಿ ವೇದಾ(2) ಬಿಸಿ ನೀರಿನ ಪಾತ್ರೆಗೆ ಬಿದ್ದು ಸಾವನ್ನಪ್ಪಿದ್ದಾಳೆ. ತಾಯಿ ಸ್ನಾನ ಮಾಡಿಸೋದಕ್ಕೆ ಬಿಸಿ ನೀರು ತೋಡಿ, ತಣ್ಣೀರು ಬೆರೆಸೋದಕ್ಕೆ ತರಲು ಹೋಗಿದ್ದಾರೆ. ಈ ವೇಳೆ ವೇದಾ

ಡಿ.21 ರಂದು ರಾಷ್ಟೀಯ ಪಲ್ಸ್ ಪೋಲಿಯೋ : ವಿದ್ಯಾರ್ಥಿಗಳಿಂದ ಜಾಥಾ

ಡಿ.21 ರಂದು ರಾಷ್ಟೀಯ ಪಲ್ಸ್ ಪೋಲಿಯೋ : ವಿದ್ಯಾರ್ಥಿಗಳಿಂದ ಜಾಥಾ

ಮುದ್ದೇಬಿಹಾಳ : ಪ್ರಾಥಮಿಕ ಆರೋಗ್ಯ ಕೇಂದ್ರ ಗರಸಂಗಿ ಹಾಗೂ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಗರಸಂಗಿ ಸಂಯುಕ್ತಾಶ್ರಯದಲ್ಲಿ ರಾಷ್ಟಿçÃಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನದಂಗವಾಗಿ ಶನಿವಾರ ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ ನಡೆಸಲಾಯಿತು. ಆರೋಗ್ಯ ಇಲಾಖೆಯ ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಎಸ್.ಗೌಡರ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ, "ಪೋಲಿಯೋ ಮಾರಕ ರೋಗವಾಗಿದ್ದು, ಐದು ವರ್ಷದೊಳಗಿನ ಯಾವುದೇ ಮಗು ಪೋಲಿಯೋ ಲಸಿಕೆಯಿಂದ ವಂಚಿತರಾಗದAತೆ ನೋಡಿಕೊಳ್ಳಬೇಕು ಎಂದರು. ಆರೋಗ್ಯ ಇಲಾಖೆ ಸಿಬ್ಬಂದಿಗಳು ಆಶಾ ಕಾರ್ಯಕರ್ತೆಯರು ಹಾಗೂ