Muddebihal: ಚಿರತೆ ಹೆಜ್ಜೆ ಹೋಲುವ ಕಾಡುಪ್ರಾಣಿ ಹೆಜ್ಜೆ ಗುರುತು ಪತ್ತೆ? ಕಂದಗನೂರಿನಲ್ಲಿ ಆತಂಕ!

Muddebihal: ಚಿರತೆ ಹೆಜ್ಜೆ ಹೋಲುವ ಕಾಡುಪ್ರಾಣಿ ಹೆಜ್ಜೆ ಗುರುತು ಪತ್ತೆ? ಕಂದಗನೂರಿನಲ್ಲಿ ಆತಂಕ!

ಮುದ್ದೇಬಿಹಾಳ : ತಾಲ್ಲೂಕಿನ ಕಂದಗನೂರಿನ ಕಬ್ಬಿನ ಜಮೀನೊಂದರಲ್ಲಿ ಚಿರತೆಯಂತಹ ಕಾಡುಪ್ರಾಣಿಯದ್ದು ಎನ್ನಲಾದ ಹೆಜ್ಜೆ ಗುರುತು ಪತ್ತೆಯಾಗಿದ್ದು, ಈ ಭಾಗದ ಗ್ರಾಮಸ್ಥರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ.

ಜು.29 ರಂದು ಕಂದಗನೂರ ಗ್ರಾಮದ ಬೀಯಪ್ಪ ಬೋಳಿ ಅವರ ಹೊಲದಲ್ಲಿ ಆಕಳು ಹಾಗೂ ಕರುವಿನ ಕಳೆಬರ ಪತ್ತೆಯಾಗಿದೆ. ಇದು ಕಾಡು ಪ್ರಾಣಿ ದಾಳಿಯಿಂದ ಎರಡು ಜಾನುವಾರುಗಳು ಮೃತಪಟ್ಟಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಏತನ್ಮಧ್ಯೆ, ಕಂದಗನೂರು ಭಾಗದಲ್ಲಿ ಚಿರತೆ ಬಂದಿದೆ ಎಂಬ ವಿಡಿಯೋ, ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು ಅವು ಈ ಭಾಗದ್ದಲ್ಲ ಎಂಬುದನ್ನು ಅರಣ್ಯಾಧಿಕಾರಿಗಳು ಖಚಿತಪಡಿಸಿದ್ದಾರೆ.

ಕಾಡುಪ್ರಾಣಿ ಸೆರೆಗೆ ಬಿ.ಎಸ್.ಬೋಳಿ ಅವರ ಹೊಲದಲ್ಲಿ ಬೋನು ಇರಿಸಲಾಗಿದೆ. ಆದರೆ ಜು.30 ರಂದು ಮೃತಪಟ್ಟ ಆಕಳ ಮಾಂಸ ತಿನ್ನುವುದಕ್ಕೆ ಕಾಡುಪ್ರಾಣಿ ಬಂದು ಹೋಗಿದೆ ಎಂದು ಪ್ರಾದೇಶಿಕ ಅರಣ್ಯ ಇಲಾಖೆಯ ಅಧಿಕಾರಿ ಬಸನಗೌಡ ಬಿರಾದಾರ ತಿಳಿಸಿದ್ದಾರೆ.

ಹೊಲದಲ್ಲಿ ಮಂಗಳವಾರ ಅವಲೋಕಿಸಿದಾಗ ಕಾಡುಪ್ರಾಣಿಯ ಹೆಜ್ಜೆಗಳು ಚಿರತೆಯದ್ದೆಂಬಂತೆ ಕಾಣುತ್ತಿವೆ.ಆದರೆ ಖಚಿತವಾಗಿ ಹೇಳಲು ಆಗದು.ಕತ್ತೆ ಕಿರುಬ ಕೂಡಾ ಜಾನುವಾರುಗಳನ್ನು ತಿಂದು ಹೋಗುತ್ತದೆ. ಮೇಲಧಿಕಾರಿಗಳ ಸೂಚನೆಯಂತೆ ಕಾಡುಪ್ರಾಣಿ ಸೆರೆ ಹಿಡಿಯಲು ಕ್ಯಾಮೆರಾಗಳನ್ನು ಅಳವಡಿಸಲಾಗುತ್ತದೆ. ಅದರಲ್ಲಿ ಸೆರೆಯಾದರೆ ಯಾವ ಪ್ರಾಣಿ ಎಂಬುದು ಖಚಿತವಾಗಿ ತಿಳಿದು ಬರಲಿದೆ ಎಂದು ಮಾಹಿತಿ ನೀಡಿದರು.

ಚಿರತೆ ಬಂದಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ವಿಡಿಯೋ ಫೋಟೊಗಳ ಮಾಹಿತಿಯಿಂದ ಗ್ರಾಮಸ್ಥರು ತೀವ್ರ ಆತಂಕಗೊಂಡರು. ಸಂಜೆಯವ ಹೊತ್ತಿಗೆ ಚಿರತೆ ಕಂದಗನೂರಿನಲ್ಲಿ ಕಾಣಿಸಿದ್ದಲ್ಲ ಬೇರೆ ಸ್ಥಳದ್ದು ಎಂದು ಗೊತ್ತಾದ ಬಳಿಕ ಅಲ್ಪ ನಿರಾಳರಾಗಿದ್ದಾರೆ. ಆದರೆ, ಚಿರತೆಯೇ ಬಂದಿದೆ ಎಂಬುದನ್ನು ಯಾರೊಬ್ಬರು ನೋಡಿಲ್ಲ ಎಂದು ಗ್ರಾಮಸ್ಥ ರಾಜಾಭಕ್ಷಿ ಮಕಾಶಿ ತಿಳಿಸಿದರು.

ಕೃಷಿ ಚಟುವಟಿಕೆ ಕೈಗೊಳ್ಳಲು ಗ್ರಾಮಸ್ಥರ ಹಿಂದೇಟು: ಚಿರತೆ ಕಾಣಿಸಿಕೊಂಡಿದೆ ಎಂಬ ವದಂತಿಯಿಂದ ಭೀತಿಗೊಳಗಾಗಿರುವ ಈ ಭಾಗದ ಕಂದಗನೂರು, ಕಾಳಗಿ, ಬಳಬಟ್ಟಿ ಗ್ರಾಮದ ರೈತಾಪಿ ವರ್ಗದವರಲ್ಲಿ ಕೃಷಿ ಚಟುವಟಿಕೆ ಗೆ ಹೋಗುವುದನ್ನು ಬಿಟ್ಟು ಮನೆಯಲ್ಲಿ ಕೂರುವಂತಾಗಿದೆ. ಆದಷ್ಟು ಬೇಗ ತಾಲ್ಲೂಕಾಡಳಿತದ ಅಧಿಕಾರಿಗಳು ಕಾಡುಪ್ರಾಣಿ ಪತ್ತೆ ಹಚ್ಚಿ ಸೆರೆ ಹಿಡಿದು ರೈತರಲ್ಲಿ ಉಂಟಾಗಿರುವ ಆತಂಕವನ್ನು ದೂರ ಮಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Latest News

ಮುದ್ದೇಬಿಹಾಳ : ಜ.6 ರಂದು ಈ ಭಾಗದಲ್ಲಿ ವಿದ್ಯುತ್ ವ್ಯತ್ಯಯ

ಮುದ್ದೇಬಿಹಾಳ : ಜ.6 ರಂದು ಈ ಭಾಗದಲ್ಲಿ ವಿದ್ಯುತ್ ವ್ಯತ್ಯಯ

ಮುದ್ದೇಬಿಹಾಳ : ತಾಲ್ಲೂಕಿನ 220-110ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರ ಬಸರಕೋಡದಿಂದ ಹಾಲಿ ಇರುವ 110

ಕೆಕೆಆರ್‌ಟಿಸಿ ನೂತನ ಘಟಕ ವ್ಯವಸ್ಥಾಪಕರಾಗಿ ಅಶೋಕಕುಮಾರ ಭೋವಿ ಅಧಿಕಾರ ಸ್ವೀಕಾರ

ಕೆಕೆಆರ್‌ಟಿಸಿ ನೂತನ ಘಟಕ ವ್ಯವಸ್ಥಾಪಕರಾಗಿ ಅಶೋಕಕುಮಾರ ಭೋವಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ಪಟ್ಟಣದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್‌ಟಿಸಿ) ಮುದ್ದೇಬಿಹಾಳ ಘಟಕಕ್ಕೆ

ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳದ ಚುನಾವಣೆ;                                                                                          ಠೇವಣಿ ಕಳೆದುಕೊಂಡ ಮಂಜೇಗೌಡ, ಭರ್ಜರಿ ಗೆಲುವು ಸಾಧಿಸಿದ ಆನಂದಗೌಡ

ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳದ ಚುನಾವಣೆ; ಠೇವಣಿ ಕಳೆದುಕೊಂಡ ಮಂಜೇಗೌಡ, ಭರ್ಜರಿ ಗೆಲುವು ಸಾಧಿಸಿದ ಆನಂದಗೌಡ

ಬೆಂಗಳೂರು : ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳಿ ನಿಯಮಿತ ಬೆಂಗಳೂರು ಈ

ಹೆಬ್ಬಾಳ ಪಬ್ಲಿಸಿಟಿ-ಜನರಕೂಗು ನ್ಯೂಸ್ ಕ್ಯಾಲೆಂಡರ್ ಬಿಡುಗಡೆ:                                                                               ಸತ್ಯ ಸಂಗತಿಗಳಿಗೆ ಮಾಧ್ಯಮ ಧ್ವನಿಯಾಲಿ-ಸಿದ್ಧಲಿಂಗ ದೇವರು

ಹೆಬ್ಬಾಳ ಪಬ್ಲಿಸಿಟಿ-ಜನರಕೂಗು ನ್ಯೂಸ್ ಕ್ಯಾಲೆಂಡರ್ ಬಿಡುಗಡೆ: ಸತ್ಯ ಸಂಗತಿಗಳಿಗೆ ಮಾಧ್ಯಮ ಧ್ವನಿಯಾಲಿ-ಸಿದ್ಧಲಿಂಗ ದೇವರು

ತಾಳಿಕೋಟಿ : ಮಾಧ್ಯಮಗಳು ಸಮಾಜದಲ್ಲಿ ನಡೆದಿರುವ ಸತ್ಯ ಸಂಗತಿಗಳ ಬಗ್ಗೆ ಬೆಳಕು ಚೆಲ್ಲಬೇಕು ಎಂದು

ಮಡಿಕೇಶ್ವರದ ಹಾಲುಮತದ ಹಿರಿಯ ಜೀವಿ ಮಲ್ಲಮ್ಮ ರೂಡಗಿ ನಿಧನ

ಮಡಿಕೇಶ್ವರದ ಹಾಲುಮತದ ಹಿರಿಯ ಜೀವಿ ಮಲ್ಲಮ್ಮ ರೂಡಗಿ ನಿಧನ

ಮುದ್ದೇಬಿಹಾಳ : ತಾಲ್ಲೂಕಿನ ಮಡಿಕೇಶ್ವರ ಗ್ರಾಮದ ನಿವಾಸಿ ಮಲ್ಲಮ್ಮ ಬಸಪ್ಪ ರೂಡಗಿ ಶುಕ್ರವಾರ ನಿಧನರಾದರು. ಅಂತ್ಯಕ್ರಿಯೆ ಜ.3 ರಂದು ಮದ್ಯಾಹ್ನ 3 ಕ್ಕೆ ಮಡಿಕೇಶ್ವರದಲ್ಲಿ ನಡೆಯಲಿದೆ. ಮೃತರು ಮುದ್ದೇಬಿಹಾಳ ಬಿಇಒ ಕಚೇರಿ ಅಧೀಕ್ಷಕಿ ಎನ್.ಬಿ.ರೂಡಗಿ,ಹಾರ್ವರ್ಡ್ ಪಿಯು ಕಾಲೇಜಿನ ಪ್ರಾಚಾರ್ಯೆ ಆರ್.ಬಿ.ರೂಡಗಿ ಅವರ ತಾಯಿಯವರು ಹಾಗೂ ಬಾಪೂಜಿ ವಿದ್ಯಾಸಂಸ್ಥೆ ಅಧ್ಯಕ್ಷ ಎಸ್.ಎಂ.ನೆರಬೆಂಚಿ,ಹಿರಿಯ ವಕೀಲ ಎಸ್.ಬಿ.ಬಾಚಿಹಾಳ ಅವರ ಅತ್ತೆಯವರಾಗಿದ್ದಾರೆ. .

ಆಧಾರ ರಹಿತ ಆರೋಪಗಳಿಗೆ ಬೆಲೆ ಇಲ್ಲ:                                               ಮುದ್ದೇಬಿಹಾಳ : ಅಂಜುಮನ್ ಕಮೀಟಿಯಲ್ಲಿ ಅವ್ಯವಹಾರ ನಡೆದಿಲ್ಲ-ನಾಯ್ಕೋಡಿ

ಆಧಾರ ರಹಿತ ಆರೋಪಗಳಿಗೆ ಬೆಲೆ ಇಲ್ಲ: ಮುದ್ದೇಬಿಹಾಳ : ಅಂಜುಮನ್ ಕಮೀಟಿಯಲ್ಲಿ ಅವ್ಯವಹಾರ ನಡೆದಿಲ್ಲ-ನಾಯ್ಕೋಡಿ

ಮುದ್ದೇಬಿಹಾಳ : ಪಟ್ಟಣದ ಅಂಜುಮನ್ ಇಸ್ಲಾಂ ಕಮೀಟಿಯ ಅಧಿಕಾರ ವಹಿಸಿಕೊಂಡ ಅವಧಿಯಿಂದ ಮುಕ್ತಾಯದ ಅವಧಿಯವರೆಗೆ ನಾವು ಸಂಸ್ಥೆಯ ಶ್ರೇಯೋಭಿವೃದ್ಧಿಗೆ ಶ್ರಮಿಸಿದ್ದೇವೆ ಹೊರತು ಒಂದು ರೂಪಾಯಿ ಹಣವನ್ನು ದುರುಪಯೋಗಪಡಿಸಿಕೊಂಡಿಲ್ಲ.ಅAಜುಮನ್ ಸಂಸ್ಥೆಯ ಹಿತಚಿಂತಕರು ಈಚೇಗೆ ಸುದ್ದಿಗೋಷ್ಠಿಯಲ್ಲಿ ಮಾಡಿರುವ ಆರೋಪಗಳು ನಿರಾಧಾರ ಎಂದು ಅಂಜುಮನ್ ಇಸ್ಲಾಂ ಕಮೀಟಿ ಮಾಜಿ ಅಧ್ಯಕ್ಷ ಅಲ್ಲಾಭಕ್ಷö್ಯ ನಾಯ್ಕೋಡಿ ಹೇಳಿದರು.ಪಟ್ಟಣದ ಅಂಜುಮನ್ ಇಸ್ಲಾಂ ಕಮೀಟಿ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯಲ್ಲಿ ನಡೆದಿರುವ ವ್ಯವಹಾರಗಳ ಲೆಕ್ಕಪತ್ರಗಳನ್ನು ಬಿಚ್ಚಿಟ್ಟರು. ನಮ್ಮ ಅವಧಿ ಆರಂಭವಾಗಿದ್ದೇ