Muddebihal: ಚಿರತೆ ಹೆಜ್ಜೆ ಹೋಲುವ ಕಾಡುಪ್ರಾಣಿ ಹೆಜ್ಜೆ ಗುರುತು ಪತ್ತೆ? ಕಂದಗನೂರಿನಲ್ಲಿ ಆತಂಕ!

Muddebihal: ಚಿರತೆ ಹೆಜ್ಜೆ ಹೋಲುವ ಕಾಡುಪ್ರಾಣಿ ಹೆಜ್ಜೆ ಗುರುತು ಪತ್ತೆ? ಕಂದಗನೂರಿನಲ್ಲಿ ಆತಂಕ!

ಮುದ್ದೇಬಿಹಾಳ : ತಾಲ್ಲೂಕಿನ ಕಂದಗನೂರಿನ ಕಬ್ಬಿನ ಜಮೀನೊಂದರಲ್ಲಿ ಚಿರತೆಯಂತಹ ಕಾಡುಪ್ರಾಣಿಯದ್ದು ಎನ್ನಲಾದ ಹೆಜ್ಜೆ ಗುರುತು ಪತ್ತೆಯಾಗಿದ್ದು, ಈ ಭಾಗದ ಗ್ರಾಮಸ್ಥರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ.

ಜು.29 ರಂದು ಕಂದಗನೂರ ಗ್ರಾಮದ ಬೀಯಪ್ಪ ಬೋಳಿ ಅವರ ಹೊಲದಲ್ಲಿ ಆಕಳು ಹಾಗೂ ಕರುವಿನ ಕಳೆಬರ ಪತ್ತೆಯಾಗಿದೆ. ಇದು ಕಾಡು ಪ್ರಾಣಿ ದಾಳಿಯಿಂದ ಎರಡು ಜಾನುವಾರುಗಳು ಮೃತಪಟ್ಟಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಏತನ್ಮಧ್ಯೆ, ಕಂದಗನೂರು ಭಾಗದಲ್ಲಿ ಚಿರತೆ ಬಂದಿದೆ ಎಂಬ ವಿಡಿಯೋ, ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು ಅವು ಈ ಭಾಗದ್ದಲ್ಲ ಎಂಬುದನ್ನು ಅರಣ್ಯಾಧಿಕಾರಿಗಳು ಖಚಿತಪಡಿಸಿದ್ದಾರೆ.

ಕಾಡುಪ್ರಾಣಿ ಸೆರೆಗೆ ಬಿ.ಎಸ್.ಬೋಳಿ ಅವರ ಹೊಲದಲ್ಲಿ ಬೋನು ಇರಿಸಲಾಗಿದೆ. ಆದರೆ ಜು.30 ರಂದು ಮೃತಪಟ್ಟ ಆಕಳ ಮಾಂಸ ತಿನ್ನುವುದಕ್ಕೆ ಕಾಡುಪ್ರಾಣಿ ಬಂದು ಹೋಗಿದೆ ಎಂದು ಪ್ರಾದೇಶಿಕ ಅರಣ್ಯ ಇಲಾಖೆಯ ಅಧಿಕಾರಿ ಬಸನಗೌಡ ಬಿರಾದಾರ ತಿಳಿಸಿದ್ದಾರೆ.

ಹೊಲದಲ್ಲಿ ಮಂಗಳವಾರ ಅವಲೋಕಿಸಿದಾಗ ಕಾಡುಪ್ರಾಣಿಯ ಹೆಜ್ಜೆಗಳು ಚಿರತೆಯದ್ದೆಂಬಂತೆ ಕಾಣುತ್ತಿವೆ.ಆದರೆ ಖಚಿತವಾಗಿ ಹೇಳಲು ಆಗದು.ಕತ್ತೆ ಕಿರುಬ ಕೂಡಾ ಜಾನುವಾರುಗಳನ್ನು ತಿಂದು ಹೋಗುತ್ತದೆ. ಮೇಲಧಿಕಾರಿಗಳ ಸೂಚನೆಯಂತೆ ಕಾಡುಪ್ರಾಣಿ ಸೆರೆ ಹಿಡಿಯಲು ಕ್ಯಾಮೆರಾಗಳನ್ನು ಅಳವಡಿಸಲಾಗುತ್ತದೆ. ಅದರಲ್ಲಿ ಸೆರೆಯಾದರೆ ಯಾವ ಪ್ರಾಣಿ ಎಂಬುದು ಖಚಿತವಾಗಿ ತಿಳಿದು ಬರಲಿದೆ ಎಂದು ಮಾಹಿತಿ ನೀಡಿದರು.

ಚಿರತೆ ಬಂದಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ವಿಡಿಯೋ ಫೋಟೊಗಳ ಮಾಹಿತಿಯಿಂದ ಗ್ರಾಮಸ್ಥರು ತೀವ್ರ ಆತಂಕಗೊಂಡರು. ಸಂಜೆಯವ ಹೊತ್ತಿಗೆ ಚಿರತೆ ಕಂದಗನೂರಿನಲ್ಲಿ ಕಾಣಿಸಿದ್ದಲ್ಲ ಬೇರೆ ಸ್ಥಳದ್ದು ಎಂದು ಗೊತ್ತಾದ ಬಳಿಕ ಅಲ್ಪ ನಿರಾಳರಾಗಿದ್ದಾರೆ. ಆದರೆ, ಚಿರತೆಯೇ ಬಂದಿದೆ ಎಂಬುದನ್ನು ಯಾರೊಬ್ಬರು ನೋಡಿಲ್ಲ ಎಂದು ಗ್ರಾಮಸ್ಥ ರಾಜಾಭಕ್ಷಿ ಮಕಾಶಿ ತಿಳಿಸಿದರು.

ಕೃಷಿ ಚಟುವಟಿಕೆ ಕೈಗೊಳ್ಳಲು ಗ್ರಾಮಸ್ಥರ ಹಿಂದೇಟು: ಚಿರತೆ ಕಾಣಿಸಿಕೊಂಡಿದೆ ಎಂಬ ವದಂತಿಯಿಂದ ಭೀತಿಗೊಳಗಾಗಿರುವ ಈ ಭಾಗದ ಕಂದಗನೂರು, ಕಾಳಗಿ, ಬಳಬಟ್ಟಿ ಗ್ರಾಮದ ರೈತಾಪಿ ವರ್ಗದವರಲ್ಲಿ ಕೃಷಿ ಚಟುವಟಿಕೆ ಗೆ ಹೋಗುವುದನ್ನು ಬಿಟ್ಟು ಮನೆಯಲ್ಲಿ ಕೂರುವಂತಾಗಿದೆ. ಆದಷ್ಟು ಬೇಗ ತಾಲ್ಲೂಕಾಡಳಿತದ ಅಧಿಕಾರಿಗಳು ಕಾಡುಪ್ರಾಣಿ ಪತ್ತೆ ಹಚ್ಚಿ ಸೆರೆ ಹಿಡಿದು ರೈತರಲ್ಲಿ ಉಂಟಾಗಿರುವ ಆತಂಕವನ್ನು ದೂರ ಮಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ