Muddebihal: ಚಿರತೆ ಹೆಜ್ಜೆ ಹೋಲುವ ಕಾಡುಪ್ರಾಣಿ ಹೆಜ್ಜೆ ಗುರುತು ಪತ್ತೆ? ಕಂದಗನೂರಿನಲ್ಲಿ ಆತಂಕ!

Muddebihal: ಚಿರತೆ ಹೆಜ್ಜೆ ಹೋಲುವ ಕಾಡುಪ್ರಾಣಿ ಹೆಜ್ಜೆ ಗುರುತು ಪತ್ತೆ? ಕಂದಗನೂರಿನಲ್ಲಿ ಆತಂಕ!

ಮುದ್ದೇಬಿಹಾಳ : ತಾಲ್ಲೂಕಿನ ಕಂದಗನೂರಿನ ಕಬ್ಬಿನ ಜಮೀನೊಂದರಲ್ಲಿ ಚಿರತೆಯಂತಹ ಕಾಡುಪ್ರಾಣಿಯದ್ದು ಎನ್ನಲಾದ ಹೆಜ್ಜೆ ಗುರುತು ಪತ್ತೆಯಾಗಿದ್ದು, ಈ ಭಾಗದ ಗ್ರಾಮಸ್ಥರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ.

ಜು.29 ರಂದು ಕಂದಗನೂರ ಗ್ರಾಮದ ಬೀಯಪ್ಪ ಬೋಳಿ ಅವರ ಹೊಲದಲ್ಲಿ ಆಕಳು ಹಾಗೂ ಕರುವಿನ ಕಳೆಬರ ಪತ್ತೆಯಾಗಿದೆ. ಇದು ಕಾಡು ಪ್ರಾಣಿ ದಾಳಿಯಿಂದ ಎರಡು ಜಾನುವಾರುಗಳು ಮೃತಪಟ್ಟಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಏತನ್ಮಧ್ಯೆ, ಕಂದಗನೂರು ಭಾಗದಲ್ಲಿ ಚಿರತೆ ಬಂದಿದೆ ಎಂಬ ವಿಡಿಯೋ, ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು ಅವು ಈ ಭಾಗದ್ದಲ್ಲ ಎಂಬುದನ್ನು ಅರಣ್ಯಾಧಿಕಾರಿಗಳು ಖಚಿತಪಡಿಸಿದ್ದಾರೆ.

ಕಾಡುಪ್ರಾಣಿ ಸೆರೆಗೆ ಬಿ.ಎಸ್.ಬೋಳಿ ಅವರ ಹೊಲದಲ್ಲಿ ಬೋನು ಇರಿಸಲಾಗಿದೆ. ಆದರೆ ಜು.30 ರಂದು ಮೃತಪಟ್ಟ ಆಕಳ ಮಾಂಸ ತಿನ್ನುವುದಕ್ಕೆ ಕಾಡುಪ್ರಾಣಿ ಬಂದು ಹೋಗಿದೆ ಎಂದು ಪ್ರಾದೇಶಿಕ ಅರಣ್ಯ ಇಲಾಖೆಯ ಅಧಿಕಾರಿ ಬಸನಗೌಡ ಬಿರಾದಾರ ತಿಳಿಸಿದ್ದಾರೆ.

ಹೊಲದಲ್ಲಿ ಮಂಗಳವಾರ ಅವಲೋಕಿಸಿದಾಗ ಕಾಡುಪ್ರಾಣಿಯ ಹೆಜ್ಜೆಗಳು ಚಿರತೆಯದ್ದೆಂಬಂತೆ ಕಾಣುತ್ತಿವೆ.ಆದರೆ ಖಚಿತವಾಗಿ ಹೇಳಲು ಆಗದು.ಕತ್ತೆ ಕಿರುಬ ಕೂಡಾ ಜಾನುವಾರುಗಳನ್ನು ತಿಂದು ಹೋಗುತ್ತದೆ. ಮೇಲಧಿಕಾರಿಗಳ ಸೂಚನೆಯಂತೆ ಕಾಡುಪ್ರಾಣಿ ಸೆರೆ ಹಿಡಿಯಲು ಕ್ಯಾಮೆರಾಗಳನ್ನು ಅಳವಡಿಸಲಾಗುತ್ತದೆ. ಅದರಲ್ಲಿ ಸೆರೆಯಾದರೆ ಯಾವ ಪ್ರಾಣಿ ಎಂಬುದು ಖಚಿತವಾಗಿ ತಿಳಿದು ಬರಲಿದೆ ಎಂದು ಮಾಹಿತಿ ನೀಡಿದರು.

ಚಿರತೆ ಬಂದಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ವಿಡಿಯೋ ಫೋಟೊಗಳ ಮಾಹಿತಿಯಿಂದ ಗ್ರಾಮಸ್ಥರು ತೀವ್ರ ಆತಂಕಗೊಂಡರು. ಸಂಜೆಯವ ಹೊತ್ತಿಗೆ ಚಿರತೆ ಕಂದಗನೂರಿನಲ್ಲಿ ಕಾಣಿಸಿದ್ದಲ್ಲ ಬೇರೆ ಸ್ಥಳದ್ದು ಎಂದು ಗೊತ್ತಾದ ಬಳಿಕ ಅಲ್ಪ ನಿರಾಳರಾಗಿದ್ದಾರೆ. ಆದರೆ, ಚಿರತೆಯೇ ಬಂದಿದೆ ಎಂಬುದನ್ನು ಯಾರೊಬ್ಬರು ನೋಡಿಲ್ಲ ಎಂದು ಗ್ರಾಮಸ್ಥ ರಾಜಾಭಕ್ಷಿ ಮಕಾಶಿ ತಿಳಿಸಿದರು.

ಕೃಷಿ ಚಟುವಟಿಕೆ ಕೈಗೊಳ್ಳಲು ಗ್ರಾಮಸ್ಥರ ಹಿಂದೇಟು: ಚಿರತೆ ಕಾಣಿಸಿಕೊಂಡಿದೆ ಎಂಬ ವದಂತಿಯಿಂದ ಭೀತಿಗೊಳಗಾಗಿರುವ ಈ ಭಾಗದ ಕಂದಗನೂರು, ಕಾಳಗಿ, ಬಳಬಟ್ಟಿ ಗ್ರಾಮದ ರೈತಾಪಿ ವರ್ಗದವರಲ್ಲಿ ಕೃಷಿ ಚಟುವಟಿಕೆ ಗೆ ಹೋಗುವುದನ್ನು ಬಿಟ್ಟು ಮನೆಯಲ್ಲಿ ಕೂರುವಂತಾಗಿದೆ. ಆದಷ್ಟು ಬೇಗ ತಾಲ್ಲೂಕಾಡಳಿತದ ಅಧಿಕಾರಿಗಳು ಕಾಡುಪ್ರಾಣಿ ಪತ್ತೆ ಹಚ್ಚಿ ಸೆರೆ ಹಿಡಿದು ರೈತರಲ್ಲಿ ಉಂಟಾಗಿರುವ ಆತಂಕವನ್ನು ದೂರ ಮಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Latest News

ಸರದಿಯಲ್ಲಿ ನಿಂತು ಶಿವಲಿಂಗದ ದರ್ಶನ;                    ಎಲ್ಲೆಲ್ಲೂ ಅನುರಣಿಸಿದ ಶಿವನಾಮ

ಸರದಿಯಲ್ಲಿ ನಿಂತು ಶಿವಲಿಂಗದ ದರ್ಶನ; ಎಲ್ಲೆಲ್ಲೂ ಅನುರಣಿಸಿದ ಶಿವನಾಮ

ಮುದ್ದೇಬಿಹಾಳ : ಪಟ್ಟಣದಾದ್ಯಂತ ಶಿವರಾತ್ರಿ ಅಂಗವಾಗಿ ಭಕ್ತರು ಭಾನುವಾರ ಸಂಜೆ ಶಿವನ ದೇವಾಲಯಗಳಲ್ಲಿ ಸರದಿಯಲ್ಲಿ

ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್ ಉದ್ಘಾಟನೆ:            ಕಾಲು ಹಿಡಿದು ಜಗ್ಗುವವರೇ ಬಹಳಷ್ಟು ಜನ-ಸಿ.ಎಸ್.ನಾಡಗೌಡ

ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್ ಉದ್ಘಾಟನೆ: ಕಾಲು ಹಿಡಿದು ಜಗ್ಗುವವರೇ ಬಹಳಷ್ಟು ಜನ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಸಮಾಜದಲ್ಲಿ ಒಂದು ಸಂಸ್ಥೆ, ಕಾರ್ಖಾನೆ , ಒಬ್ಬ ವ್ಯಕ್ತಿ ಬೆಳೆಯುತ್ತಿದ್ದಾನೆ ಎಂದರೆ

ದೇಶದ ಪ್ರಗತಿಗೆ ಸಂಸ್ಕಾರಭರಿತ ಶಿಕ್ಷಣ ಅವಶ್ಯ-ಆರ್.ಎಸ್.ಬಂಗಿ

ದೇಶದ ಪ್ರಗತಿಗೆ ಸಂಸ್ಕಾರಭರಿತ ಶಿಕ್ಷಣ ಅವಶ್ಯ-ಆರ್.ಎಸ್.ಬಂಗಿ

ಮುದ್ದೇಬಿಹಾಳ : ದೇಶದ ಪ್ರಗತಿ ಪಥದ ಚಾಲನೆಗೆ ಸಂಸ್ಕಾರ ಭರಿತ ಶಿಕ್ಷಣ ಅವಶ್ಯಕ ಎಂದು

ಸಂಘಟನೆಗೆ ಆದ್ಯತೆ ನೀಡಿ-ಅಶೋಕ ಚಟ್ಟೇರ

ಸಂಘಟನೆಗೆ ಆದ್ಯತೆ ನೀಡಿ-ಅಶೋಕ ಚಟ್ಟೇರ

ಮುದ್ದೇಬಿಹಾಳ : ಬಣಜಿಗ ಸಮಾಜದ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಬೇಕು.ಸಮಾಜದಲ್ಲಿ ಬೆಳೆಯುತ್ತಿರುವ ಪ್ರೋತ್ಸಾಹ ನೀಡುವ

ದೇಶದ ಸೇವೆ ಆಯ್ಕೆ ಮಾಡಿಕೊಂಡವರು ಅದೃಷ್ಟವಂತರು-ಎಂ.ಎಸ್.ಕೊಪ್ಪ

ದೇಶದ ಸೇವೆ ಆಯ್ಕೆ ಮಾಡಿಕೊಂಡವರು ಅದೃಷ್ಟವಂತರು-ಎಂ.ಎಸ್.ಕೊಪ್ಪ

ಮುದ್ದೇಬಿಹಾಳ : ದೇಶದ ಗಡಿ ಕಾಯುವ ಸೇವೆಯನ್ನು ಆಯ್ಕೆ ಮಾಡಿಕೊಂಡ ಆಯೇಷಾ ವಾಲೀಕಾರ, ಕಾಶೀಬಾಯಿ ಚಲವಾದಿ ಹೆಣ್ಣು ಮಕ್ಕಳಿಗೆ ಸ್ಪೂರ್ತಿಯಾಗಿದ್ದಾರೆ ಎಂದು ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು.ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. ದೇಶದ ಗಡಿ ಕಾಯುವ ಕೆಲಸ ಸಾಮಾನ್ಯವಾದದ್ದಲ್ಲ.ಅದಕ್ಕೆ ಸಾಕಷ್ಟು ತಯಾರಿ ಬೇಕಾಗುತ್ತದೆ.ಬಡತನದಲ್ಲಿ ಇಂತಹ ದೊಡ್ಡ ಸಾಧನೆ ಮಾಡಿದ ನಮ್ಮ ತಾಲ್ಲೂಕಿನ

ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಆಯೋಜನೆ:                                                                       ಎಕ್ಸಾಂ ಬರೆಯಿರಿ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಪಡೆಯಿರಿ-ಎಂ.ಎಸ್.ಕೊಪ್ಪ

ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಆಯೋಜನೆ: ಎಕ್ಸಾಂ ಬರೆಯಿರಿ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಪಡೆಯಿರಿ-ಎಂ.ಎಸ್.ಕೊಪ್ಪ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ಗ್ರಾಮದ ಚೆನ್ನಬಸವ ಶ್ರೀ ಎಜ್ಯುಕೇಷನ್ ರೂರಲ್ ಕಲ್ಚರಲ್ ಸೊಸೈಟಿ ಅಡಿಯಲ್ಲಿ ನಡೆಯುತ್ತಿರುವ ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಸ್ಕೂಲ್ ಹಾಗೂ ಪ್ರೌಢಶಾಲೆಯಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಯೋಜನೆಯನ್ನು ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಪ್ರಕಟಿಸಿದ್ದಾರೆ. ಪರೀಕ್ಷೆ ಎರಡು ವಿಭಾಗಗಳಲ್ಲಿ ನಡೆಯಲಿದ್ದು ದಿನಾಂಕ 8-03-2026 ರಂದು ಬೆಳಗ್ಗೆ 11.30ಕ್ಕೆ ನಡೆಯಲಿರುವ ಪರೀಕ್ಷೆಗೆ 4ನೇ ತರಗತಿ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದ್ದು ಇದರಲ್ಲಿ ಪಾಲ್ಗೊಳ್ಳುವ ಮಕ್ಕಳಲ್ಲಿ ಮೊದಲ ಹತ್ತು