ಮುದ್ದೇಬಿಹಾಳ ; ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಅವರ ಸರ್ಕಾರದಲ್ಲಿ ಸಚಿವ ಸ್ಥಾನ ದೊರಕಲಿ.ಅವರ ಕಾರ್ಯಕರ್ತರು ತಮ್ಮ ಪಕ್ಷದ ಹೈಕಮಾಂಡ್ ಮೇಲೆ ಮನವಿ,ಆಗ್ರಹ ಮಾಡಲಿ.ಅದು ಬಿಟ್ಟು ಬಲವಂತದಿoದ ಮುದ್ದೇಬಿಹಾಳ ಬಂದ್ ಮಾಡುವುದರಿಂದ ಜನಸಾಮಾನ್ಯರ ಬದುಕಿನ ಮೇಲೆ ತೊಂದರೆಯುoಟಾಗುತ್ತದೆ ಎಂದು ವರ್ತಕ ಹಾಗೂ ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ ಹೇಳಿದರು.
ಪತ್ರಿಕೆಯೊಂದಿಗೆ ಮಾತನಾಡಿದ ಅವರು, ನಾಡಗೌಡರಿಗೆ ಸಚಿವ ಸ್ಥಾನ ಸಿಕ್ಕರೆ ಮುದ್ದೇಬಿಹಾಳದ ಅಭಿವೃದ್ಧಿಗೆ ವೇಗ ಸಿಗಬಹುದು ಎಂಬ ನಿರೀಕ್ಷೆ ನಮ್ಮದೂ ಆಗಿದೆ.ಆದರೆ ಈ ವಿಷಯದಲ್ಲಿ ಮುದ್ದೇಬಿಹಾಳ ಬಂದ್ ಮಾಡುವುದಾಗಿ ಅವರ ಕಾರ್ಯಕರ್ತರು ಹೇಳಿರುವ ವಿಚಾರ ಸರಿಯಾದದ್ದಲ್ಲ.ಒಂದು ಹೊತ್ತಿನ ಕೂಲಿ ನಂಬಿ ಬದುಕು ಜನರಿಗೆ ಈ ಬಂದ್ನಿoದ ಲಾಭಕ್ಕಿಂತ ತೊಂದರೆಯೇ ಅಧಿಕವಾಗಿದೆ.ಬಡವರು,ದಿನನಿತ್ಯದ ಕೂಲಿನಾಲಿ ನಂಬಿ ಜೀವನ ನಡೆಸುವವರಿಗೆ ಈ ಬಂದ್ ಕರೆ ಸಮಸ್ಯೆಯನ್ನು ಉಂಟು ಮಾಡುತ್ತದೆ.ಬಂದ್ ಕರೆ ಕೈ ಬಿಟ್ಟು ಬೇರೆ ರೀತಿಯಲ್ಲಿ ತಮ್ಮ ಹೈಕಮಾಂಡ್ ಮೇಲೆ ಒತ್ತಡ ಹೇರಲಿ ಎಂದು ಅವರು ತಿಳಿಸಿದ್ದಾರೆ.
ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಜೂ.19 ರಂದು ಮುದ್ದೇಬಿಹಾಳ ಬಂದ್ ಕರೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.







