Muddebihal: ಸೇವೆಯಲ್ಲಿ ನಮ್ಮ ಸಾಧನೆಯೇ ಮಾತನಾಡಬೇಕು-ಪಾಟೀಲ್

Muddebihal: ಸೇವೆಯಲ್ಲಿ ನಮ್ಮ ಸಾಧನೆಯೇ ಮಾತನಾಡಬೇಕು-ಪಾಟೀಲ್


ಮುದ್ದೇಬಿಹಾಳ : ಸರ್ಕಾರದ ಸೇವೆಯಲ್ಲಿರುವ ಸಮಯದಲ್ಲಿ ಸಾರ್ವಜನಿಕರಿಂದ ಟೀಕೆ, ಟಿಪ್ಪಣಿಗಳು ಬರುವುದು ಸಹಜ. ಆದರೆ ಅವುಗಳನ್ನು ಸಕಾರಾತ್ಮಕವಾಗಿ ತೆಗೆದುಕೊಂಡು ನಾವು ಜನರಿಗೆ ಸೇವೆ ನೀಡಬೇಕು ಎಂದು ಹೆಸ್ಕಾಂ ಹಿರಿಯ ಶಾಖಾಧಿಕಾರಿ ಎಸ್.ಎಸ್.ಪಾಟೀಲ್ ಹೇಳಿದರು.

ಬೇರೆಡೆ ವರ್ಗಾವಣೆಗೊಂಡ ಪ್ರಯುಕ್ತ ಪಟ್ಟಣದ ಹೆಸ್ಕಾಂ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿದರು.

Join Our Telegram: https://t.me/dcgkannada

ಮುದ್ದೇಬಿಹಾಳ ನಗರದಲ್ಲಿ ಸೇವೆ ಸಲ್ಲಿಸುವ ಸಮಯದಲ್ಲಿ ಜನರು ನೀಡಿದ ಸಹಕಾರ,ನಮ್ಮ ಇಲಾಖೆಯ ಸಿಬ್ಬಂದಿ ನೀಡಿದ ಗೌರವ ಎಂದಿಗೂ ಮರೆಯಲಾರೆ ಎಂದರು.

ಹೆಸ್ಕಾಂ ಎಇಇ ರಾಜಶೇಖರ ಹಾದಿಮನಿ, ಲೆಕ್ಕಾಧಿಕಾರಿ ಬಿ.ಎ.ಮಡಿವಾಳರ ಮಾತನಾಡಿ, ಪಾಟೀಲರು ಸೇವೆಯಲ್ಲಿದ್ದಾರೆಂದರೆ ಅಲ್ಲಿ ಸಮಸ್ಯೆಗಳಿಗೆ ಆಸ್ಪದವೇ ಇರುತ್ತಿರಲಿಲ್ಲ. ಎಲ್ಲರೊಂದಿಗೆ ನಗುಮೊಗದಿಂದ ಸೌಜನ್ಯದಿಂದ ಸೇವೆ ಸಲ್ಲಿಸುತ್ತಿದ್ದರು ಎಂದರು.

ಇದನ್ನೂ‌ ಓದಿ: Murder case: ಶೆಡ್‌ನಲ್ಲಿ ನಡೀತು ಮತ್ತೊಂದು ಭೀಕರ ಹತ್ಯೆ..! ಇಲ್ಲಿ ಸ್ನೇಹಿತನೇ ಕೊಲೆಗಾರ

ತಂಗಡಗಿ ಶಾಖಾಧಿಕಾರಿ ಎಂ.ಎಸ್.ತೆಗ್ಗಿನಮಠ, ಆರ್.ಎಂ.ನಾಯ್ಕಮಕ್ಕಳ, ರಾಹುಲ್ ಪಾದಗಟ್ಟಿ ಮಾತನಾಡಿದರು.

ಸೆಕ್ಷನ್ ಅಧಿಕಾರಿಗಳಾದ ಸಂತೋಷ ನಡಗೇರಿ, ಸೋಮು ಗಸ್ತಿಗಾರ, ಆರ್.ಬಿ.ಹಿರೇಮಠ,ಸಚಿನ್ ಮೇಲ್ಮನಿ,ಅಣ್ಣಯ್ಯ ಸರಗಣಾಚಾರಿ, ಬಿ.ಸಿ.ಹಿರೇಮಠಮಲ್ಲಣ್ಣ ಮಡಿಕೇಶ್ವರ ಸೇರಿದಂತೆ ಹಲವರು ಇದ್ದರು.

ವಿದ್ಯುತ್ ಗುತ್ತಿಗೆದಾರರು, ಸಿಬ್ಬಂದಿ, ಲೈನಮನ್‌ಗಳು,ಹೊರಗುತ್ತಿಗೆ ಸಿಬ್ಬಂದಿ ವರ್ಗಾವಣೆಗೊಂಡ ಪಾಟೀಲ್ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಟ್ಟರು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು