Muddebihal: Patil elected president, Ramodagi unopposed as vice president

Muddebihal: ಪಾಟೀಲ್ ಅಧ್ಯಕ್ಷ, ರಾಮೋಡಗಿ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ

Muddebihal: ಪಾಟೀಲ್ ಅಧ್ಯಕ್ಷ, ರಾಮೋಡಗಿ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ತಾಲೂಕಿನ ಹಿರೇಮುರಾಳ ಗ್ರಾಮದ ಶ್ರೀ ಸಂಗಮೇಶ್ವರ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮಲ್ಲನಗೌಡ ಪಾಟೀಲ್, ಉಪಾಧ್ಯಕ್ಷರಾಗಿ ಚಂದ್ರಶೇಖರ ರಾಮೋಡಗಿ ಅವರು ಅವಿರೋಧ ಆಯ್ಕೆಯಾದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ತಾಲ್ಲೂಕಿನ ಹಿರೇಮುರಾಳದಲ್ಲಿ ಸಂಘದ ಕಚೇರಿಯಲ್ಲಿ ಸೋಮುವಾರ ನಡೆದ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡೂ ಸ್ಥಾನಗಳಿಗೆ ಇಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅಧ್ಯಕ್ಷ ಸ್ಥಾನಕ್ಕೆ ಮಲ್ಲನಗೌಡ ಪಾಟೀಲ್, ಉಪಾಧ್ಯಕ್ಷರಾಗಿ ಚಂದ್ರಶೇಖರ ರಾಮೋಡಗಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಹಾಗೂ ಸಹಕಾರ ಅಭಿವೃದ್ಧಿ ಅಧಿಕಾರಿ ವಿಜಯಕುಮಾರ ಉತ್ನಾಳ ಘೋಷಿಸಿದರು.

ನೂತನ ಅಧ್ಯಕ್ಷ ಮಲ್ಲನಗೌಡ ಬಿ ಪಾಟೀಲ್ ಮಾತನಾಡಿ,ಸಂಘದ ಸ್ವಂತ ಕಟ್ಟಡದ ಕಾಮಗಾರಿ ಚಾಲನೆಯಲ್ಲಿದ್ದು ಕೆಲವೇ ತಿಂಗಳಲ್ಲಿ ನೂತನ ಕಟ್ಟಡ ಲೋಕಾರ್ಪಣೆ ಮಾಡಲಾಗುವುದು ಎಂದು ತಿಳಿಸಿದರು.

ಸಂಘದ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಅಮರೇಶ ಬಿ.ಬಾಗೇವಾಡಿ ಮತ್ತು ಸಿಬ್ಬಂದಿ ಆಡಳಿತ ಮಂಡಳಿಯ ಪದಾಧಿಕಾರಿಗಳನ್ನು ಸನ್ಮಾನಿಸಿದರು.

ಇದನ್ನೂ ಓದಿ: ‘ಶಾಸಕರೇ ಉತ್ತರ ಕೊಡಲಿ, ಅವರ ಬಾಲಂಗೋಚಿಗಳಲ್ಲ’-ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರ ವಾಗ್ದಾಳಿ

ಸಂಘದ ನಿರ್ದೇಶಕರು, ಮುಖಂಡರಾದ ಗಿರೀಶಗೌಡ ಪಾಟೀಲ್, ನಾಗರಾಜ ರಾಮೋಡಗಿ, ರಮೇಶ ವಗ್ಗರ, ಮಲ್ಲಣ್ಣ ರಕ್ಕಸಗಿ, ಬಿ.ಬಿ.ಪಾಟೀಲ್ ಮೊದಲಾದವರು ಇದ್ದರು.

Latest News

ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳದ ಚುನಾವಣೆ;                                                                                          ಠೇವಣಿ ಕಳೆದುಕೊಂಡ ಮಂಜೇಗೌಡ, ಭರ್ಜರಿ ಗೆಲುವು ಸಾಧಿಸಿದ ಆನಂದಗೌಡ

ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳದ ಚುನಾವಣೆ; ಠೇವಣಿ ಕಳೆದುಕೊಂಡ ಮಂಜೇಗೌಡ, ಭರ್ಜರಿ ಗೆಲುವು ಸಾಧಿಸಿದ ಆನಂದಗೌಡ

ಬೆಂಗಳೂರು : ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳಿ ನಿಯಮಿತ ಬೆಂಗಳೂರು ಈ

ಹೆಬ್ಬಾಳ ಪಬ್ಲಿಸಿಟಿ-ಜನರಕೂಗು ನ್ಯೂಸ್ ಕ್ಯಾಲೆಂಡರ್ ಬಿಡುಗಡೆ:                                                                               ಸತ್ಯ ಸಂಗತಿಗಳಿಗೆ ಮಾಧ್ಯಮ ಧ್ವನಿಯಾಲಿ-ಸಿದ್ಧಲಿಂಗ ದೇವರು

ಹೆಬ್ಬಾಳ ಪಬ್ಲಿಸಿಟಿ-ಜನರಕೂಗು ನ್ಯೂಸ್ ಕ್ಯಾಲೆಂಡರ್ ಬಿಡುಗಡೆ: ಸತ್ಯ ಸಂಗತಿಗಳಿಗೆ ಮಾಧ್ಯಮ ಧ್ವನಿಯಾಲಿ-ಸಿದ್ಧಲಿಂಗ ದೇವರು

ತಾಳಿಕೋಟಿ : ಮಾಧ್ಯಮಗಳು ಸಮಾಜದಲ್ಲಿ ನಡೆದಿರುವ ಸತ್ಯ ಸಂಗತಿಗಳ ಬಗ್ಗೆ ಬೆಳಕು ಚೆಲ್ಲಬೇಕು ಎಂದು

ವಿದ್ಯುತ್ ಶಾರ್ಟ್ ಸರ್ಕಿಟ್: ಅಪಾರ ಹಾನಿ

ವಿದ್ಯುತ್ ಶಾರ್ಟ್ ಸರ್ಕಿಟ್: ಅಪಾರ ಹಾನಿ

ಮುದ್ದೇಬಿಹಾಳ : ಪಟ್ಟಣದ ವಿಜಯಪುರ ರಸ್ತೆಯ ಸಾಯಿ ಬಡಾವಣೆಯಲ್ಲಿ ಶುಕ್ರವಾರ ಮಧ್ಯರಾತ್ರಿ ವಿದ್ಯುತ್ ಶಾರ್ಟ್

ಮದ್ಯವರ್ಜನಾ ಶಿಬಿರ ಸಮಾರೋಪ:                               ಸುಂದರ ಬದುಕು ಸಾಗಿಸಿ-ಎಂ.ಎಸ್.ಬಿರಾದಾರ

ಮದ್ಯವರ್ಜನಾ ಶಿಬಿರ ಸಮಾರೋಪ: ಸುಂದರ ಬದುಕು ಸಾಗಿಸಿ-ಎಂ.ಎಸ್.ಬಿರಾದಾರ

ಮುದ್ದೇಬಿಹಾಳ : ವ್ಯಸನಮುಕ್ತ ಸಮಾಜದ ಆಶಯ ಹೊಂದಿರುವ ಮದ್ಯವರ್ಜನ ಶಿಬಿರದಲ್ಲಿ ಪಾಲ್ಗೊಂಡಿರುವ ಶಿಬಿರಾರ್ಥಿಗಳು ಒಳ್ಳೆಯ ಬದುಕು ಸಾಗಿಸಬೇಕು ಎಂದು ಢವಳಗಿಯ ಯುವ ಉದ್ಯಮಿ ಮಹಾಂತಗೌಡ ಬಿರಾದಾರ ಹೇಳಿದರು. ತಾಲ್ಲೂಕಿನ ಬಿದರಕುಂದಿ ಗ್ರಾಮದ ಶಾದಿ ಮಹಲ್‌ನಲ್ಲಿ 2027ನೇ ಮದ್ಯ ವರ್ಜನ ಶಿಬಿರದ ಸಮಾರೋಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜನರ ಬದಲಾವಣೆ ಆಗುತ್ತಿರುವುದನ್ನು ನೋಡಿ ತುಂಬಾ ಸಂತೋಷವಾಗಿದ್ದು ಇಂದಿನಿAದ ಆರಂಭವಾಗಿರುವ ನಿಮ್ಮ ನವಜೀವನ ಉತ್ತಮವಾಗಿರಲೆಂದು ಹಾರೈಸಿದರು. ಕಲಬುರಗಿ ಪ್ರಾದೇಶಿಕ ನಿರ್ದೇಶಕ ದಿನೇಶ್

ಸ್ವ ಉದ್ಯೋಗದಿಂದ ಜೀವನ ರೂಪಿಸಿಕೊಳ್ಳಿ-ಶಿವಾನಂದ

ಸ್ವ ಉದ್ಯೋಗದಿಂದ ಜೀವನ ರೂಪಿಸಿಕೊಳ್ಳಿ-ಶಿವಾನಂದ

ಮುದ್ದೇಬಿಹಾಳ : ಸ್ವ ಉದ್ಯೋಗದಿಂದ ಉತ್ತಮ ಜೀವನ ರೂಪಿಸಿಕೊಳ್ಳಲು ಸಾಧ್ಯವಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ತಾಲೂಕು ಯೋಜನಾಧಿಕಾರಿ ಶಿವಾನಂದ ಪಿ., ಹೇಳಿದರು. ಪಟ್ಟಣದ ವಿದ್ಯಾನಗರದಲ್ಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುದ್ದೇಬಿಹಾಳ ಯೋಜನಾ ಕಚೇರಿಯಲ್ಲಿ ಸ್ವ ಉದ್ಯೋಗ ಆಧಾರಿತ ಫಲಾನುಭವಿಗಳಿಗೆ ಸಿಡ್ಬಿ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಶ್ರೀ ಕ್ಷೇತ್ರದ ಧರ್ಮಾಧಿಕಾರಿಗಳು ಬಡತನ ನಿರ್ಮೂಲನೆ ಉದ್ದೇಶದಿಂದ ಆಸಕ್ತರಿಗೆ ಸ್ವ ಉದ್ಯೋಗ ತರಬೇತಿ ನೀಡಲು ರುಡ್‌ಸಟ್ ಸಂಸ್ಥೆ ಪ್ರಾರಂಭಿಸಿದರು. ಯೋಜನೆಯ